Homeಮುಖಪುಟಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

- Advertisement -
- Advertisement -

ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್ ಜಾಖರ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಅವರ ಮಗನಿಗೆ ಟಿಕೆಟ್ ನೀಡುವುದು ಮಹಿಳಾ ಕುಸ್ತಿಪಟುಗಳಿಗೆ ಅವಮಾನವಾಗಿದೆ. ನನಗೆ ದೇಶದ ಗೌರವ ಮೊದಲು ಎಂದು ರೋಹಿತ್ ಜಾಖರ್ ಹೇಳಿದ್ದಾರೆ.

ನಾನು ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತು ರಾಷ್ಟ್ರೀಯ ಲೋಕದಳದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಈ ಕುರಿತ ರಾಜೀನಾಮೆ ಪತ್ರವನ್ನು ಶುಕ್ರವಾರ ಪಕ್ಷದ ಅಧ್ಯಕ್ಷ ಜಯಂತ್ ಚೌಧರಿ ಅವರಿಗೆ ಕಳುಹಿಸಿದ್ದೇನೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ, ಸಾಮಾಜಿಕ ಸಮಸ್ಯೆಗಳಿಗಾಗಿ ನನ್ನ ಹೋರಾಟ ಮೊದಲಿನಂತೆ ಮುಂದುರಿಯಲಿದೆ ಎಂದು ರೋಹಿತ್ ಜಾಖರ್ ಹೇಳಿದ್ದಾರೆ.

ರೋಹಿತ್ ಜಾಖರ್ RLDಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು ಮತ್ತು ರಾಷ್ಟ್ರೀಯ ಜಾಟ್ ಫೆಡರೇಶನ್‌ನ ರಾಜ್ಯಾಧ್ಯಕ್ಷರಾಗಿದ್ದಾರೆ. ಅವರು ಒಂದು ದಶಕದಿಂದ ಆರ್‌ಎಲ್‌ಡಿ ಮತ್ತು ರೈತ ಚಳವಳಿಯೊಂದಿಗೆ ಸಂಬಂಧ ಹೊಂದಿದ್ದರು.

ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರದಿಂದ ಬಿಜೆಪಿ ಗುರುವಾರ ಕರಣ್ ಭೂಷಣ್ ಸಿಂಗ್ ಅವರನ್ನು  ಲೋಕಸಭೆಯ ಅಭ್ಯರ್ಥಿಯನ್ನಾಗಿ ಹೆಸರಿಸಿದೆ. ಕುಸ್ತಿ ಪಟುಗಳಿಗೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಟಿಕೆಟ್‌ ನೀಡದೆ ಇದ್ದರೂ, ಅವರ ಪುತ್ರನಿಗೆ ಟಿಕೆಟ್‌ ನೀಡಲಾಗಿದೆ. ಇದರ ಬೆನ್ನಲ್ಲಿ ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್‌, ಬಜರಂಗ್ ಪುನಿಯಾ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

ಕರಣ್‌ ಸಿಂಗ್‌ಗೆ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ರಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ಭಾರತದ ಹೆಣ್ಣುಮಕ್ಕಳು ಸೋತಿದ್ದಾರೆ, ಬ್ರಿಜ್ ಭೂಷಣ್ ಗೆದ್ದಿದ್ದಾರೆ. ನಾವೆಲ್ಲರೂ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ, ಬೀದಿಯಲ್ಲಿ ದಿನಗಳನ್ನು ಕಳೆದಿದ್ದೇವೆ. ಬ್ರಿಜ್ ಭೂಷಣ್ ಅವರನ್ನು ಇನ್ನೂ ಬಂಧಿಸಿಲ್ಲ. ನಾವು ಯಾವತ್ತೂ ಕೇಳಿದ್ದು ನ್ಯಾಯ ಮಾತ್ರ. ಆದರೆ ಬಂಧಿಸುವುದು ಬಿಡಿ, ಅವರ ಮಗನಿಗೆ ಟಿಕೆಟ್ ಸಿಕ್ಕಿದ್ದು ಅದು ಭಾರತದ ಕೋಟ್ಯಂತರ ಹೆಣ್ಣುಮಕ್ಕಳ ಉತ್ಸಾಹವನ್ನು ಮುರಿದಿದೆ. ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಒಬ್ಬ ವ್ಯಕ್ತಿಯ ಮುಂದೆ ಸರ್ಕಾರ ಏಕೆ ದುರ್ಬಲವಾಗಿದೆ? ನಿಮಗೆ ಬೇಕಾಗಿರುವುದು ಭಗವಾನ್ ರಾಮನ ಹೆಸರಿನಲ್ಲಿ ಮತಗಳು, ಅವರ ನೀತಿಗಳನ್ನು ಅನುಸರಿಸುವ ಬಗ್ಗೆ ನಿಮ್ಮ ನಿಲುವು ಏನು? ಎಂದು ಸಾಕ್ಷಿ ಮಲಿಕ್‌ ಪ್ರಶ್ನಿಸಿದ್ದರು.

ಕುಸ್ತಿಪಟು ಬಜರಂಗ್ ಪುನಿಯ ಈ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಮಹಿಳೆಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಹಾಗೂ ವಂಶಪಾರಂಪರ್ಯ ರಾಜಕಾರಣ ಆಡಳಿತಾರೂಢ ಬಿಜೆಪಿಯಲ್ಲೂ ಬೇರೂರಿದೆ ಎಂದು ಹೇಳಿದ್ದರು.

ಇದನ್ನು ಓದಿ: ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...