Homeಮುಖಪುಟನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ'...

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ ಮಂಡನೆ

- Advertisement -
- Advertisement -

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದ್ದಾರೆ. ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.

ಇದಕ್ಕೆಂದು ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಠಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿಯೂ ನೇಮಿಸಲು ನಿರ್ಧರಿಸಲಾಗಿದೆ.

ವಿಧೇಯಕದಲ್ಲಿ 100ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ರಾಜ್ಯ, ಕೇಂದ್ರ ಸರಕಾರಿ ಸಂಸ್ಥೆಗಳಲ್ಲಿ ಕನ್ನಡ ಕೋಶ ಸ್ಥಾಪನೆಗೆ ಸೂಚನೆ, ದಿನ ನಿತ್ಯದ ವ್ಯವಹಾರಗಳ ನಿರ್ವಹಣೆಯಲ್ಲಿ ಕನ್ನಡ ಭಾಷೆ ಬಳಕೆಗೆ ಹಿರಿಯ ಉದ್ಯೋಗಿಗಳ ನೇತೃತ್ವದಲ್ಲಿ ಕನ್ನಡ ಕೋಶ ಸ್ಥಾಪಿಸಲು ಸೂಚನೆ, ಕನ್ನಡ ಭಾಷೆ ಮಾತನಾಡಲು ಬರದ ಉದ್ಯೋಗಿಗಳಿಗೆ ಕನ್ನಡ ಪರಿಚಯಿಸಲು ಕನ್ನಡ ಕಲಿಕಾ ಘಟಕ ಸ್ಥಾಪಿಸಲು ಸೂಚನೆ, ರಾಜ್ಯದ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರ ಜೊತೆಗಿನ ಸಂಪರ್ಕ, ಪತ್ರ ವ್ಯವಹಾರಗಳಲ್ಲಿ ಕನ್ನಡ ಕಡ್ಡಾಯ,  ರಸ್ತೆಗಳು, ಬಡಾವಣೆ ಪ್ರದೇಶದ ನಾಮಫಲಕದಲ್ಲೂ ಕನ್ನಡ ಕಡ್ಡಾಯ, ರಾಜ್ಯದೊಳಗೆ ತಯಾರಿಸಿದ ಉತ್ಪನ್ನಗಳ ಹೆಸರು, ಮಾಹಿತಿಯಲ್ಲೂ ಇತರ ಭಾಷೆಯ ಜೊತೆಗೆ ಕನ್ನಡ ಕಡ್ಡಾಯದ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

ಮಸೂದೆಯ ಮೂಲಕ ಇನ್ನು ಮುಂದೆ ನಾಮಫಲಕಗಳಲ್ಲಿ ಕಾಟಾಚಾರಕ್ಕೆ ಮಾತ್ರ ಕನ್ನಡ ಬರದಂತೆ ಮಾಡುವುದು ಅಥವಾ ನಾಮಫಲಕದ ಒಂದು ಮೂಲೆಯಲ್ಲಿ ಮಾತ್ರ ಕನ್ನಡ ಭಾಷೆ ಬಳಸುವುದಕ್ಕೆ ಕಡಿವಾಣ ಬೀಳಲಿದೆ. ಅನೇಕ ಕಡೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಇಂತಹ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ಇದೇ ಕಾರಣಕ್ಕೆ ಕನ್ನಡಪರ ಸಂಘಟನೆಗಳು ಹಲವು ಬಾರಿ ಪ್ರತಿಭಟನೆ ನಡೆಸಿದ್ದವು. ಬೇರೆ ರಾಜ್ಯಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆಗಳು ಎದ್ದು ಕಾಣುವಂತೆಯೇ ಕರ್ನಾಟಕದಲ್ಲೂ ಆಗಬೇಕು ಎಂದು ಆಗ್ರಹಿಸಲಾಗಿತ್ತು.

 ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಬಿಬಿಎಂಪಿ:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಅನುಮತಿ ಪಡೆದ ಎಲ್ಲಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು, ಮಾಲ್‌ಗಳು, ಕಂಪನಿಗಳು, ವಾಣಿಜ್ಯ ಸಂಸ್ಥೆಗಳು ಸಾರ್ವತ್ರಿಕವಾಗಿ ಪ್ರದರ್ಶಿಸುವ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ನೀಡುವುದು ಮತ್ತು  ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿಯು 2017, 2018 ಮತ್ತು 2019ರಲ್ಲಿಆದೇಶ ಹೊರಡಿಸಿತ್ತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಅವರು 2017ರ ಜು.18ರಂದು ಬಿಬಿಎಂಪಿಯಲ್ಲಿಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕನ್ನಡದಲ್ಲಿ  ನಾಮಫಲಕ ಬರೆಸದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಲಿಕೆಯ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ, ನಗರದ ಎಲ್ಲ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಕನ್ನಡದಲ್ಲಿ ಬರೆಸಲು ಮಾಲೀಕರಿಗೆ ತಾಕೀತು ಮಾಡಿತ್ತು. ಆದರೆ ಈ ಆದೇಶವು ಕಾಗದಕ್ಕಷ್ಟೇ ಸೀಮಿತವಾಗಿದೆ. ಎಲ್ಲೆಡೆ ನಿಯಮ ಕಟ್ಟು ನಿಟ್ಟಾಗಿ ಪಾಲನೆ ನಡೆದಿರಲಿಲ್ಲ.

ಇದಾದ ಬಳಿಕ ಬೆಂಗಳೂರಿನಲ್ಲಿ 2024ರ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ತಮ್ಮಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಪ್ರಮುಖವಾಗಿ ಅಂದರೆ ಶೇಕಡಾ 60ರಷ್ಟು ಬಳಸಬೇಕು. ಇಲ್ಲವಾದರೆ ಟ್ರೇಡ್ ಲೈಸೆನ್ಸ್‌ನ್ನು ಕಳೆದುಕೊಂಡು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...