Homeಮುಖಪುಟಫೇಸ್‌ಬುಕ್‌ ವಿರುದ್ಧ ರೋಹಿಂಗ್ಯಾ ನಿರಾಶ್ರಿತರು ಕೋರ್ಟ್ ಮೊರೆ

ಫೇಸ್‌ಬುಕ್‌ ವಿರುದ್ಧ ರೋಹಿಂಗ್ಯಾ ನಿರಾಶ್ರಿತರು ಕೋರ್ಟ್ ಮೊರೆ

- Advertisement -
- Advertisement -

ರೋಹಿಂಗ್ಯಾ ನಿರಾಶ್ರಿತ ಸಮುದಾಯ ಫೇಸ್‌ಬುಕ್‌ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಸಲ್ಲಿಸಿದೆ. ಫೇಸ್‌ಬುಕ್‌ ಮೂಲಕ ತಮ್ಮ ಸಮುದಾಯಗಳ ವಿರುದ್ಧ ದ್ವೇಷದ ಪ್ರಸಾರ ವ್ಯಾಪಕವಾಗಿ  ನಡೆಯುತ್ತಿದೆ, ಇದು ಸಮುದಾಯದ ವಿರುದ್ಧದ ಹಿಂಸೆಗೆ ಕಾರಣವಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

2019ರಲ್ಲಿ ಈಕ್ವಾಲಿಟಿ ಲ್ಯಾಬ್ಸ್‌ನ ದಲಿತರು, ಮುಸ್ಲಿಮರು, ಕ್ರಿಶ್ಚಿಯನ್ನರು, ಬೌದ್ಧರು ಮತ್ತು ಇತರರನ್ನು ಒಳಗೊಂಡ 20 ಅಂತರಾಷ್ಟ್ರೀಯ ಸಂಶೋಧಕರ ತಂಡ ವ್ಯವಸ್ಥಿತವಾಗಿ 1,000 ಫೇಸ್‌ಬುಕ್ ಪೋಸ್ಟ್‌ಗಳನ್ನು  ಪತ್ತೆಹಚ್ಚಿ ಅದರಲ್ಲಿ ಸಮುದಾಯದ ಮಾನದಂಡಗಳ ಉಲ್ಲಂಘನೆಯ ಮಾಡಲಾಗಿದೆ ಎಂದು ಹೇಳಿತ್ತು. ಈ ಬಗ್ಗೆ ರಿಪೋರ್ಟ್‌ ಮಾಡಿದ ಬಳಿಕ ಫೇಸ್‌ಬುಕ್‌ ಒಟ್ಟು ಪೋಸ್ಟ್‌ಗಳಲ್ಲಿ 40%ಕ್ಕಿಂತ ಹೆಚ್ಚು ಪೋಸ್ಟ್‌ಗಳನ್ನು ತೆಗೆದುಹಾಕಿತ್ತು. ಆದರೆ  90 ದಿನಗಳ ಬಳಿಕ ಪೋಸ್ಟ್‌ಗಳನ್ನು ಮರುಸ್ಥಾಪಿಸಲಾಗಿತ್ತು. ಮರುಸ್ಥಾಪಿಸಲಾದ ಬಹುಪಾಲು ಪೋಸ್ಟ್‌ಗಳು ಇಸ್ಲಾಮೋಫೋಬಿಕ್ ಪೋಸ್ಟ್‌ಗಳಾಗಿದ್ದವು.

ದ್ವೇಷದ ವಿರುದ್ಧ ಹೋರಾಟದ ಭಾಗವಾಗಿ ಮತ್ತು ಈಕ್ವಾಲಿಟಿ ಲ್ಯಾಬ್ಸ್ ವರದಿಯನ್ನು ಉಲ್ಲೇಖಿಸಿ ರೋಹಿಂಗ್ಯಾ ನಿರಾಶ್ರಿತರು ಭಾರತೀಯ ಸಂವಿಧಾನದ 226ನೇ ವಿಧಿಯ ಅಡಿಯಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಿದ್ದಾರೆ. ದೆಹಲಿ ಸೇರಿ ದೇಶದಾದ್ಯಂತ ತಮ್ಮ ಸಮುದಾಯದ ಸದಸ್ಯರು ಎದುರಿಸುತ್ತಿರುವ ಹಿಂಸಾಚಾರದಿಂದ ಬದುಕುವ ಹಕ್ಕಿನ ರಕ್ಷಣೆಯನ್ನು ಕೋರುವುದು, ಫೇಸ್‌ಬುಕ್‌ನಲ್ಲಿ ಜನಾಂಗೀಯತೆ ಮತ್ತು ಧರ್ಮದ ಆಧಾರದ ಮೇಲೆ ಗುರಿಯಾಗಿಸಿಕೊಂಡು ದ್ವೇಷದ ಪ್ರಸಾರದ ಪರಿಣಾಮವಾಗಿ ಕೆಲವೊಮ್ಮೆ ದೈಹಿಕ ದಾಳಿಗಳು ನಡೆಯುತ್ತಿದೆ ಎಂದು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಪಿಐಎಲ್‌ನ ಅರ್ಜಿದಾರರು ಜನಾಂಗೀಯ ಹಿಂಸಾಚಾರದಿಂದಾಗಿ ಮ್ಯಾನ್ಮಾರ್‌ನಿಂದ ಪಲಾಯನ ಮಾಡಿದ ರೋಹಿಂಗ್ಯಾ ನಿರಾಶ್ರಿತರಾಗಿದ್ದಾರೆ ಮತ್ತು ಅವರು ಕಳೆದ 2ರಿಂದ 5 ವರ್ಷಗಳ ಕಾಲ ದೆಹಲಿಯಲ್ಲಿ ನೆಲೆಸಿದ್ದು, ಯುಎನ್‌ಎಚ್‌ಸಿಆರ್ ಗುರುತಿನ ಚೀಟಿಯನ್ನು ಪಡೆದಿದ್ದಾರೆ. UN ನಿರಾಶ್ರಿತರ ಸಂಸ್ಥೆ ಇವರನ್ನು ಕಿರುಕುಳಕ್ಕೊಳಗಾದ ಸಮುದಾಯವೆಂದು ಗುರುತಿಸಿದೆ. ರೋಹಿಂಗ್ಯಾ ಜನರು ಮ್ಯಾನ್ಮಾರ್‌ನ ರಾಖೈನ್ ರಾಜ್ಯದಿಂದ ಬಂದ ಮುಸ್ಲಿಂ ಅಲ್ಪಸಂಖ್ಯಾತರಾಗಿದ್ದಾರೆ. ಗಮನಿಸಬೇಕಾದ ಅಂಶವೆಂದರೆ, 2023ರ ಹೊತ್ತಿಗೆ UNHCR ಭಾರತವು ಮ್ಯಾನ್ಮಾರ್‌ನ ಸರಿಸುಮಾರು 74,600 ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ನೀಡುತ್ತಿದೆ ಎಂದು ವರದಿ ಮಾಡಿದೆ. ಅದರಲ್ಲಿ ಅಂದಾಜು 54,100ಕ್ಕಿಂತ ಹೆಚ್ಚು ಜನರು ಫೆಬ್ರವರಿ 2021ರ  ದಂಗೆಯಿಂದ ಭಾರತಕ್ಕೆ ಬಂದವರಾಗಿದ್ದಾರೆ.

ದ್ವೇಷದ ಪೋಸ್ಟ್‌ಗಳನ್ನು ಭಾರತದಲ್ಲಿ ತಮ್ಮನ್ನು ಗುರಿಯಾಗಿಸಿ ಪೋಸ್ಟ್‌ ಮಾಡಲಾಗುತ್ತದೆ. ಫೇಸ್‌ಬುಕ್ ತನ್ನ ವೇದಿಕೆಯಲ್ಲಿ ದ್ವೇಷದ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಭಾರತದಲ್ಲಿ ರೋಹಿಂಗ್ಯಾ  ಗುಂಪನ್ನು ಭಾರತಕ್ಕೆ ಬೆದರಿಕೆ ಎಂದು ಚಿತ್ರಿಸಲಾಗುತ್ತಿದೆ ಆಗಾಗ್ಗೆ ಗುಂಪನ್ನು ಭಯೋತ್ಪಾದಕರು, ಒಳನುಸುಳುವವರು ಎಂದು ಉಲ್ಲೇಖಿಸುತ್ತದೆ. 2019ರ ಅಧ್ಯಯನವು, 6% ರಷ್ಟು ಇಸ್ಲಾಮೋಫೋಬಿಕ್ ಪೋಸ್ಟ್‌ಗಳು ನಿರ್ದಿಷ್ಟವಾಗಿ ರೋಹಿಂಗ್ಯಾ ಜನರನನ್ನು ಗುರಿಯಾಗಿಸಿಕೊಂಡಿದೆ. ಭಾರತದಲ್ಲಿಅವರು ಮುಸ್ಲಿಂ ಜನಸಂಖ್ಯೆಯ 0.02%ರಷ್ಟಿದ್ದಾರೆ.

ಭಾರತದಲ್ಲಿನ ಹಲವಾರು ಫೇಸ್‌ಬುಕ್ ಬಳಕೆದಾರರು ಹೆಚ್ಚಾಗಿ ಮುಸ್ಲಿಮರಾಗಿರುವ ರೋಹಿಂಗ್ಯಾಗಳನ್ನು ಗುರಿಯಾಗಿಸಿ ‘ಅಕ್ರಮ ವಲಸಿಗರು’, ‘ದೇಶದ ಶತ್ರುಗಳು’ ಮತ್ತು ‘ಬಾಂಗ್ಲಾದೇಶಿಗಳು’ ಎಂಬ ಪದಗಳನ್ನು ಹೇಗೆ ಬಳಸುತ್ತಾರೆ ಎಂಬುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಕೆಲವು ಬಳಕೆದಾರರು ಈ ‘ದೇಶದ ಶತ್ರುಗಳ’ ಮನೆಗಳನ್ನು ಧ್ವಂಸಗೊಳಿಸಲು ‘ಬುಲ್ಡೋಜರ್’ಗಳ ಬಳಕೆ ಮಡಬೇಕೆಂದು ಪೋಸ್ಟ್‌ ಮಾಡಿದ್ದರು. ಫೇಸ್‌ಬುಕ್‌ನಲ್ಲಿನ ಕೆಲವು ಭಾರತೀಯ ಬಳಕೆದಾರರು ರೋಹಿಂಗ್ಯಾಗಳು ಅಪಹರಣ ಮತ್ತು ಅಂಗಾಂಗ ಮಾರಾಟದ ದಂಧೆಗಳನ್ನು ನಡೆಸುತ್ತಿರುವವರು ಎಂದು ತಪ್ಪು ಮಾಹಿತಿಯನ್ನು ಹರಡಿದ್ದಾರೆ.

ಬ್ಯಾರಿಸ್ಟರ್ ಇವಾ ಬುಜೊ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಭಾರತದಲ್ಲಿ ಈ ಬಗ್ಗೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆಯಿದೆ. ಏಕೆಂದರೆ ರೋಹಿಂಗ್ಯಾಗಳ ವಿರುದ್ಧ ಫೇಸ್‌ಬುಕ್‌ನಲ್ಲಿ ಹರಡುತ್ತಿರುವ ಹಾನಿಕಾರಕ ವಿಷಯಗಳು ಪುನರಾವರ್ತನೆ ಆಗುತ್ತಿದೆ. ಅರ್ಜಿಯನ್ನು ಸಲ್ಲಿಸುವುದು ಭಾರತದಲ್ಲಿ ರೋಹಿಂಗ್ಯಾಗಳ ಬಗ್ಗೆ ಹರಡುತ್ತಿರುವ ಹಾನಿಕಾರಕ ಪೋಸ್ಟ್‌ಗಳನ್ನು ತಡೆಗಟ್ಟುವ ಕ್ರಮದ ಭಾಗವಾಗಿದೆ ಎಂದು ಹೇಳಿದ್ದಾರೆ. ಭಾರತದಂತಹ ದೇಶಗಳು ರೆಪ್ಯೂಜೀಸ್‌ ಕನ್ವೆನ್ಸನ್‌ಗೆ ಸಹಿ ಹಾಕಿಲ್ಲ. ರೊಹಿಂಗ್ಯಾಗಳು ಕನ್ವೆನ್ಶನ್ ಅನ್ವಯವಾಗುವ ದೇಶಗಳಲ್ಲಿ ನಿರಾಶ್ರಿತರಿಗೆ ಇರುವ ಸಮಾನವಾದ ಹಕ್ಕುಗಳನ್ನು ಭಾರತದಲ್ಲಿ ಹೊಂದಿಲ್ಲ, ಅದು ಅವರನ್ನು ಅತ್ಯಂತ ದುರ್ಬಲಗೊಳಿಸುತ್ತದೆ ಎಂದು ಬುಜೊ ಹೇಳಿದರು.

2023ರ ಜುಲೈ 31ರಂದು ನುಹ್ ಕೋಮು ಹಿಂಸಾಚಾರದ ವೇಳೆ  ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಅಧಿಕಾರಿಗಳು ತಮ್ಮ ಗುಡಿಸಲುಗಳಿಗೆ ಬಂದು ಘಟನೆಗಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಹಲವರನ್ನು ದೆಹಲಿಗೆ ಕರೆದೊಯ್ದರು ಎಂದು ರೊಹಿಂಗ್ಯನ್‌ ಸಮುದಾಯದ ಜನರು ಹೇಳಿದ್ದಾರೆ.

ರೊಹಿಂಗ್ಯಾ ಅರ್ಜಿದಾರರನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸುತ್ತಿರುವ ವಕೀಲ ಕವಾಲ್‌ಪ್ರೀತ್ ಕೌರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಲ್ಪಸಂಖ್ಯಾತರ ವಿರುದ್ಧ ವಿಶೇಷವಾಗಿ ರೋಹಿಂಗ್ಯಾ ಸಮುದಾಯದ ವಿರುದ್ಧ ದ್ವೇಷವನ್ನು ಉತ್ತೇಜಿಸಲು ಭಾರತದಲ್ಲಿ ಫೇಸ್‌ಬುಕ್ ವಹಿಸುತ್ತಿರುವ ಪಾತ್ರವನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಹೇಳಿದರು. ರೋಹಿಂಗ್ಯಾ ವಿರುದ್ಧದ ಪೋಸ್ಟ್‌ಗಳು ಭಾರತದಲ್ಲಿ ಹುಟ್ಟಿಕೊಂಡಿವೆ ಮತ್ತು ನೈಜ ಸಮಯದಲ್ಲಿ ಹಿಂಸಾಚಾರವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿವೆ. ಭಾರತದಲ್ಲಿ ನೆಲೆಸಿರುವ ರೋಹಿಂಗ್ಯಾ ಸಮುದಾಯದ ವಿರುದ್ಧ ಪದೇ ಪದೇ ಹೇಳಿಕೆಗಳು, ಅವರನ್ನು ಗುರಿಯಾಗಿಟ್ಟುಕೊಂಡ ಫೇಸ್‌ಬುಕ್‌ ಈ ಪೋಸ್ಟ್‌ಗಳು ಬಾಂಗ್ಲಾದೇಶದಲ್ಲಿ ನಡೆದಂತೆ ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಕೌರ್‌ ಹೇಳಿದ್ದಾರೆ.

ಇದನ್ನು ಓದಿ: ಭಾರತದಲ್ಲಿ ಕಠಿಣ ಕಾಯ್ದೆಯಡಿಯಲ್ಲಿ ಜೈಲಿನಲ್ಲಿರುವ ಪತ್ರಕರ್ತರೆಷ್ಟು?: ಸಿಪಿಜೆ ವರದಿ…

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...