Homeಅಂತರಾಷ್ಟ್ರೀಯಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

ಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

- Advertisement -
- Advertisement -

ಹೊಸದಿಲ್ಲಿ: ಭಾರತದಲ್ಲಿನ  ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನುಅವರು  ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ  ಎಂದು ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತ ಬಂಧಿತರೊಂದಿಗಿನ ಸಂಭಾಷಣೆಯನ್ನು ಆಧರಿಸಿದ ಕೆಲ ಅಧ್ಯಯನಗಳು ಕಂಡುಕೊಂಡಿವೆ.

ಯುಎಸ್-ನೋಂದಾಯಿತ ಎನ್ ಜಿಒ ಸಂಸ್ಥೆಯಾದ ದಿ ಆಜಾದಿ ಪ್ರಾಜೆಕ್ಟ್ ಮತ್ತು ನಿರಾಶ್ರಿತರಿಗಾಗಿ ಪ್ರತಿಪಾದಿಸುವ ಅಮೆರಿಕದ ಲಾಭರಹಿತ ಸಂಸ್ಥೆಯಾದ ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಗಳು ಈ ಅಧ್ಯಯನ  ನಡೆಸಿದ್ದು, ಇದು ಸಾಂವಿಧಾನಿಕ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳಿಗೆ ಭಾರತವು ತನ್ನ ಬದ್ಧತೆಯನ್ನು ಅನುಸರಿಸಲು ವಿಫಲವಾಗಿದೆ ಎಂದು ಈ ಸಂಸ್ಥೆಗಳು ನಡೆಸಿದ ವರದಿ ಹೇಳಿದೆ.

ಭಾರತದಲ್ಲಿನ ನಿರಾಶ್ರಿತ ಬಂಧಿತರು, ಅವರ ಕುಟುಂಬಗಳು ಮತ್ತು ವಕೀಲರು ಮತ್ತು ಬಂಧನ ಕೇಂದ್ರಕ್ಕೆ ಭೇಟಿ ನೀಡಿ ಇವರುಗಳ ಸಂಭಾಷಣೆಯನ್ನು ಆಧರಿಸಿ ಈ ಸಂಸ್ಥೆಗಳು ಅಧ್ಯಯನ ನಡೆಸಿವೆ.

ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನು ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ. ಭಾರತದಲ್ಲಿ, ಸುಮಾರು 22,500 ರೋಹಿಂಗ್ಯಾ ನಿರಾಶ್ರಿತರು ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ (UNHCR) ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಯುಎನ್‌ಹೆಚ್‌ಸಿಆರ್ ಅಂದಾಜಿನ ಪ್ರಕಾರ 676 ರೋಹಿಂಗ್ಯಾಗಳು ಭಾರತದಾದ್ಯಂತ ವಲಸೆ ಬಂಧನದಲ್ಲಿದ್ದಾರೆ. ಅದರಲ್ಲಿ 608 ನ್ಯಾಯಾಲಯದ ಪ್ರಕರಣಗಳು ಅಥವಾ ಶಿಕ್ಷೆಗಳು ಬಾಕಿ ಉಳಿದಿಲ್ಲ. ಬಂಧಿತರಲ್ಲಿ ಶೇ.50ರಷ್ಟು ಗರ್ಭಿಣಿ ಮಹಿಳೆಯರು, ಹಾಲುಣಿಸುವ ತಾಯಂದಿರು, ಮಕ್ಕಳು, ಅಂಗವಿಕಲರು ಮತ್ತು ವೃದ್ಧರು  ಎಂದು ಈ ವರದಿ ಹೇಳಿದೆ.

ಕಾನೂನು ಸಹಾಯಕ್ಕೆ ಮತ್ತು UNHCR ನಂತಹ ಅಂತರಾಷ್ಟ್ರೀಯ ಸಂಸ್ಥೆಗಳಿಗೆ ಬಹಳ ಸೀಮಿತ ಪ್ರವೇಶದಿಂದಾಗಿ ಅನೇಕ ರೋಹಿಂಗ್ಯಾ ನಿರಾಶ್ರಿತರನ್ನು ಒಂದು ದಶಕದಿಂದ ನಿರಂಕುಶವಾಗಿ ಬಂಧಿಸಲಾಗಿದೆ. ಇವರುಗಳ ಮೇಲೆ ಯಾವುದೇ ಕ್ರಿಮಿನಲ್ ಆರೋಪಗಳಿಲ್ಲದೆ ಇದ್ದರೂ ಸಹ ಈ ಬಂಧನಕ್ಕೆ ಅಂತ್ಯವಿಲ್ಲ ಎಂದು ವರದಿ ಎತ್ತಿ ತೋರಿಸಿದೆ.

ಈ ಬಂಧನ ಕೇಂದ್ರಗಳಲ್ಲಿರುವ ಮಕ್ಕಳಿಗೆ ಶಾಲೆಗೆ ಅಥವಾ ಆಟದ ಮೈದಾನಗಳಿಗೆ ಪ್ರವೇಶವಿಲ್ಲವಾಗಿದೆ. ಬಂಧನಕ್ಕೊಳಗಾದವರಲ್ಲಿ ಕೆಲವರು ತಮ್ಮ ಬಂಧನದ ಸಮಯದಲ್ಲಿ ಶಿಶುಗಳಾಗಿದ್ದರು ಮತ್ತು ಅವರು ಹೊರಗಿನ ಜೀವನವನ್ನು ಎಂದಿಗೂ ಅನುಭವಿಸುತ್ತಿಲ್ಲ.  ದೀರ್ಘಕಾಲದ ಹಸಿವು, ರುಚಿಕರವಲ್ಲದ ಆಹಾರ, ಕಳಪೆ ಪೋಷಣೆ, ಕಳಪೆ ನೈರ್ಮಲ್ಯ ವು ತಾತ್ಕಾಲಿಕ ಪಾರ್ಶ್ವವಾಯು ಸೇರಿದಂತೆ ತೀವ್ರ ಮಾನಸಿಕ ಮತ್ತು ದೈಹಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ ಎಂದು ವರದಿ ಹೇಳಿದೆ.

ಕುಟುಂಬಗಳನ್ನು ಪ್ರತ್ಯೇಕಿಸಬಾರದು ಎಂದು ಹೇಳುವ ಭಾರತದ ಮಾದರಿ ಬಂಧನ ಸಂಹಿತೆಯನ್ನು ಉಲ್ಲಂಘಿಸಿ, ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸಲಾಗಿದೆ. ಸಂಗಾತಿಗಳು ಒಟ್ಟಿಗೆ ಸಮಯ ಕಳೆಯುವುದಕ್ಕೆ ಅನುಮತಿಸುತ್ತಿಲ್ಲ ಮತ್ತು ಮಕ್ಕಳನ್ನು ಅವರ ಪೋಷಕರಿಂದ ಬಲವಂತವಾಗಿ ಬೇರ್ಪಡಿಸಲಾಗಿದೆ ಎಂಬುದನ್ನು ವರದಿ ವಿವರಿಸುತ್ತದೆ.

ಹತ್ಯಾಕಾಂಡದಿಂದ ಬದುಕುಳಿದ ಜನಸಂಖ್ಯೆಯನ್ನು ಪುನರುಜ್ಜೀವನಗೊಳಿಸುವ ಗೌರವಯುತವಾದ ಆಶ್ರಯವನ್ನು ಭಾರತ ಸರ್ಕಾರವು ಒದಗಿಸಬೇಕು. ಅತ್ಯಂತ ದುರ್ಬಲ ರೋಹಿಂಗ್ಯಾ ಬಂಧಿತರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಹೆಚ್ಚಿನ ರೋಹಿಂಗ್ಯಾಗಳ ಅನಿಯಂತ್ರಿತ ಬಂಧನವನ್ನು ಕೊನೆಗೊಳಿಸಬೇಕು ಎಂದು ವರದಿ ಶಿಫಾರಸು ಮಾಡುತ್ತದೆ.

ಭಾರತವು ರೋಹಿಂಗ್ಯಾಗಳ ಕಾನೂನು ಸ್ಥಿತಿಯನ್ನು ಸ್ಪಷ್ಟಪಡಿಸಬೇಕು., 1946ರ ಕಾಯಿದೆಯನ್ನು ಪರಿಷ್ಕರಿಸಬೇಕು ಮತ್ತು ನಿರಾಶ್ರಿತರ ಬಗೆಗಿನ ಅದರ ನೀತಿಗಳು ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿರುತ್ತವೆ ಎಂಬುದನ್ನು ಖಚಿತಪಡಿಸಬೇಕು.  ಕಾನೂನುಬಾಹಿರವಾಗಿ ಬಂಧಿತರಾಗಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಿಡುಗಡೆ ಮಾಡಲು ಮತ್ತು ಬಂಧನ ಕೇಂದ್ರಗಳಲ್ಲಿ ಉತ್ತಮ ಸೌಲಭ್ಯಕ್ಕೆ ಮತ್ತು ಅವರ ಕುಟುಂಬಗಳ ಸಮ್ಮೀಲನಕ್ಕೆ ಅನುಮತಿಸುವಂತೆ ಭಾರತ ಸರಕಾರಕ್ಕೆ ಆಜಾದಿ ಪ್ರಾಜೆಕ್ಟ್ ಮತ್ತು ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಒತ್ತಾಯಿಸಿವೆ .

ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತರಿಗೆ ವಿದೇಶಿಯರ ಕಾಯಿದೆ 1946 ಮತ್ತು 1980ರ ಪಾಸ್‌ಪೋರ್ಟ್ ಕಾಯಿದೆಯ ನಿಯಮ 6ರ ಸೆಕ್ಷನ್ 14 (ಎ) (ಬಿ) ಅಡಿಯಲ್ಲಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ವರದಿಯು ಸೂಚಿಸುವಂತೆ, ಎರಡನೆಯದನ್ನು 1985ರಲ್ಲಿ ಬಿಟ್ಟುಬಿಡಲಾಗಿದೆ. ಭಾರತದ ಸ್ವಂತ ಕಾನೂನಿನ ಅಡಿಯಲ್ಲಿ, ರೋಹಿಂಗ್ಯಾ ನಿರಾಶ್ರಿತರ ಅನಿರ್ದಿಷ್ಟ ಬಂಧನವು ಕಾನೂನುಬಾಹಿರವಾಗಿದೆ ಮತ್ತು ಅನಿಯಂತ್ರಿತವಾಗಿದೆ ಎಂದು ವರದಿ ಹೇಳಿದೆ.

ಗಡ್ಡಧಾರಿ ಮುಸ್ಲಿಂ ವಿದ್ಯಾರ್ಥಿಗೆ ನರ್ಸಿಂಗ್ ಪರೀಕ್ಷೆ ನಿಷೇಧಿಸಿದ ಪರೀಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...

ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ...

ತಮಿಳುನಾಡು ವಿಧಾನಸಭಾ ಚುನಾವಣೆ 2026| ದಕ್ಷಿಣ ರಾಜ್ಯಗಳು ‘ದೆಹಲಿ ತಂಡ’ವನ್ನು ಓಡಿಸಬೇಕು: ಉದಯನಿಧಿ ಸ್ಟಾಲಿನ್

ತಮಿಳುನಾಡು: ಮುಂಬರುವ ವಿಧಾನಸಭಾ ಚುನಾವಣೆಗಳು ತಮಿಳುನಾಡು ತಂಡ ಮತ್ತು ದೆಹಲಿ ತಂಡದ ನಡುವಿನ ಹೋರಾಟವಾಗಿದ್ದು, ದಕ್ಷಿಣ ರಾಜ್ಯವು ದೆಹಲಿಯನ್ನು "ಓಡಿಸಬೇಕು" ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಬುಧವಾರ ಮತ್ತೊಮ್ಮೆ ಒತ್ತಾಯಿಸಿದ್ದಾರೆ. "ನಮ್ಮ ನಾಯಕ (ಎಂ.ಕೆ....

ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಸಂಬಂಧಿಕರಿಂದ ವಿಷಪ್ರಾಶನ

ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮರ್ಯಾದೆಗೇಡು ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳೆಯನ್ನು ಆಕೆಯ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ...

ಉತ್ತರ ಪ್ರದೇಶ: ಅಂಬೇಡ್ಕರ್ ಜಯಂತಿಯಂದು ಪ್ರತಿಮೆ ಸ್ಥಾಪನೆಗೆ ವಿರೋಧ: ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಘರ್ಷಣೆ 

ಸರ್ಕಾರಿ ಭೂಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ವಿವಾದವು ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದ ನಂತರ ಮಂಗಳವಾರ ಸಂಜೆ ಮೈಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಕೆಗಂಜ್...