Homeಅಂತರಾಷ್ಟ್ರೀಯಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

ಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

- Advertisement -
- Advertisement -

ಹೊಸದಿಲ್ಲಿ: ಭಾರತದಲ್ಲಿನ  ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನುಅವರು  ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ  ಎಂದು ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತ ಬಂಧಿತರೊಂದಿಗಿನ ಸಂಭಾಷಣೆಯನ್ನು ಆಧರಿಸಿದ ಕೆಲ ಅಧ್ಯಯನಗಳು ಕಂಡುಕೊಂಡಿವೆ.

ಯುಎಸ್-ನೋಂದಾಯಿತ ಎನ್ ಜಿಒ ಸಂಸ್ಥೆಯಾದ ದಿ ಆಜಾದಿ ಪ್ರಾಜೆಕ್ಟ್ ಮತ್ತು ನಿರಾಶ್ರಿತರಿಗಾಗಿ ಪ್ರತಿಪಾದಿಸುವ ಅಮೆರಿಕದ ಲಾಭರಹಿತ ಸಂಸ್ಥೆಯಾದ ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಗಳು ಈ ಅಧ್ಯಯನ  ನಡೆಸಿದ್ದು, ಇದು ಸಾಂವಿಧಾನಿಕ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳಿಗೆ ಭಾರತವು ತನ್ನ ಬದ್ಧತೆಯನ್ನು ಅನುಸರಿಸಲು ವಿಫಲವಾಗಿದೆ ಎಂದು ಈ ಸಂಸ್ಥೆಗಳು ನಡೆಸಿದ ವರದಿ ಹೇಳಿದೆ.

ಭಾರತದಲ್ಲಿನ ನಿರಾಶ್ರಿತ ಬಂಧಿತರು, ಅವರ ಕುಟುಂಬಗಳು ಮತ್ತು ವಕೀಲರು ಮತ್ತು ಬಂಧನ ಕೇಂದ್ರಕ್ಕೆ ಭೇಟಿ ನೀಡಿ ಇವರುಗಳ ಸಂಭಾಷಣೆಯನ್ನು ಆಧರಿಸಿ ಈ ಸಂಸ್ಥೆಗಳು ಅಧ್ಯಯನ ನಡೆಸಿವೆ.

ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನು ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ. ಭಾರತದಲ್ಲಿ, ಸುಮಾರು 22,500 ರೋಹಿಂಗ್ಯಾ ನಿರಾಶ್ರಿತರು ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ (UNHCR) ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಯುಎನ್‌ಹೆಚ್‌ಸಿಆರ್ ಅಂದಾಜಿನ ಪ್ರಕಾರ 676 ರೋಹಿಂಗ್ಯಾಗಳು ಭಾರತದಾದ್ಯಂತ ವಲಸೆ ಬಂಧನದಲ್ಲಿದ್ದಾರೆ. ಅದರಲ್ಲಿ 608 ನ್ಯಾಯಾಲಯದ ಪ್ರಕರಣಗಳು ಅಥವಾ ಶಿಕ್ಷೆಗಳು ಬಾಕಿ ಉಳಿದಿಲ್ಲ. ಬಂಧಿತರಲ್ಲಿ ಶೇ.50ರಷ್ಟು ಗರ್ಭಿಣಿ ಮಹಿಳೆಯರು, ಹಾಲುಣಿಸುವ ತಾಯಂದಿರು, ಮಕ್ಕಳು, ಅಂಗವಿಕಲರು ಮತ್ತು ವೃದ್ಧರು  ಎಂದು ಈ ವರದಿ ಹೇಳಿದೆ.

ಕಾನೂನು ಸಹಾಯಕ್ಕೆ ಮತ್ತು UNHCR ನಂತಹ ಅಂತರಾಷ್ಟ್ರೀಯ ಸಂಸ್ಥೆಗಳಿಗೆ ಬಹಳ ಸೀಮಿತ ಪ್ರವೇಶದಿಂದಾಗಿ ಅನೇಕ ರೋಹಿಂಗ್ಯಾ ನಿರಾಶ್ರಿತರನ್ನು ಒಂದು ದಶಕದಿಂದ ನಿರಂಕುಶವಾಗಿ ಬಂಧಿಸಲಾಗಿದೆ. ಇವರುಗಳ ಮೇಲೆ ಯಾವುದೇ ಕ್ರಿಮಿನಲ್ ಆರೋಪಗಳಿಲ್ಲದೆ ಇದ್ದರೂ ಸಹ ಈ ಬಂಧನಕ್ಕೆ ಅಂತ್ಯವಿಲ್ಲ ಎಂದು ವರದಿ ಎತ್ತಿ ತೋರಿಸಿದೆ.

ಈ ಬಂಧನ ಕೇಂದ್ರಗಳಲ್ಲಿರುವ ಮಕ್ಕಳಿಗೆ ಶಾಲೆಗೆ ಅಥವಾ ಆಟದ ಮೈದಾನಗಳಿಗೆ ಪ್ರವೇಶವಿಲ್ಲವಾಗಿದೆ. ಬಂಧನಕ್ಕೊಳಗಾದವರಲ್ಲಿ ಕೆಲವರು ತಮ್ಮ ಬಂಧನದ ಸಮಯದಲ್ಲಿ ಶಿಶುಗಳಾಗಿದ್ದರು ಮತ್ತು ಅವರು ಹೊರಗಿನ ಜೀವನವನ್ನು ಎಂದಿಗೂ ಅನುಭವಿಸುತ್ತಿಲ್ಲ.  ದೀರ್ಘಕಾಲದ ಹಸಿವು, ರುಚಿಕರವಲ್ಲದ ಆಹಾರ, ಕಳಪೆ ಪೋಷಣೆ, ಕಳಪೆ ನೈರ್ಮಲ್ಯ ವು ತಾತ್ಕಾಲಿಕ ಪಾರ್ಶ್ವವಾಯು ಸೇರಿದಂತೆ ತೀವ್ರ ಮಾನಸಿಕ ಮತ್ತು ದೈಹಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ ಎಂದು ವರದಿ ಹೇಳಿದೆ.

ಕುಟುಂಬಗಳನ್ನು ಪ್ರತ್ಯೇಕಿಸಬಾರದು ಎಂದು ಹೇಳುವ ಭಾರತದ ಮಾದರಿ ಬಂಧನ ಸಂಹಿತೆಯನ್ನು ಉಲ್ಲಂಘಿಸಿ, ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸಲಾಗಿದೆ. ಸಂಗಾತಿಗಳು ಒಟ್ಟಿಗೆ ಸಮಯ ಕಳೆಯುವುದಕ್ಕೆ ಅನುಮತಿಸುತ್ತಿಲ್ಲ ಮತ್ತು ಮಕ್ಕಳನ್ನು ಅವರ ಪೋಷಕರಿಂದ ಬಲವಂತವಾಗಿ ಬೇರ್ಪಡಿಸಲಾಗಿದೆ ಎಂಬುದನ್ನು ವರದಿ ವಿವರಿಸುತ್ತದೆ.

ಹತ್ಯಾಕಾಂಡದಿಂದ ಬದುಕುಳಿದ ಜನಸಂಖ್ಯೆಯನ್ನು ಪುನರುಜ್ಜೀವನಗೊಳಿಸುವ ಗೌರವಯುತವಾದ ಆಶ್ರಯವನ್ನು ಭಾರತ ಸರ್ಕಾರವು ಒದಗಿಸಬೇಕು. ಅತ್ಯಂತ ದುರ್ಬಲ ರೋಹಿಂಗ್ಯಾ ಬಂಧಿತರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಹೆಚ್ಚಿನ ರೋಹಿಂಗ್ಯಾಗಳ ಅನಿಯಂತ್ರಿತ ಬಂಧನವನ್ನು ಕೊನೆಗೊಳಿಸಬೇಕು ಎಂದು ವರದಿ ಶಿಫಾರಸು ಮಾಡುತ್ತದೆ.

ಭಾರತವು ರೋಹಿಂಗ್ಯಾಗಳ ಕಾನೂನು ಸ್ಥಿತಿಯನ್ನು ಸ್ಪಷ್ಟಪಡಿಸಬೇಕು., 1946ರ ಕಾಯಿದೆಯನ್ನು ಪರಿಷ್ಕರಿಸಬೇಕು ಮತ್ತು ನಿರಾಶ್ರಿತರ ಬಗೆಗಿನ ಅದರ ನೀತಿಗಳು ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿರುತ್ತವೆ ಎಂಬುದನ್ನು ಖಚಿತಪಡಿಸಬೇಕು.  ಕಾನೂನುಬಾಹಿರವಾಗಿ ಬಂಧಿತರಾಗಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಿಡುಗಡೆ ಮಾಡಲು ಮತ್ತು ಬಂಧನ ಕೇಂದ್ರಗಳಲ್ಲಿ ಉತ್ತಮ ಸೌಲಭ್ಯಕ್ಕೆ ಮತ್ತು ಅವರ ಕುಟುಂಬಗಳ ಸಮ್ಮೀಲನಕ್ಕೆ ಅನುಮತಿಸುವಂತೆ ಭಾರತ ಸರಕಾರಕ್ಕೆ ಆಜಾದಿ ಪ್ರಾಜೆಕ್ಟ್ ಮತ್ತು ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಒತ್ತಾಯಿಸಿವೆ .

ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತರಿಗೆ ವಿದೇಶಿಯರ ಕಾಯಿದೆ 1946 ಮತ್ತು 1980ರ ಪಾಸ್‌ಪೋರ್ಟ್ ಕಾಯಿದೆಯ ನಿಯಮ 6ರ ಸೆಕ್ಷನ್ 14 (ಎ) (ಬಿ) ಅಡಿಯಲ್ಲಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ವರದಿಯು ಸೂಚಿಸುವಂತೆ, ಎರಡನೆಯದನ್ನು 1985ರಲ್ಲಿ ಬಿಟ್ಟುಬಿಡಲಾಗಿದೆ. ಭಾರತದ ಸ್ವಂತ ಕಾನೂನಿನ ಅಡಿಯಲ್ಲಿ, ರೋಹಿಂಗ್ಯಾ ನಿರಾಶ್ರಿತರ ಅನಿರ್ದಿಷ್ಟ ಬಂಧನವು ಕಾನೂನುಬಾಹಿರವಾಗಿದೆ ಮತ್ತು ಅನಿಯಂತ್ರಿತವಾಗಿದೆ ಎಂದು ವರದಿ ಹೇಳಿದೆ.

ಗಡ್ಡಧಾರಿ ಮುಸ್ಲಿಂ ವಿದ್ಯಾರ್ಥಿಗೆ ನರ್ಸಿಂಗ್ ಪರೀಕ್ಷೆ ನಿಷೇಧಿಸಿದ ಪರೀಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...