Homeಮುಖಪುಟಬಿಹಾರ: ಎಂಐಎಂ ಮುಖಂಡನ ಹತ್ಯೆ ಬೆನ್ನಲ್ಲೇ ಆರ್‌ಎಲ್‌ಜೆಡಿ ನಾಯಕನಿಗೆ ಗುಂಡೇಟು

ಬಿಹಾರ: ಎಂಐಎಂ ಮುಖಂಡನ ಹತ್ಯೆ ಬೆನ್ನಲ್ಲೇ ಆರ್‌ಎಲ್‌ಜೆಡಿ ನಾಯಕನಿಗೆ ಗುಂಡೇಟು

- Advertisement -
- Advertisement -

ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಮುಖಂಡ ಆರಿಫ್ ಜಮಾಲ್ ಅವರನ್ನು ಶನಿವಾರ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಅಪರಿಚಿತರು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಜಮಾಲ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಇದರ ಹಿಂದಿನ ಕಾರಣವನ್ನು ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಮೃತ ಜಮಾಲ್ ಎಐಎಂಐಎಂ ಸಿವಾನ್ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಆರ್‌ಜೆಡಿ ವಕ್ತಾರ ಇಜಾಝ್ ಅಹ್ಮದ್, “ಇದು ದುಃಖಕರ ಸಂಗತಿ. ಹಂತಕರ ವಿರುದ್ದ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ನಮ್ಮ ಸರ್ಕಾರ ಶೂನ್ಯ ಅಪರಾಧ ಬಯಸುತ್ತದೆ. ಈ ಪ್ರಕರಣಲ್ಲಿ ತಪ್ಪಿತಸ್ಥರ ಸುಮ್ಮನೆ ಬಿಡುವ ಪ್ರಶ್ನೆಯಿಲ್ಲ. ಕಾನೂನು ರೀತಿಯ ಶಿಕ್ಷೆಗೆ ಗುರಿಪಡಿಸಲಾಗುವುದು” ಎಂದಿದ್ದಾರೆ.

ಮತ್ತೊಂದೆಡೆ, “ಮಹಾಘಟಬಂಧನ್ (ಆರ್‌ಜೆಡಿ-ಜೆಡಿಯು ಮತ್ತು ಕಾಂಗ್ರೆಸ್) ಸರ್ಕಾರವು ಬಿಹಾರದಲ್ಲಿ ‘ಜಂಗಲ್ ರಾಜ್’ ಅನ್ನು ಮರಳಿ ತಂದಿದೆ ಎಂದು ಬಿಜೆಪಿ ವಕ್ತಾರ ಅರವಿಂದ್ ಸಿಂಗ್ ಆರೋಪಿಸಿದ್ದಾರೆ. “ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿ ಮತ್ತು ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಬಿಹಾರದಲ್ಲಿ “ಜಂಗಲ್ ರಾಜ್” ಮರಳಿ ಬಂದಿರುವುದನ್ನು ನೋಡಬಹುದು” ಎಂದು ಅರವಿಂದ್ ಸಿಂಗ್ ಹೇಳಿದ್ದಾರೆ.

ಈ ಹಿಂದೆ 2021ರಲ್ಲಿ ಎಐಎಂಐಎಂನ ಅಸದ್ ಖಾನ್ ಅವರನ್ನು ಹಾಡ ಹಗಲೇ ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅಸದ್ ಖಾನ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದರು. ಅವರದ್ದು ಹಳೆಯ “ಸೇಡಿನ ಕೊಲೆ” ಎಂದು ಶಂಕಿಸಿರುವುದಾಗಿ ಪೊಲೀಸರು ತಿಳಿಸಿದ್ದರು.

ಆರ್‌ಎಲ್‌ಜೆಡಿ ನಾಯಕನಿಗೆ ಗುಂಡೇಟು:

ಎಂಐಎಂ ನಾಯಕ ಜಮಾಲ್ ಆರಿಫ್ ಹತ್ಯೆ ಬೆನ್ನಲ್ಲೇ ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಜನತಾದಳ (ಆರ್‌ಎಎಲ್‌ಜೆಡಿ) ಪಕ್ಷದ ಯುವ ಮುಖಂಡನ ಮೇಲೆ ಬಿಹಾರದ ಶರನ್ ಜಿಲ್ಲೆಯಲ್ಲಿ ಭಾನುವಾರ ಗುಂಡಿನ ದಾಳಿ ನಡೆದಿದೆ.

ಉತ್ಸವ್ ಸಿಂಗ್ (19) ಗುಂಡೇಟು ತಿಂದ ವ್ಯಕ್ತಿ. ಇವರು ಆರ್‌ಎಲ್‌ಜೆಡಿ ಪಕ್ಷದ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಭಾನುವಾರ ಬೆಳಿಗ್ಗೆ 9.50ರ ಸುಮಾರಿಗೆ ಮೆಹಿಯಾ ಸಮೀಪ ದ್ವಿಚಕ್ರ ವಾಹನದಲ್ಲಿ ಬಂದ ನಾಲ್ವರು ಅಪರಿಚಿತರು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಉತ್ಸವ್‌ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದು, ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...