Homeಕರ್ನಾಟಕ2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು:  2019 ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಡಿಪ್ಲೊಮಾ ವಿದ್ಯಾರ್ಥಿಯ ಕುಟುಂಬಕ್ಕೆ ರಾಜ್ಯ ಹೈಕೋರ್ಟ್ ಪರಿಹಾರವನ್ನು ಹೆಚ್ಚಿಸಿ ತೀರ್ಪು ನೀಡಿದೆ. ಮೋಟಾರ್ ಅಕ್ಸಿಡೆಂಟ್ ಕ್ಲೈಮ್ಸ್ ಟ್ರಿಬ್ಯೂನಲ್ ಆರಂಭದಲ್ಲಿ ನೀಡಿದ್ದ 1,53,000 ಲಕ್ಷ  ರೂ.ವನ್ನು 21,28,800 ಲಕ್ಷ ರೂ.ಗೆ ಹೆಚ್ಚಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಮತ್ತು ವಿಜಯಕುಮಾರ್ ಎ.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪರಿಷ್ಕೃತ ಪರಿಹಾರವನ್ನು ಆರಂಭದಲ್ಲಿ ವಿಮಾ ಕಂಪನಿಯು ಪಾವತಿಸಬೇಕು. ನಂತರ ವಾಹನ ಮಾಲೀಕರಿಂದ ಮೊತ್ತವನ್ನು ಕಂಪನಿಯು ಮರುಪಡೆಯಬಹುದು. ಈ ಪ್ರಕರಣವು 2019 ರ ಏಪ್ರಿಲ್ 23 ರಂದು ಸ್ನೇಹಿತ ಅರವಿಂದ್ ಅವರೊಂದಿಗೆ 19 ವರ್ಷದ ಎಂ.ಎಸ್. ಶ್ರೀಹರಿ ಅವರ ರಸ್ತೆ ಅಫಘಾತದಿಂದಾದ ಸಾವಿಗೆ ಸಂಬಂಧಿಸಿದೆ.

ಬೆಂಗಳೂರು ಸಮೀಪದ ಹೆಜ್ಜಾಲ-ಕೆಂಪದ್ಯಾಪನಹಳ್ಳಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಅತಿವೇಗದ ಚಾಲನೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ರಾಮನಗರ ಜಿಲ್ಲೆಯ ಮಲ್ಲತ್ತಹಳ್ಳಿ ಗ್ರಾಮದ ಬಳಿ ಮಣ್ಣಿನ ಗೋಡೆಗೆ ಬೈಕ್ ಡಿಕ್ಕಿ ಹೊಡೆದಿದ್ದು, ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಯುವಕ ಇಲ್ಲಿನ ಪಿಇಎಸ್ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದು, ಹಾಲು ಮಾರಾಟ ವ್ಯವಹಾರದ ಮೂಲಕ ತಿಂಗಳಿಗೆ  20,000  ರೂ. ಸಂಪಾದಿಸುತ್ತಿದ್ದ  ಎಂದು ತಿಳಿಸಿರುವ ಶ್ರೀಹರಿಯ ಕುಟುಂಬದ ಪೋಷಕರು ಮತ್ತು ಸಹೋದರಿ ಆರಂಭದಲ್ಲಿ 30 ಲಕ್ಷ ರೂ. ಕೋರಿ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ನ್ಯಾಯಾಲಯವು ತನ್ನ ಏಪ್ರಿಲ್ 2022 ರ ಆದೇಶದಲ್ಲಿ, 1.53 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿತ್ತು. ಸವಾರನು ಆ ಸಂದರ್ಭದಲ್ಲಿ ಚಾಲನಾ ಪರವಾನಗಿಯನ್ನು ಹೊಂದಿರಲಿಲ್ಲವಾಗಿದ್ದರಿಂದ ಪ್ರಾಥಮಿಕವಾಗಿ ಮೋಟಾರ್ ಮಾಲೀಕ ಸೂರಜ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ಮಾಡಿದೆ.

ಇದನ್ನೂ ಓದಿ…10 ತಿಂಗಳಲ್ಲಿ 420,000 ಸೊಮಾಲಿಯನ್ನರ  ಸ್ಥಳಾಂತರ: ಯುಎನ್ ಹೆಚ್‌ಸಿಆರ್

ನ್ಯಾಯಮಂಡಳಿಯ ತೀರ್ಪಿನಿಂದ ಅತೃಪ್ತರಾದ ಕುಟುಂಬವು ಮೇಲ್ಮನವಿ ಸಲ್ಲಿಸಿ, ಸುಪ್ರೀಂ ಕೋರ್ಟ್ ಪೂರ್ವನಿದರ್ಶನಕ್ಕೆ ಅನುಗುಣವಾಗಿ ಪರಿಹಾರವನ್ನು ಮುಂಗಡವಾಗಿ ಪಾವತಿಸಲು ಮತ್ತು ನಂತರ ಮಾಲೀಕರಿಂದ ವಸೂಲಿ ಮಾಡಲು ವಿಮಾ ಕಂಪನಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ,ಚಾಲನಾ ಪರವಾನಿಗೆ ಇಲ್ಲದಿರುವುದು ನೀತಿ ಉಲ್ಲಂಘನೆಯಾಗಿದೆ ಮತ್ತು ಹಕ್ಕುದಾರರು ಶ್ರೀಹರಿಯ ಮೇಲೆ ಆರ್ಥಿಕ ಅವಲಂಬನೆಯನ್ನು ಸಾಕಷ್ಟು ಸಾಬೀತುಪಡಿಸಿಲ್ಲ ಎಂದು ವಿಮಾದಾರರು ವಾದಿಸಿದರು.

ಆದಾಗ್ಯೂ, ಕುಟುಂಬದ ಪರವಾಗಿ ತೀರ್ಪು ನೀಡಿರುವ ಹೈಕೋರ್ಟ್,ಸುಪ್ರೀಂ ಕೋರ್ಟ್ ಸೂಚಿಸಿದ  “ಪಾವತಿ ಮತ್ತು ಮರುಪಡೆಯುವಿಕೆ” ಎಂಬ ನಿರ್ದೇಶನ ಈ ಪ್ರಕರಣಕ್ಕೆ ಅನ್ವಯಿಸುತ್ತದೆ ಎಂದು ಹೇಳಿದೆ. ಶ್ರೀಹರಿಯ ಕುಟುಂಬವು ಆದಾಯವನ್ನು ನಿರ್ಣಾಯಕವಾಗಿ ಸಾಬೀತುಪಡಿಸಲು ಸಾಧ್ಯವಾಗದಿದ್ದರೂ,ಅವರ ವಯಸ್ಸು ಮತ್ತು ಕೌಟುಂಬಿಕ ಪಾತ್ರವನ್ನು ರುಜುವಾತುಪಡಿಸಲಾಗಿದೆ ಎಂದಿದೆ.

ನ್ಯಾಯಾಲಯವು ಅವನ ಮಾಸಿಕ ಗಳಿಕೆಯನ್ನು  14,000 ರೂ. ಎಂದು ಅಂದಾಜು ಮಾಡಿದೆ. ಅರ್ಜಿ ಸಲ್ಲಿಸಿದ ದಿನದಿಂದ ಮೊತ್ತವನ್ನು ಠೇವಣಿ ಇಡುವವರೆಗೆ ಶೇ 6ರಷ್ಟು ವಾರ್ಷಿಕ ಬಡ್ಡಿಯೊಂದಿಗೆ ₹21,28,800 ಪಾವತಿಸುವಂತೆ ಪೀಠವು ವಿಮಾ ಕಂಪನಿಗೆ ಸೂಚಿಸಿದೆ.

ಇದನ್ನೂ ಓದಿ….2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...