Homeಅಂತರಾಷ್ಟ್ರೀಯಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

ಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

- Advertisement -
- Advertisement -

ಹೊಸದಿಲ್ಲಿ: ಭಾರತದಲ್ಲಿನ  ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನುಅವರು  ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ  ಎಂದು ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತ ಬಂಧಿತರೊಂದಿಗಿನ ಸಂಭಾಷಣೆಯನ್ನು ಆಧರಿಸಿದ ಕೆಲ ಅಧ್ಯಯನಗಳು ಕಂಡುಕೊಂಡಿವೆ.

ಯುಎಸ್-ನೋಂದಾಯಿತ ಎನ್ ಜಿಒ ಸಂಸ್ಥೆಯಾದ ದಿ ಆಜಾದಿ ಪ್ರಾಜೆಕ್ಟ್ ಮತ್ತು ನಿರಾಶ್ರಿತರಿಗಾಗಿ ಪ್ರತಿಪಾದಿಸುವ ಅಮೆರಿಕದ ಲಾಭರಹಿತ ಸಂಸ್ಥೆಯಾದ ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಗಳು ಈ ಅಧ್ಯಯನ  ನಡೆಸಿದ್ದು, ಇದು ಸಾಂವಿಧಾನಿಕ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳಿಗೆ ಭಾರತವು ತನ್ನ ಬದ್ಧತೆಯನ್ನು ಅನುಸರಿಸಲು ವಿಫಲವಾಗಿದೆ ಎಂದು ಈ ಸಂಸ್ಥೆಗಳು ನಡೆಸಿದ ವರದಿ ಹೇಳಿದೆ.

ಭಾರತದಲ್ಲಿನ ನಿರಾಶ್ರಿತ ಬಂಧಿತರು, ಅವರ ಕುಟುಂಬಗಳು ಮತ್ತು ವಕೀಲರು ಮತ್ತು ಬಂಧನ ಕೇಂದ್ರಕ್ಕೆ ಭೇಟಿ ನೀಡಿ ಇವರುಗಳ ಸಂಭಾಷಣೆಯನ್ನು ಆಧರಿಸಿ ಈ ಸಂಸ್ಥೆಗಳು ಅಧ್ಯಯನ ನಡೆಸಿವೆ.

ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನು ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ. ಭಾರತದಲ್ಲಿ, ಸುಮಾರು 22,500 ರೋಹಿಂಗ್ಯಾ ನಿರಾಶ್ರಿತರು ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ (UNHCR) ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಯುಎನ್‌ಹೆಚ್‌ಸಿಆರ್ ಅಂದಾಜಿನ ಪ್ರಕಾರ 676 ರೋಹಿಂಗ್ಯಾಗಳು ಭಾರತದಾದ್ಯಂತ ವಲಸೆ ಬಂಧನದಲ್ಲಿದ್ದಾರೆ. ಅದರಲ್ಲಿ 608 ನ್ಯಾಯಾಲಯದ ಪ್ರಕರಣಗಳು ಅಥವಾ ಶಿಕ್ಷೆಗಳು ಬಾಕಿ ಉಳಿದಿಲ್ಲ. ಬಂಧಿತರಲ್ಲಿ ಶೇ.50ರಷ್ಟು ಗರ್ಭಿಣಿ ಮಹಿಳೆಯರು, ಹಾಲುಣಿಸುವ ತಾಯಂದಿರು, ಮಕ್ಕಳು, ಅಂಗವಿಕಲರು ಮತ್ತು ವೃದ್ಧರು  ಎಂದು ಈ ವರದಿ ಹೇಳಿದೆ.

ಕಾನೂನು ಸಹಾಯಕ್ಕೆ ಮತ್ತು UNHCR ನಂತಹ ಅಂತರಾಷ್ಟ್ರೀಯ ಸಂಸ್ಥೆಗಳಿಗೆ ಬಹಳ ಸೀಮಿತ ಪ್ರವೇಶದಿಂದಾಗಿ ಅನೇಕ ರೋಹಿಂಗ್ಯಾ ನಿರಾಶ್ರಿತರನ್ನು ಒಂದು ದಶಕದಿಂದ ನಿರಂಕುಶವಾಗಿ ಬಂಧಿಸಲಾಗಿದೆ. ಇವರುಗಳ ಮೇಲೆ ಯಾವುದೇ ಕ್ರಿಮಿನಲ್ ಆರೋಪಗಳಿಲ್ಲದೆ ಇದ್ದರೂ ಸಹ ಈ ಬಂಧನಕ್ಕೆ ಅಂತ್ಯವಿಲ್ಲ ಎಂದು ವರದಿ ಎತ್ತಿ ತೋರಿಸಿದೆ.

ಈ ಬಂಧನ ಕೇಂದ್ರಗಳಲ್ಲಿರುವ ಮಕ್ಕಳಿಗೆ ಶಾಲೆಗೆ ಅಥವಾ ಆಟದ ಮೈದಾನಗಳಿಗೆ ಪ್ರವೇಶವಿಲ್ಲವಾಗಿದೆ. ಬಂಧನಕ್ಕೊಳಗಾದವರಲ್ಲಿ ಕೆಲವರು ತಮ್ಮ ಬಂಧನದ ಸಮಯದಲ್ಲಿ ಶಿಶುಗಳಾಗಿದ್ದರು ಮತ್ತು ಅವರು ಹೊರಗಿನ ಜೀವನವನ್ನು ಎಂದಿಗೂ ಅನುಭವಿಸುತ್ತಿಲ್ಲ.  ದೀರ್ಘಕಾಲದ ಹಸಿವು, ರುಚಿಕರವಲ್ಲದ ಆಹಾರ, ಕಳಪೆ ಪೋಷಣೆ, ಕಳಪೆ ನೈರ್ಮಲ್ಯ ವು ತಾತ್ಕಾಲಿಕ ಪಾರ್ಶ್ವವಾಯು ಸೇರಿದಂತೆ ತೀವ್ರ ಮಾನಸಿಕ ಮತ್ತು ದೈಹಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ ಎಂದು ವರದಿ ಹೇಳಿದೆ.

ಕುಟುಂಬಗಳನ್ನು ಪ್ರತ್ಯೇಕಿಸಬಾರದು ಎಂದು ಹೇಳುವ ಭಾರತದ ಮಾದರಿ ಬಂಧನ ಸಂಹಿತೆಯನ್ನು ಉಲ್ಲಂಘಿಸಿ, ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸಲಾಗಿದೆ. ಸಂಗಾತಿಗಳು ಒಟ್ಟಿಗೆ ಸಮಯ ಕಳೆಯುವುದಕ್ಕೆ ಅನುಮತಿಸುತ್ತಿಲ್ಲ ಮತ್ತು ಮಕ್ಕಳನ್ನು ಅವರ ಪೋಷಕರಿಂದ ಬಲವಂತವಾಗಿ ಬೇರ್ಪಡಿಸಲಾಗಿದೆ ಎಂಬುದನ್ನು ವರದಿ ವಿವರಿಸುತ್ತದೆ.

ಹತ್ಯಾಕಾಂಡದಿಂದ ಬದುಕುಳಿದ ಜನಸಂಖ್ಯೆಯನ್ನು ಪುನರುಜ್ಜೀವನಗೊಳಿಸುವ ಗೌರವಯುತವಾದ ಆಶ್ರಯವನ್ನು ಭಾರತ ಸರ್ಕಾರವು ಒದಗಿಸಬೇಕು. ಅತ್ಯಂತ ದುರ್ಬಲ ರೋಹಿಂಗ್ಯಾ ಬಂಧಿತರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಹೆಚ್ಚಿನ ರೋಹಿಂಗ್ಯಾಗಳ ಅನಿಯಂತ್ರಿತ ಬಂಧನವನ್ನು ಕೊನೆಗೊಳಿಸಬೇಕು ಎಂದು ವರದಿ ಶಿಫಾರಸು ಮಾಡುತ್ತದೆ.

ಭಾರತವು ರೋಹಿಂಗ್ಯಾಗಳ ಕಾನೂನು ಸ್ಥಿತಿಯನ್ನು ಸ್ಪಷ್ಟಪಡಿಸಬೇಕು., 1946ರ ಕಾಯಿದೆಯನ್ನು ಪರಿಷ್ಕರಿಸಬೇಕು ಮತ್ತು ನಿರಾಶ್ರಿತರ ಬಗೆಗಿನ ಅದರ ನೀತಿಗಳು ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿರುತ್ತವೆ ಎಂಬುದನ್ನು ಖಚಿತಪಡಿಸಬೇಕು.  ಕಾನೂನುಬಾಹಿರವಾಗಿ ಬಂಧಿತರಾಗಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಿಡುಗಡೆ ಮಾಡಲು ಮತ್ತು ಬಂಧನ ಕೇಂದ್ರಗಳಲ್ಲಿ ಉತ್ತಮ ಸೌಲಭ್ಯಕ್ಕೆ ಮತ್ತು ಅವರ ಕುಟುಂಬಗಳ ಸಮ್ಮೀಲನಕ್ಕೆ ಅನುಮತಿಸುವಂತೆ ಭಾರತ ಸರಕಾರಕ್ಕೆ ಆಜಾದಿ ಪ್ರಾಜೆಕ್ಟ್ ಮತ್ತು ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಒತ್ತಾಯಿಸಿವೆ .

ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತರಿಗೆ ವಿದೇಶಿಯರ ಕಾಯಿದೆ 1946 ಮತ್ತು 1980ರ ಪಾಸ್‌ಪೋರ್ಟ್ ಕಾಯಿದೆಯ ನಿಯಮ 6ರ ಸೆಕ್ಷನ್ 14 (ಎ) (ಬಿ) ಅಡಿಯಲ್ಲಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ವರದಿಯು ಸೂಚಿಸುವಂತೆ, ಎರಡನೆಯದನ್ನು 1985ರಲ್ಲಿ ಬಿಟ್ಟುಬಿಡಲಾಗಿದೆ. ಭಾರತದ ಸ್ವಂತ ಕಾನೂನಿನ ಅಡಿಯಲ್ಲಿ, ರೋಹಿಂಗ್ಯಾ ನಿರಾಶ್ರಿತರ ಅನಿರ್ದಿಷ್ಟ ಬಂಧನವು ಕಾನೂನುಬಾಹಿರವಾಗಿದೆ ಮತ್ತು ಅನಿಯಂತ್ರಿತವಾಗಿದೆ ಎಂದು ವರದಿ ಹೇಳಿದೆ.

ಗಡ್ಡಧಾರಿ ಮುಸ್ಲಿಂ ವಿದ್ಯಾರ್ಥಿಗೆ ನರ್ಸಿಂಗ್ ಪರೀಕ್ಷೆ ನಿಷೇಧಿಸಿದ ಪರೀಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...