Homeಕರ್ನಾಟಕ2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು:  2019 ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಡಿಪ್ಲೊಮಾ ವಿದ್ಯಾರ್ಥಿಯ ಕುಟುಂಬಕ್ಕೆ ರಾಜ್ಯ ಹೈಕೋರ್ಟ್ ಪರಿಹಾರವನ್ನು ಹೆಚ್ಚಿಸಿ ತೀರ್ಪು ನೀಡಿದೆ. ಮೋಟಾರ್ ಅಕ್ಸಿಡೆಂಟ್ ಕ್ಲೈಮ್ಸ್ ಟ್ರಿಬ್ಯೂನಲ್ ಆರಂಭದಲ್ಲಿ ನೀಡಿದ್ದ 1,53,000 ಲಕ್ಷ  ರೂ.ವನ್ನು 21,28,800 ಲಕ್ಷ ರೂ.ಗೆ ಹೆಚ್ಚಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಮತ್ತು ವಿಜಯಕುಮಾರ್ ಎ.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪರಿಷ್ಕೃತ ಪರಿಹಾರವನ್ನು ಆರಂಭದಲ್ಲಿ ವಿಮಾ ಕಂಪನಿಯು ಪಾವತಿಸಬೇಕು. ನಂತರ ವಾಹನ ಮಾಲೀಕರಿಂದ ಮೊತ್ತವನ್ನು ಕಂಪನಿಯು ಮರುಪಡೆಯಬಹುದು. ಈ ಪ್ರಕರಣವು 2019 ರ ಏಪ್ರಿಲ್ 23 ರಂದು ಸ್ನೇಹಿತ ಅರವಿಂದ್ ಅವರೊಂದಿಗೆ 19 ವರ್ಷದ ಎಂ.ಎಸ್. ಶ್ರೀಹರಿ ಅವರ ರಸ್ತೆ ಅಫಘಾತದಿಂದಾದ ಸಾವಿಗೆ ಸಂಬಂಧಿಸಿದೆ.

ಬೆಂಗಳೂರು ಸಮೀಪದ ಹೆಜ್ಜಾಲ-ಕೆಂಪದ್ಯಾಪನಹಳ್ಳಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಅತಿವೇಗದ ಚಾಲನೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ರಾಮನಗರ ಜಿಲ್ಲೆಯ ಮಲ್ಲತ್ತಹಳ್ಳಿ ಗ್ರಾಮದ ಬಳಿ ಮಣ್ಣಿನ ಗೋಡೆಗೆ ಬೈಕ್ ಡಿಕ್ಕಿ ಹೊಡೆದಿದ್ದು, ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಯುವಕ ಇಲ್ಲಿನ ಪಿಇಎಸ್ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದು, ಹಾಲು ಮಾರಾಟ ವ್ಯವಹಾರದ ಮೂಲಕ ತಿಂಗಳಿಗೆ  20,000  ರೂ. ಸಂಪಾದಿಸುತ್ತಿದ್ದ  ಎಂದು ತಿಳಿಸಿರುವ ಶ್ರೀಹರಿಯ ಕುಟುಂಬದ ಪೋಷಕರು ಮತ್ತು ಸಹೋದರಿ ಆರಂಭದಲ್ಲಿ 30 ಲಕ್ಷ ರೂ. ಕೋರಿ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ನ್ಯಾಯಾಲಯವು ತನ್ನ ಏಪ್ರಿಲ್ 2022 ರ ಆದೇಶದಲ್ಲಿ, 1.53 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿತ್ತು. ಸವಾರನು ಆ ಸಂದರ್ಭದಲ್ಲಿ ಚಾಲನಾ ಪರವಾನಗಿಯನ್ನು ಹೊಂದಿರಲಿಲ್ಲವಾಗಿದ್ದರಿಂದ ಪ್ರಾಥಮಿಕವಾಗಿ ಮೋಟಾರ್ ಮಾಲೀಕ ಸೂರಜ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ಮಾಡಿದೆ.

ಇದನ್ನೂ ಓದಿ…10 ತಿಂಗಳಲ್ಲಿ 420,000 ಸೊಮಾಲಿಯನ್ನರ  ಸ್ಥಳಾಂತರ: ಯುಎನ್ ಹೆಚ್‌ಸಿಆರ್

ನ್ಯಾಯಮಂಡಳಿಯ ತೀರ್ಪಿನಿಂದ ಅತೃಪ್ತರಾದ ಕುಟುಂಬವು ಮೇಲ್ಮನವಿ ಸಲ್ಲಿಸಿ, ಸುಪ್ರೀಂ ಕೋರ್ಟ್ ಪೂರ್ವನಿದರ್ಶನಕ್ಕೆ ಅನುಗುಣವಾಗಿ ಪರಿಹಾರವನ್ನು ಮುಂಗಡವಾಗಿ ಪಾವತಿಸಲು ಮತ್ತು ನಂತರ ಮಾಲೀಕರಿಂದ ವಸೂಲಿ ಮಾಡಲು ವಿಮಾ ಕಂಪನಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ,ಚಾಲನಾ ಪರವಾನಿಗೆ ಇಲ್ಲದಿರುವುದು ನೀತಿ ಉಲ್ಲಂಘನೆಯಾಗಿದೆ ಮತ್ತು ಹಕ್ಕುದಾರರು ಶ್ರೀಹರಿಯ ಮೇಲೆ ಆರ್ಥಿಕ ಅವಲಂಬನೆಯನ್ನು ಸಾಕಷ್ಟು ಸಾಬೀತುಪಡಿಸಿಲ್ಲ ಎಂದು ವಿಮಾದಾರರು ವಾದಿಸಿದರು.

ಆದಾಗ್ಯೂ, ಕುಟುಂಬದ ಪರವಾಗಿ ತೀರ್ಪು ನೀಡಿರುವ ಹೈಕೋರ್ಟ್,ಸುಪ್ರೀಂ ಕೋರ್ಟ್ ಸೂಚಿಸಿದ  “ಪಾವತಿ ಮತ್ತು ಮರುಪಡೆಯುವಿಕೆ” ಎಂಬ ನಿರ್ದೇಶನ ಈ ಪ್ರಕರಣಕ್ಕೆ ಅನ್ವಯಿಸುತ್ತದೆ ಎಂದು ಹೇಳಿದೆ. ಶ್ರೀಹರಿಯ ಕುಟುಂಬವು ಆದಾಯವನ್ನು ನಿರ್ಣಾಯಕವಾಗಿ ಸಾಬೀತುಪಡಿಸಲು ಸಾಧ್ಯವಾಗದಿದ್ದರೂ,ಅವರ ವಯಸ್ಸು ಮತ್ತು ಕೌಟುಂಬಿಕ ಪಾತ್ರವನ್ನು ರುಜುವಾತುಪಡಿಸಲಾಗಿದೆ ಎಂದಿದೆ.

ನ್ಯಾಯಾಲಯವು ಅವನ ಮಾಸಿಕ ಗಳಿಕೆಯನ್ನು  14,000 ರೂ. ಎಂದು ಅಂದಾಜು ಮಾಡಿದೆ. ಅರ್ಜಿ ಸಲ್ಲಿಸಿದ ದಿನದಿಂದ ಮೊತ್ತವನ್ನು ಠೇವಣಿ ಇಡುವವರೆಗೆ ಶೇ 6ರಷ್ಟು ವಾರ್ಷಿಕ ಬಡ್ಡಿಯೊಂದಿಗೆ ₹21,28,800 ಪಾವತಿಸುವಂತೆ ಪೀಠವು ವಿಮಾ ಕಂಪನಿಗೆ ಸೂಚಿಸಿದೆ.

ಇದನ್ನೂ ಓದಿ….2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...