Homeಕರ್ನಾಟಕ2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು:  2019 ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಡಿಪ್ಲೊಮಾ ವಿದ್ಯಾರ್ಥಿಯ ಕುಟುಂಬಕ್ಕೆ ರಾಜ್ಯ ಹೈಕೋರ್ಟ್ ಪರಿಹಾರವನ್ನು ಹೆಚ್ಚಿಸಿ ತೀರ್ಪು ನೀಡಿದೆ. ಮೋಟಾರ್ ಅಕ್ಸಿಡೆಂಟ್ ಕ್ಲೈಮ್ಸ್ ಟ್ರಿಬ್ಯೂನಲ್ ಆರಂಭದಲ್ಲಿ ನೀಡಿದ್ದ 1,53,000 ಲಕ್ಷ  ರೂ.ವನ್ನು 21,28,800 ಲಕ್ಷ ರೂ.ಗೆ ಹೆಚ್ಚಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಮತ್ತು ವಿಜಯಕುಮಾರ್ ಎ.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪರಿಷ್ಕೃತ ಪರಿಹಾರವನ್ನು ಆರಂಭದಲ್ಲಿ ವಿಮಾ ಕಂಪನಿಯು ಪಾವತಿಸಬೇಕು. ನಂತರ ವಾಹನ ಮಾಲೀಕರಿಂದ ಮೊತ್ತವನ್ನು ಕಂಪನಿಯು ಮರುಪಡೆಯಬಹುದು. ಈ ಪ್ರಕರಣವು 2019 ರ ಏಪ್ರಿಲ್ 23 ರಂದು ಸ್ನೇಹಿತ ಅರವಿಂದ್ ಅವರೊಂದಿಗೆ 19 ವರ್ಷದ ಎಂ.ಎಸ್. ಶ್ರೀಹರಿ ಅವರ ರಸ್ತೆ ಅಫಘಾತದಿಂದಾದ ಸಾವಿಗೆ ಸಂಬಂಧಿಸಿದೆ.

ಬೆಂಗಳೂರು ಸಮೀಪದ ಹೆಜ್ಜಾಲ-ಕೆಂಪದ್ಯಾಪನಹಳ್ಳಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಅತಿವೇಗದ ಚಾಲನೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ರಾಮನಗರ ಜಿಲ್ಲೆಯ ಮಲ್ಲತ್ತಹಳ್ಳಿ ಗ್ರಾಮದ ಬಳಿ ಮಣ್ಣಿನ ಗೋಡೆಗೆ ಬೈಕ್ ಡಿಕ್ಕಿ ಹೊಡೆದಿದ್ದು, ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಯುವಕ ಇಲ್ಲಿನ ಪಿಇಎಸ್ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದು, ಹಾಲು ಮಾರಾಟ ವ್ಯವಹಾರದ ಮೂಲಕ ತಿಂಗಳಿಗೆ  20,000  ರೂ. ಸಂಪಾದಿಸುತ್ತಿದ್ದ  ಎಂದು ತಿಳಿಸಿರುವ ಶ್ರೀಹರಿಯ ಕುಟುಂಬದ ಪೋಷಕರು ಮತ್ತು ಸಹೋದರಿ ಆರಂಭದಲ್ಲಿ 30 ಲಕ್ಷ ರೂ. ಕೋರಿ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ನ್ಯಾಯಾಲಯವು ತನ್ನ ಏಪ್ರಿಲ್ 2022 ರ ಆದೇಶದಲ್ಲಿ, 1.53 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿತ್ತು. ಸವಾರನು ಆ ಸಂದರ್ಭದಲ್ಲಿ ಚಾಲನಾ ಪರವಾನಗಿಯನ್ನು ಹೊಂದಿರಲಿಲ್ಲವಾಗಿದ್ದರಿಂದ ಪ್ರಾಥಮಿಕವಾಗಿ ಮೋಟಾರ್ ಮಾಲೀಕ ಸೂರಜ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ಮಾಡಿದೆ.

ಇದನ್ನೂ ಓದಿ…10 ತಿಂಗಳಲ್ಲಿ 420,000 ಸೊಮಾಲಿಯನ್ನರ  ಸ್ಥಳಾಂತರ: ಯುಎನ್ ಹೆಚ್‌ಸಿಆರ್

ನ್ಯಾಯಮಂಡಳಿಯ ತೀರ್ಪಿನಿಂದ ಅತೃಪ್ತರಾದ ಕುಟುಂಬವು ಮೇಲ್ಮನವಿ ಸಲ್ಲಿಸಿ, ಸುಪ್ರೀಂ ಕೋರ್ಟ್ ಪೂರ್ವನಿದರ್ಶನಕ್ಕೆ ಅನುಗುಣವಾಗಿ ಪರಿಹಾರವನ್ನು ಮುಂಗಡವಾಗಿ ಪಾವತಿಸಲು ಮತ್ತು ನಂತರ ಮಾಲೀಕರಿಂದ ವಸೂಲಿ ಮಾಡಲು ವಿಮಾ ಕಂಪನಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ,ಚಾಲನಾ ಪರವಾನಿಗೆ ಇಲ್ಲದಿರುವುದು ನೀತಿ ಉಲ್ಲಂಘನೆಯಾಗಿದೆ ಮತ್ತು ಹಕ್ಕುದಾರರು ಶ್ರೀಹರಿಯ ಮೇಲೆ ಆರ್ಥಿಕ ಅವಲಂಬನೆಯನ್ನು ಸಾಕಷ್ಟು ಸಾಬೀತುಪಡಿಸಿಲ್ಲ ಎಂದು ವಿಮಾದಾರರು ವಾದಿಸಿದರು.

ಆದಾಗ್ಯೂ, ಕುಟುಂಬದ ಪರವಾಗಿ ತೀರ್ಪು ನೀಡಿರುವ ಹೈಕೋರ್ಟ್,ಸುಪ್ರೀಂ ಕೋರ್ಟ್ ಸೂಚಿಸಿದ  “ಪಾವತಿ ಮತ್ತು ಮರುಪಡೆಯುವಿಕೆ” ಎಂಬ ನಿರ್ದೇಶನ ಈ ಪ್ರಕರಣಕ್ಕೆ ಅನ್ವಯಿಸುತ್ತದೆ ಎಂದು ಹೇಳಿದೆ. ಶ್ರೀಹರಿಯ ಕುಟುಂಬವು ಆದಾಯವನ್ನು ನಿರ್ಣಾಯಕವಾಗಿ ಸಾಬೀತುಪಡಿಸಲು ಸಾಧ್ಯವಾಗದಿದ್ದರೂ,ಅವರ ವಯಸ್ಸು ಮತ್ತು ಕೌಟುಂಬಿಕ ಪಾತ್ರವನ್ನು ರುಜುವಾತುಪಡಿಸಲಾಗಿದೆ ಎಂದಿದೆ.

ನ್ಯಾಯಾಲಯವು ಅವನ ಮಾಸಿಕ ಗಳಿಕೆಯನ್ನು  14,000 ರೂ. ಎಂದು ಅಂದಾಜು ಮಾಡಿದೆ. ಅರ್ಜಿ ಸಲ್ಲಿಸಿದ ದಿನದಿಂದ ಮೊತ್ತವನ್ನು ಠೇವಣಿ ಇಡುವವರೆಗೆ ಶೇ 6ರಷ್ಟು ವಾರ್ಷಿಕ ಬಡ್ಡಿಯೊಂದಿಗೆ ₹21,28,800 ಪಾವತಿಸುವಂತೆ ಪೀಠವು ವಿಮಾ ಕಂಪನಿಗೆ ಸೂಚಿಸಿದೆ.

ಇದನ್ನೂ ಓದಿ….2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...