Homeಕರ್ನಾಟಕರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

- Advertisement -
- Advertisement -

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಸಮಿತಿಗೆ ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ಅವರನ್ನು ಯಾವ ಮಾನದಂಡಗಳ ಅಡಿಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬ ಪ್ರಶ್ನೆಗೆ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, “ರೋಹಿತ್‌ ಚಕ್ರತೀರ್ಥ ಹಿನ್ನೆಲೆ ಏನೆಂದು ತಿಳಿಯದೆ ಮಾತನಾಡಬಾರದು, ಅವರೊಬ್ಬ ಐಐಟಿ-ಸಿಇಟಿ ಪ್ರೊಫೆಸರ್” ಎಂದು ಹೇಳಿದ್ದರು.

ಸಚಿವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ದೇಶದಲ್ಲಿ ‘ಸಿಇಟಿ ಪ್ರೊಫೆಸರ್’ ಎಂಬ ಹುದ್ದೆ ಇದೆಯಾ?, ವಾಸ್ತವದಲ್ಲಿ ಚಕ್ರತೀರ್ಥ ಪಡೆದ ಶಿಕ್ಷಣ ಏನು? ಪ್ರೊಫೆಸರ್ ಆಗುವ ಪ್ರಕ್ರಿಯೆ ಅಷ್ಟು ಸುಲಭವೇ? ಎಂಬ ಪ್ರಶ್ನೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಲಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಶಾಲಾ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಹುದ್ದೆಗೆ ನೇಮಕವಾದ ದಿನದಿಂದಲೂ ಅವರ ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಹಿನ್ನೆಲೆ ಸಾಕಷ್ಟು ಪ್ರಶ್ನೆಗೆ ಒಳಗಾಗಿತ್ತು. ಸೋಮವಾರ ಶಿಕ್ಷಣ ಸಚಿವರೇ ನಡೆಸಿದ ಪತ್ರಿಕಾಗೋಷ್ಠಿಯಲ್ಲೂ ಇದೇ ಪ್ರಶ್ನೆಗಳು ಪತ್ರಕರ್ತರು ಕೇಳಿದ್ದರು.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಈ ಪ್ರಶ್ನೆಗಳಿಗೆ ಉತ್ತರಿಸಿದ್ದ ಸಚಿವ ಬಿ ಸಿ ನಾಗೇಶ್, “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ಮುಂದುವರೆದು, “ವಿಷಯ ಗೊತ್ತಿಲ್ಲದೇ ಮಾತನಾಡಿ ಈ ದೇಶದ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ. ಪ್ರೊಫೆಸರ್‌ ಎಂಬುದು ಶಿಕ್ಷಣ ತಜ್ಞರೋ ಅಥವಾ ರೈಲು ನೌಕರರೋ? ಚಕ್ರತೀರ್ಥ ಅವರ ಹಿನ್ನೆಲೆ ಗೊತ್ತಿಲ್ಲದೇ ಪ್ರಶ್ನೆ ಮಾಡಬಾರದು” ಎಂದು ಹೇಳಿದ್ದರು.

ಚಕ್ರತೀರ್ಥ ಪ್ರೊಫೆಸರ್ ಎಂಬುದು ನಿಜವೇ?

ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ನೇಮಕ ಮಾಡುವಾಗ ಶಿಕ್ಷಣ ಇಲಾಖೆ ಅವರ ವಿದ್ಯಾರ್ಹತೆ ಏನು ಎಂಬುದನ್ನು ಸ್ಪಷ್ಟಪಡಿಸಿರಲಿಲ್ಲ. ಅಲ್ಲದೆ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ನಾಗೇಶ್ ತಿಳಿಸಿದ ಮಾಹಿತಿಯೂ ಅಸಮರ್ಪಕವಾಗಿದೆ.

ಐಐಟಿ ಅಂದರೆ ‘ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ’ ಎಂಬುವುದು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ದೇಶದಾದ್ಯಂತ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಐಐಟಿ ಇದೆ.

ಇದನ್ನೂ ಓದಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಆದರೆ ಸಿಇಟಿ ಎಂದರೆ ಕಾಮನ್ ಎಂಟ್ರನ್ಸ್‌ ಟೆಸ್ಟ್ (CET-Common Entrance Test) ಎಂದರ್ಥ. ಅಂದರೆ ಅದೊಂದು ಪ್ರವೇಶ ಪರೀಕ್ಷೆಯಾಗಿದೆ. ಅದೊಂದು ಸಂಸ್ಥೆಯಾಗಲಿ, ಹುದ್ದೆಯಾಗಲಿ ಅಲ್ಲ. ಈ ಪರೀಕ್ಷೆ ಬರೆಯಲು ಸಾಮಾನ್ಯವಾಗಿ ಟ್ಯೂಷನ್‌ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತದೆ. ಇಂತಹ ಟ್ಯೂಷನ್‌ ಕೇಂದ್ರಗಳಿಗೆ ಮಾನ್ಯತೆಯೂ ಇರುವುದಿಲ್ಲ.

ಪರಿಷ್ಕರಣೆ ಸಮಿತಿಗೆ ಆಯ್ಕೆ ಮಾಡಲು ನಿಮ್ಮ ಅರ್ಹತೆಗಳೇನು ಎಂದು ಈ ಹಿಂದೆ ನಾನುಗೌರಿ.ಕಾಂ ಕೇಳಿದ್ದ ಪ್ರಶ್ನೆಗೆ, ರೋಹಿತ್ ಚಕ್ರತೀರ್ಥ ಅವರು, ‘ಅದನ್ನು ಸರ್ಕಾರದ ಜೊತೆಗೆ ಕೇಳಬೇಕು’ ಎಂದು ಉತ್ತರಿಸಿದ್ದರು. ಆದರೆ ಸರ್ಕಾರ ಈಗ, ‘ಚಕ್ರತೀರ್ಥ ಅವರು ಐಐಟಿ-ಸಿಇಟಿ ಪ್ರೊಫೆಸರ್‌’ ಎಂದು ಹೇಳುತ್ತಿದೆ!. ಈ ಬಗ್ಗೆ ಪ್ರತಿಕ್ರಿಯೆಗೆ ನಾನುಗೌರಿ.ಕಾಂ ಚಕ್ರತೀರ್ಥ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ.

ಈ ಮಧ್ಯೆ, ಚಕ್ರತೀರ್ಥ ಅವರು ಯಾವುದಾದರೂ ವಿಷಯದಲ್ಲಿ ವಿಶೇಷ ಪರಿಣಿತಿ ಹೊಂದಿದವರೇ? ವಿದ್ವಾಂಸರೇ? ಎಂಬ ಪ್ರಶ್ನೆಗಳನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅವರ ಬಗ್ಗೆ ಹುಡುಕಿದಾಗಲೂ ಅವರೊಬ್ಬ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿ, ಬರಹಗಾರ ಮತ್ತು ವಿಜ್ಞಾನ ಸಂಬಂಧಿ ವಿಚಾರಗಳ ಲೇಖಕ ಎಂದಷ್ಟೇ ಮಾಹಿತಿ ಇದೆ. ಸ್ವತಃ ರೋಹಿತ್ ಚಕ್ರತೀರ್ಥ ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ತಮ್ಮನ್ನು ಶಿಕ್ಷಕ ಎಂದಷ್ಟೇ ಪರಿಚಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ಅವರ ಬಗ್ಗೆ ತಿಳಿದಿದ್ದ ಕೆಲವರ ಬಳಿ ವಿಚಾರಿಸಲಾಗಿ, ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ರೋಹಿತ್ ಚಕ್ರತೀರ್ಥ ಗಣಿತ ಪಾಠ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ‘ಟೆಸ್ಲಾ ಎಜುಕೇಷನ್’ ಎಂಬ‌ ಆನ್‌ಲೈನ್‌ ಪಾಠ ಮಾಡುವ ಶಿಕ್ಷಣ ಸಂಸ್ಥೆ ಹೊಂದಿರುವ ರೋಹಿತ್ ಚಕ್ರತೀರ್ಥ ಯೂಟ್ಯೂಬ್‌ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಣಿತ ಮಾಡುವ ವಿಡಿಯೋ ಸಹ ಲಭ್ಯವಾಗಿದೆ.

ಗಣಿತ ಪಾಠ ಮಾಡುವವರ ಅಧ್ಯಕ್ಷತೆಯಲ್ಲಿ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರು ಎಲ್ಲಾ ವಿಷಯಗಳಲ್ಲಿ ತಜ್ಞರಾಗಿರುವುದಿಲ್ಲ. ಆದರೆ, ಅದಕ್ಕಾಗಿ ಅವರು ವಿಷಯ ತಜ್ಞರ ಸಮಿತಿಯನ್ನು ರಚಿಸುತ್ತಾರೆ. ಹಿಂದಿನ ಬರಗೂರು ರಾಮಚಂದ್ರಪ್ಪನವರ ಸಮಿತಿ ಅದನ್ನೇ ಮಾಡಿತ್ತು.

ಪ್ರೊಫೆಸರ್ ಗೌರವ ಅಷ್ಟು ಸುಲಭದ್ದೆ?

ಸಚಿವ ನಾಗೇಶ್‌ ಅವರು ಹೇಳಿದಂತೆ ಓರ್ವ ಶಿಕ್ಷಕ ಪ್ರೊಫೆಸರ್ ಸ್ಥಾನಕ್ಕೆ ಏರುವ ಪ್ರಕ್ರಿಯೆಯೂ ಅಷ್ಟು ಸುಲಭದ್ದಲ್ಲ. ಮೊದಲು ಆತ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹಾಯಕ ಪ್ರಾಧ್ಯಾಪಕ (Assistant Professor) ಆಗಿ ಕೆಲಸಕ್ಕೆ ನಿಯುಕ್ತಿಯಾಗಬೇಕು. ನಂತರ ಅವರ ಅನುಭವದ ಆಧಾರದ ಮೇಲೆ ಸಹ ಪ್ರಾಧ್ಯಾಪಕ (Associate Professor ) ಆಗಿ ಬಡ್ತಿ ನೀಡಲಾಗುತ್ತದೆ. ಆನಂತರ, ಅವರ ಸೇವಾನುಭವ ಮತ್ತು ಪ್ರಕಟಿತ ಸಂಶೋಧನಾ ಬರಹಗಳ ಆಧಾರದಲ್ಲಿ ಪ್ರೊಫೆಸರ್ ಎಂಬ ಗೌರವವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘಿಸಿದ ಚಕ್ರತೀರ್ಥ ಸಮಿತಿ; ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಆಗ್ರಹ

ದೇಶದಲ್ಲಿ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಇದೆ. ಒಂದು ವೇಳೆ ಸಚಿವ ನಾಗೇಶ್ ಹೇಳಿದಂತೆ ರೋಹಿತ್ ಚಕ್ರತೀರ್ಥ ಐಐಟಿಯಲ್ಲಿ ಪ್ರೊಫೆಸರ್ ಆಗಿದ್ದರೆ, ಅದು ಯಾವ ಐಐಟಿಯಲ್ಲಿ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕಿದೆ. ಅಥವಾ ಸ್ವತಃ ರೋಹಿತ್ ಚಕ್ರತೀರ್ಥ ಅವರೇ ತಮ್ಮ ವಿದ್ಯಾರ್ಹತೆಯನ್ನು ಬಹಿರಂಗಪಡಿಸಬೇಕಿದೆ. ಸಾರ್ವಜನಿಕವಾಗಿ ಶಿಕ್ಷಣ ಖಾತೆಯ ಸಚಿವರು ಸುಳ್ಳು ಹೇಳಿದ್ದರೆ ಅದು ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗುವ ತಪ್ಪಿನಷ್ಟೇ ದೊಡ್ಡ ಪ್ರಮಾದವಾದ್ದರಿಂದ ಸರ್ಕಾರವು ಮುಜುಗರಕ್ಕೆ ಸಿಲುಕುವ ವಾತಾವರಣ ಸೃಷ್ಟಿಯಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಹಹಾ ಸ ಇ ಟಿ ಒಂದು ಪರೀಕ್ಷೆ, ಐಐಟಿ ಒಂದು ಖಾಸಗಿ ಸಂಸ್ಥೆ ಇದರ ಪ್ರೊಫೇಸರ್ ಅಂದರೆ ನಗುವಿನ ಸಂಗತಿ, ಇಂತಹ ಮಾತುಗಳು ಅನಕ್ಷರಸ್ತರು ಅನಕ್ಷತಸ್ತರಿಗೆ ಮಾತ್ರ ಹೇಳಬಹುದು ನಂಬಿಸಲೂ ಬಹುದು, ಆದರೆ ಜ್ನಾನವಂತರಿಗೆ ಹಾಗೂ ಶಿಕ್ಷಣ, ವಿದ್ಯಾವಂತರಿಗೆ ನಗುವಿನ ಸಂಗತಿ,
    ಎಚ್ಚರಿಕೆ: ಇದು ಬುದ್ದಿವಂತರಿಗೆ ಮಾತ್ರ.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...