Homeಕರ್ನಾಟಕರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

- Advertisement -
- Advertisement -

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಸಮಿತಿಗೆ ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ಅವರನ್ನು ಯಾವ ಮಾನದಂಡಗಳ ಅಡಿಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬ ಪ್ರಶ್ನೆಗೆ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, “ರೋಹಿತ್‌ ಚಕ್ರತೀರ್ಥ ಹಿನ್ನೆಲೆ ಏನೆಂದು ತಿಳಿಯದೆ ಮಾತನಾಡಬಾರದು, ಅವರೊಬ್ಬ ಐಐಟಿ-ಸಿಇಟಿ ಪ್ರೊಫೆಸರ್” ಎಂದು ಹೇಳಿದ್ದರು.

ಸಚಿವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ದೇಶದಲ್ಲಿ ‘ಸಿಇಟಿ ಪ್ರೊಫೆಸರ್’ ಎಂಬ ಹುದ್ದೆ ಇದೆಯಾ?, ವಾಸ್ತವದಲ್ಲಿ ಚಕ್ರತೀರ್ಥ ಪಡೆದ ಶಿಕ್ಷಣ ಏನು? ಪ್ರೊಫೆಸರ್ ಆಗುವ ಪ್ರಕ್ರಿಯೆ ಅಷ್ಟು ಸುಲಭವೇ? ಎಂಬ ಪ್ರಶ್ನೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಲಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಶಾಲಾ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಹುದ್ದೆಗೆ ನೇಮಕವಾದ ದಿನದಿಂದಲೂ ಅವರ ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಹಿನ್ನೆಲೆ ಸಾಕಷ್ಟು ಪ್ರಶ್ನೆಗೆ ಒಳಗಾಗಿತ್ತು. ಸೋಮವಾರ ಶಿಕ್ಷಣ ಸಚಿವರೇ ನಡೆಸಿದ ಪತ್ರಿಕಾಗೋಷ್ಠಿಯಲ್ಲೂ ಇದೇ ಪ್ರಶ್ನೆಗಳು ಪತ್ರಕರ್ತರು ಕೇಳಿದ್ದರು.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಈ ಪ್ರಶ್ನೆಗಳಿಗೆ ಉತ್ತರಿಸಿದ್ದ ಸಚಿವ ಬಿ ಸಿ ನಾಗೇಶ್, “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ಮುಂದುವರೆದು, “ವಿಷಯ ಗೊತ್ತಿಲ್ಲದೇ ಮಾತನಾಡಿ ಈ ದೇಶದ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ. ಪ್ರೊಫೆಸರ್‌ ಎಂಬುದು ಶಿಕ್ಷಣ ತಜ್ಞರೋ ಅಥವಾ ರೈಲು ನೌಕರರೋ? ಚಕ್ರತೀರ್ಥ ಅವರ ಹಿನ್ನೆಲೆ ಗೊತ್ತಿಲ್ಲದೇ ಪ್ರಶ್ನೆ ಮಾಡಬಾರದು” ಎಂದು ಹೇಳಿದ್ದರು.

ಚಕ್ರತೀರ್ಥ ಪ್ರೊಫೆಸರ್ ಎಂಬುದು ನಿಜವೇ?

ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ನೇಮಕ ಮಾಡುವಾಗ ಶಿಕ್ಷಣ ಇಲಾಖೆ ಅವರ ವಿದ್ಯಾರ್ಹತೆ ಏನು ಎಂಬುದನ್ನು ಸ್ಪಷ್ಟಪಡಿಸಿರಲಿಲ್ಲ. ಅಲ್ಲದೆ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ನಾಗೇಶ್ ತಿಳಿಸಿದ ಮಾಹಿತಿಯೂ ಅಸಮರ್ಪಕವಾಗಿದೆ.

ಐಐಟಿ ಅಂದರೆ ‘ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ’ ಎಂಬುವುದು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ದೇಶದಾದ್ಯಂತ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಐಐಟಿ ಇದೆ.

ಇದನ್ನೂ ಓದಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಆದರೆ ಸಿಇಟಿ ಎಂದರೆ ಕಾಮನ್ ಎಂಟ್ರನ್ಸ್‌ ಟೆಸ್ಟ್ (CET-Common Entrance Test) ಎಂದರ್ಥ. ಅಂದರೆ ಅದೊಂದು ಪ್ರವೇಶ ಪರೀಕ್ಷೆಯಾಗಿದೆ. ಅದೊಂದು ಸಂಸ್ಥೆಯಾಗಲಿ, ಹುದ್ದೆಯಾಗಲಿ ಅಲ್ಲ. ಈ ಪರೀಕ್ಷೆ ಬರೆಯಲು ಸಾಮಾನ್ಯವಾಗಿ ಟ್ಯೂಷನ್‌ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತದೆ. ಇಂತಹ ಟ್ಯೂಷನ್‌ ಕೇಂದ್ರಗಳಿಗೆ ಮಾನ್ಯತೆಯೂ ಇರುವುದಿಲ್ಲ.

ಪರಿಷ್ಕರಣೆ ಸಮಿತಿಗೆ ಆಯ್ಕೆ ಮಾಡಲು ನಿಮ್ಮ ಅರ್ಹತೆಗಳೇನು ಎಂದು ಈ ಹಿಂದೆ ನಾನುಗೌರಿ.ಕಾಂ ಕೇಳಿದ್ದ ಪ್ರಶ್ನೆಗೆ, ರೋಹಿತ್ ಚಕ್ರತೀರ್ಥ ಅವರು, ‘ಅದನ್ನು ಸರ್ಕಾರದ ಜೊತೆಗೆ ಕೇಳಬೇಕು’ ಎಂದು ಉತ್ತರಿಸಿದ್ದರು. ಆದರೆ ಸರ್ಕಾರ ಈಗ, ‘ಚಕ್ರತೀರ್ಥ ಅವರು ಐಐಟಿ-ಸಿಇಟಿ ಪ್ರೊಫೆಸರ್‌’ ಎಂದು ಹೇಳುತ್ತಿದೆ!. ಈ ಬಗ್ಗೆ ಪ್ರತಿಕ್ರಿಯೆಗೆ ನಾನುಗೌರಿ.ಕಾಂ ಚಕ್ರತೀರ್ಥ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ.

ಈ ಮಧ್ಯೆ, ಚಕ್ರತೀರ್ಥ ಅವರು ಯಾವುದಾದರೂ ವಿಷಯದಲ್ಲಿ ವಿಶೇಷ ಪರಿಣಿತಿ ಹೊಂದಿದವರೇ? ವಿದ್ವಾಂಸರೇ? ಎಂಬ ಪ್ರಶ್ನೆಗಳನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅವರ ಬಗ್ಗೆ ಹುಡುಕಿದಾಗಲೂ ಅವರೊಬ್ಬ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿ, ಬರಹಗಾರ ಮತ್ತು ವಿಜ್ಞಾನ ಸಂಬಂಧಿ ವಿಚಾರಗಳ ಲೇಖಕ ಎಂದಷ್ಟೇ ಮಾಹಿತಿ ಇದೆ. ಸ್ವತಃ ರೋಹಿತ್ ಚಕ್ರತೀರ್ಥ ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ತಮ್ಮನ್ನು ಶಿಕ್ಷಕ ಎಂದಷ್ಟೇ ಪರಿಚಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ಅವರ ಬಗ್ಗೆ ತಿಳಿದಿದ್ದ ಕೆಲವರ ಬಳಿ ವಿಚಾರಿಸಲಾಗಿ, ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ರೋಹಿತ್ ಚಕ್ರತೀರ್ಥ ಗಣಿತ ಪಾಠ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ‘ಟೆಸ್ಲಾ ಎಜುಕೇಷನ್’ ಎಂಬ‌ ಆನ್‌ಲೈನ್‌ ಪಾಠ ಮಾಡುವ ಶಿಕ್ಷಣ ಸಂಸ್ಥೆ ಹೊಂದಿರುವ ರೋಹಿತ್ ಚಕ್ರತೀರ್ಥ ಯೂಟ್ಯೂಬ್‌ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಣಿತ ಮಾಡುವ ವಿಡಿಯೋ ಸಹ ಲಭ್ಯವಾಗಿದೆ.

ಗಣಿತ ಪಾಠ ಮಾಡುವವರ ಅಧ್ಯಕ್ಷತೆಯಲ್ಲಿ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರು ಎಲ್ಲಾ ವಿಷಯಗಳಲ್ಲಿ ತಜ್ಞರಾಗಿರುವುದಿಲ್ಲ. ಆದರೆ, ಅದಕ್ಕಾಗಿ ಅವರು ವಿಷಯ ತಜ್ಞರ ಸಮಿತಿಯನ್ನು ರಚಿಸುತ್ತಾರೆ. ಹಿಂದಿನ ಬರಗೂರು ರಾಮಚಂದ್ರಪ್ಪನವರ ಸಮಿತಿ ಅದನ್ನೇ ಮಾಡಿತ್ತು.

ಪ್ರೊಫೆಸರ್ ಗೌರವ ಅಷ್ಟು ಸುಲಭದ್ದೆ?

ಸಚಿವ ನಾಗೇಶ್‌ ಅವರು ಹೇಳಿದಂತೆ ಓರ್ವ ಶಿಕ್ಷಕ ಪ್ರೊಫೆಸರ್ ಸ್ಥಾನಕ್ಕೆ ಏರುವ ಪ್ರಕ್ರಿಯೆಯೂ ಅಷ್ಟು ಸುಲಭದ್ದಲ್ಲ. ಮೊದಲು ಆತ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹಾಯಕ ಪ್ರಾಧ್ಯಾಪಕ (Assistant Professor) ಆಗಿ ಕೆಲಸಕ್ಕೆ ನಿಯುಕ್ತಿಯಾಗಬೇಕು. ನಂತರ ಅವರ ಅನುಭವದ ಆಧಾರದ ಮೇಲೆ ಸಹ ಪ್ರಾಧ್ಯಾಪಕ (Associate Professor ) ಆಗಿ ಬಡ್ತಿ ನೀಡಲಾಗುತ್ತದೆ. ಆನಂತರ, ಅವರ ಸೇವಾನುಭವ ಮತ್ತು ಪ್ರಕಟಿತ ಸಂಶೋಧನಾ ಬರಹಗಳ ಆಧಾರದಲ್ಲಿ ಪ್ರೊಫೆಸರ್ ಎಂಬ ಗೌರವವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘಿಸಿದ ಚಕ್ರತೀರ್ಥ ಸಮಿತಿ; ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಆಗ್ರಹ

ದೇಶದಲ್ಲಿ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಇದೆ. ಒಂದು ವೇಳೆ ಸಚಿವ ನಾಗೇಶ್ ಹೇಳಿದಂತೆ ರೋಹಿತ್ ಚಕ್ರತೀರ್ಥ ಐಐಟಿಯಲ್ಲಿ ಪ್ರೊಫೆಸರ್ ಆಗಿದ್ದರೆ, ಅದು ಯಾವ ಐಐಟಿಯಲ್ಲಿ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕಿದೆ. ಅಥವಾ ಸ್ವತಃ ರೋಹಿತ್ ಚಕ್ರತೀರ್ಥ ಅವರೇ ತಮ್ಮ ವಿದ್ಯಾರ್ಹತೆಯನ್ನು ಬಹಿರಂಗಪಡಿಸಬೇಕಿದೆ. ಸಾರ್ವಜನಿಕವಾಗಿ ಶಿಕ್ಷಣ ಖಾತೆಯ ಸಚಿವರು ಸುಳ್ಳು ಹೇಳಿದ್ದರೆ ಅದು ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗುವ ತಪ್ಪಿನಷ್ಟೇ ದೊಡ್ಡ ಪ್ರಮಾದವಾದ್ದರಿಂದ ಸರ್ಕಾರವು ಮುಜುಗರಕ್ಕೆ ಸಿಲುಕುವ ವಾತಾವರಣ ಸೃಷ್ಟಿಯಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಹಹಾ ಸ ಇ ಟಿ ಒಂದು ಪರೀಕ್ಷೆ, ಐಐಟಿ ಒಂದು ಖಾಸಗಿ ಸಂಸ್ಥೆ ಇದರ ಪ್ರೊಫೇಸರ್ ಅಂದರೆ ನಗುವಿನ ಸಂಗತಿ, ಇಂತಹ ಮಾತುಗಳು ಅನಕ್ಷರಸ್ತರು ಅನಕ್ಷತಸ್ತರಿಗೆ ಮಾತ್ರ ಹೇಳಬಹುದು ನಂಬಿಸಲೂ ಬಹುದು, ಆದರೆ ಜ್ನಾನವಂತರಿಗೆ ಹಾಗೂ ಶಿಕ್ಷಣ, ವಿದ್ಯಾವಂತರಿಗೆ ನಗುವಿನ ಸಂಗತಿ,
    ಎಚ್ಚರಿಕೆ: ಇದು ಬುದ್ದಿವಂತರಿಗೆ ಮಾತ್ರ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...