Homeಕರ್ನಾಟಕರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

- Advertisement -
- Advertisement -

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಸಮಿತಿಗೆ ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ಅವರನ್ನು ಯಾವ ಮಾನದಂಡಗಳ ಅಡಿಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬ ಪ್ರಶ್ನೆಗೆ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, “ರೋಹಿತ್‌ ಚಕ್ರತೀರ್ಥ ಹಿನ್ನೆಲೆ ಏನೆಂದು ತಿಳಿಯದೆ ಮಾತನಾಡಬಾರದು, ಅವರೊಬ್ಬ ಐಐಟಿ-ಸಿಇಟಿ ಪ್ರೊಫೆಸರ್” ಎಂದು ಹೇಳಿದ್ದರು.

ಸಚಿವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ದೇಶದಲ್ಲಿ ‘ಸಿಇಟಿ ಪ್ರೊಫೆಸರ್’ ಎಂಬ ಹುದ್ದೆ ಇದೆಯಾ?, ವಾಸ್ತವದಲ್ಲಿ ಚಕ್ರತೀರ್ಥ ಪಡೆದ ಶಿಕ್ಷಣ ಏನು? ಪ್ರೊಫೆಸರ್ ಆಗುವ ಪ್ರಕ್ರಿಯೆ ಅಷ್ಟು ಸುಲಭವೇ? ಎಂಬ ಪ್ರಶ್ನೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಲಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಶಾಲಾ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಹುದ್ದೆಗೆ ನೇಮಕವಾದ ದಿನದಿಂದಲೂ ಅವರ ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಹಿನ್ನೆಲೆ ಸಾಕಷ್ಟು ಪ್ರಶ್ನೆಗೆ ಒಳಗಾಗಿತ್ತು. ಸೋಮವಾರ ಶಿಕ್ಷಣ ಸಚಿವರೇ ನಡೆಸಿದ ಪತ್ರಿಕಾಗೋಷ್ಠಿಯಲ್ಲೂ ಇದೇ ಪ್ರಶ್ನೆಗಳು ಪತ್ರಕರ್ತರು ಕೇಳಿದ್ದರು.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಈ ಪ್ರಶ್ನೆಗಳಿಗೆ ಉತ್ತರಿಸಿದ್ದ ಸಚಿವ ಬಿ ಸಿ ನಾಗೇಶ್, “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ಮುಂದುವರೆದು, “ವಿಷಯ ಗೊತ್ತಿಲ್ಲದೇ ಮಾತನಾಡಿ ಈ ದೇಶದ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ. ಪ್ರೊಫೆಸರ್‌ ಎಂಬುದು ಶಿಕ್ಷಣ ತಜ್ಞರೋ ಅಥವಾ ರೈಲು ನೌಕರರೋ? ಚಕ್ರತೀರ್ಥ ಅವರ ಹಿನ್ನೆಲೆ ಗೊತ್ತಿಲ್ಲದೇ ಪ್ರಶ್ನೆ ಮಾಡಬಾರದು” ಎಂದು ಹೇಳಿದ್ದರು.

ಚಕ್ರತೀರ್ಥ ಪ್ರೊಫೆಸರ್ ಎಂಬುದು ನಿಜವೇ?

ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ನೇಮಕ ಮಾಡುವಾಗ ಶಿಕ್ಷಣ ಇಲಾಖೆ ಅವರ ವಿದ್ಯಾರ್ಹತೆ ಏನು ಎಂಬುದನ್ನು ಸ್ಪಷ್ಟಪಡಿಸಿರಲಿಲ್ಲ. ಅಲ್ಲದೆ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ನಾಗೇಶ್ ತಿಳಿಸಿದ ಮಾಹಿತಿಯೂ ಅಸಮರ್ಪಕವಾಗಿದೆ.

ಐಐಟಿ ಅಂದರೆ ‘ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ’ ಎಂಬುವುದು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ದೇಶದಾದ್ಯಂತ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಐಐಟಿ ಇದೆ.

ಇದನ್ನೂ ಓದಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಆದರೆ ಸಿಇಟಿ ಎಂದರೆ ಕಾಮನ್ ಎಂಟ್ರನ್ಸ್‌ ಟೆಸ್ಟ್ (CET-Common Entrance Test) ಎಂದರ್ಥ. ಅಂದರೆ ಅದೊಂದು ಪ್ರವೇಶ ಪರೀಕ್ಷೆಯಾಗಿದೆ. ಅದೊಂದು ಸಂಸ್ಥೆಯಾಗಲಿ, ಹುದ್ದೆಯಾಗಲಿ ಅಲ್ಲ. ಈ ಪರೀಕ್ಷೆ ಬರೆಯಲು ಸಾಮಾನ್ಯವಾಗಿ ಟ್ಯೂಷನ್‌ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತದೆ. ಇಂತಹ ಟ್ಯೂಷನ್‌ ಕೇಂದ್ರಗಳಿಗೆ ಮಾನ್ಯತೆಯೂ ಇರುವುದಿಲ್ಲ.

ಪರಿಷ್ಕರಣೆ ಸಮಿತಿಗೆ ಆಯ್ಕೆ ಮಾಡಲು ನಿಮ್ಮ ಅರ್ಹತೆಗಳೇನು ಎಂದು ಈ ಹಿಂದೆ ನಾನುಗೌರಿ.ಕಾಂ ಕೇಳಿದ್ದ ಪ್ರಶ್ನೆಗೆ, ರೋಹಿತ್ ಚಕ್ರತೀರ್ಥ ಅವರು, ‘ಅದನ್ನು ಸರ್ಕಾರದ ಜೊತೆಗೆ ಕೇಳಬೇಕು’ ಎಂದು ಉತ್ತರಿಸಿದ್ದರು. ಆದರೆ ಸರ್ಕಾರ ಈಗ, ‘ಚಕ್ರತೀರ್ಥ ಅವರು ಐಐಟಿ-ಸಿಇಟಿ ಪ್ರೊಫೆಸರ್‌’ ಎಂದು ಹೇಳುತ್ತಿದೆ!. ಈ ಬಗ್ಗೆ ಪ್ರತಿಕ್ರಿಯೆಗೆ ನಾನುಗೌರಿ.ಕಾಂ ಚಕ್ರತೀರ್ಥ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ.

ಈ ಮಧ್ಯೆ, ಚಕ್ರತೀರ್ಥ ಅವರು ಯಾವುದಾದರೂ ವಿಷಯದಲ್ಲಿ ವಿಶೇಷ ಪರಿಣಿತಿ ಹೊಂದಿದವರೇ? ವಿದ್ವಾಂಸರೇ? ಎಂಬ ಪ್ರಶ್ನೆಗಳನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅವರ ಬಗ್ಗೆ ಹುಡುಕಿದಾಗಲೂ ಅವರೊಬ್ಬ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿ, ಬರಹಗಾರ ಮತ್ತು ವಿಜ್ಞಾನ ಸಂಬಂಧಿ ವಿಚಾರಗಳ ಲೇಖಕ ಎಂದಷ್ಟೇ ಮಾಹಿತಿ ಇದೆ. ಸ್ವತಃ ರೋಹಿತ್ ಚಕ್ರತೀರ್ಥ ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ತಮ್ಮನ್ನು ಶಿಕ್ಷಕ ಎಂದಷ್ಟೇ ಪರಿಚಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ಅವರ ಬಗ್ಗೆ ತಿಳಿದಿದ್ದ ಕೆಲವರ ಬಳಿ ವಿಚಾರಿಸಲಾಗಿ, ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ರೋಹಿತ್ ಚಕ್ರತೀರ್ಥ ಗಣಿತ ಪಾಠ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ‘ಟೆಸ್ಲಾ ಎಜುಕೇಷನ್’ ಎಂಬ‌ ಆನ್‌ಲೈನ್‌ ಪಾಠ ಮಾಡುವ ಶಿಕ್ಷಣ ಸಂಸ್ಥೆ ಹೊಂದಿರುವ ರೋಹಿತ್ ಚಕ್ರತೀರ್ಥ ಯೂಟ್ಯೂಬ್‌ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಣಿತ ಮಾಡುವ ವಿಡಿಯೋ ಸಹ ಲಭ್ಯವಾಗಿದೆ.

ಗಣಿತ ಪಾಠ ಮಾಡುವವರ ಅಧ್ಯಕ್ಷತೆಯಲ್ಲಿ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರು ಎಲ್ಲಾ ವಿಷಯಗಳಲ್ಲಿ ತಜ್ಞರಾಗಿರುವುದಿಲ್ಲ. ಆದರೆ, ಅದಕ್ಕಾಗಿ ಅವರು ವಿಷಯ ತಜ್ಞರ ಸಮಿತಿಯನ್ನು ರಚಿಸುತ್ತಾರೆ. ಹಿಂದಿನ ಬರಗೂರು ರಾಮಚಂದ್ರಪ್ಪನವರ ಸಮಿತಿ ಅದನ್ನೇ ಮಾಡಿತ್ತು.

ಪ್ರೊಫೆಸರ್ ಗೌರವ ಅಷ್ಟು ಸುಲಭದ್ದೆ?

ಸಚಿವ ನಾಗೇಶ್‌ ಅವರು ಹೇಳಿದಂತೆ ಓರ್ವ ಶಿಕ್ಷಕ ಪ್ರೊಫೆಸರ್ ಸ್ಥಾನಕ್ಕೆ ಏರುವ ಪ್ರಕ್ರಿಯೆಯೂ ಅಷ್ಟು ಸುಲಭದ್ದಲ್ಲ. ಮೊದಲು ಆತ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹಾಯಕ ಪ್ರಾಧ್ಯಾಪಕ (Assistant Professor) ಆಗಿ ಕೆಲಸಕ್ಕೆ ನಿಯುಕ್ತಿಯಾಗಬೇಕು. ನಂತರ ಅವರ ಅನುಭವದ ಆಧಾರದ ಮೇಲೆ ಸಹ ಪ್ರಾಧ್ಯಾಪಕ (Associate Professor ) ಆಗಿ ಬಡ್ತಿ ನೀಡಲಾಗುತ್ತದೆ. ಆನಂತರ, ಅವರ ಸೇವಾನುಭವ ಮತ್ತು ಪ್ರಕಟಿತ ಸಂಶೋಧನಾ ಬರಹಗಳ ಆಧಾರದಲ್ಲಿ ಪ್ರೊಫೆಸರ್ ಎಂಬ ಗೌರವವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘಿಸಿದ ಚಕ್ರತೀರ್ಥ ಸಮಿತಿ; ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಆಗ್ರಹ

ದೇಶದಲ್ಲಿ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಇದೆ. ಒಂದು ವೇಳೆ ಸಚಿವ ನಾಗೇಶ್ ಹೇಳಿದಂತೆ ರೋಹಿತ್ ಚಕ್ರತೀರ್ಥ ಐಐಟಿಯಲ್ಲಿ ಪ್ರೊಫೆಸರ್ ಆಗಿದ್ದರೆ, ಅದು ಯಾವ ಐಐಟಿಯಲ್ಲಿ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕಿದೆ. ಅಥವಾ ಸ್ವತಃ ರೋಹಿತ್ ಚಕ್ರತೀರ್ಥ ಅವರೇ ತಮ್ಮ ವಿದ್ಯಾರ್ಹತೆಯನ್ನು ಬಹಿರಂಗಪಡಿಸಬೇಕಿದೆ. ಸಾರ್ವಜನಿಕವಾಗಿ ಶಿಕ್ಷಣ ಖಾತೆಯ ಸಚಿವರು ಸುಳ್ಳು ಹೇಳಿದ್ದರೆ ಅದು ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗುವ ತಪ್ಪಿನಷ್ಟೇ ದೊಡ್ಡ ಪ್ರಮಾದವಾದ್ದರಿಂದ ಸರ್ಕಾರವು ಮುಜುಗರಕ್ಕೆ ಸಿಲುಕುವ ವಾತಾವರಣ ಸೃಷ್ಟಿಯಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಹಹಾ ಸ ಇ ಟಿ ಒಂದು ಪರೀಕ್ಷೆ, ಐಐಟಿ ಒಂದು ಖಾಸಗಿ ಸಂಸ್ಥೆ ಇದರ ಪ್ರೊಫೇಸರ್ ಅಂದರೆ ನಗುವಿನ ಸಂಗತಿ, ಇಂತಹ ಮಾತುಗಳು ಅನಕ್ಷರಸ್ತರು ಅನಕ್ಷತಸ್ತರಿಗೆ ಮಾತ್ರ ಹೇಳಬಹುದು ನಂಬಿಸಲೂ ಬಹುದು, ಆದರೆ ಜ್ನಾನವಂತರಿಗೆ ಹಾಗೂ ಶಿಕ್ಷಣ, ವಿದ್ಯಾವಂತರಿಗೆ ನಗುವಿನ ಸಂಗತಿ,
    ಎಚ್ಚರಿಕೆ: ಇದು ಬುದ್ದಿವಂತರಿಗೆ ಮಾತ್ರ.

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...