Homeಕರ್ನಾಟಕ2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು:  2019 ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಡಿಪ್ಲೊಮಾ ವಿದ್ಯಾರ್ಥಿಯ ಕುಟುಂಬಕ್ಕೆ ರಾಜ್ಯ ಹೈಕೋರ್ಟ್ ಪರಿಹಾರವನ್ನು ಹೆಚ್ಚಿಸಿ ತೀರ್ಪು ನೀಡಿದೆ. ಮೋಟಾರ್ ಅಕ್ಸಿಡೆಂಟ್ ಕ್ಲೈಮ್ಸ್ ಟ್ರಿಬ್ಯೂನಲ್ ಆರಂಭದಲ್ಲಿ ನೀಡಿದ್ದ 1,53,000 ಲಕ್ಷ  ರೂ.ವನ್ನು 21,28,800 ಲಕ್ಷ ರೂ.ಗೆ ಹೆಚ್ಚಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಮತ್ತು ವಿಜಯಕುಮಾರ್ ಎ.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪರಿಷ್ಕೃತ ಪರಿಹಾರವನ್ನು ಆರಂಭದಲ್ಲಿ ವಿಮಾ ಕಂಪನಿಯು ಪಾವತಿಸಬೇಕು. ನಂತರ ವಾಹನ ಮಾಲೀಕರಿಂದ ಮೊತ್ತವನ್ನು ಕಂಪನಿಯು ಮರುಪಡೆಯಬಹುದು. ಈ ಪ್ರಕರಣವು 2019 ರ ಏಪ್ರಿಲ್ 23 ರಂದು ಸ್ನೇಹಿತ ಅರವಿಂದ್ ಅವರೊಂದಿಗೆ 19 ವರ್ಷದ ಎಂ.ಎಸ್. ಶ್ರೀಹರಿ ಅವರ ರಸ್ತೆ ಅಫಘಾತದಿಂದಾದ ಸಾವಿಗೆ ಸಂಬಂಧಿಸಿದೆ.

ಬೆಂಗಳೂರು ಸಮೀಪದ ಹೆಜ್ಜಾಲ-ಕೆಂಪದ್ಯಾಪನಹಳ್ಳಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಅತಿವೇಗದ ಚಾಲನೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ರಾಮನಗರ ಜಿಲ್ಲೆಯ ಮಲ್ಲತ್ತಹಳ್ಳಿ ಗ್ರಾಮದ ಬಳಿ ಮಣ್ಣಿನ ಗೋಡೆಗೆ ಬೈಕ್ ಡಿಕ್ಕಿ ಹೊಡೆದಿದ್ದು, ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಯುವಕ ಇಲ್ಲಿನ ಪಿಇಎಸ್ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದು, ಹಾಲು ಮಾರಾಟ ವ್ಯವಹಾರದ ಮೂಲಕ ತಿಂಗಳಿಗೆ  20,000  ರೂ. ಸಂಪಾದಿಸುತ್ತಿದ್ದ  ಎಂದು ತಿಳಿಸಿರುವ ಶ್ರೀಹರಿಯ ಕುಟುಂಬದ ಪೋಷಕರು ಮತ್ತು ಸಹೋದರಿ ಆರಂಭದಲ್ಲಿ 30 ಲಕ್ಷ ರೂ. ಕೋರಿ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ನ್ಯಾಯಾಲಯವು ತನ್ನ ಏಪ್ರಿಲ್ 2022 ರ ಆದೇಶದಲ್ಲಿ, 1.53 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿತ್ತು. ಸವಾರನು ಆ ಸಂದರ್ಭದಲ್ಲಿ ಚಾಲನಾ ಪರವಾನಗಿಯನ್ನು ಹೊಂದಿರಲಿಲ್ಲವಾಗಿದ್ದರಿಂದ ಪ್ರಾಥಮಿಕವಾಗಿ ಮೋಟಾರ್ ಮಾಲೀಕ ಸೂರಜ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ಮಾಡಿದೆ.

ಇದನ್ನೂ ಓದಿ…10 ತಿಂಗಳಲ್ಲಿ 420,000 ಸೊಮಾಲಿಯನ್ನರ  ಸ್ಥಳಾಂತರ: ಯುಎನ್ ಹೆಚ್‌ಸಿಆರ್

ನ್ಯಾಯಮಂಡಳಿಯ ತೀರ್ಪಿನಿಂದ ಅತೃಪ್ತರಾದ ಕುಟುಂಬವು ಮೇಲ್ಮನವಿ ಸಲ್ಲಿಸಿ, ಸುಪ್ರೀಂ ಕೋರ್ಟ್ ಪೂರ್ವನಿದರ್ಶನಕ್ಕೆ ಅನುಗುಣವಾಗಿ ಪರಿಹಾರವನ್ನು ಮುಂಗಡವಾಗಿ ಪಾವತಿಸಲು ಮತ್ತು ನಂತರ ಮಾಲೀಕರಿಂದ ವಸೂಲಿ ಮಾಡಲು ವಿಮಾ ಕಂಪನಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ,ಚಾಲನಾ ಪರವಾನಿಗೆ ಇಲ್ಲದಿರುವುದು ನೀತಿ ಉಲ್ಲಂಘನೆಯಾಗಿದೆ ಮತ್ತು ಹಕ್ಕುದಾರರು ಶ್ರೀಹರಿಯ ಮೇಲೆ ಆರ್ಥಿಕ ಅವಲಂಬನೆಯನ್ನು ಸಾಕಷ್ಟು ಸಾಬೀತುಪಡಿಸಿಲ್ಲ ಎಂದು ವಿಮಾದಾರರು ವಾದಿಸಿದರು.

ಆದಾಗ್ಯೂ, ಕುಟುಂಬದ ಪರವಾಗಿ ತೀರ್ಪು ನೀಡಿರುವ ಹೈಕೋರ್ಟ್,ಸುಪ್ರೀಂ ಕೋರ್ಟ್ ಸೂಚಿಸಿದ  “ಪಾವತಿ ಮತ್ತು ಮರುಪಡೆಯುವಿಕೆ” ಎಂಬ ನಿರ್ದೇಶನ ಈ ಪ್ರಕರಣಕ್ಕೆ ಅನ್ವಯಿಸುತ್ತದೆ ಎಂದು ಹೇಳಿದೆ. ಶ್ರೀಹರಿಯ ಕುಟುಂಬವು ಆದಾಯವನ್ನು ನಿರ್ಣಾಯಕವಾಗಿ ಸಾಬೀತುಪಡಿಸಲು ಸಾಧ್ಯವಾಗದಿದ್ದರೂ,ಅವರ ವಯಸ್ಸು ಮತ್ತು ಕೌಟುಂಬಿಕ ಪಾತ್ರವನ್ನು ರುಜುವಾತುಪಡಿಸಲಾಗಿದೆ ಎಂದಿದೆ.

ನ್ಯಾಯಾಲಯವು ಅವನ ಮಾಸಿಕ ಗಳಿಕೆಯನ್ನು  14,000 ರೂ. ಎಂದು ಅಂದಾಜು ಮಾಡಿದೆ. ಅರ್ಜಿ ಸಲ್ಲಿಸಿದ ದಿನದಿಂದ ಮೊತ್ತವನ್ನು ಠೇವಣಿ ಇಡುವವರೆಗೆ ಶೇ 6ರಷ್ಟು ವಾರ್ಷಿಕ ಬಡ್ಡಿಯೊಂದಿಗೆ ₹21,28,800 ಪಾವತಿಸುವಂತೆ ಪೀಠವು ವಿಮಾ ಕಂಪನಿಗೆ ಸೂಚಿಸಿದೆ.

ಇದನ್ನೂ ಓದಿ….2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...