Homeಮುಖಪುಟರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ಎಂದಿದ್ದಾರೆ.

- Advertisement -
- Advertisement -

ರೋಹಿತ್ ಚಕ್ರತೀರ್ಥ ಯಾರು? ಅವರ ಅರ್ಹತೆಯೇನು? ಅವರು ಶಿಕ್ಷಣ ತಜ್ಞರಲ್ಲವಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, “ರೋಹಿತ್ ಚಕ್ರತೀರ್ಥ ಐಐಟಿ ಮತ್ತು ಸಿಇಟಿಗೆ ಪ್ರೊಫೆಸರ್ ಆಗಿದ್ದರು” ಎಂದಿದ್ದಾರೆ. ಶಿಕ್ಷಣ ತಜ್ಞ ಎಂಬುದಕ್ಕೆ ಸರ್ಟಿಫಿಕೇಟ್ ಕೊಡುವವರು ಯಾರು? ಎಂದಿದ್ದಾರೆ.

ಬೆಂಗಳೂರಿನಲ್ಲಿ ಪಠ್ಯ ಪರಷ್ಕರಣೆ ಕುರಿತು ಎದ್ದಿರುವ ವಿವಾದಗಳಿಗೆ ಸ್ಪಷ್ಟೀಕರಣ ನೀಡಿದ ಅವರು, “ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯು ಹಲವಾರು ಪಠ್ಯಗಳನ್ನು ಕೈಬಿಟ್ಟಿದೆ. ಆಗ ಏಕೆ ಯಾರು ಪ್ರಶ್ನಿಸಲಿಲ್ಲ? ಮೈಸೂರು ಮಹರಾಜರ ಬಗ್ಗೆ 5 ಪುಟಗಳ ಪಾಠ ಇತ್ತು, ಅದನ್ನು ತೆಗೆದು ಸಾಲುಗಳಿಗೆ ಇಳಿಸಿತ್ತು. ಅದರ ಬದಲು ಟಿಪ್ಪು ಸುಲ್ತಾನ್ ಪಾಠ ಹಾಕಿದ್ದರು. ಟಿಪ್ಪು ಸುಲ್ತಾನ್ ಒಬ್ಬರೆ ಬ್ರೀಟಿಷರ ವಿರುದ್ಧ ಮಾತನಾಡಿದರೆ?” ಎಂದಿದ್ದಾರೆ.

ನಾವು ಪೆರಿಯಾರ್ ಬಗ್ಗೆ ಇದ್ದ ಪಠ್ಯ ತೆಗೆದಿದ್ದೇವೆ. ಈ ದೇಶದಲ್ಲಿ ರಾಮ ಆದರ್ಶವಾಗಬೇಕೊ, ರಾವಣ ಆದರ್ಶವಾಗಬೇಕೊ? ರಾಮನ ಫೋಟೊಗೆ ಚಪ್ಪಲಿಯಲ್ಲಿ ಹೊಡೆದು, ರಾವಣನನ್ನು ಪೂಜಿಸುವವರ ಬಗ್ಗೆ ನಾವು ನಮ್ಮ ಮಕ್ಕಳಿಗೆ ಓದಿಸಬೇಕಾ? ರಾಮ ವೈದಿಕ ಸಂಸ್ಕೃತಿಯನ್ನು ರಾವಣ ದ್ರಾವಿಡ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ ಎಂದು ಬರೆದಿದ್ದಾರೆ. ಇದನ್ನು ನಾವು ಬೋಧಿಸಬೇಕಾ? ಆದರ್ಶ ಪುರುಷ ರಾಮ ಎಂದಿದ್ದು, ರಾಮರಾಜ್ಯ ಬರಬೇಕು ಎಂದಿದ್ದು ನಾವಲ್ಲ ಗಾಂಧೀಜಿ ಹೇಳಿದ್ದರು ಎಂದರು.

ನಮ್ಮ ಈ ಪಠ್ಯಗಳನ್ನು ಬುದ್ದಿಜೀವಿಗಳು ವಿರೋಧಿಸುತ್ತಾರೆ. ಅವರು ರಾವಣ ವಂಶಸ್ಥರಿಗೆ ಸೇರಿರಬೇಕು. ಕುವೆಂಪು ಬಗ್ಗೆ ಪಾಠ ತೆಗೆದಿಲ್ಲ, ಹಿಂದಿನ ಸರ್ಕಾರ ತೆಗೆದಿತ್ತು. ನಾವು ಸೇರಿಸಿದ್ದೇವೆ ಎಂದರು. ಅಲ್ಲದೆ ಸಾಹಿತಿಗಳ ಜಾತಿ ಹುಡಕಬೇಡಿ, ದಯವಿಟ್ಟು ವಿಷಯದ ಕುರಿತು ಮಾತನಾಡಿ ಎಂದು ಹೇಳಿದ್ದಾರೆ.

ದೇಶಕ್ಕೆ ಹೆಡಗೇವಾರ್ ಕೊಡುಗೆಯೇನು? ಮಕ್ಕಳಿಗೆ ಆರ್‌ಎಸ್‌ಎಸ್‌ ಮನಸ್ಥಿತಿ ತುಂಬುವುದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೆಡಗೇವಾರ್ ವೈದ್ಯರಾದ ನಂತರ ಕ್ರಾಂತಿಕಾರಿಯಾಗಿದ್ದರು. ಅವರು ದೇಶಕ್ಕೆ ವೈದ್ಯನಂತೆ ಕೆಲಸ ಮಾಡಿದರು. ಕೊಲ್ಕತ್ತಾದಲ್ಲಿ ಹೋರಾಟ ಮಾಡಿದ್ದರು. ಕಾಂಗ್ರೆಸ್ ಸಮಿತಿಯಲ್ಲಿದ್ದರು. ಆದರೆ ಯಾವಾಗ ಖಿಲಾಫತ್ ಚಳವಳಿ ಶುರುವಾಯಿತೊ ಆಗ ಹೆಡಗೇವಾರ್ ಹೊರಬಂದರು. ಆಗ ಭಾರತ ಧ್ವಜ ಇಲ್ಲ ಕಾರಣ ಭಗವಾಧ್ವಜವನ್ನು ಬೆಂಬಲಿಸಿದ್ದರು” ಎಂದರು.

ಇದನ್ನೂ ಓದಿ: ಬ್ರಾಹ್ಮಣರ ಪಠ್ಯಗಳನ್ನು ಕನ್ನಡ ಮಕ್ಕಳು ಏಕೆ ಓದಬೇಕು?

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ನಾವು ಎಲ್ಲಿಯೂ ಮಕ್ಕಳಿಗೆ ಜಾತಿ ಪರಿಚಯ ಮಾಡಿಕೊಡುತ್ತಿಲ್ಲ ಎಂದರು.

ಪ್ರತಿ ದಿನ ಪಿಡಿಎಫ್‌ ಪುಸ್ತಕ ಬದಲಿಸುತ್ತಿದ್ದೇವೆ. ಪಿಡಿಎಫ್‌ ಅನ್ನು ಯಾರು ಬೇಕಾದರೂ ಮಾಡಬಹುದು. ಪ್ರಿಂಟ್ ಆದಮೇಲಷ್ಟೆ ಅದು ಫೈನಲ್ ಆಗಿರುತ್ತದೆ. 78% ಪುಸ್ತಕ ಎಲ್ಲರಿಗೂ ತಲುಪಿದೆ. ಪರಿಷ್ಕರಣೆ ಆಗಿರುವುದನ್ನು ಓದಿ, ತಪ್ಪಿದ್ದರೆ ನಮಗೆ ತಿಳಿಸಿ. ಮುಂದಿ ವರ್ಷದಿಂದ ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಸೂಲಿಬೆಲೆ ಮಾತ್ರವಲ್ಲ, ಕಲ್ಲಡ್ಕ ಭಟ್ಟ, ಹೋರಿ ಸ್ವಾಮಿ, ಮಧುಗಿರಿ ಮೋದಿ, ಸೀಟಿ ರವಿ ಮುಂತಾದವರ ಭಾಷಣಗಳನ್ನೂ ಸೇರಿಸಿ. ಅದು ನಿಮ್ಮ ಯೋಗ್ಯತೆಗೆ ತಕ್ಕಂತಿದೆ. ಆದರೆ ಅದನ್ನು ನಿಮ್ಮ ಮನೆ ಮಕ್ಕಳಿಗೆ ಮಾತ್ರ ಓದಿಸಿ.

  2. ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವವರು ಹೊಣೆ ಗರಿಕೆಯಿಂದ ಮಾತನಾಡುವುದು .ಆದರೆ ಇವರ ಮಾತು ಕೇಳಿದರೆ ಟೀಕೆಗಳಿಗೆ ಅವಕಾಶ ಇಲ್ಲ
    ಇದು ಒಂದು ದೊಡ್ಡ ಸಮಸ್ಯೆಯೇ ಸರಿ.

  3. ಸ್ವಾಮೀ.. ತಾವು ಆರ್ ಎಸ್ ಎಸ್ ಭಕ್ತ ಅನ್ನುವುದು ಜಗತ್ತಿಗೆ ಗೊತ್ತಿದೆ… ಹೆಡ್ಗೆವಾರ್ ಅವರನ್ನ ನೀವು ಬೆಂಬಲಿಸದೆ ಇರ್ತೀರಾ… ಬೈಠಕ್ ನಲ್ಲಿ ಯಾವ್ ಯಾವ ತರಹ ಭೋದನೆ ಮಾಡ್ತೀರಾ ಅದನ್ನೂ ಮಕ್ಕಳಿಗೆ ಹೇಳಿಬಿಡಿ… ಶಿವಾಜಿ ಆಟದಲ್ಲಿ ಒಬ್ಬನನ್ನ ಔರಂಗಜೇಬನನ್ನ ಮಾಡಿ. ಎಲ್ಲರೂ ಕೂಡಿ ಹೊಡಿಯೋ ಆಟ ಆಡಿಸಿ… ಥೂ ನಿಮ್ಮ ….. ನೀವೂ ಒಬ್ಬ ಶಿಕ್ಷಣ ಸಚಿವರಾ…

  4. ಎಳೆಯ ವಯಸ್ಸಿನ ಮಕ್ಕಳ ಮೆದುಳನ್ನು ತೊಳೆಯಬೇಡಿ ಸ್ವಾಮಿ, ಪುನಃ ಸಮಾಜವನ್ನು ಇಬ್ಭಾಗ ಮಾಡಬೇಡಿ, ಜನರ ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಟ್ಟುಕೊಳ್ಳಲು ಕೋಮುವಾದಿ ಘರ್ಷಣೆಗೆ ಎಡೆ ಮಾಡಿಕೊಡುವಂತಹ ಹಲವಾರು ಪ್ರಸಂಗ ನಿರ್ವಹಣೆಯಲ್ಲಿ ವಿಫಲ ಆಯಿತು. ಇವರ ಯಜ್ಞ ಯಾಗಾದಿಗಳ ಬಗ್ಗೆ ಕಲಿತು ಮಕ್ಕಳು ಮಾಡುವುದಾದ್ರೂ ಏನು, ಅದರ ಬದಲಿಗೆ ಸಮಾಜಕ್ಕೆ ಒಳಿತಾಗುವ, ಧರ್ಮ ಜಾತಿಗಳನ್ನು ಮೀರಿ ಭಾವೈಕ್ಯತೆ ಬೆಳೆಸುವಂತ ಪಠ್ಯಕ್ರಮ ತರಲಿ,

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...