Homeಅಂತರಾಷ್ಟ್ರೀಯಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

ಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

- Advertisement -
- Advertisement -

ಹೊಸದಿಲ್ಲಿ: ಭಾರತದಲ್ಲಿನ  ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನುಅವರು  ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ  ಎಂದು ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತ ಬಂಧಿತರೊಂದಿಗಿನ ಸಂಭಾಷಣೆಯನ್ನು ಆಧರಿಸಿದ ಕೆಲ ಅಧ್ಯಯನಗಳು ಕಂಡುಕೊಂಡಿವೆ.

ಯುಎಸ್-ನೋಂದಾಯಿತ ಎನ್ ಜಿಒ ಸಂಸ್ಥೆಯಾದ ದಿ ಆಜಾದಿ ಪ್ರಾಜೆಕ್ಟ್ ಮತ್ತು ನಿರಾಶ್ರಿತರಿಗಾಗಿ ಪ್ರತಿಪಾದಿಸುವ ಅಮೆರಿಕದ ಲಾಭರಹಿತ ಸಂಸ್ಥೆಯಾದ ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಗಳು ಈ ಅಧ್ಯಯನ  ನಡೆಸಿದ್ದು, ಇದು ಸಾಂವಿಧಾನಿಕ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳಿಗೆ ಭಾರತವು ತನ್ನ ಬದ್ಧತೆಯನ್ನು ಅನುಸರಿಸಲು ವಿಫಲವಾಗಿದೆ ಎಂದು ಈ ಸಂಸ್ಥೆಗಳು ನಡೆಸಿದ ವರದಿ ಹೇಳಿದೆ.

ಭಾರತದಲ್ಲಿನ ನಿರಾಶ್ರಿತ ಬಂಧಿತರು, ಅವರ ಕುಟುಂಬಗಳು ಮತ್ತು ವಕೀಲರು ಮತ್ತು ಬಂಧನ ಕೇಂದ್ರಕ್ಕೆ ಭೇಟಿ ನೀಡಿ ಇವರುಗಳ ಸಂಭಾಷಣೆಯನ್ನು ಆಧರಿಸಿ ಈ ಸಂಸ್ಥೆಗಳು ಅಧ್ಯಯನ ನಡೆಸಿವೆ.

ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನು ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ. ಭಾರತದಲ್ಲಿ, ಸುಮಾರು 22,500 ರೋಹಿಂಗ್ಯಾ ನಿರಾಶ್ರಿತರು ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ (UNHCR) ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಯುಎನ್‌ಹೆಚ್‌ಸಿಆರ್ ಅಂದಾಜಿನ ಪ್ರಕಾರ 676 ರೋಹಿಂಗ್ಯಾಗಳು ಭಾರತದಾದ್ಯಂತ ವಲಸೆ ಬಂಧನದಲ್ಲಿದ್ದಾರೆ. ಅದರಲ್ಲಿ 608 ನ್ಯಾಯಾಲಯದ ಪ್ರಕರಣಗಳು ಅಥವಾ ಶಿಕ್ಷೆಗಳು ಬಾಕಿ ಉಳಿದಿಲ್ಲ. ಬಂಧಿತರಲ್ಲಿ ಶೇ.50ರಷ್ಟು ಗರ್ಭಿಣಿ ಮಹಿಳೆಯರು, ಹಾಲುಣಿಸುವ ತಾಯಂದಿರು, ಮಕ್ಕಳು, ಅಂಗವಿಕಲರು ಮತ್ತು ವೃದ್ಧರು  ಎಂದು ಈ ವರದಿ ಹೇಳಿದೆ.

ಕಾನೂನು ಸಹಾಯಕ್ಕೆ ಮತ್ತು UNHCR ನಂತಹ ಅಂತರಾಷ್ಟ್ರೀಯ ಸಂಸ್ಥೆಗಳಿಗೆ ಬಹಳ ಸೀಮಿತ ಪ್ರವೇಶದಿಂದಾಗಿ ಅನೇಕ ರೋಹಿಂಗ್ಯಾ ನಿರಾಶ್ರಿತರನ್ನು ಒಂದು ದಶಕದಿಂದ ನಿರಂಕುಶವಾಗಿ ಬಂಧಿಸಲಾಗಿದೆ. ಇವರುಗಳ ಮೇಲೆ ಯಾವುದೇ ಕ್ರಿಮಿನಲ್ ಆರೋಪಗಳಿಲ್ಲದೆ ಇದ್ದರೂ ಸಹ ಈ ಬಂಧನಕ್ಕೆ ಅಂತ್ಯವಿಲ್ಲ ಎಂದು ವರದಿ ಎತ್ತಿ ತೋರಿಸಿದೆ.

ಈ ಬಂಧನ ಕೇಂದ್ರಗಳಲ್ಲಿರುವ ಮಕ್ಕಳಿಗೆ ಶಾಲೆಗೆ ಅಥವಾ ಆಟದ ಮೈದಾನಗಳಿಗೆ ಪ್ರವೇಶವಿಲ್ಲವಾಗಿದೆ. ಬಂಧನಕ್ಕೊಳಗಾದವರಲ್ಲಿ ಕೆಲವರು ತಮ್ಮ ಬಂಧನದ ಸಮಯದಲ್ಲಿ ಶಿಶುಗಳಾಗಿದ್ದರು ಮತ್ತು ಅವರು ಹೊರಗಿನ ಜೀವನವನ್ನು ಎಂದಿಗೂ ಅನುಭವಿಸುತ್ತಿಲ್ಲ.  ದೀರ್ಘಕಾಲದ ಹಸಿವು, ರುಚಿಕರವಲ್ಲದ ಆಹಾರ, ಕಳಪೆ ಪೋಷಣೆ, ಕಳಪೆ ನೈರ್ಮಲ್ಯ ವು ತಾತ್ಕಾಲಿಕ ಪಾರ್ಶ್ವವಾಯು ಸೇರಿದಂತೆ ತೀವ್ರ ಮಾನಸಿಕ ಮತ್ತು ದೈಹಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ ಎಂದು ವರದಿ ಹೇಳಿದೆ.

ಕುಟುಂಬಗಳನ್ನು ಪ್ರತ್ಯೇಕಿಸಬಾರದು ಎಂದು ಹೇಳುವ ಭಾರತದ ಮಾದರಿ ಬಂಧನ ಸಂಹಿತೆಯನ್ನು ಉಲ್ಲಂಘಿಸಿ, ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸಲಾಗಿದೆ. ಸಂಗಾತಿಗಳು ಒಟ್ಟಿಗೆ ಸಮಯ ಕಳೆಯುವುದಕ್ಕೆ ಅನುಮತಿಸುತ್ತಿಲ್ಲ ಮತ್ತು ಮಕ್ಕಳನ್ನು ಅವರ ಪೋಷಕರಿಂದ ಬಲವಂತವಾಗಿ ಬೇರ್ಪಡಿಸಲಾಗಿದೆ ಎಂಬುದನ್ನು ವರದಿ ವಿವರಿಸುತ್ತದೆ.

ಹತ್ಯಾಕಾಂಡದಿಂದ ಬದುಕುಳಿದ ಜನಸಂಖ್ಯೆಯನ್ನು ಪುನರುಜ್ಜೀವನಗೊಳಿಸುವ ಗೌರವಯುತವಾದ ಆಶ್ರಯವನ್ನು ಭಾರತ ಸರ್ಕಾರವು ಒದಗಿಸಬೇಕು. ಅತ್ಯಂತ ದುರ್ಬಲ ರೋಹಿಂಗ್ಯಾ ಬಂಧಿತರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಹೆಚ್ಚಿನ ರೋಹಿಂಗ್ಯಾಗಳ ಅನಿಯಂತ್ರಿತ ಬಂಧನವನ್ನು ಕೊನೆಗೊಳಿಸಬೇಕು ಎಂದು ವರದಿ ಶಿಫಾರಸು ಮಾಡುತ್ತದೆ.

ಭಾರತವು ರೋಹಿಂಗ್ಯಾಗಳ ಕಾನೂನು ಸ್ಥಿತಿಯನ್ನು ಸ್ಪಷ್ಟಪಡಿಸಬೇಕು., 1946ರ ಕಾಯಿದೆಯನ್ನು ಪರಿಷ್ಕರಿಸಬೇಕು ಮತ್ತು ನಿರಾಶ್ರಿತರ ಬಗೆಗಿನ ಅದರ ನೀತಿಗಳು ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿರುತ್ತವೆ ಎಂಬುದನ್ನು ಖಚಿತಪಡಿಸಬೇಕು.  ಕಾನೂನುಬಾಹಿರವಾಗಿ ಬಂಧಿತರಾಗಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಿಡುಗಡೆ ಮಾಡಲು ಮತ್ತು ಬಂಧನ ಕೇಂದ್ರಗಳಲ್ಲಿ ಉತ್ತಮ ಸೌಲಭ್ಯಕ್ಕೆ ಮತ್ತು ಅವರ ಕುಟುಂಬಗಳ ಸಮ್ಮೀಲನಕ್ಕೆ ಅನುಮತಿಸುವಂತೆ ಭಾರತ ಸರಕಾರಕ್ಕೆ ಆಜಾದಿ ಪ್ರಾಜೆಕ್ಟ್ ಮತ್ತು ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಒತ್ತಾಯಿಸಿವೆ .

ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತರಿಗೆ ವಿದೇಶಿಯರ ಕಾಯಿದೆ 1946 ಮತ್ತು 1980ರ ಪಾಸ್‌ಪೋರ್ಟ್ ಕಾಯಿದೆಯ ನಿಯಮ 6ರ ಸೆಕ್ಷನ್ 14 (ಎ) (ಬಿ) ಅಡಿಯಲ್ಲಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ವರದಿಯು ಸೂಚಿಸುವಂತೆ, ಎರಡನೆಯದನ್ನು 1985ರಲ್ಲಿ ಬಿಟ್ಟುಬಿಡಲಾಗಿದೆ. ಭಾರತದ ಸ್ವಂತ ಕಾನೂನಿನ ಅಡಿಯಲ್ಲಿ, ರೋಹಿಂಗ್ಯಾ ನಿರಾಶ್ರಿತರ ಅನಿರ್ದಿಷ್ಟ ಬಂಧನವು ಕಾನೂನುಬಾಹಿರವಾಗಿದೆ ಮತ್ತು ಅನಿಯಂತ್ರಿತವಾಗಿದೆ ಎಂದು ವರದಿ ಹೇಳಿದೆ.

ಗಡ್ಡಧಾರಿ ಮುಸ್ಲಿಂ ವಿದ್ಯಾರ್ಥಿಗೆ ನರ್ಸಿಂಗ್ ಪರೀಕ್ಷೆ ನಿಷೇಧಿಸಿದ ಪರೀಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...