Homeಕರ್ನಾಟಕರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

- Advertisement -
- Advertisement -

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಸಮಿತಿಗೆ ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ಅವರನ್ನು ಯಾವ ಮಾನದಂಡಗಳ ಅಡಿಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬ ಪ್ರಶ್ನೆಗೆ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, “ರೋಹಿತ್‌ ಚಕ್ರತೀರ್ಥ ಹಿನ್ನೆಲೆ ಏನೆಂದು ತಿಳಿಯದೆ ಮಾತನಾಡಬಾರದು, ಅವರೊಬ್ಬ ಐಐಟಿ-ಸಿಇಟಿ ಪ್ರೊಫೆಸರ್” ಎಂದು ಹೇಳಿದ್ದರು.

ಸಚಿವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ದೇಶದಲ್ಲಿ ‘ಸಿಇಟಿ ಪ್ರೊಫೆಸರ್’ ಎಂಬ ಹುದ್ದೆ ಇದೆಯಾ?, ವಾಸ್ತವದಲ್ಲಿ ಚಕ್ರತೀರ್ಥ ಪಡೆದ ಶಿಕ್ಷಣ ಏನು? ಪ್ರೊಫೆಸರ್ ಆಗುವ ಪ್ರಕ್ರಿಯೆ ಅಷ್ಟು ಸುಲಭವೇ? ಎಂಬ ಪ್ರಶ್ನೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಲಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಶಾಲಾ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಹುದ್ದೆಗೆ ನೇಮಕವಾದ ದಿನದಿಂದಲೂ ಅವರ ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಹಿನ್ನೆಲೆ ಸಾಕಷ್ಟು ಪ್ರಶ್ನೆಗೆ ಒಳಗಾಗಿತ್ತು. ಸೋಮವಾರ ಶಿಕ್ಷಣ ಸಚಿವರೇ ನಡೆಸಿದ ಪತ್ರಿಕಾಗೋಷ್ಠಿಯಲ್ಲೂ ಇದೇ ಪ್ರಶ್ನೆಗಳು ಪತ್ರಕರ್ತರು ಕೇಳಿದ್ದರು.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಈ ಪ್ರಶ್ನೆಗಳಿಗೆ ಉತ್ತರಿಸಿದ್ದ ಸಚಿವ ಬಿ ಸಿ ನಾಗೇಶ್, “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ಮುಂದುವರೆದು, “ವಿಷಯ ಗೊತ್ತಿಲ್ಲದೇ ಮಾತನಾಡಿ ಈ ದೇಶದ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ. ಪ್ರೊಫೆಸರ್‌ ಎಂಬುದು ಶಿಕ್ಷಣ ತಜ್ಞರೋ ಅಥವಾ ರೈಲು ನೌಕರರೋ? ಚಕ್ರತೀರ್ಥ ಅವರ ಹಿನ್ನೆಲೆ ಗೊತ್ತಿಲ್ಲದೇ ಪ್ರಶ್ನೆ ಮಾಡಬಾರದು” ಎಂದು ಹೇಳಿದ್ದರು.

ಚಕ್ರತೀರ್ಥ ಪ್ರೊಫೆಸರ್ ಎಂಬುದು ನಿಜವೇ?

ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ನೇಮಕ ಮಾಡುವಾಗ ಶಿಕ್ಷಣ ಇಲಾಖೆ ಅವರ ವಿದ್ಯಾರ್ಹತೆ ಏನು ಎಂಬುದನ್ನು ಸ್ಪಷ್ಟಪಡಿಸಿರಲಿಲ್ಲ. ಅಲ್ಲದೆ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ನಾಗೇಶ್ ತಿಳಿಸಿದ ಮಾಹಿತಿಯೂ ಅಸಮರ್ಪಕವಾಗಿದೆ.

ಐಐಟಿ ಅಂದರೆ ‘ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ’ ಎಂಬುವುದು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ದೇಶದಾದ್ಯಂತ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಐಐಟಿ ಇದೆ.

ಇದನ್ನೂ ಓದಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಆದರೆ ಸಿಇಟಿ ಎಂದರೆ ಕಾಮನ್ ಎಂಟ್ರನ್ಸ್‌ ಟೆಸ್ಟ್ (CET-Common Entrance Test) ಎಂದರ್ಥ. ಅಂದರೆ ಅದೊಂದು ಪ್ರವೇಶ ಪರೀಕ್ಷೆಯಾಗಿದೆ. ಅದೊಂದು ಸಂಸ್ಥೆಯಾಗಲಿ, ಹುದ್ದೆಯಾಗಲಿ ಅಲ್ಲ. ಈ ಪರೀಕ್ಷೆ ಬರೆಯಲು ಸಾಮಾನ್ಯವಾಗಿ ಟ್ಯೂಷನ್‌ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತದೆ. ಇಂತಹ ಟ್ಯೂಷನ್‌ ಕೇಂದ್ರಗಳಿಗೆ ಮಾನ್ಯತೆಯೂ ಇರುವುದಿಲ್ಲ.

ಪರಿಷ್ಕರಣೆ ಸಮಿತಿಗೆ ಆಯ್ಕೆ ಮಾಡಲು ನಿಮ್ಮ ಅರ್ಹತೆಗಳೇನು ಎಂದು ಈ ಹಿಂದೆ ನಾನುಗೌರಿ.ಕಾಂ ಕೇಳಿದ್ದ ಪ್ರಶ್ನೆಗೆ, ರೋಹಿತ್ ಚಕ್ರತೀರ್ಥ ಅವರು, ‘ಅದನ್ನು ಸರ್ಕಾರದ ಜೊತೆಗೆ ಕೇಳಬೇಕು’ ಎಂದು ಉತ್ತರಿಸಿದ್ದರು. ಆದರೆ ಸರ್ಕಾರ ಈಗ, ‘ಚಕ್ರತೀರ್ಥ ಅವರು ಐಐಟಿ-ಸಿಇಟಿ ಪ್ರೊಫೆಸರ್‌’ ಎಂದು ಹೇಳುತ್ತಿದೆ!. ಈ ಬಗ್ಗೆ ಪ್ರತಿಕ್ರಿಯೆಗೆ ನಾನುಗೌರಿ.ಕಾಂ ಚಕ್ರತೀರ್ಥ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ.

ಈ ಮಧ್ಯೆ, ಚಕ್ರತೀರ್ಥ ಅವರು ಯಾವುದಾದರೂ ವಿಷಯದಲ್ಲಿ ವಿಶೇಷ ಪರಿಣಿತಿ ಹೊಂದಿದವರೇ? ವಿದ್ವಾಂಸರೇ? ಎಂಬ ಪ್ರಶ್ನೆಗಳನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅವರ ಬಗ್ಗೆ ಹುಡುಕಿದಾಗಲೂ ಅವರೊಬ್ಬ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿ, ಬರಹಗಾರ ಮತ್ತು ವಿಜ್ಞಾನ ಸಂಬಂಧಿ ವಿಚಾರಗಳ ಲೇಖಕ ಎಂದಷ್ಟೇ ಮಾಹಿತಿ ಇದೆ. ಸ್ವತಃ ರೋಹಿತ್ ಚಕ್ರತೀರ್ಥ ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ತಮ್ಮನ್ನು ಶಿಕ್ಷಕ ಎಂದಷ್ಟೇ ಪರಿಚಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ಅವರ ಬಗ್ಗೆ ತಿಳಿದಿದ್ದ ಕೆಲವರ ಬಳಿ ವಿಚಾರಿಸಲಾಗಿ, ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ರೋಹಿತ್ ಚಕ್ರತೀರ್ಥ ಗಣಿತ ಪಾಠ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ‘ಟೆಸ್ಲಾ ಎಜುಕೇಷನ್’ ಎಂಬ‌ ಆನ್‌ಲೈನ್‌ ಪಾಠ ಮಾಡುವ ಶಿಕ್ಷಣ ಸಂಸ್ಥೆ ಹೊಂದಿರುವ ರೋಹಿತ್ ಚಕ್ರತೀರ್ಥ ಯೂಟ್ಯೂಬ್‌ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಣಿತ ಮಾಡುವ ವಿಡಿಯೋ ಸಹ ಲಭ್ಯವಾಗಿದೆ.

ಗಣಿತ ಪಾಠ ಮಾಡುವವರ ಅಧ್ಯಕ್ಷತೆಯಲ್ಲಿ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರು ಎಲ್ಲಾ ವಿಷಯಗಳಲ್ಲಿ ತಜ್ಞರಾಗಿರುವುದಿಲ್ಲ. ಆದರೆ, ಅದಕ್ಕಾಗಿ ಅವರು ವಿಷಯ ತಜ್ಞರ ಸಮಿತಿಯನ್ನು ರಚಿಸುತ್ತಾರೆ. ಹಿಂದಿನ ಬರಗೂರು ರಾಮಚಂದ್ರಪ್ಪನವರ ಸಮಿತಿ ಅದನ್ನೇ ಮಾಡಿತ್ತು.

ಪ್ರೊಫೆಸರ್ ಗೌರವ ಅಷ್ಟು ಸುಲಭದ್ದೆ?

ಸಚಿವ ನಾಗೇಶ್‌ ಅವರು ಹೇಳಿದಂತೆ ಓರ್ವ ಶಿಕ್ಷಕ ಪ್ರೊಫೆಸರ್ ಸ್ಥಾನಕ್ಕೆ ಏರುವ ಪ್ರಕ್ರಿಯೆಯೂ ಅಷ್ಟು ಸುಲಭದ್ದಲ್ಲ. ಮೊದಲು ಆತ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹಾಯಕ ಪ್ರಾಧ್ಯಾಪಕ (Assistant Professor) ಆಗಿ ಕೆಲಸಕ್ಕೆ ನಿಯುಕ್ತಿಯಾಗಬೇಕು. ನಂತರ ಅವರ ಅನುಭವದ ಆಧಾರದ ಮೇಲೆ ಸಹ ಪ್ರಾಧ್ಯಾಪಕ (Associate Professor ) ಆಗಿ ಬಡ್ತಿ ನೀಡಲಾಗುತ್ತದೆ. ಆನಂತರ, ಅವರ ಸೇವಾನುಭವ ಮತ್ತು ಪ್ರಕಟಿತ ಸಂಶೋಧನಾ ಬರಹಗಳ ಆಧಾರದಲ್ಲಿ ಪ್ರೊಫೆಸರ್ ಎಂಬ ಗೌರವವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘಿಸಿದ ಚಕ್ರತೀರ್ಥ ಸಮಿತಿ; ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಆಗ್ರಹ

ದೇಶದಲ್ಲಿ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಇದೆ. ಒಂದು ವೇಳೆ ಸಚಿವ ನಾಗೇಶ್ ಹೇಳಿದಂತೆ ರೋಹಿತ್ ಚಕ್ರತೀರ್ಥ ಐಐಟಿಯಲ್ಲಿ ಪ್ರೊಫೆಸರ್ ಆಗಿದ್ದರೆ, ಅದು ಯಾವ ಐಐಟಿಯಲ್ಲಿ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕಿದೆ. ಅಥವಾ ಸ್ವತಃ ರೋಹಿತ್ ಚಕ್ರತೀರ್ಥ ಅವರೇ ತಮ್ಮ ವಿದ್ಯಾರ್ಹತೆಯನ್ನು ಬಹಿರಂಗಪಡಿಸಬೇಕಿದೆ. ಸಾರ್ವಜನಿಕವಾಗಿ ಶಿಕ್ಷಣ ಖಾತೆಯ ಸಚಿವರು ಸುಳ್ಳು ಹೇಳಿದ್ದರೆ ಅದು ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗುವ ತಪ್ಪಿನಷ್ಟೇ ದೊಡ್ಡ ಪ್ರಮಾದವಾದ್ದರಿಂದ ಸರ್ಕಾರವು ಮುಜುಗರಕ್ಕೆ ಸಿಲುಕುವ ವಾತಾವರಣ ಸೃಷ್ಟಿಯಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಹಹಾ ಸ ಇ ಟಿ ಒಂದು ಪರೀಕ್ಷೆ, ಐಐಟಿ ಒಂದು ಖಾಸಗಿ ಸಂಸ್ಥೆ ಇದರ ಪ್ರೊಫೇಸರ್ ಅಂದರೆ ನಗುವಿನ ಸಂಗತಿ, ಇಂತಹ ಮಾತುಗಳು ಅನಕ್ಷರಸ್ತರು ಅನಕ್ಷತಸ್ತರಿಗೆ ಮಾತ್ರ ಹೇಳಬಹುದು ನಂಬಿಸಲೂ ಬಹುದು, ಆದರೆ ಜ್ನಾನವಂತರಿಗೆ ಹಾಗೂ ಶಿಕ್ಷಣ, ವಿದ್ಯಾವಂತರಿಗೆ ನಗುವಿನ ಸಂಗತಿ,
    ಎಚ್ಚರಿಕೆ: ಇದು ಬುದ್ದಿವಂತರಿಗೆ ಮಾತ್ರ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...