Homeಮುಖಪುಟರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ಎಂದಿದ್ದಾರೆ.

- Advertisement -
- Advertisement -

ರೋಹಿತ್ ಚಕ್ರತೀರ್ಥ ಯಾರು? ಅವರ ಅರ್ಹತೆಯೇನು? ಅವರು ಶಿಕ್ಷಣ ತಜ್ಞರಲ್ಲವಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, “ರೋಹಿತ್ ಚಕ್ರತೀರ್ಥ ಐಐಟಿ ಮತ್ತು ಸಿಇಟಿಗೆ ಪ್ರೊಫೆಸರ್ ಆಗಿದ್ದರು” ಎಂದಿದ್ದಾರೆ. ಶಿಕ್ಷಣ ತಜ್ಞ ಎಂಬುದಕ್ಕೆ ಸರ್ಟಿಫಿಕೇಟ್ ಕೊಡುವವರು ಯಾರು? ಎಂದಿದ್ದಾರೆ.

ಬೆಂಗಳೂರಿನಲ್ಲಿ ಪಠ್ಯ ಪರಷ್ಕರಣೆ ಕುರಿತು ಎದ್ದಿರುವ ವಿವಾದಗಳಿಗೆ ಸ್ಪಷ್ಟೀಕರಣ ನೀಡಿದ ಅವರು, “ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯು ಹಲವಾರು ಪಠ್ಯಗಳನ್ನು ಕೈಬಿಟ್ಟಿದೆ. ಆಗ ಏಕೆ ಯಾರು ಪ್ರಶ್ನಿಸಲಿಲ್ಲ? ಮೈಸೂರು ಮಹರಾಜರ ಬಗ್ಗೆ 5 ಪುಟಗಳ ಪಾಠ ಇತ್ತು, ಅದನ್ನು ತೆಗೆದು ಸಾಲುಗಳಿಗೆ ಇಳಿಸಿತ್ತು. ಅದರ ಬದಲು ಟಿಪ್ಪು ಸುಲ್ತಾನ್ ಪಾಠ ಹಾಕಿದ್ದರು. ಟಿಪ್ಪು ಸುಲ್ತಾನ್ ಒಬ್ಬರೆ ಬ್ರೀಟಿಷರ ವಿರುದ್ಧ ಮಾತನಾಡಿದರೆ?” ಎಂದಿದ್ದಾರೆ.

ನಾವು ಪೆರಿಯಾರ್ ಬಗ್ಗೆ ಇದ್ದ ಪಠ್ಯ ತೆಗೆದಿದ್ದೇವೆ. ಈ ದೇಶದಲ್ಲಿ ರಾಮ ಆದರ್ಶವಾಗಬೇಕೊ, ರಾವಣ ಆದರ್ಶವಾಗಬೇಕೊ? ರಾಮನ ಫೋಟೊಗೆ ಚಪ್ಪಲಿಯಲ್ಲಿ ಹೊಡೆದು, ರಾವಣನನ್ನು ಪೂಜಿಸುವವರ ಬಗ್ಗೆ ನಾವು ನಮ್ಮ ಮಕ್ಕಳಿಗೆ ಓದಿಸಬೇಕಾ? ರಾಮ ವೈದಿಕ ಸಂಸ್ಕೃತಿಯನ್ನು ರಾವಣ ದ್ರಾವಿಡ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ ಎಂದು ಬರೆದಿದ್ದಾರೆ. ಇದನ್ನು ನಾವು ಬೋಧಿಸಬೇಕಾ? ಆದರ್ಶ ಪುರುಷ ರಾಮ ಎಂದಿದ್ದು, ರಾಮರಾಜ್ಯ ಬರಬೇಕು ಎಂದಿದ್ದು ನಾವಲ್ಲ ಗಾಂಧೀಜಿ ಹೇಳಿದ್ದರು ಎಂದರು.

ನಮ್ಮ ಈ ಪಠ್ಯಗಳನ್ನು ಬುದ್ದಿಜೀವಿಗಳು ವಿರೋಧಿಸುತ್ತಾರೆ. ಅವರು ರಾವಣ ವಂಶಸ್ಥರಿಗೆ ಸೇರಿರಬೇಕು. ಕುವೆಂಪು ಬಗ್ಗೆ ಪಾಠ ತೆಗೆದಿಲ್ಲ, ಹಿಂದಿನ ಸರ್ಕಾರ ತೆಗೆದಿತ್ತು. ನಾವು ಸೇರಿಸಿದ್ದೇವೆ ಎಂದರು. ಅಲ್ಲದೆ ಸಾಹಿತಿಗಳ ಜಾತಿ ಹುಡಕಬೇಡಿ, ದಯವಿಟ್ಟು ವಿಷಯದ ಕುರಿತು ಮಾತನಾಡಿ ಎಂದು ಹೇಳಿದ್ದಾರೆ.

ದೇಶಕ್ಕೆ ಹೆಡಗೇವಾರ್ ಕೊಡುಗೆಯೇನು? ಮಕ್ಕಳಿಗೆ ಆರ್‌ಎಸ್‌ಎಸ್‌ ಮನಸ್ಥಿತಿ ತುಂಬುವುದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೆಡಗೇವಾರ್ ವೈದ್ಯರಾದ ನಂತರ ಕ್ರಾಂತಿಕಾರಿಯಾಗಿದ್ದರು. ಅವರು ದೇಶಕ್ಕೆ ವೈದ್ಯನಂತೆ ಕೆಲಸ ಮಾಡಿದರು. ಕೊಲ್ಕತ್ತಾದಲ್ಲಿ ಹೋರಾಟ ಮಾಡಿದ್ದರು. ಕಾಂಗ್ರೆಸ್ ಸಮಿತಿಯಲ್ಲಿದ್ದರು. ಆದರೆ ಯಾವಾಗ ಖಿಲಾಫತ್ ಚಳವಳಿ ಶುರುವಾಯಿತೊ ಆಗ ಹೆಡಗೇವಾರ್ ಹೊರಬಂದರು. ಆಗ ಭಾರತ ಧ್ವಜ ಇಲ್ಲ ಕಾರಣ ಭಗವಾಧ್ವಜವನ್ನು ಬೆಂಬಲಿಸಿದ್ದರು” ಎಂದರು.

ಇದನ್ನೂ ಓದಿ: ಬ್ರಾಹ್ಮಣರ ಪಠ್ಯಗಳನ್ನು ಕನ್ನಡ ಮಕ್ಕಳು ಏಕೆ ಓದಬೇಕು?

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ನಾವು ಎಲ್ಲಿಯೂ ಮಕ್ಕಳಿಗೆ ಜಾತಿ ಪರಿಚಯ ಮಾಡಿಕೊಡುತ್ತಿಲ್ಲ ಎಂದರು.

ಪ್ರತಿ ದಿನ ಪಿಡಿಎಫ್‌ ಪುಸ್ತಕ ಬದಲಿಸುತ್ತಿದ್ದೇವೆ. ಪಿಡಿಎಫ್‌ ಅನ್ನು ಯಾರು ಬೇಕಾದರೂ ಮಾಡಬಹುದು. ಪ್ರಿಂಟ್ ಆದಮೇಲಷ್ಟೆ ಅದು ಫೈನಲ್ ಆಗಿರುತ್ತದೆ. 78% ಪುಸ್ತಕ ಎಲ್ಲರಿಗೂ ತಲುಪಿದೆ. ಪರಿಷ್ಕರಣೆ ಆಗಿರುವುದನ್ನು ಓದಿ, ತಪ್ಪಿದ್ದರೆ ನಮಗೆ ತಿಳಿಸಿ. ಮುಂದಿ ವರ್ಷದಿಂದ ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಸೂಲಿಬೆಲೆ ಮಾತ್ರವಲ್ಲ, ಕಲ್ಲಡ್ಕ ಭಟ್ಟ, ಹೋರಿ ಸ್ವಾಮಿ, ಮಧುಗಿರಿ ಮೋದಿ, ಸೀಟಿ ರವಿ ಮುಂತಾದವರ ಭಾಷಣಗಳನ್ನೂ ಸೇರಿಸಿ. ಅದು ನಿಮ್ಮ ಯೋಗ್ಯತೆಗೆ ತಕ್ಕಂತಿದೆ. ಆದರೆ ಅದನ್ನು ನಿಮ್ಮ ಮನೆ ಮಕ್ಕಳಿಗೆ ಮಾತ್ರ ಓದಿಸಿ.

  2. ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವವರು ಹೊಣೆ ಗರಿಕೆಯಿಂದ ಮಾತನಾಡುವುದು .ಆದರೆ ಇವರ ಮಾತು ಕೇಳಿದರೆ ಟೀಕೆಗಳಿಗೆ ಅವಕಾಶ ಇಲ್ಲ
    ಇದು ಒಂದು ದೊಡ್ಡ ಸಮಸ್ಯೆಯೇ ಸರಿ.

  3. ಸ್ವಾಮೀ.. ತಾವು ಆರ್ ಎಸ್ ಎಸ್ ಭಕ್ತ ಅನ್ನುವುದು ಜಗತ್ತಿಗೆ ಗೊತ್ತಿದೆ… ಹೆಡ್ಗೆವಾರ್ ಅವರನ್ನ ನೀವು ಬೆಂಬಲಿಸದೆ ಇರ್ತೀರಾ… ಬೈಠಕ್ ನಲ್ಲಿ ಯಾವ್ ಯಾವ ತರಹ ಭೋದನೆ ಮಾಡ್ತೀರಾ ಅದನ್ನೂ ಮಕ್ಕಳಿಗೆ ಹೇಳಿಬಿಡಿ… ಶಿವಾಜಿ ಆಟದಲ್ಲಿ ಒಬ್ಬನನ್ನ ಔರಂಗಜೇಬನನ್ನ ಮಾಡಿ. ಎಲ್ಲರೂ ಕೂಡಿ ಹೊಡಿಯೋ ಆಟ ಆಡಿಸಿ… ಥೂ ನಿಮ್ಮ ….. ನೀವೂ ಒಬ್ಬ ಶಿಕ್ಷಣ ಸಚಿವರಾ…

  4. ಎಳೆಯ ವಯಸ್ಸಿನ ಮಕ್ಕಳ ಮೆದುಳನ್ನು ತೊಳೆಯಬೇಡಿ ಸ್ವಾಮಿ, ಪುನಃ ಸಮಾಜವನ್ನು ಇಬ್ಭಾಗ ಮಾಡಬೇಡಿ, ಜನರ ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಟ್ಟುಕೊಳ್ಳಲು ಕೋಮುವಾದಿ ಘರ್ಷಣೆಗೆ ಎಡೆ ಮಾಡಿಕೊಡುವಂತಹ ಹಲವಾರು ಪ್ರಸಂಗ ನಿರ್ವಹಣೆಯಲ್ಲಿ ವಿಫಲ ಆಯಿತು. ಇವರ ಯಜ್ಞ ಯಾಗಾದಿಗಳ ಬಗ್ಗೆ ಕಲಿತು ಮಕ್ಕಳು ಮಾಡುವುದಾದ್ರೂ ಏನು, ಅದರ ಬದಲಿಗೆ ಸಮಾಜಕ್ಕೆ ಒಳಿತಾಗುವ, ಧರ್ಮ ಜಾತಿಗಳನ್ನು ಮೀರಿ ಭಾವೈಕ್ಯತೆ ಬೆಳೆಸುವಂತ ಪಠ್ಯಕ್ರಮ ತರಲಿ,

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...