Homeಮುಖಪುಟನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ'...

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ ಮಂಡನೆ

- Advertisement -
- Advertisement -

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದ್ದಾರೆ. ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.

ಇದಕ್ಕೆಂದು ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಠಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿಯೂ ನೇಮಿಸಲು ನಿರ್ಧರಿಸಲಾಗಿದೆ.

ವಿಧೇಯಕದಲ್ಲಿ 100ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ರಾಜ್ಯ, ಕೇಂದ್ರ ಸರಕಾರಿ ಸಂಸ್ಥೆಗಳಲ್ಲಿ ಕನ್ನಡ ಕೋಶ ಸ್ಥಾಪನೆಗೆ ಸೂಚನೆ, ದಿನ ನಿತ್ಯದ ವ್ಯವಹಾರಗಳ ನಿರ್ವಹಣೆಯಲ್ಲಿ ಕನ್ನಡ ಭಾಷೆ ಬಳಕೆಗೆ ಹಿರಿಯ ಉದ್ಯೋಗಿಗಳ ನೇತೃತ್ವದಲ್ಲಿ ಕನ್ನಡ ಕೋಶ ಸ್ಥಾಪಿಸಲು ಸೂಚನೆ, ಕನ್ನಡ ಭಾಷೆ ಮಾತನಾಡಲು ಬರದ ಉದ್ಯೋಗಿಗಳಿಗೆ ಕನ್ನಡ ಪರಿಚಯಿಸಲು ಕನ್ನಡ ಕಲಿಕಾ ಘಟಕ ಸ್ಥಾಪಿಸಲು ಸೂಚನೆ, ರಾಜ್ಯದ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರ ಜೊತೆಗಿನ ಸಂಪರ್ಕ, ಪತ್ರ ವ್ಯವಹಾರಗಳಲ್ಲಿ ಕನ್ನಡ ಕಡ್ಡಾಯ,  ರಸ್ತೆಗಳು, ಬಡಾವಣೆ ಪ್ರದೇಶದ ನಾಮಫಲಕದಲ್ಲೂ ಕನ್ನಡ ಕಡ್ಡಾಯ, ರಾಜ್ಯದೊಳಗೆ ತಯಾರಿಸಿದ ಉತ್ಪನ್ನಗಳ ಹೆಸರು, ಮಾಹಿತಿಯಲ್ಲೂ ಇತರ ಭಾಷೆಯ ಜೊತೆಗೆ ಕನ್ನಡ ಕಡ್ಡಾಯದ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

ಮಸೂದೆಯ ಮೂಲಕ ಇನ್ನು ಮುಂದೆ ನಾಮಫಲಕಗಳಲ್ಲಿ ಕಾಟಾಚಾರಕ್ಕೆ ಮಾತ್ರ ಕನ್ನಡ ಬರದಂತೆ ಮಾಡುವುದು ಅಥವಾ ನಾಮಫಲಕದ ಒಂದು ಮೂಲೆಯಲ್ಲಿ ಮಾತ್ರ ಕನ್ನಡ ಭಾಷೆ ಬಳಸುವುದಕ್ಕೆ ಕಡಿವಾಣ ಬೀಳಲಿದೆ. ಅನೇಕ ಕಡೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಇಂತಹ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ಇದೇ ಕಾರಣಕ್ಕೆ ಕನ್ನಡಪರ ಸಂಘಟನೆಗಳು ಹಲವು ಬಾರಿ ಪ್ರತಿಭಟನೆ ನಡೆಸಿದ್ದವು. ಬೇರೆ ರಾಜ್ಯಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆಗಳು ಎದ್ದು ಕಾಣುವಂತೆಯೇ ಕರ್ನಾಟಕದಲ್ಲೂ ಆಗಬೇಕು ಎಂದು ಆಗ್ರಹಿಸಲಾಗಿತ್ತು.

 ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಬಿಬಿಎಂಪಿ:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಅನುಮತಿ ಪಡೆದ ಎಲ್ಲಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು, ಮಾಲ್‌ಗಳು, ಕಂಪನಿಗಳು, ವಾಣಿಜ್ಯ ಸಂಸ್ಥೆಗಳು ಸಾರ್ವತ್ರಿಕವಾಗಿ ಪ್ರದರ್ಶಿಸುವ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ನೀಡುವುದು ಮತ್ತು  ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿಯು 2017, 2018 ಮತ್ತು 2019ರಲ್ಲಿಆದೇಶ ಹೊರಡಿಸಿತ್ತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಅವರು 2017ರ ಜು.18ರಂದು ಬಿಬಿಎಂಪಿಯಲ್ಲಿಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕನ್ನಡದಲ್ಲಿ  ನಾಮಫಲಕ ಬರೆಸದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಲಿಕೆಯ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ, ನಗರದ ಎಲ್ಲ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಕನ್ನಡದಲ್ಲಿ ಬರೆಸಲು ಮಾಲೀಕರಿಗೆ ತಾಕೀತು ಮಾಡಿತ್ತು. ಆದರೆ ಈ ಆದೇಶವು ಕಾಗದಕ್ಕಷ್ಟೇ ಸೀಮಿತವಾಗಿದೆ. ಎಲ್ಲೆಡೆ ನಿಯಮ ಕಟ್ಟು ನಿಟ್ಟಾಗಿ ಪಾಲನೆ ನಡೆದಿರಲಿಲ್ಲ.

ಇದಾದ ಬಳಿಕ ಬೆಂಗಳೂರಿನಲ್ಲಿ 2024ರ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ತಮ್ಮಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಪ್ರಮುಖವಾಗಿ ಅಂದರೆ ಶೇಕಡಾ 60ರಷ್ಟು ಬಳಸಬೇಕು. ಇಲ್ಲವಾದರೆ ಟ್ರೇಡ್ ಲೈಸೆನ್ಸ್‌ನ್ನು ಕಳೆದುಕೊಂಡು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...