Homeಮುಖಪುಟಫೇಸ್‌ಬುಕ್‌ ವಿರುದ್ಧ ರೋಹಿಂಗ್ಯಾ ನಿರಾಶ್ರಿತರು ಕೋರ್ಟ್ ಮೊರೆ

ಫೇಸ್‌ಬುಕ್‌ ವಿರುದ್ಧ ರೋಹಿಂಗ್ಯಾ ನಿರಾಶ್ರಿತರು ಕೋರ್ಟ್ ಮೊರೆ

- Advertisement -
- Advertisement -

ರೋಹಿಂಗ್ಯಾ ನಿರಾಶ್ರಿತ ಸಮುದಾಯ ಫೇಸ್‌ಬುಕ್‌ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಸಲ್ಲಿಸಿದೆ. ಫೇಸ್‌ಬುಕ್‌ ಮೂಲಕ ತಮ್ಮ ಸಮುದಾಯಗಳ ವಿರುದ್ಧ ದ್ವೇಷದ ಪ್ರಸಾರ ವ್ಯಾಪಕವಾಗಿ  ನಡೆಯುತ್ತಿದೆ, ಇದು ಸಮುದಾಯದ ವಿರುದ್ಧದ ಹಿಂಸೆಗೆ ಕಾರಣವಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

2019ರಲ್ಲಿ ಈಕ್ವಾಲಿಟಿ ಲ್ಯಾಬ್ಸ್‌ನ ದಲಿತರು, ಮುಸ್ಲಿಮರು, ಕ್ರಿಶ್ಚಿಯನ್ನರು, ಬೌದ್ಧರು ಮತ್ತು ಇತರರನ್ನು ಒಳಗೊಂಡ 20 ಅಂತರಾಷ್ಟ್ರೀಯ ಸಂಶೋಧಕರ ತಂಡ ವ್ಯವಸ್ಥಿತವಾಗಿ 1,000 ಫೇಸ್‌ಬುಕ್ ಪೋಸ್ಟ್‌ಗಳನ್ನು  ಪತ್ತೆಹಚ್ಚಿ ಅದರಲ್ಲಿ ಸಮುದಾಯದ ಮಾನದಂಡಗಳ ಉಲ್ಲಂಘನೆಯ ಮಾಡಲಾಗಿದೆ ಎಂದು ಹೇಳಿತ್ತು. ಈ ಬಗ್ಗೆ ರಿಪೋರ್ಟ್‌ ಮಾಡಿದ ಬಳಿಕ ಫೇಸ್‌ಬುಕ್‌ ಒಟ್ಟು ಪೋಸ್ಟ್‌ಗಳಲ್ಲಿ 40%ಕ್ಕಿಂತ ಹೆಚ್ಚು ಪೋಸ್ಟ್‌ಗಳನ್ನು ತೆಗೆದುಹಾಕಿತ್ತು. ಆದರೆ  90 ದಿನಗಳ ಬಳಿಕ ಪೋಸ್ಟ್‌ಗಳನ್ನು ಮರುಸ್ಥಾಪಿಸಲಾಗಿತ್ತು. ಮರುಸ್ಥಾಪಿಸಲಾದ ಬಹುಪಾಲು ಪೋಸ್ಟ್‌ಗಳು ಇಸ್ಲಾಮೋಫೋಬಿಕ್ ಪೋಸ್ಟ್‌ಗಳಾಗಿದ್ದವು.

ದ್ವೇಷದ ವಿರುದ್ಧ ಹೋರಾಟದ ಭಾಗವಾಗಿ ಮತ್ತು ಈಕ್ವಾಲಿಟಿ ಲ್ಯಾಬ್ಸ್ ವರದಿಯನ್ನು ಉಲ್ಲೇಖಿಸಿ ರೋಹಿಂಗ್ಯಾ ನಿರಾಶ್ರಿತರು ಭಾರತೀಯ ಸಂವಿಧಾನದ 226ನೇ ವಿಧಿಯ ಅಡಿಯಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಿದ್ದಾರೆ. ದೆಹಲಿ ಸೇರಿ ದೇಶದಾದ್ಯಂತ ತಮ್ಮ ಸಮುದಾಯದ ಸದಸ್ಯರು ಎದುರಿಸುತ್ತಿರುವ ಹಿಂಸಾಚಾರದಿಂದ ಬದುಕುವ ಹಕ್ಕಿನ ರಕ್ಷಣೆಯನ್ನು ಕೋರುವುದು, ಫೇಸ್‌ಬುಕ್‌ನಲ್ಲಿ ಜನಾಂಗೀಯತೆ ಮತ್ತು ಧರ್ಮದ ಆಧಾರದ ಮೇಲೆ ಗುರಿಯಾಗಿಸಿಕೊಂಡು ದ್ವೇಷದ ಪ್ರಸಾರದ ಪರಿಣಾಮವಾಗಿ ಕೆಲವೊಮ್ಮೆ ದೈಹಿಕ ದಾಳಿಗಳು ನಡೆಯುತ್ತಿದೆ ಎಂದು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಪಿಐಎಲ್‌ನ ಅರ್ಜಿದಾರರು ಜನಾಂಗೀಯ ಹಿಂಸಾಚಾರದಿಂದಾಗಿ ಮ್ಯಾನ್ಮಾರ್‌ನಿಂದ ಪಲಾಯನ ಮಾಡಿದ ರೋಹಿಂಗ್ಯಾ ನಿರಾಶ್ರಿತರಾಗಿದ್ದಾರೆ ಮತ್ತು ಅವರು ಕಳೆದ 2ರಿಂದ 5 ವರ್ಷಗಳ ಕಾಲ ದೆಹಲಿಯಲ್ಲಿ ನೆಲೆಸಿದ್ದು, ಯುಎನ್‌ಎಚ್‌ಸಿಆರ್ ಗುರುತಿನ ಚೀಟಿಯನ್ನು ಪಡೆದಿದ್ದಾರೆ. UN ನಿರಾಶ್ರಿತರ ಸಂಸ್ಥೆ ಇವರನ್ನು ಕಿರುಕುಳಕ್ಕೊಳಗಾದ ಸಮುದಾಯವೆಂದು ಗುರುತಿಸಿದೆ. ರೋಹಿಂಗ್ಯಾ ಜನರು ಮ್ಯಾನ್ಮಾರ್‌ನ ರಾಖೈನ್ ರಾಜ್ಯದಿಂದ ಬಂದ ಮುಸ್ಲಿಂ ಅಲ್ಪಸಂಖ್ಯಾತರಾಗಿದ್ದಾರೆ. ಗಮನಿಸಬೇಕಾದ ಅಂಶವೆಂದರೆ, 2023ರ ಹೊತ್ತಿಗೆ UNHCR ಭಾರತವು ಮ್ಯಾನ್ಮಾರ್‌ನ ಸರಿಸುಮಾರು 74,600 ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ನೀಡುತ್ತಿದೆ ಎಂದು ವರದಿ ಮಾಡಿದೆ. ಅದರಲ್ಲಿ ಅಂದಾಜು 54,100ಕ್ಕಿಂತ ಹೆಚ್ಚು ಜನರು ಫೆಬ್ರವರಿ 2021ರ  ದಂಗೆಯಿಂದ ಭಾರತಕ್ಕೆ ಬಂದವರಾಗಿದ್ದಾರೆ.

ದ್ವೇಷದ ಪೋಸ್ಟ್‌ಗಳನ್ನು ಭಾರತದಲ್ಲಿ ತಮ್ಮನ್ನು ಗುರಿಯಾಗಿಸಿ ಪೋಸ್ಟ್‌ ಮಾಡಲಾಗುತ್ತದೆ. ಫೇಸ್‌ಬುಕ್ ತನ್ನ ವೇದಿಕೆಯಲ್ಲಿ ದ್ವೇಷದ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಭಾರತದಲ್ಲಿ ರೋಹಿಂಗ್ಯಾ  ಗುಂಪನ್ನು ಭಾರತಕ್ಕೆ ಬೆದರಿಕೆ ಎಂದು ಚಿತ್ರಿಸಲಾಗುತ್ತಿದೆ ಆಗಾಗ್ಗೆ ಗುಂಪನ್ನು ಭಯೋತ್ಪಾದಕರು, ಒಳನುಸುಳುವವರು ಎಂದು ಉಲ್ಲೇಖಿಸುತ್ತದೆ. 2019ರ ಅಧ್ಯಯನವು, 6% ರಷ್ಟು ಇಸ್ಲಾಮೋಫೋಬಿಕ್ ಪೋಸ್ಟ್‌ಗಳು ನಿರ್ದಿಷ್ಟವಾಗಿ ರೋಹಿಂಗ್ಯಾ ಜನರನನ್ನು ಗುರಿಯಾಗಿಸಿಕೊಂಡಿದೆ. ಭಾರತದಲ್ಲಿಅವರು ಮುಸ್ಲಿಂ ಜನಸಂಖ್ಯೆಯ 0.02%ರಷ್ಟಿದ್ದಾರೆ.

ಭಾರತದಲ್ಲಿನ ಹಲವಾರು ಫೇಸ್‌ಬುಕ್ ಬಳಕೆದಾರರು ಹೆಚ್ಚಾಗಿ ಮುಸ್ಲಿಮರಾಗಿರುವ ರೋಹಿಂಗ್ಯಾಗಳನ್ನು ಗುರಿಯಾಗಿಸಿ ‘ಅಕ್ರಮ ವಲಸಿಗರು’, ‘ದೇಶದ ಶತ್ರುಗಳು’ ಮತ್ತು ‘ಬಾಂಗ್ಲಾದೇಶಿಗಳು’ ಎಂಬ ಪದಗಳನ್ನು ಹೇಗೆ ಬಳಸುತ್ತಾರೆ ಎಂಬುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಕೆಲವು ಬಳಕೆದಾರರು ಈ ‘ದೇಶದ ಶತ್ರುಗಳ’ ಮನೆಗಳನ್ನು ಧ್ವಂಸಗೊಳಿಸಲು ‘ಬುಲ್ಡೋಜರ್’ಗಳ ಬಳಕೆ ಮಡಬೇಕೆಂದು ಪೋಸ್ಟ್‌ ಮಾಡಿದ್ದರು. ಫೇಸ್‌ಬುಕ್‌ನಲ್ಲಿನ ಕೆಲವು ಭಾರತೀಯ ಬಳಕೆದಾರರು ರೋಹಿಂಗ್ಯಾಗಳು ಅಪಹರಣ ಮತ್ತು ಅಂಗಾಂಗ ಮಾರಾಟದ ದಂಧೆಗಳನ್ನು ನಡೆಸುತ್ತಿರುವವರು ಎಂದು ತಪ್ಪು ಮಾಹಿತಿಯನ್ನು ಹರಡಿದ್ದಾರೆ.

ಬ್ಯಾರಿಸ್ಟರ್ ಇವಾ ಬುಜೊ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಭಾರತದಲ್ಲಿ ಈ ಬಗ್ಗೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆಯಿದೆ. ಏಕೆಂದರೆ ರೋಹಿಂಗ್ಯಾಗಳ ವಿರುದ್ಧ ಫೇಸ್‌ಬುಕ್‌ನಲ್ಲಿ ಹರಡುತ್ತಿರುವ ಹಾನಿಕಾರಕ ವಿಷಯಗಳು ಪುನರಾವರ್ತನೆ ಆಗುತ್ತಿದೆ. ಅರ್ಜಿಯನ್ನು ಸಲ್ಲಿಸುವುದು ಭಾರತದಲ್ಲಿ ರೋಹಿಂಗ್ಯಾಗಳ ಬಗ್ಗೆ ಹರಡುತ್ತಿರುವ ಹಾನಿಕಾರಕ ಪೋಸ್ಟ್‌ಗಳನ್ನು ತಡೆಗಟ್ಟುವ ಕ್ರಮದ ಭಾಗವಾಗಿದೆ ಎಂದು ಹೇಳಿದ್ದಾರೆ. ಭಾರತದಂತಹ ದೇಶಗಳು ರೆಪ್ಯೂಜೀಸ್‌ ಕನ್ವೆನ್ಸನ್‌ಗೆ ಸಹಿ ಹಾಕಿಲ್ಲ. ರೊಹಿಂಗ್ಯಾಗಳು ಕನ್ವೆನ್ಶನ್ ಅನ್ವಯವಾಗುವ ದೇಶಗಳಲ್ಲಿ ನಿರಾಶ್ರಿತರಿಗೆ ಇರುವ ಸಮಾನವಾದ ಹಕ್ಕುಗಳನ್ನು ಭಾರತದಲ್ಲಿ ಹೊಂದಿಲ್ಲ, ಅದು ಅವರನ್ನು ಅತ್ಯಂತ ದುರ್ಬಲಗೊಳಿಸುತ್ತದೆ ಎಂದು ಬುಜೊ ಹೇಳಿದರು.

2023ರ ಜುಲೈ 31ರಂದು ನುಹ್ ಕೋಮು ಹಿಂಸಾಚಾರದ ವೇಳೆ  ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಅಧಿಕಾರಿಗಳು ತಮ್ಮ ಗುಡಿಸಲುಗಳಿಗೆ ಬಂದು ಘಟನೆಗಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಹಲವರನ್ನು ದೆಹಲಿಗೆ ಕರೆದೊಯ್ದರು ಎಂದು ರೊಹಿಂಗ್ಯನ್‌ ಸಮುದಾಯದ ಜನರು ಹೇಳಿದ್ದಾರೆ.

ರೊಹಿಂಗ್ಯಾ ಅರ್ಜಿದಾರರನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸುತ್ತಿರುವ ವಕೀಲ ಕವಾಲ್‌ಪ್ರೀತ್ ಕೌರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಲ್ಪಸಂಖ್ಯಾತರ ವಿರುದ್ಧ ವಿಶೇಷವಾಗಿ ರೋಹಿಂಗ್ಯಾ ಸಮುದಾಯದ ವಿರುದ್ಧ ದ್ವೇಷವನ್ನು ಉತ್ತೇಜಿಸಲು ಭಾರತದಲ್ಲಿ ಫೇಸ್‌ಬುಕ್ ವಹಿಸುತ್ತಿರುವ ಪಾತ್ರವನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಹೇಳಿದರು. ರೋಹಿಂಗ್ಯಾ ವಿರುದ್ಧದ ಪೋಸ್ಟ್‌ಗಳು ಭಾರತದಲ್ಲಿ ಹುಟ್ಟಿಕೊಂಡಿವೆ ಮತ್ತು ನೈಜ ಸಮಯದಲ್ಲಿ ಹಿಂಸಾಚಾರವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿವೆ. ಭಾರತದಲ್ಲಿ ನೆಲೆಸಿರುವ ರೋಹಿಂಗ್ಯಾ ಸಮುದಾಯದ ವಿರುದ್ಧ ಪದೇ ಪದೇ ಹೇಳಿಕೆಗಳು, ಅವರನ್ನು ಗುರಿಯಾಗಿಟ್ಟುಕೊಂಡ ಫೇಸ್‌ಬುಕ್‌ ಈ ಪೋಸ್ಟ್‌ಗಳು ಬಾಂಗ್ಲಾದೇಶದಲ್ಲಿ ನಡೆದಂತೆ ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಕೌರ್‌ ಹೇಳಿದ್ದಾರೆ.

ಇದನ್ನು ಓದಿ: ಭಾರತದಲ್ಲಿ ಕಠಿಣ ಕಾಯ್ದೆಯಡಿಯಲ್ಲಿ ಜೈಲಿನಲ್ಲಿರುವ ಪತ್ರಕರ್ತರೆಷ್ಟು?: ಸಿಪಿಜೆ ವರದಿ…

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...