Homeಕರ್ನಾಟಕರಸ್ತೆ ಅಪಘಾತ, ಸಾವು ನೋವುಗಳಲ್ಲಿ ಬೆಂಗಳೂರು ರಾಜ್ಯಕ್ಕೆ ಪ್ರಥಮ; 4 ವರ್ಷಗಳಲ್ಲಿ ದ್ವಿಗುಣ!

ರಸ್ತೆ ಅಪಘಾತ, ಸಾವು ನೋವುಗಳಲ್ಲಿ ಬೆಂಗಳೂರು ರಾಜ್ಯಕ್ಕೆ ಪ್ರಥಮ; 4 ವರ್ಷಗಳಲ್ಲಿ ದ್ವಿಗುಣ!

- Advertisement -
- Advertisement -

ಕಳೆದ ನಾಲ್ಕು ವರ್ಷಗಳಲ್ಲಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳು ಮತ್ತು ಸಾವಿನ ಸಂಖ್ಯೆ ದ್ವಿಗುಣಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ನೇಮಕಾತಿ) ಮತ್ತು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಆಯುಕ್ತ ಕೆ.ವಿ.ಶರತ್ ಚಂದ್ರ ಹೇಳಿದ್ದಾರೆ. ಅತಿವೇಗವೆ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ಅವರು ಪ್ರತಿಪಾದಿಸಿದ್ದಾರೆ. ರಸ್ತೆ ಅಪಘಾತ

ಬೆಂಗಳೂರಿನಲ್ಲಿ 2020 ರಲ್ಲಿ, 1,928 ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು, 2024 ರಲ್ಲಿ ಅಕ್ಟೋಬರ್ 31 ರವರೆಗೆ 3,969 ಪ್ರಕರಣಗಳು ವರದಿಯಾಗಿವೆ ಎಂದು ಅವರು ಹೇಳಿದ್ದಾರೆ. ಈ ಅವಧಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ. 2020 ರಲ್ಲಿ ರಸ್ತೆ ಅಪಘಾತದ ಕಾರಣಕ್ಕೆ 344 ಸಾವುಗಳು ವರದಿಯಾಗಿದ್ದು, 2024 ರಲ್ಲಿ ಇದು 723 ಕ್ಕೆ ಏರಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅತಿ ಹೆಚ್ಚು ರಸ್ತೆ ಅಪಘಾತಗಳು, ಗಾಯಗಳು ಮತ್ತು ಸಾವುನೋವುಗಳಲ್ಲಿ ಬೆಂಗಳೂರು ನಗರವು ರಾಜ್ಯದಲ್ಲೆ ಅಗ್ರಸ್ಥಾನದಲ್ಲಿದೆ ಎಂದು ಅವರು ಹೇಳಿದ್ದಾರೆ. ತುಮಕೂರು ನಂತರದ ಸ್ಥಾನದಲ್ಲಿದೆ ಎಂದು ಶರತ್ ಚಂದ್ರ ಹೇಳಿದ್ದಾರೆ.

ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ ಶರತ್ ಚಂದ್ರ, “ಹೆದ್ದಾರಿಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅವುಗಳ ಮೂಲಕ ಸಮಗ್ರ ಸಂಚಾರ ನಿರ್ವಹಣೆ ಪರಿಹಾರಗಳನ್ನು ಪರಿಚಯಿಸಲಾಗಿದೆ. ಆದಾಗ್ಯೂ, ರಸ್ತೆ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ. ಅದರಲ್ಲೂ ಮುಖ್ಯವಾಗಿ ದ್ವಿಚಕ್ರ ವಾಹನಗಳು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ 34,178 ರಸ್ತೆ ಅಪಘಾತಗಳು 2020ರಲ್ಲಿ ವರದಿಯಾಗಿದ್ದು, ಅದರಲ್ಲಿ 9,720 ಮಂದಿ ಸಾವನ್ನಪ್ಪಿದ್ದಾರೆ. 2023ರಲ್ಲಿ 43,440 ಅಪಘಾತಗಳು ಸಂಭವಿಸಿದ್ದು, ಅದರಲ್ಲಿ 12,321 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಜಾಗೃತಿ, ಉತ್ತಮ ರಸ್ತೆ ಎಂಜಿನಿಯರಿಂಗ್ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ಅವರು ಪ್ರತಿಪಾದಿಸಿದ್ದಾರೆ.

ಬ್ಲೂಮ್‌ಬರ್ಗ್ ಫಿಲಾಂತ್ರಪೀಸ್ ಇನಿಶಿಯೇಟಿವ್ ಫಾರ್ ಗ್ಲೋಬಲ್ ರೋಡ್ ಸೇಫ್ಟಿ ಅಡಿಯಲ್ಲಿ ಜಾಗತಿಕ ಸಾರ್ವಜನಿಕ ಆರೋಗ್ಯ ಸಂಸ್ಥೆಯಾದ ವೈಟಲ್ ಸ್ಟ್ರಾಟಜೀಸ್‌ನ ತಾಂತ್ರಿಕ ಬೆಂಬಲದೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ‘ಮೋಟಾರ್ ಸೈಕಲ್ ಪುನರ್ನಿರ್ಮಾಣ’ ಅಭಿಯಾನಕ್ಕೆ ಮಂಗಳವಾರ ಬೆಂಗಳೂರಿನಲ್ಲಿ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...