Homeಮುಖಪುಟಕುವೆಂಪು, ನಾಡಗೀತೆಗೆ ಅಪಮಾನಿಸಿದ 'ರೋಹಿತ್ ಚಕ್ರತೀರ್ಥ'ಗೆ ಕುಲಪತಿಗಳಿಂದ ಸನ್ಮಾನ: ತೀವ್ರ ವಿರೋಧ

ಕುವೆಂಪು, ನಾಡಗೀತೆಗೆ ಅಪಮಾನಿಸಿದ ‘ರೋಹಿತ್ ಚಕ್ರತೀರ್ಥ’ಗೆ ಕುಲಪತಿಗಳಿಂದ ಸನ್ಮಾನ: ತೀವ್ರ ವಿರೋಧ

- Advertisement -
- Advertisement -

ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನಿಸಿ, ನಾಡಗೀತೆ ತಿರುಚಿದ ಆರೋಪ ಎದುರಿಸುತ್ತಿರುವ, ವಿವಾದಾತ್ಮಕ ಪಠ್ಯ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥರನ್ನು ಮಂಗಳೂರು ವಿವಿ ಕುಲಪತಿಗಳು ಸನ್ಮಾನಿಸುವುದು ಚರ್ಚೆಗೆ ಗ್ರಾಸವಾಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ.

ಚಿಂತನಗಂಗಾ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜೂನ್ 25ರ ಶನಿವಾರ ಸಂಜೆ 5 ಗಂಟೆಗೆ ಮಂಗಳೂರಿನ ಡೊಂಗರಕೇರಿ ಕೆನರಾ ಹೈಸ್ಕೂಲ್‌ನ ಭುವನೇಂದ್ರ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ‘ನಾಗರಿಕ ಸನ್ಮಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ಕಾರ್ಯಕ್ರಮದಲ್ಲಿ ‘ಭರತಖಂಡದ ಗತವೈಭವ ಮತ್ತು ಅಳಿಸಿಹೋದ ಇತಿಹಾಸ’ ಎಂಬ ವಿಷಯದ ಬಗ್ಗೆ ರೋಹಿತ್ ಚಕ್ರತೀರ್ಥ ಅವರು ವಿಷಯ ಮಂಡಿಸಲಿದ್ದು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಪಿ ಸುಬ್ರಹ್ಮಣ್ಯ ಯಡಪಡಿತ್ತಾಯರು ವಹಿಸಲಿರುವುದಾಗಿ ತಿಳಿದುಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪಗಳು ವ್ಯಕ್ತವಾಗಿವೆ.

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ ಖ್ಯಾತನಾಮರು, ಮಹಾನ್ ಚೇತನಗಳಿಗೆ ಅವಮಾನ ಎಸಗಿರುವ, ನಾಡಗೀತೆಗೆ ಅಪಮಾನ ಎಸಗಿರುವ, ರಾಜ್ಯದಲ್ಲಿ ಸಾರ್ವತ್ರಿಕ ಆಕ್ರೋಶಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಗೆ ಮಂಗಳೂರಿನ ಬಲಪಂಥೀಯ ವೇದಿಕೆಯೊಂದು ಶನಿವಾರ (ಜೂನ್ 25) ನಾಗರಿಕ ಸನ್ಮಾನ ನಡೆಸುತ್ತಿದೆ ಎಂಬ ಮಾಹಿತಿ ತಿಳಿದು ಆಘಾತವಾಯಿತು. ಇಡೀ ಕರ್ನಾಟಕ ಈ ವ್ಯಕ್ತಿಯ ವಿರುದ್ದ ಆಕ್ರೋಶಗೊಂಡಿರುವಾಗ, ಬಸವಣ್ಣ, ಕುವೆಂಪು, ನಾರಾಯಣ ಗುರುಗಳ ಅನುಯಾಯಿಗಳು ಪ್ರತಿಭಟನೆ ನಿರತರಾಗಿರುವ ಸಂದರ್ಭದಲ್ಲಿ ಮಂಗಳೂರಿನಂತಹ ವಿದ್ಯಾವಂತ ಜನರಿರುವ ನಗರದಲ್ಲಿ ಇದು ಘಟಿಸಬಾರದಿತ್ತು. ಅದರಲ್ಲಿಯೂ ನಾಗರಿಕ ಸನ್ಮಾನದ ಸಭಾಧ್ಯಕ್ಷತೆಯನ್ನು ಮಂಗಳೂರು ವಿ ವಿಯ ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರು ವಹಿಸಲಿರುವುದು ಕಂಡು ಮನಸ್ಸು ವಿಷಣ್ಣವಾಯಿತು ಎಂದು ಮಂಗಳೂರಿನ ಯುವ ಹೋರಾಟಗಾರ ಮುನೀರ್ ಕಾಟಿಪಳ್ಳ ಬೇಸರ ವ್ಯಕ್ತಪಡಿಸಿದ್ದಾರೆ.

ಕುವೆಂಪು, ಅಂಬೆಡ್ಕರ್ ರಂತಹ ಮಹಾ ಚೇತನಗಳನ್ನು ಅವಮಾನಿಸುವ, ಅತ್ಯಂತ ಕೊಳಕು ಪದಗಳಿಂದ ನಾಡಿನ ಸಾಹಿತಿ ಬರಹಗಾರರನ್ನು ಟ್ರೋಲ್ ಮಾಡುವುದರಲ್ಲಿ ಕುಖ್ಯಾತಗೊಂಡಿರುವ ವ್ಯಕ್ತಿಯೊಬ್ಬನಿಗೆ ಸನ್ಮಾನ ಮಾಡುವ ಸಭೆಯ ಅಧ್ಯಕ್ಷತೆಯನ್ನು ವಿವಿಯ ಕುಲಪತಿಗಳು ವಹಿಸುತ್ತಾರೆ ಅಂತಾದರೆ ಕನಿಷ್ಟಪಕ್ಷ ಸಾರ್ವಜನಿಕ ಲಜ್ಜೆಯೂ ಈ ನಾಡಿನಲ್ಲಿ ಇಲ್ಲದಾಯಿತೇ ಎಂದು ಚಡಪಡಿಸುವಂತಾಗುತ್ತಿದೆ. ಇದು ಸರಿಯಲ್ಲ. ಮಂಗಳೂರಿನಲ್ಲಿ ಇಂತಹ ಕಾರ್ಯಕ್ರಮ ನಡೆಯುವುದು ಇಡೀ ರಾಜ್ಯದಲ್ಲಿ ನಮ್ಮ ನಗರದ ಘನತೆಗೆ ಕುಂದು ತರುತ್ತದೆ.‌ ಆಯೋಜಕರು ಕಾರ್ಯಕ್ರಮ ಕೈ ಬಿಡಬೇಕು. ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರಾದರು ಈ ಕಾರ್ಯಕ್ರದಲ್ಲಿ ನಾನಿಲ್ಲ ಎಂತ ಹೇಳಬೇಕು. ಅದಾಗಲಿಲ್ಲ ಅಂತಾದರೆ ಮಂಗಳೂರಿನ ಪ್ರಜ್ಞಾವಂತರು, ನಾಗರಿಕ ಸಂಘಟನೆಗಳು ಕಾರ್ಯಕ್ರಮದ ರದ್ದತಿಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪಠ್ಯ ಪರಿಷ್ಕರಣೆಯಲ್ಲಿ ವಿವಿಧ ಮಹಾನ್ ವ್ಯಕ್ತಿಗಳ ಪಾಠವನ್ನು ಕೈಬಿಡಲಾಗಿದೆ, ತಿರುಚಲಾಗಿದೆ ಎಂಬ ಆರೋಪಗಳು ಜೋರಾಗಿ ಕೇಳಿಬರುತ್ತಿವೆ. ಅಲ್ಲದೆ ಆದಿವಾಸಿಗಳನ್ನು ಅವಮಾನಿಸಿದ್ದಾರೆ ಎಂದೂ ಕುವೆಂಪುರವರ ರಚಿಸಿದ ನಾಡಗೀತೆಯನ್ನು ತಿರುಚಿದ್ದಾರೆಂದು ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಾಗಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ಸನ್ಮಾನ ಏರ್ಪಡಿಸುತ್ತಿರುವುದು ವಿರೋಧಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್‌ಗೆ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಏನು ಹೇಳಿದರೂ ಕಾರ್ಯಕ್ರಮವನ್ನಂತೂ ಹೇಗೂ ಆ ಪ್ರತಿಗಾಮಿಗಳು ನಿಲ್ಲಿಸುವುದಿಲ್ಲ. ಕಡೇ ಪಕ್ಷ ಕುಲಪತಿ “ಯಡವಟ್ಟಾಯ”ನಾದರೂ ಹೋಗುವುದನ್ನು ಕೈ ಬಿಡದಿದ್ದಲ್ಲಿ ರಾಜ್ಯದಾದ್ಯಂತ ಹಲವು ಗಣ್ಯರು, ಕಾರ್ಯಕರ್ತರು ಯಾವುದಾದರೂ ಗಾಂಧಿ ಪ್ರತಿಮೆ ಬಳಿ ಸೇರಿ, ಕಪ್ಪು ಪಟ್ಟಿ ಕಟ್ಟಿಕೊಂಡು, “ಯಡವಟ್ಟಾಯ”ನ ಫೋಟೋವನ್ನು ತಲೆಕೆಳಗಾಗಿ ಇಟ್ಕೊಂಡು, ಎರಡು-ಮೂರು ಗಂಟೆ ಕಾಲ ಧರಣಿಯನ್ನಾದರೂ ಮಾಡುವುದು ನಾವು ಮಾಡಬಹುದಾದ ಕನಿಷ್ಠ ಪ್ರತಿಭಟನೆ ಅಂತ ನನ್ನ ಅನ್ನಿಸಿಕೆ.

  2. ಈ ಅಯ್ಯೊಗ್ಯ ಉಪಕುಲಪತಿ ಸಾರ್ವಜನಿಕರ ತೆರಿಗೆ ಹಣದಿಂದ ಸಂಬಳ ಸಾರಿಗೆ ಪಡಿತಾ ಇದ್ದಾನೆ, ಈತನಿಗೆ ಕನಿಷ್ಠ ಜ್ಞಾನವು ಇಲ್ಲವೇ?ನಾಡಿನಾದ್ಯಂತ ಚಕ್ರತೀರ್ಥನ ಮೇಲೆ ಇಷ್ಟು ವಿರೋಧವ್ಯಕ್ತ ಆಗುತ್ತಿರುವ ಈ ಸಮಯದಲ್ಲಿ,ಅದು ಸಾರ್ವಜನಿಕರ ತೆರಿಗೆ ಹಣದಿಂದಆತನಿಗೆ ಸನ್ಮಾನ ಯಾವ ಪುರುಷಾರ್ಥಕ್ಕೆ? ಒಂದು ಪಕ್ಷ ಈ ಕುಲಪತಿಯು ಚಕ್ರತೀರ್ಥನ ಸಮುದಾಯದವನೆ ಆಗಿದ್ದರೆ ಮತ್ತು ಸನ್ಮಾನ ಮಾಡುವ ತೇವಲಿದ್ದರೆ ಆತನ ಸ್ವಂತಹಣದಲ್ಲಿ ಖಾಸಗಿಯಾಗಿ ಮಾಡಿಕೊಳ್ಳಲಿ,

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...