Homeಮುಖಪುಟನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ'...

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ ಮಂಡನೆ

- Advertisement -
- Advertisement -

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದ್ದಾರೆ. ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.

ಇದಕ್ಕೆಂದು ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಠಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿಯೂ ನೇಮಿಸಲು ನಿರ್ಧರಿಸಲಾಗಿದೆ.

ವಿಧೇಯಕದಲ್ಲಿ 100ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ರಾಜ್ಯ, ಕೇಂದ್ರ ಸರಕಾರಿ ಸಂಸ್ಥೆಗಳಲ್ಲಿ ಕನ್ನಡ ಕೋಶ ಸ್ಥಾಪನೆಗೆ ಸೂಚನೆ, ದಿನ ನಿತ್ಯದ ವ್ಯವಹಾರಗಳ ನಿರ್ವಹಣೆಯಲ್ಲಿ ಕನ್ನಡ ಭಾಷೆ ಬಳಕೆಗೆ ಹಿರಿಯ ಉದ್ಯೋಗಿಗಳ ನೇತೃತ್ವದಲ್ಲಿ ಕನ್ನಡ ಕೋಶ ಸ್ಥಾಪಿಸಲು ಸೂಚನೆ, ಕನ್ನಡ ಭಾಷೆ ಮಾತನಾಡಲು ಬರದ ಉದ್ಯೋಗಿಗಳಿಗೆ ಕನ್ನಡ ಪರಿಚಯಿಸಲು ಕನ್ನಡ ಕಲಿಕಾ ಘಟಕ ಸ್ಥಾಪಿಸಲು ಸೂಚನೆ, ರಾಜ್ಯದ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರ ಜೊತೆಗಿನ ಸಂಪರ್ಕ, ಪತ್ರ ವ್ಯವಹಾರಗಳಲ್ಲಿ ಕನ್ನಡ ಕಡ್ಡಾಯ,  ರಸ್ತೆಗಳು, ಬಡಾವಣೆ ಪ್ರದೇಶದ ನಾಮಫಲಕದಲ್ಲೂ ಕನ್ನಡ ಕಡ್ಡಾಯ, ರಾಜ್ಯದೊಳಗೆ ತಯಾರಿಸಿದ ಉತ್ಪನ್ನಗಳ ಹೆಸರು, ಮಾಹಿತಿಯಲ್ಲೂ ಇತರ ಭಾಷೆಯ ಜೊತೆಗೆ ಕನ್ನಡ ಕಡ್ಡಾಯದ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

ಮಸೂದೆಯ ಮೂಲಕ ಇನ್ನು ಮುಂದೆ ನಾಮಫಲಕಗಳಲ್ಲಿ ಕಾಟಾಚಾರಕ್ಕೆ ಮಾತ್ರ ಕನ್ನಡ ಬರದಂತೆ ಮಾಡುವುದು ಅಥವಾ ನಾಮಫಲಕದ ಒಂದು ಮೂಲೆಯಲ್ಲಿ ಮಾತ್ರ ಕನ್ನಡ ಭಾಷೆ ಬಳಸುವುದಕ್ಕೆ ಕಡಿವಾಣ ಬೀಳಲಿದೆ. ಅನೇಕ ಕಡೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಇಂತಹ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ಇದೇ ಕಾರಣಕ್ಕೆ ಕನ್ನಡಪರ ಸಂಘಟನೆಗಳು ಹಲವು ಬಾರಿ ಪ್ರತಿಭಟನೆ ನಡೆಸಿದ್ದವು. ಬೇರೆ ರಾಜ್ಯಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆಗಳು ಎದ್ದು ಕಾಣುವಂತೆಯೇ ಕರ್ನಾಟಕದಲ್ಲೂ ಆಗಬೇಕು ಎಂದು ಆಗ್ರಹಿಸಲಾಗಿತ್ತು.

 ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಬಿಬಿಎಂಪಿ:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಅನುಮತಿ ಪಡೆದ ಎಲ್ಲಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು, ಮಾಲ್‌ಗಳು, ಕಂಪನಿಗಳು, ವಾಣಿಜ್ಯ ಸಂಸ್ಥೆಗಳು ಸಾರ್ವತ್ರಿಕವಾಗಿ ಪ್ರದರ್ಶಿಸುವ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ನೀಡುವುದು ಮತ್ತು  ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿಯು 2017, 2018 ಮತ್ತು 2019ರಲ್ಲಿಆದೇಶ ಹೊರಡಿಸಿತ್ತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಅವರು 2017ರ ಜು.18ರಂದು ಬಿಬಿಎಂಪಿಯಲ್ಲಿಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕನ್ನಡದಲ್ಲಿ  ನಾಮಫಲಕ ಬರೆಸದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಲಿಕೆಯ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ, ನಗರದ ಎಲ್ಲ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಕನ್ನಡದಲ್ಲಿ ಬರೆಸಲು ಮಾಲೀಕರಿಗೆ ತಾಕೀತು ಮಾಡಿತ್ತು. ಆದರೆ ಈ ಆದೇಶವು ಕಾಗದಕ್ಕಷ್ಟೇ ಸೀಮಿತವಾಗಿದೆ. ಎಲ್ಲೆಡೆ ನಿಯಮ ಕಟ್ಟು ನಿಟ್ಟಾಗಿ ಪಾಲನೆ ನಡೆದಿರಲಿಲ್ಲ.

ಇದಾದ ಬಳಿಕ ಬೆಂಗಳೂರಿನಲ್ಲಿ 2024ರ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ತಮ್ಮಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಪ್ರಮುಖವಾಗಿ ಅಂದರೆ ಶೇಕಡಾ 60ರಷ್ಟು ಬಳಸಬೇಕು. ಇಲ್ಲವಾದರೆ ಟ್ರೇಡ್ ಲೈಸೆನ್ಸ್‌ನ್ನು ಕಳೆದುಕೊಂಡು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...