Homeಅಂತರಾಷ್ಟ್ರೀಯಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

ಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

- Advertisement -
- Advertisement -

ಹೊಸದಿಲ್ಲಿ: ಭಾರತದಲ್ಲಿನ  ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನುಅವರು  ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ  ಎಂದು ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತ ಬಂಧಿತರೊಂದಿಗಿನ ಸಂಭಾಷಣೆಯನ್ನು ಆಧರಿಸಿದ ಕೆಲ ಅಧ್ಯಯನಗಳು ಕಂಡುಕೊಂಡಿವೆ.

ಯುಎಸ್-ನೋಂದಾಯಿತ ಎನ್ ಜಿಒ ಸಂಸ್ಥೆಯಾದ ದಿ ಆಜಾದಿ ಪ್ರಾಜೆಕ್ಟ್ ಮತ್ತು ನಿರಾಶ್ರಿತರಿಗಾಗಿ ಪ್ರತಿಪಾದಿಸುವ ಅಮೆರಿಕದ ಲಾಭರಹಿತ ಸಂಸ್ಥೆಯಾದ ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಗಳು ಈ ಅಧ್ಯಯನ  ನಡೆಸಿದ್ದು, ಇದು ಸಾಂವಿಧಾನಿಕ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳಿಗೆ ಭಾರತವು ತನ್ನ ಬದ್ಧತೆಯನ್ನು ಅನುಸರಿಸಲು ವಿಫಲವಾಗಿದೆ ಎಂದು ಈ ಸಂಸ್ಥೆಗಳು ನಡೆಸಿದ ವರದಿ ಹೇಳಿದೆ.

ಭಾರತದಲ್ಲಿನ ನಿರಾಶ್ರಿತ ಬಂಧಿತರು, ಅವರ ಕುಟುಂಬಗಳು ಮತ್ತು ವಕೀಲರು ಮತ್ತು ಬಂಧನ ಕೇಂದ್ರಕ್ಕೆ ಭೇಟಿ ನೀಡಿ ಇವರುಗಳ ಸಂಭಾಷಣೆಯನ್ನು ಆಧರಿಸಿ ಈ ಸಂಸ್ಥೆಗಳು ಅಧ್ಯಯನ ನಡೆಸಿವೆ.

ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನು ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ. ಭಾರತದಲ್ಲಿ, ಸುಮಾರು 22,500 ರೋಹಿಂಗ್ಯಾ ನಿರಾಶ್ರಿತರು ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ (UNHCR) ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಯುಎನ್‌ಹೆಚ್‌ಸಿಆರ್ ಅಂದಾಜಿನ ಪ್ರಕಾರ 676 ರೋಹಿಂಗ್ಯಾಗಳು ಭಾರತದಾದ್ಯಂತ ವಲಸೆ ಬಂಧನದಲ್ಲಿದ್ದಾರೆ. ಅದರಲ್ಲಿ 608 ನ್ಯಾಯಾಲಯದ ಪ್ರಕರಣಗಳು ಅಥವಾ ಶಿಕ್ಷೆಗಳು ಬಾಕಿ ಉಳಿದಿಲ್ಲ. ಬಂಧಿತರಲ್ಲಿ ಶೇ.50ರಷ್ಟು ಗರ್ಭಿಣಿ ಮಹಿಳೆಯರು, ಹಾಲುಣಿಸುವ ತಾಯಂದಿರು, ಮಕ್ಕಳು, ಅಂಗವಿಕಲರು ಮತ್ತು ವೃದ್ಧರು  ಎಂದು ಈ ವರದಿ ಹೇಳಿದೆ.

ಕಾನೂನು ಸಹಾಯಕ್ಕೆ ಮತ್ತು UNHCR ನಂತಹ ಅಂತರಾಷ್ಟ್ರೀಯ ಸಂಸ್ಥೆಗಳಿಗೆ ಬಹಳ ಸೀಮಿತ ಪ್ರವೇಶದಿಂದಾಗಿ ಅನೇಕ ರೋಹಿಂಗ್ಯಾ ನಿರಾಶ್ರಿತರನ್ನು ಒಂದು ದಶಕದಿಂದ ನಿರಂಕುಶವಾಗಿ ಬಂಧಿಸಲಾಗಿದೆ. ಇವರುಗಳ ಮೇಲೆ ಯಾವುದೇ ಕ್ರಿಮಿನಲ್ ಆರೋಪಗಳಿಲ್ಲದೆ ಇದ್ದರೂ ಸಹ ಈ ಬಂಧನಕ್ಕೆ ಅಂತ್ಯವಿಲ್ಲ ಎಂದು ವರದಿ ಎತ್ತಿ ತೋರಿಸಿದೆ.

ಈ ಬಂಧನ ಕೇಂದ್ರಗಳಲ್ಲಿರುವ ಮಕ್ಕಳಿಗೆ ಶಾಲೆಗೆ ಅಥವಾ ಆಟದ ಮೈದಾನಗಳಿಗೆ ಪ್ರವೇಶವಿಲ್ಲವಾಗಿದೆ. ಬಂಧನಕ್ಕೊಳಗಾದವರಲ್ಲಿ ಕೆಲವರು ತಮ್ಮ ಬಂಧನದ ಸಮಯದಲ್ಲಿ ಶಿಶುಗಳಾಗಿದ್ದರು ಮತ್ತು ಅವರು ಹೊರಗಿನ ಜೀವನವನ್ನು ಎಂದಿಗೂ ಅನುಭವಿಸುತ್ತಿಲ್ಲ.  ದೀರ್ಘಕಾಲದ ಹಸಿವು, ರುಚಿಕರವಲ್ಲದ ಆಹಾರ, ಕಳಪೆ ಪೋಷಣೆ, ಕಳಪೆ ನೈರ್ಮಲ್ಯ ವು ತಾತ್ಕಾಲಿಕ ಪಾರ್ಶ್ವವಾಯು ಸೇರಿದಂತೆ ತೀವ್ರ ಮಾನಸಿಕ ಮತ್ತು ದೈಹಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ ಎಂದು ವರದಿ ಹೇಳಿದೆ.

ಕುಟುಂಬಗಳನ್ನು ಪ್ರತ್ಯೇಕಿಸಬಾರದು ಎಂದು ಹೇಳುವ ಭಾರತದ ಮಾದರಿ ಬಂಧನ ಸಂಹಿತೆಯನ್ನು ಉಲ್ಲಂಘಿಸಿ, ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸಲಾಗಿದೆ. ಸಂಗಾತಿಗಳು ಒಟ್ಟಿಗೆ ಸಮಯ ಕಳೆಯುವುದಕ್ಕೆ ಅನುಮತಿಸುತ್ತಿಲ್ಲ ಮತ್ತು ಮಕ್ಕಳನ್ನು ಅವರ ಪೋಷಕರಿಂದ ಬಲವಂತವಾಗಿ ಬೇರ್ಪಡಿಸಲಾಗಿದೆ ಎಂಬುದನ್ನು ವರದಿ ವಿವರಿಸುತ್ತದೆ.

ಹತ್ಯಾಕಾಂಡದಿಂದ ಬದುಕುಳಿದ ಜನಸಂಖ್ಯೆಯನ್ನು ಪುನರುಜ್ಜೀವನಗೊಳಿಸುವ ಗೌರವಯುತವಾದ ಆಶ್ರಯವನ್ನು ಭಾರತ ಸರ್ಕಾರವು ಒದಗಿಸಬೇಕು. ಅತ್ಯಂತ ದುರ್ಬಲ ರೋಹಿಂಗ್ಯಾ ಬಂಧಿತರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಹೆಚ್ಚಿನ ರೋಹಿಂಗ್ಯಾಗಳ ಅನಿಯಂತ್ರಿತ ಬಂಧನವನ್ನು ಕೊನೆಗೊಳಿಸಬೇಕು ಎಂದು ವರದಿ ಶಿಫಾರಸು ಮಾಡುತ್ತದೆ.

ಭಾರತವು ರೋಹಿಂಗ್ಯಾಗಳ ಕಾನೂನು ಸ್ಥಿತಿಯನ್ನು ಸ್ಪಷ್ಟಪಡಿಸಬೇಕು., 1946ರ ಕಾಯಿದೆಯನ್ನು ಪರಿಷ್ಕರಿಸಬೇಕು ಮತ್ತು ನಿರಾಶ್ರಿತರ ಬಗೆಗಿನ ಅದರ ನೀತಿಗಳು ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿರುತ್ತವೆ ಎಂಬುದನ್ನು ಖಚಿತಪಡಿಸಬೇಕು.  ಕಾನೂನುಬಾಹಿರವಾಗಿ ಬಂಧಿತರಾಗಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಿಡುಗಡೆ ಮಾಡಲು ಮತ್ತು ಬಂಧನ ಕೇಂದ್ರಗಳಲ್ಲಿ ಉತ್ತಮ ಸೌಲಭ್ಯಕ್ಕೆ ಮತ್ತು ಅವರ ಕುಟುಂಬಗಳ ಸಮ್ಮೀಲನಕ್ಕೆ ಅನುಮತಿಸುವಂತೆ ಭಾರತ ಸರಕಾರಕ್ಕೆ ಆಜಾದಿ ಪ್ರಾಜೆಕ್ಟ್ ಮತ್ತು ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಒತ್ತಾಯಿಸಿವೆ .

ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತರಿಗೆ ವಿದೇಶಿಯರ ಕಾಯಿದೆ 1946 ಮತ್ತು 1980ರ ಪಾಸ್‌ಪೋರ್ಟ್ ಕಾಯಿದೆಯ ನಿಯಮ 6ರ ಸೆಕ್ಷನ್ 14 (ಎ) (ಬಿ) ಅಡಿಯಲ್ಲಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ವರದಿಯು ಸೂಚಿಸುವಂತೆ, ಎರಡನೆಯದನ್ನು 1985ರಲ್ಲಿ ಬಿಟ್ಟುಬಿಡಲಾಗಿದೆ. ಭಾರತದ ಸ್ವಂತ ಕಾನೂನಿನ ಅಡಿಯಲ್ಲಿ, ರೋಹಿಂಗ್ಯಾ ನಿರಾಶ್ರಿತರ ಅನಿರ್ದಿಷ್ಟ ಬಂಧನವು ಕಾನೂನುಬಾಹಿರವಾಗಿದೆ ಮತ್ತು ಅನಿಯಂತ್ರಿತವಾಗಿದೆ ಎಂದು ವರದಿ ಹೇಳಿದೆ.

ಗಡ್ಡಧಾರಿ ಮುಸ್ಲಿಂ ವಿದ್ಯಾರ್ಥಿಗೆ ನರ್ಸಿಂಗ್ ಪರೀಕ್ಷೆ ನಿಷೇಧಿಸಿದ ಪರೀಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...