Homeಮುಖಪುಟಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

- Advertisement -
- Advertisement -

ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್ ಜಾಖರ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಅವರ ಮಗನಿಗೆ ಟಿಕೆಟ್ ನೀಡುವುದು ಮಹಿಳಾ ಕುಸ್ತಿಪಟುಗಳಿಗೆ ಅವಮಾನವಾಗಿದೆ. ನನಗೆ ದೇಶದ ಗೌರವ ಮೊದಲು ಎಂದು ರೋಹಿತ್ ಜಾಖರ್ ಹೇಳಿದ್ದಾರೆ.

ನಾನು ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತು ರಾಷ್ಟ್ರೀಯ ಲೋಕದಳದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಈ ಕುರಿತ ರಾಜೀನಾಮೆ ಪತ್ರವನ್ನು ಶುಕ್ರವಾರ ಪಕ್ಷದ ಅಧ್ಯಕ್ಷ ಜಯಂತ್ ಚೌಧರಿ ಅವರಿಗೆ ಕಳುಹಿಸಿದ್ದೇನೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ, ಸಾಮಾಜಿಕ ಸಮಸ್ಯೆಗಳಿಗಾಗಿ ನನ್ನ ಹೋರಾಟ ಮೊದಲಿನಂತೆ ಮುಂದುರಿಯಲಿದೆ ಎಂದು ರೋಹಿತ್ ಜಾಖರ್ ಹೇಳಿದ್ದಾರೆ.

ರೋಹಿತ್ ಜಾಖರ್ RLDಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು ಮತ್ತು ರಾಷ್ಟ್ರೀಯ ಜಾಟ್ ಫೆಡರೇಶನ್‌ನ ರಾಜ್ಯಾಧ್ಯಕ್ಷರಾಗಿದ್ದಾರೆ. ಅವರು ಒಂದು ದಶಕದಿಂದ ಆರ್‌ಎಲ್‌ಡಿ ಮತ್ತು ರೈತ ಚಳವಳಿಯೊಂದಿಗೆ ಸಂಬಂಧ ಹೊಂದಿದ್ದರು.

ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರದಿಂದ ಬಿಜೆಪಿ ಗುರುವಾರ ಕರಣ್ ಭೂಷಣ್ ಸಿಂಗ್ ಅವರನ್ನು  ಲೋಕಸಭೆಯ ಅಭ್ಯರ್ಥಿಯನ್ನಾಗಿ ಹೆಸರಿಸಿದೆ. ಕುಸ್ತಿ ಪಟುಗಳಿಗೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಟಿಕೆಟ್‌ ನೀಡದೆ ಇದ್ದರೂ, ಅವರ ಪುತ್ರನಿಗೆ ಟಿಕೆಟ್‌ ನೀಡಲಾಗಿದೆ. ಇದರ ಬೆನ್ನಲ್ಲಿ ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್‌, ಬಜರಂಗ್ ಪುನಿಯಾ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

ಕರಣ್‌ ಸಿಂಗ್‌ಗೆ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ರಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ಭಾರತದ ಹೆಣ್ಣುಮಕ್ಕಳು ಸೋತಿದ್ದಾರೆ, ಬ್ರಿಜ್ ಭೂಷಣ್ ಗೆದ್ದಿದ್ದಾರೆ. ನಾವೆಲ್ಲರೂ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ, ಬೀದಿಯಲ್ಲಿ ದಿನಗಳನ್ನು ಕಳೆದಿದ್ದೇವೆ. ಬ್ರಿಜ್ ಭೂಷಣ್ ಅವರನ್ನು ಇನ್ನೂ ಬಂಧಿಸಿಲ್ಲ. ನಾವು ಯಾವತ್ತೂ ಕೇಳಿದ್ದು ನ್ಯಾಯ ಮಾತ್ರ. ಆದರೆ ಬಂಧಿಸುವುದು ಬಿಡಿ, ಅವರ ಮಗನಿಗೆ ಟಿಕೆಟ್ ಸಿಕ್ಕಿದ್ದು ಅದು ಭಾರತದ ಕೋಟ್ಯಂತರ ಹೆಣ್ಣುಮಕ್ಕಳ ಉತ್ಸಾಹವನ್ನು ಮುರಿದಿದೆ. ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಒಬ್ಬ ವ್ಯಕ್ತಿಯ ಮುಂದೆ ಸರ್ಕಾರ ಏಕೆ ದುರ್ಬಲವಾಗಿದೆ? ನಿಮಗೆ ಬೇಕಾಗಿರುವುದು ಭಗವಾನ್ ರಾಮನ ಹೆಸರಿನಲ್ಲಿ ಮತಗಳು, ಅವರ ನೀತಿಗಳನ್ನು ಅನುಸರಿಸುವ ಬಗ್ಗೆ ನಿಮ್ಮ ನಿಲುವು ಏನು? ಎಂದು ಸಾಕ್ಷಿ ಮಲಿಕ್‌ ಪ್ರಶ್ನಿಸಿದ್ದರು.

ಕುಸ್ತಿಪಟು ಬಜರಂಗ್ ಪುನಿಯ ಈ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಮಹಿಳೆಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಹಾಗೂ ವಂಶಪಾರಂಪರ್ಯ ರಾಜಕಾರಣ ಆಡಳಿತಾರೂಢ ಬಿಜೆಪಿಯಲ್ಲೂ ಬೇರೂರಿದೆ ಎಂದು ಹೇಳಿದ್ದರು.

ಇದನ್ನು ಓದಿ: ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...