Homeಮುಖಪುಟರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ಎಂದಿದ್ದಾರೆ.

- Advertisement -
- Advertisement -

ರೋಹಿತ್ ಚಕ್ರತೀರ್ಥ ಯಾರು? ಅವರ ಅರ್ಹತೆಯೇನು? ಅವರು ಶಿಕ್ಷಣ ತಜ್ಞರಲ್ಲವಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, “ರೋಹಿತ್ ಚಕ್ರತೀರ್ಥ ಐಐಟಿ ಮತ್ತು ಸಿಇಟಿಗೆ ಪ್ರೊಫೆಸರ್ ಆಗಿದ್ದರು” ಎಂದಿದ್ದಾರೆ. ಶಿಕ್ಷಣ ತಜ್ಞ ಎಂಬುದಕ್ಕೆ ಸರ್ಟಿಫಿಕೇಟ್ ಕೊಡುವವರು ಯಾರು? ಎಂದಿದ್ದಾರೆ.

ಬೆಂಗಳೂರಿನಲ್ಲಿ ಪಠ್ಯ ಪರಷ್ಕರಣೆ ಕುರಿತು ಎದ್ದಿರುವ ವಿವಾದಗಳಿಗೆ ಸ್ಪಷ್ಟೀಕರಣ ನೀಡಿದ ಅವರು, “ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯು ಹಲವಾರು ಪಠ್ಯಗಳನ್ನು ಕೈಬಿಟ್ಟಿದೆ. ಆಗ ಏಕೆ ಯಾರು ಪ್ರಶ್ನಿಸಲಿಲ್ಲ? ಮೈಸೂರು ಮಹರಾಜರ ಬಗ್ಗೆ 5 ಪುಟಗಳ ಪಾಠ ಇತ್ತು, ಅದನ್ನು ತೆಗೆದು ಸಾಲುಗಳಿಗೆ ಇಳಿಸಿತ್ತು. ಅದರ ಬದಲು ಟಿಪ್ಪು ಸುಲ್ತಾನ್ ಪಾಠ ಹಾಕಿದ್ದರು. ಟಿಪ್ಪು ಸುಲ್ತಾನ್ ಒಬ್ಬರೆ ಬ್ರೀಟಿಷರ ವಿರುದ್ಧ ಮಾತನಾಡಿದರೆ?” ಎಂದಿದ್ದಾರೆ.

ನಾವು ಪೆರಿಯಾರ್ ಬಗ್ಗೆ ಇದ್ದ ಪಠ್ಯ ತೆಗೆದಿದ್ದೇವೆ. ಈ ದೇಶದಲ್ಲಿ ರಾಮ ಆದರ್ಶವಾಗಬೇಕೊ, ರಾವಣ ಆದರ್ಶವಾಗಬೇಕೊ? ರಾಮನ ಫೋಟೊಗೆ ಚಪ್ಪಲಿಯಲ್ಲಿ ಹೊಡೆದು, ರಾವಣನನ್ನು ಪೂಜಿಸುವವರ ಬಗ್ಗೆ ನಾವು ನಮ್ಮ ಮಕ್ಕಳಿಗೆ ಓದಿಸಬೇಕಾ? ರಾಮ ವೈದಿಕ ಸಂಸ್ಕೃತಿಯನ್ನು ರಾವಣ ದ್ರಾವಿಡ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ ಎಂದು ಬರೆದಿದ್ದಾರೆ. ಇದನ್ನು ನಾವು ಬೋಧಿಸಬೇಕಾ? ಆದರ್ಶ ಪುರುಷ ರಾಮ ಎಂದಿದ್ದು, ರಾಮರಾಜ್ಯ ಬರಬೇಕು ಎಂದಿದ್ದು ನಾವಲ್ಲ ಗಾಂಧೀಜಿ ಹೇಳಿದ್ದರು ಎಂದರು.

ನಮ್ಮ ಈ ಪಠ್ಯಗಳನ್ನು ಬುದ್ದಿಜೀವಿಗಳು ವಿರೋಧಿಸುತ್ತಾರೆ. ಅವರು ರಾವಣ ವಂಶಸ್ಥರಿಗೆ ಸೇರಿರಬೇಕು. ಕುವೆಂಪು ಬಗ್ಗೆ ಪಾಠ ತೆಗೆದಿಲ್ಲ, ಹಿಂದಿನ ಸರ್ಕಾರ ತೆಗೆದಿತ್ತು. ನಾವು ಸೇರಿಸಿದ್ದೇವೆ ಎಂದರು. ಅಲ್ಲದೆ ಸಾಹಿತಿಗಳ ಜಾತಿ ಹುಡಕಬೇಡಿ, ದಯವಿಟ್ಟು ವಿಷಯದ ಕುರಿತು ಮಾತನಾಡಿ ಎಂದು ಹೇಳಿದ್ದಾರೆ.

ದೇಶಕ್ಕೆ ಹೆಡಗೇವಾರ್ ಕೊಡುಗೆಯೇನು? ಮಕ್ಕಳಿಗೆ ಆರ್‌ಎಸ್‌ಎಸ್‌ ಮನಸ್ಥಿತಿ ತುಂಬುವುದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೆಡಗೇವಾರ್ ವೈದ್ಯರಾದ ನಂತರ ಕ್ರಾಂತಿಕಾರಿಯಾಗಿದ್ದರು. ಅವರು ದೇಶಕ್ಕೆ ವೈದ್ಯನಂತೆ ಕೆಲಸ ಮಾಡಿದರು. ಕೊಲ್ಕತ್ತಾದಲ್ಲಿ ಹೋರಾಟ ಮಾಡಿದ್ದರು. ಕಾಂಗ್ರೆಸ್ ಸಮಿತಿಯಲ್ಲಿದ್ದರು. ಆದರೆ ಯಾವಾಗ ಖಿಲಾಫತ್ ಚಳವಳಿ ಶುರುವಾಯಿತೊ ಆಗ ಹೆಡಗೇವಾರ್ ಹೊರಬಂದರು. ಆಗ ಭಾರತ ಧ್ವಜ ಇಲ್ಲ ಕಾರಣ ಭಗವಾಧ್ವಜವನ್ನು ಬೆಂಬಲಿಸಿದ್ದರು” ಎಂದರು.

ಇದನ್ನೂ ಓದಿ: ಬ್ರಾಹ್ಮಣರ ಪಠ್ಯಗಳನ್ನು ಕನ್ನಡ ಮಕ್ಕಳು ಏಕೆ ಓದಬೇಕು?

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ನಾವು ಎಲ್ಲಿಯೂ ಮಕ್ಕಳಿಗೆ ಜಾತಿ ಪರಿಚಯ ಮಾಡಿಕೊಡುತ್ತಿಲ್ಲ ಎಂದರು.

ಪ್ರತಿ ದಿನ ಪಿಡಿಎಫ್‌ ಪುಸ್ತಕ ಬದಲಿಸುತ್ತಿದ್ದೇವೆ. ಪಿಡಿಎಫ್‌ ಅನ್ನು ಯಾರು ಬೇಕಾದರೂ ಮಾಡಬಹುದು. ಪ್ರಿಂಟ್ ಆದಮೇಲಷ್ಟೆ ಅದು ಫೈನಲ್ ಆಗಿರುತ್ತದೆ. 78% ಪುಸ್ತಕ ಎಲ್ಲರಿಗೂ ತಲುಪಿದೆ. ಪರಿಷ್ಕರಣೆ ಆಗಿರುವುದನ್ನು ಓದಿ, ತಪ್ಪಿದ್ದರೆ ನಮಗೆ ತಿಳಿಸಿ. ಮುಂದಿ ವರ್ಷದಿಂದ ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಸೂಲಿಬೆಲೆ ಮಾತ್ರವಲ್ಲ, ಕಲ್ಲಡ್ಕ ಭಟ್ಟ, ಹೋರಿ ಸ್ವಾಮಿ, ಮಧುಗಿರಿ ಮೋದಿ, ಸೀಟಿ ರವಿ ಮುಂತಾದವರ ಭಾಷಣಗಳನ್ನೂ ಸೇರಿಸಿ. ಅದು ನಿಮ್ಮ ಯೋಗ್ಯತೆಗೆ ತಕ್ಕಂತಿದೆ. ಆದರೆ ಅದನ್ನು ನಿಮ್ಮ ಮನೆ ಮಕ್ಕಳಿಗೆ ಮಾತ್ರ ಓದಿಸಿ.

  2. ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವವರು ಹೊಣೆ ಗರಿಕೆಯಿಂದ ಮಾತನಾಡುವುದು .ಆದರೆ ಇವರ ಮಾತು ಕೇಳಿದರೆ ಟೀಕೆಗಳಿಗೆ ಅವಕಾಶ ಇಲ್ಲ
    ಇದು ಒಂದು ದೊಡ್ಡ ಸಮಸ್ಯೆಯೇ ಸರಿ.

  3. ಸ್ವಾಮೀ.. ತಾವು ಆರ್ ಎಸ್ ಎಸ್ ಭಕ್ತ ಅನ್ನುವುದು ಜಗತ್ತಿಗೆ ಗೊತ್ತಿದೆ… ಹೆಡ್ಗೆವಾರ್ ಅವರನ್ನ ನೀವು ಬೆಂಬಲಿಸದೆ ಇರ್ತೀರಾ… ಬೈಠಕ್ ನಲ್ಲಿ ಯಾವ್ ಯಾವ ತರಹ ಭೋದನೆ ಮಾಡ್ತೀರಾ ಅದನ್ನೂ ಮಕ್ಕಳಿಗೆ ಹೇಳಿಬಿಡಿ… ಶಿವಾಜಿ ಆಟದಲ್ಲಿ ಒಬ್ಬನನ್ನ ಔರಂಗಜೇಬನನ್ನ ಮಾಡಿ. ಎಲ್ಲರೂ ಕೂಡಿ ಹೊಡಿಯೋ ಆಟ ಆಡಿಸಿ… ಥೂ ನಿಮ್ಮ ….. ನೀವೂ ಒಬ್ಬ ಶಿಕ್ಷಣ ಸಚಿವರಾ…

  4. ಎಳೆಯ ವಯಸ್ಸಿನ ಮಕ್ಕಳ ಮೆದುಳನ್ನು ತೊಳೆಯಬೇಡಿ ಸ್ವಾಮಿ, ಪುನಃ ಸಮಾಜವನ್ನು ಇಬ್ಭಾಗ ಮಾಡಬೇಡಿ, ಜನರ ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಟ್ಟುಕೊಳ್ಳಲು ಕೋಮುವಾದಿ ಘರ್ಷಣೆಗೆ ಎಡೆ ಮಾಡಿಕೊಡುವಂತಹ ಹಲವಾರು ಪ್ರಸಂಗ ನಿರ್ವಹಣೆಯಲ್ಲಿ ವಿಫಲ ಆಯಿತು. ಇವರ ಯಜ್ಞ ಯಾಗಾದಿಗಳ ಬಗ್ಗೆ ಕಲಿತು ಮಕ್ಕಳು ಮಾಡುವುದಾದ್ರೂ ಏನು, ಅದರ ಬದಲಿಗೆ ಸಮಾಜಕ್ಕೆ ಒಳಿತಾಗುವ, ಧರ್ಮ ಜಾತಿಗಳನ್ನು ಮೀರಿ ಭಾವೈಕ್ಯತೆ ಬೆಳೆಸುವಂತ ಪಠ್ಯಕ್ರಮ ತರಲಿ,

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...