Homeಮುಖಪುಟಕುವೆಂಪು, ನಾಡಗೀತೆಗೆ ಅಪಮಾನಿಸಿದ 'ರೋಹಿತ್ ಚಕ್ರತೀರ್ಥ'ಗೆ ಕುಲಪತಿಗಳಿಂದ ಸನ್ಮಾನ: ತೀವ್ರ ವಿರೋಧ

ಕುವೆಂಪು, ನಾಡಗೀತೆಗೆ ಅಪಮಾನಿಸಿದ ‘ರೋಹಿತ್ ಚಕ್ರತೀರ್ಥ’ಗೆ ಕುಲಪತಿಗಳಿಂದ ಸನ್ಮಾನ: ತೀವ್ರ ವಿರೋಧ

- Advertisement -
- Advertisement -

ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನಿಸಿ, ನಾಡಗೀತೆ ತಿರುಚಿದ ಆರೋಪ ಎದುರಿಸುತ್ತಿರುವ, ವಿವಾದಾತ್ಮಕ ಪಠ್ಯ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥರನ್ನು ಮಂಗಳೂರು ವಿವಿ ಕುಲಪತಿಗಳು ಸನ್ಮಾನಿಸುವುದು ಚರ್ಚೆಗೆ ಗ್ರಾಸವಾಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ.

ಚಿಂತನಗಂಗಾ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜೂನ್ 25ರ ಶನಿವಾರ ಸಂಜೆ 5 ಗಂಟೆಗೆ ಮಂಗಳೂರಿನ ಡೊಂಗರಕೇರಿ ಕೆನರಾ ಹೈಸ್ಕೂಲ್‌ನ ಭುವನೇಂದ್ರ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ‘ನಾಗರಿಕ ಸನ್ಮಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ಕಾರ್ಯಕ್ರಮದಲ್ಲಿ ‘ಭರತಖಂಡದ ಗತವೈಭವ ಮತ್ತು ಅಳಿಸಿಹೋದ ಇತಿಹಾಸ’ ಎಂಬ ವಿಷಯದ ಬಗ್ಗೆ ರೋಹಿತ್ ಚಕ್ರತೀರ್ಥ ಅವರು ವಿಷಯ ಮಂಡಿಸಲಿದ್ದು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಪಿ ಸುಬ್ರಹ್ಮಣ್ಯ ಯಡಪಡಿತ್ತಾಯರು ವಹಿಸಲಿರುವುದಾಗಿ ತಿಳಿದುಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪಗಳು ವ್ಯಕ್ತವಾಗಿವೆ.

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ ಖ್ಯಾತನಾಮರು, ಮಹಾನ್ ಚೇತನಗಳಿಗೆ ಅವಮಾನ ಎಸಗಿರುವ, ನಾಡಗೀತೆಗೆ ಅಪಮಾನ ಎಸಗಿರುವ, ರಾಜ್ಯದಲ್ಲಿ ಸಾರ್ವತ್ರಿಕ ಆಕ್ರೋಶಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಗೆ ಮಂಗಳೂರಿನ ಬಲಪಂಥೀಯ ವೇದಿಕೆಯೊಂದು ಶನಿವಾರ (ಜೂನ್ 25) ನಾಗರಿಕ ಸನ್ಮಾನ ನಡೆಸುತ್ತಿದೆ ಎಂಬ ಮಾಹಿತಿ ತಿಳಿದು ಆಘಾತವಾಯಿತು. ಇಡೀ ಕರ್ನಾಟಕ ಈ ವ್ಯಕ್ತಿಯ ವಿರುದ್ದ ಆಕ್ರೋಶಗೊಂಡಿರುವಾಗ, ಬಸವಣ್ಣ, ಕುವೆಂಪು, ನಾರಾಯಣ ಗುರುಗಳ ಅನುಯಾಯಿಗಳು ಪ್ರತಿಭಟನೆ ನಿರತರಾಗಿರುವ ಸಂದರ್ಭದಲ್ಲಿ ಮಂಗಳೂರಿನಂತಹ ವಿದ್ಯಾವಂತ ಜನರಿರುವ ನಗರದಲ್ಲಿ ಇದು ಘಟಿಸಬಾರದಿತ್ತು. ಅದರಲ್ಲಿಯೂ ನಾಗರಿಕ ಸನ್ಮಾನದ ಸಭಾಧ್ಯಕ್ಷತೆಯನ್ನು ಮಂಗಳೂರು ವಿ ವಿಯ ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರು ವಹಿಸಲಿರುವುದು ಕಂಡು ಮನಸ್ಸು ವಿಷಣ್ಣವಾಯಿತು ಎಂದು ಮಂಗಳೂರಿನ ಯುವ ಹೋರಾಟಗಾರ ಮುನೀರ್ ಕಾಟಿಪಳ್ಳ ಬೇಸರ ವ್ಯಕ್ತಪಡಿಸಿದ್ದಾರೆ.

ಕುವೆಂಪು, ಅಂಬೆಡ್ಕರ್ ರಂತಹ ಮಹಾ ಚೇತನಗಳನ್ನು ಅವಮಾನಿಸುವ, ಅತ್ಯಂತ ಕೊಳಕು ಪದಗಳಿಂದ ನಾಡಿನ ಸಾಹಿತಿ ಬರಹಗಾರರನ್ನು ಟ್ರೋಲ್ ಮಾಡುವುದರಲ್ಲಿ ಕುಖ್ಯಾತಗೊಂಡಿರುವ ವ್ಯಕ್ತಿಯೊಬ್ಬನಿಗೆ ಸನ್ಮಾನ ಮಾಡುವ ಸಭೆಯ ಅಧ್ಯಕ್ಷತೆಯನ್ನು ವಿವಿಯ ಕುಲಪತಿಗಳು ವಹಿಸುತ್ತಾರೆ ಅಂತಾದರೆ ಕನಿಷ್ಟಪಕ್ಷ ಸಾರ್ವಜನಿಕ ಲಜ್ಜೆಯೂ ಈ ನಾಡಿನಲ್ಲಿ ಇಲ್ಲದಾಯಿತೇ ಎಂದು ಚಡಪಡಿಸುವಂತಾಗುತ್ತಿದೆ. ಇದು ಸರಿಯಲ್ಲ. ಮಂಗಳೂರಿನಲ್ಲಿ ಇಂತಹ ಕಾರ್ಯಕ್ರಮ ನಡೆಯುವುದು ಇಡೀ ರಾಜ್ಯದಲ್ಲಿ ನಮ್ಮ ನಗರದ ಘನತೆಗೆ ಕುಂದು ತರುತ್ತದೆ.‌ ಆಯೋಜಕರು ಕಾರ್ಯಕ್ರಮ ಕೈ ಬಿಡಬೇಕು. ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರಾದರು ಈ ಕಾರ್ಯಕ್ರದಲ್ಲಿ ನಾನಿಲ್ಲ ಎಂತ ಹೇಳಬೇಕು. ಅದಾಗಲಿಲ್ಲ ಅಂತಾದರೆ ಮಂಗಳೂರಿನ ಪ್ರಜ್ಞಾವಂತರು, ನಾಗರಿಕ ಸಂಘಟನೆಗಳು ಕಾರ್ಯಕ್ರಮದ ರದ್ದತಿಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪಠ್ಯ ಪರಿಷ್ಕರಣೆಯಲ್ಲಿ ವಿವಿಧ ಮಹಾನ್ ವ್ಯಕ್ತಿಗಳ ಪಾಠವನ್ನು ಕೈಬಿಡಲಾಗಿದೆ, ತಿರುಚಲಾಗಿದೆ ಎಂಬ ಆರೋಪಗಳು ಜೋರಾಗಿ ಕೇಳಿಬರುತ್ತಿವೆ. ಅಲ್ಲದೆ ಆದಿವಾಸಿಗಳನ್ನು ಅವಮಾನಿಸಿದ್ದಾರೆ ಎಂದೂ ಕುವೆಂಪುರವರ ರಚಿಸಿದ ನಾಡಗೀತೆಯನ್ನು ತಿರುಚಿದ್ದಾರೆಂದು ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಾಗಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ಸನ್ಮಾನ ಏರ್ಪಡಿಸುತ್ತಿರುವುದು ವಿರೋಧಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್‌ಗೆ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಏನು ಹೇಳಿದರೂ ಕಾರ್ಯಕ್ರಮವನ್ನಂತೂ ಹೇಗೂ ಆ ಪ್ರತಿಗಾಮಿಗಳು ನಿಲ್ಲಿಸುವುದಿಲ್ಲ. ಕಡೇ ಪಕ್ಷ ಕುಲಪತಿ “ಯಡವಟ್ಟಾಯ”ನಾದರೂ ಹೋಗುವುದನ್ನು ಕೈ ಬಿಡದಿದ್ದಲ್ಲಿ ರಾಜ್ಯದಾದ್ಯಂತ ಹಲವು ಗಣ್ಯರು, ಕಾರ್ಯಕರ್ತರು ಯಾವುದಾದರೂ ಗಾಂಧಿ ಪ್ರತಿಮೆ ಬಳಿ ಸೇರಿ, ಕಪ್ಪು ಪಟ್ಟಿ ಕಟ್ಟಿಕೊಂಡು, “ಯಡವಟ್ಟಾಯ”ನ ಫೋಟೋವನ್ನು ತಲೆಕೆಳಗಾಗಿ ಇಟ್ಕೊಂಡು, ಎರಡು-ಮೂರು ಗಂಟೆ ಕಾಲ ಧರಣಿಯನ್ನಾದರೂ ಮಾಡುವುದು ನಾವು ಮಾಡಬಹುದಾದ ಕನಿಷ್ಠ ಪ್ರತಿಭಟನೆ ಅಂತ ನನ್ನ ಅನ್ನಿಸಿಕೆ.

  2. ಈ ಅಯ್ಯೊಗ್ಯ ಉಪಕುಲಪತಿ ಸಾರ್ವಜನಿಕರ ತೆರಿಗೆ ಹಣದಿಂದ ಸಂಬಳ ಸಾರಿಗೆ ಪಡಿತಾ ಇದ್ದಾನೆ, ಈತನಿಗೆ ಕನಿಷ್ಠ ಜ್ಞಾನವು ಇಲ್ಲವೇ?ನಾಡಿನಾದ್ಯಂತ ಚಕ್ರತೀರ್ಥನ ಮೇಲೆ ಇಷ್ಟು ವಿರೋಧವ್ಯಕ್ತ ಆಗುತ್ತಿರುವ ಈ ಸಮಯದಲ್ಲಿ,ಅದು ಸಾರ್ವಜನಿಕರ ತೆರಿಗೆ ಹಣದಿಂದಆತನಿಗೆ ಸನ್ಮಾನ ಯಾವ ಪುರುಷಾರ್ಥಕ್ಕೆ? ಒಂದು ಪಕ್ಷ ಈ ಕುಲಪತಿಯು ಚಕ್ರತೀರ್ಥನ ಸಮುದಾಯದವನೆ ಆಗಿದ್ದರೆ ಮತ್ತು ಸನ್ಮಾನ ಮಾಡುವ ತೇವಲಿದ್ದರೆ ಆತನ ಸ್ವಂತಹಣದಲ್ಲಿ ಖಾಸಗಿಯಾಗಿ ಮಾಡಿಕೊಳ್ಳಲಿ,

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...