Homeಮುಖಪುಟಲಾಕ್‌ಡೌನ್ ನಡುವೆಯೂ 2020ರಲ್ಲಿ ರಸ್ತೆ ಅಪಘಾತಗಳಲ್ಲಿ ಜೀವ ಕಳೆದುಕೊಂಡವರು 1.20 ಲಕ್ಷ ಜನ

ಲಾಕ್‌ಡೌನ್ ನಡುವೆಯೂ 2020ರಲ್ಲಿ ರಸ್ತೆ ಅಪಘಾತಗಳಲ್ಲಿ ಜೀವ ಕಳೆದುಕೊಂಡವರು 1.20 ಲಕ್ಷ ಜನ

- Advertisement -
- Advertisement -

ಕಳೆದ ವರ್ಷ ಕೊರೊನಾ ಲಾಕ್‌ಡೌನ್‌ನ ಹೊರತಾಗಿಯೂ 2020 ರಲ್ಲಿ ನಡೆದಿರುವ ರಸ್ತೆ ಅಪಘಾತಗಳಲ್ಲಿ ನಿರ್ಲಕ್ಷ್ಯದಿಂದ 1.20 ಲಕ್ಷ ಜನರು ಸಾವನ್ನಪ್ಪಿದ್ದು, ಪ್ರತಿದಿನ ಸರಾಸರಿ 328 ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಸರ್ಕಾರದ ಅಧಿಕೃತ ಮಾಹಿತಿ ತಿಳಿಸಿದೆ.

ರಸ್ತೆ ಅಪಘಾತಗಳಿಗೆ ಸಂಬಂಧಿಸಿದ ನಿರ್ಲಕ್ಷ್ಯದಿಂದಾಗಿ ಮೂರು ವರ್ಷಗಳಲ್ಲಿ ಸುಮಾರು 3.92 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ತನ್ನ ವಾರ್ಷಿಕ ” ಕ್ರೈಮ್ ಇಂಡಿಯಾ ” ವರದಿಯಲ್ಲಿ ಬಹಿರಂಗಪಡಿಸಿದೆ. 2020ರಲ್ಲಿ 1.20 ಲಕ್ಷ ಸಾವುಗಳು ದಾಖಲಾಗಿದ್ದರೆ, 2019ರಲ್ಲಿ 1.36 ಲಕ್ಷ ಮತ್ತು 2018ರಲ್ಲಿ 1.35 ಲಕ್ಷ ಸಾವುಗಳು ಸಂಭವಿಸಿವೆ ಎಂದು ಅಂಕಿಅಂಶಗಳು ಹೇಳಿವೆ.

2018 ರಿಂದ ದೇಶದಲ್ಲಿ 1.35 ಲಕ್ಷ “ಹಿಟ್ ಅಂಡ್ ರನ್” ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಸಿಆರ್‌ಬಿಯ ವರದಿ ಹೇಳಿದೆ. 2020ರಲ್ಲಿ 41,196 “ಹಿಟ್ ಅಂಡ್ ರನ್” ಪ್ರಕರಣಗಳಾಗಿದ್ದರೆ, 2019 ರಲ್ಲಿ 47,504 ಮತ್ತು 2018 ರಲ್ಲಿ 47,028 ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷದಲ್ಲಿ ಪ್ರತಿದಿನ ಸರಾಸರಿ 112 “ಹಿಟ್ ಅಂಡ್ ರನ್” ಪ್ರಕರಣಗಳು ದೇಶಾದ್ಯಂತ ವರದಿಯಾಗಿವೆ.

ಇದನ್ನೂ ಓದಿ: ರಾಜಸ್ಥಾನ: ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದರೆ 5000 ರೂ ಬಹುಮಾನ

2020ರಲ್ಲಿ ದೇಶದಾದ್ಯಂತ ರೈಲು ಅಪಘಾತಗಳಿಗೆ ಸಂಬಂಧಿದಂತೆ ನಿರ್ಲಕ್ಷ್ಯದಿಂದ 52 ಸಾವುಗಳು ದಾಖಲಾಗಿದ್ದು, 2019 ರಲ್ಲಿ 55 ಮತ್ತು 2018 ರಲ್ಲಿ 35 ಪ್ರಕರಣಗಳು ವರದಿಯಾಗಿವೆ.

2020 ರಲ್ಲಿ ದೇಶದಲ್ಲಿ “ವೈದ್ಯಕೀಯ ನಿರ್ಲಕ್ಷ್ಯದಿಂದ 133 ಸಾವುಗಳ ಪ್ರಕರಣಗಳು ದಾಖಲಾಗಿವೆ. 2019 ರಲ್ಲಿ 201 ಮತ್ತು 2018 ರಲ್ಲಿ 218 ಪ್ರಕರಣಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಡೇಟಾ ಹೇಳಿದೆ.

2020 ರಲ್ಲಿ “ನಾಗರಿಕ ಸಂಸ್ಥೆಗಳ ನಿರ್ಲಕ್ಷ್ಯದಿಂದ” 51 ಸಾವುಗಳು ಸಂಭವಿಸಿದ್ದರೆ, 2019 ರಲ್ಲಿ 147 ಮತ್ತು 2018 ರಲ್ಲಿ 40 ಪ್ರಕರಣಗಳು ವರದಿಯಾಗಿವೆ. ಇತರ ನಿರ್ಲಕ್ಷ್ಯದಿಂದ ಸಾವುಗಳು 2019 ರಲ್ಲಿ 7,912 ಮತ್ತು 2018 ರಲ್ಲಿ 8,687 ರಷ್ಟಿದ್ದ 2020 ರಲ್ಲಿ 6,367  ಪ್ರಕರಣಗಳು ವರದಿಯಾಗಿವೆ.

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ದೇಶವು ಮಾರ್ಚ್ 25, 2020 ರಿಂದ ಮೇ 31, 2020 ರವರೆಗೆ ಸಂಪೂರ್ಣ ಲಾಕ್‌ಡೌನ್‌ ಹೇರಲಾಗಿತ್ತು. ಈ ಸಮಯದಲ್ಲಿ ಸಾರ್ವಜನಿಕ ಸಂಚಾರ “ಬಹಳ ಸೀಮಿತವಾಗಿತ್ತು” ಎಂದು ಎನ್‌ಸಿಆರ್‌ಬಿ ವರದಿಯಲ್ಲಿ ಹೇಳಿದೆ.

ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರ ವಿರುದ್ಧದ ಪ್ರಕರಣಗಳು, ಕಳ್ಳತನ, ಕಳ್ಳತನ, ದರೋಡೆ ಮತ್ತು ದೌರ್ಜನ್ಯದ ಅಡಿಯಲ್ಲಿ ದಾಖಲಾದ ಪ್ರಕರಣಗಳು ಕಡಿಮೆಯಾಗಿವೆ ಎಂದು ವರದಿ ಹೇಳಿದೆ.


ಇದನ್ನೂ ಓದಿ: ಬೆಂಗಳೂರಿನಲ್ಲಿ ಭೀಕರ ಅಪಘಾತ: ಡಿಎಂಕೆ ಶಾಸಕನ ಪುತ್ರ, ಸೊಸೆ ಸೇರಿ 7 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....