Homeಮುಖಪುಟರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ಎಂದಿದ್ದಾರೆ.

- Advertisement -
- Advertisement -

ರೋಹಿತ್ ಚಕ್ರತೀರ್ಥ ಯಾರು? ಅವರ ಅರ್ಹತೆಯೇನು? ಅವರು ಶಿಕ್ಷಣ ತಜ್ಞರಲ್ಲವಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, “ರೋಹಿತ್ ಚಕ್ರತೀರ್ಥ ಐಐಟಿ ಮತ್ತು ಸಿಇಟಿಗೆ ಪ್ರೊಫೆಸರ್ ಆಗಿದ್ದರು” ಎಂದಿದ್ದಾರೆ. ಶಿಕ್ಷಣ ತಜ್ಞ ಎಂಬುದಕ್ಕೆ ಸರ್ಟಿಫಿಕೇಟ್ ಕೊಡುವವರು ಯಾರು? ಎಂದಿದ್ದಾರೆ.

ಬೆಂಗಳೂರಿನಲ್ಲಿ ಪಠ್ಯ ಪರಷ್ಕರಣೆ ಕುರಿತು ಎದ್ದಿರುವ ವಿವಾದಗಳಿಗೆ ಸ್ಪಷ್ಟೀಕರಣ ನೀಡಿದ ಅವರು, “ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯು ಹಲವಾರು ಪಠ್ಯಗಳನ್ನು ಕೈಬಿಟ್ಟಿದೆ. ಆಗ ಏಕೆ ಯಾರು ಪ್ರಶ್ನಿಸಲಿಲ್ಲ? ಮೈಸೂರು ಮಹರಾಜರ ಬಗ್ಗೆ 5 ಪುಟಗಳ ಪಾಠ ಇತ್ತು, ಅದನ್ನು ತೆಗೆದು ಸಾಲುಗಳಿಗೆ ಇಳಿಸಿತ್ತು. ಅದರ ಬದಲು ಟಿಪ್ಪು ಸುಲ್ತಾನ್ ಪಾಠ ಹಾಕಿದ್ದರು. ಟಿಪ್ಪು ಸುಲ್ತಾನ್ ಒಬ್ಬರೆ ಬ್ರೀಟಿಷರ ವಿರುದ್ಧ ಮಾತನಾಡಿದರೆ?” ಎಂದಿದ್ದಾರೆ.

ನಾವು ಪೆರಿಯಾರ್ ಬಗ್ಗೆ ಇದ್ದ ಪಠ್ಯ ತೆಗೆದಿದ್ದೇವೆ. ಈ ದೇಶದಲ್ಲಿ ರಾಮ ಆದರ್ಶವಾಗಬೇಕೊ, ರಾವಣ ಆದರ್ಶವಾಗಬೇಕೊ? ರಾಮನ ಫೋಟೊಗೆ ಚಪ್ಪಲಿಯಲ್ಲಿ ಹೊಡೆದು, ರಾವಣನನ್ನು ಪೂಜಿಸುವವರ ಬಗ್ಗೆ ನಾವು ನಮ್ಮ ಮಕ್ಕಳಿಗೆ ಓದಿಸಬೇಕಾ? ರಾಮ ವೈದಿಕ ಸಂಸ್ಕೃತಿಯನ್ನು ರಾವಣ ದ್ರಾವಿಡ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ ಎಂದು ಬರೆದಿದ್ದಾರೆ. ಇದನ್ನು ನಾವು ಬೋಧಿಸಬೇಕಾ? ಆದರ್ಶ ಪುರುಷ ರಾಮ ಎಂದಿದ್ದು, ರಾಮರಾಜ್ಯ ಬರಬೇಕು ಎಂದಿದ್ದು ನಾವಲ್ಲ ಗಾಂಧೀಜಿ ಹೇಳಿದ್ದರು ಎಂದರು.

ನಮ್ಮ ಈ ಪಠ್ಯಗಳನ್ನು ಬುದ್ದಿಜೀವಿಗಳು ವಿರೋಧಿಸುತ್ತಾರೆ. ಅವರು ರಾವಣ ವಂಶಸ್ಥರಿಗೆ ಸೇರಿರಬೇಕು. ಕುವೆಂಪು ಬಗ್ಗೆ ಪಾಠ ತೆಗೆದಿಲ್ಲ, ಹಿಂದಿನ ಸರ್ಕಾರ ತೆಗೆದಿತ್ತು. ನಾವು ಸೇರಿಸಿದ್ದೇವೆ ಎಂದರು. ಅಲ್ಲದೆ ಸಾಹಿತಿಗಳ ಜಾತಿ ಹುಡಕಬೇಡಿ, ದಯವಿಟ್ಟು ವಿಷಯದ ಕುರಿತು ಮಾತನಾಡಿ ಎಂದು ಹೇಳಿದ್ದಾರೆ.

ದೇಶಕ್ಕೆ ಹೆಡಗೇವಾರ್ ಕೊಡುಗೆಯೇನು? ಮಕ್ಕಳಿಗೆ ಆರ್‌ಎಸ್‌ಎಸ್‌ ಮನಸ್ಥಿತಿ ತುಂಬುವುದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೆಡಗೇವಾರ್ ವೈದ್ಯರಾದ ನಂತರ ಕ್ರಾಂತಿಕಾರಿಯಾಗಿದ್ದರು. ಅವರು ದೇಶಕ್ಕೆ ವೈದ್ಯನಂತೆ ಕೆಲಸ ಮಾಡಿದರು. ಕೊಲ್ಕತ್ತಾದಲ್ಲಿ ಹೋರಾಟ ಮಾಡಿದ್ದರು. ಕಾಂಗ್ರೆಸ್ ಸಮಿತಿಯಲ್ಲಿದ್ದರು. ಆದರೆ ಯಾವಾಗ ಖಿಲಾಫತ್ ಚಳವಳಿ ಶುರುವಾಯಿತೊ ಆಗ ಹೆಡಗೇವಾರ್ ಹೊರಬಂದರು. ಆಗ ಭಾರತ ಧ್ವಜ ಇಲ್ಲ ಕಾರಣ ಭಗವಾಧ್ವಜವನ್ನು ಬೆಂಬಲಿಸಿದ್ದರು” ಎಂದರು.

ಇದನ್ನೂ ಓದಿ: ಬ್ರಾಹ್ಮಣರ ಪಠ್ಯಗಳನ್ನು ಕನ್ನಡ ಮಕ್ಕಳು ಏಕೆ ಓದಬೇಕು?

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ನಾವು ಎಲ್ಲಿಯೂ ಮಕ್ಕಳಿಗೆ ಜಾತಿ ಪರಿಚಯ ಮಾಡಿಕೊಡುತ್ತಿಲ್ಲ ಎಂದರು.

ಪ್ರತಿ ದಿನ ಪಿಡಿಎಫ್‌ ಪುಸ್ತಕ ಬದಲಿಸುತ್ತಿದ್ದೇವೆ. ಪಿಡಿಎಫ್‌ ಅನ್ನು ಯಾರು ಬೇಕಾದರೂ ಮಾಡಬಹುದು. ಪ್ರಿಂಟ್ ಆದಮೇಲಷ್ಟೆ ಅದು ಫೈನಲ್ ಆಗಿರುತ್ತದೆ. 78% ಪುಸ್ತಕ ಎಲ್ಲರಿಗೂ ತಲುಪಿದೆ. ಪರಿಷ್ಕರಣೆ ಆಗಿರುವುದನ್ನು ಓದಿ, ತಪ್ಪಿದ್ದರೆ ನಮಗೆ ತಿಳಿಸಿ. ಮುಂದಿ ವರ್ಷದಿಂದ ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಸೂಲಿಬೆಲೆ ಮಾತ್ರವಲ್ಲ, ಕಲ್ಲಡ್ಕ ಭಟ್ಟ, ಹೋರಿ ಸ್ವಾಮಿ, ಮಧುಗಿರಿ ಮೋದಿ, ಸೀಟಿ ರವಿ ಮುಂತಾದವರ ಭಾಷಣಗಳನ್ನೂ ಸೇರಿಸಿ. ಅದು ನಿಮ್ಮ ಯೋಗ್ಯತೆಗೆ ತಕ್ಕಂತಿದೆ. ಆದರೆ ಅದನ್ನು ನಿಮ್ಮ ಮನೆ ಮಕ್ಕಳಿಗೆ ಮಾತ್ರ ಓದಿಸಿ.

  2. ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವವರು ಹೊಣೆ ಗರಿಕೆಯಿಂದ ಮಾತನಾಡುವುದು .ಆದರೆ ಇವರ ಮಾತು ಕೇಳಿದರೆ ಟೀಕೆಗಳಿಗೆ ಅವಕಾಶ ಇಲ್ಲ
    ಇದು ಒಂದು ದೊಡ್ಡ ಸಮಸ್ಯೆಯೇ ಸರಿ.

  3. ಸ್ವಾಮೀ.. ತಾವು ಆರ್ ಎಸ್ ಎಸ್ ಭಕ್ತ ಅನ್ನುವುದು ಜಗತ್ತಿಗೆ ಗೊತ್ತಿದೆ… ಹೆಡ್ಗೆವಾರ್ ಅವರನ್ನ ನೀವು ಬೆಂಬಲಿಸದೆ ಇರ್ತೀರಾ… ಬೈಠಕ್ ನಲ್ಲಿ ಯಾವ್ ಯಾವ ತರಹ ಭೋದನೆ ಮಾಡ್ತೀರಾ ಅದನ್ನೂ ಮಕ್ಕಳಿಗೆ ಹೇಳಿಬಿಡಿ… ಶಿವಾಜಿ ಆಟದಲ್ಲಿ ಒಬ್ಬನನ್ನ ಔರಂಗಜೇಬನನ್ನ ಮಾಡಿ. ಎಲ್ಲರೂ ಕೂಡಿ ಹೊಡಿಯೋ ಆಟ ಆಡಿಸಿ… ಥೂ ನಿಮ್ಮ ….. ನೀವೂ ಒಬ್ಬ ಶಿಕ್ಷಣ ಸಚಿವರಾ…

  4. ಎಳೆಯ ವಯಸ್ಸಿನ ಮಕ್ಕಳ ಮೆದುಳನ್ನು ತೊಳೆಯಬೇಡಿ ಸ್ವಾಮಿ, ಪುನಃ ಸಮಾಜವನ್ನು ಇಬ್ಭಾಗ ಮಾಡಬೇಡಿ, ಜನರ ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಟ್ಟುಕೊಳ್ಳಲು ಕೋಮುವಾದಿ ಘರ್ಷಣೆಗೆ ಎಡೆ ಮಾಡಿಕೊಡುವಂತಹ ಹಲವಾರು ಪ್ರಸಂಗ ನಿರ್ವಹಣೆಯಲ್ಲಿ ವಿಫಲ ಆಯಿತು. ಇವರ ಯಜ್ಞ ಯಾಗಾದಿಗಳ ಬಗ್ಗೆ ಕಲಿತು ಮಕ್ಕಳು ಮಾಡುವುದಾದ್ರೂ ಏನು, ಅದರ ಬದಲಿಗೆ ಸಮಾಜಕ್ಕೆ ಒಳಿತಾಗುವ, ಧರ್ಮ ಜಾತಿಗಳನ್ನು ಮೀರಿ ಭಾವೈಕ್ಯತೆ ಬೆಳೆಸುವಂತ ಪಠ್ಯಕ್ರಮ ತರಲಿ,

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...