Homeಮುಖಪುಟರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ಎಂದಿದ್ದಾರೆ.

- Advertisement -
- Advertisement -

ರೋಹಿತ್ ಚಕ್ರತೀರ್ಥ ಯಾರು? ಅವರ ಅರ್ಹತೆಯೇನು? ಅವರು ಶಿಕ್ಷಣ ತಜ್ಞರಲ್ಲವಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, “ರೋಹಿತ್ ಚಕ್ರತೀರ್ಥ ಐಐಟಿ ಮತ್ತು ಸಿಇಟಿಗೆ ಪ್ರೊಫೆಸರ್ ಆಗಿದ್ದರು” ಎಂದಿದ್ದಾರೆ. ಶಿಕ್ಷಣ ತಜ್ಞ ಎಂಬುದಕ್ಕೆ ಸರ್ಟಿಫಿಕೇಟ್ ಕೊಡುವವರು ಯಾರು? ಎಂದಿದ್ದಾರೆ.

ಬೆಂಗಳೂರಿನಲ್ಲಿ ಪಠ್ಯ ಪರಷ್ಕರಣೆ ಕುರಿತು ಎದ್ದಿರುವ ವಿವಾದಗಳಿಗೆ ಸ್ಪಷ್ಟೀಕರಣ ನೀಡಿದ ಅವರು, “ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯು ಹಲವಾರು ಪಠ್ಯಗಳನ್ನು ಕೈಬಿಟ್ಟಿದೆ. ಆಗ ಏಕೆ ಯಾರು ಪ್ರಶ್ನಿಸಲಿಲ್ಲ? ಮೈಸೂರು ಮಹರಾಜರ ಬಗ್ಗೆ 5 ಪುಟಗಳ ಪಾಠ ಇತ್ತು, ಅದನ್ನು ತೆಗೆದು ಸಾಲುಗಳಿಗೆ ಇಳಿಸಿತ್ತು. ಅದರ ಬದಲು ಟಿಪ್ಪು ಸುಲ್ತಾನ್ ಪಾಠ ಹಾಕಿದ್ದರು. ಟಿಪ್ಪು ಸುಲ್ತಾನ್ ಒಬ್ಬರೆ ಬ್ರೀಟಿಷರ ವಿರುದ್ಧ ಮಾತನಾಡಿದರೆ?” ಎಂದಿದ್ದಾರೆ.

ನಾವು ಪೆರಿಯಾರ್ ಬಗ್ಗೆ ಇದ್ದ ಪಠ್ಯ ತೆಗೆದಿದ್ದೇವೆ. ಈ ದೇಶದಲ್ಲಿ ರಾಮ ಆದರ್ಶವಾಗಬೇಕೊ, ರಾವಣ ಆದರ್ಶವಾಗಬೇಕೊ? ರಾಮನ ಫೋಟೊಗೆ ಚಪ್ಪಲಿಯಲ್ಲಿ ಹೊಡೆದು, ರಾವಣನನ್ನು ಪೂಜಿಸುವವರ ಬಗ್ಗೆ ನಾವು ನಮ್ಮ ಮಕ್ಕಳಿಗೆ ಓದಿಸಬೇಕಾ? ರಾಮ ವೈದಿಕ ಸಂಸ್ಕೃತಿಯನ್ನು ರಾವಣ ದ್ರಾವಿಡ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ ಎಂದು ಬರೆದಿದ್ದಾರೆ. ಇದನ್ನು ನಾವು ಬೋಧಿಸಬೇಕಾ? ಆದರ್ಶ ಪುರುಷ ರಾಮ ಎಂದಿದ್ದು, ರಾಮರಾಜ್ಯ ಬರಬೇಕು ಎಂದಿದ್ದು ನಾವಲ್ಲ ಗಾಂಧೀಜಿ ಹೇಳಿದ್ದರು ಎಂದರು.

ನಮ್ಮ ಈ ಪಠ್ಯಗಳನ್ನು ಬುದ್ದಿಜೀವಿಗಳು ವಿರೋಧಿಸುತ್ತಾರೆ. ಅವರು ರಾವಣ ವಂಶಸ್ಥರಿಗೆ ಸೇರಿರಬೇಕು. ಕುವೆಂಪು ಬಗ್ಗೆ ಪಾಠ ತೆಗೆದಿಲ್ಲ, ಹಿಂದಿನ ಸರ್ಕಾರ ತೆಗೆದಿತ್ತು. ನಾವು ಸೇರಿಸಿದ್ದೇವೆ ಎಂದರು. ಅಲ್ಲದೆ ಸಾಹಿತಿಗಳ ಜಾತಿ ಹುಡಕಬೇಡಿ, ದಯವಿಟ್ಟು ವಿಷಯದ ಕುರಿತು ಮಾತನಾಡಿ ಎಂದು ಹೇಳಿದ್ದಾರೆ.

ದೇಶಕ್ಕೆ ಹೆಡಗೇವಾರ್ ಕೊಡುಗೆಯೇನು? ಮಕ್ಕಳಿಗೆ ಆರ್‌ಎಸ್‌ಎಸ್‌ ಮನಸ್ಥಿತಿ ತುಂಬುವುದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೆಡಗೇವಾರ್ ವೈದ್ಯರಾದ ನಂತರ ಕ್ರಾಂತಿಕಾರಿಯಾಗಿದ್ದರು. ಅವರು ದೇಶಕ್ಕೆ ವೈದ್ಯನಂತೆ ಕೆಲಸ ಮಾಡಿದರು. ಕೊಲ್ಕತ್ತಾದಲ್ಲಿ ಹೋರಾಟ ಮಾಡಿದ್ದರು. ಕಾಂಗ್ರೆಸ್ ಸಮಿತಿಯಲ್ಲಿದ್ದರು. ಆದರೆ ಯಾವಾಗ ಖಿಲಾಫತ್ ಚಳವಳಿ ಶುರುವಾಯಿತೊ ಆಗ ಹೆಡಗೇವಾರ್ ಹೊರಬಂದರು. ಆಗ ಭಾರತ ಧ್ವಜ ಇಲ್ಲ ಕಾರಣ ಭಗವಾಧ್ವಜವನ್ನು ಬೆಂಬಲಿಸಿದ್ದರು” ಎಂದರು.

ಇದನ್ನೂ ಓದಿ: ಬ್ರಾಹ್ಮಣರ ಪಠ್ಯಗಳನ್ನು ಕನ್ನಡ ಮಕ್ಕಳು ಏಕೆ ಓದಬೇಕು?

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ನಾವು ಎಲ್ಲಿಯೂ ಮಕ್ಕಳಿಗೆ ಜಾತಿ ಪರಿಚಯ ಮಾಡಿಕೊಡುತ್ತಿಲ್ಲ ಎಂದರು.

ಪ್ರತಿ ದಿನ ಪಿಡಿಎಫ್‌ ಪುಸ್ತಕ ಬದಲಿಸುತ್ತಿದ್ದೇವೆ. ಪಿಡಿಎಫ್‌ ಅನ್ನು ಯಾರು ಬೇಕಾದರೂ ಮಾಡಬಹುದು. ಪ್ರಿಂಟ್ ಆದಮೇಲಷ್ಟೆ ಅದು ಫೈನಲ್ ಆಗಿರುತ್ತದೆ. 78% ಪುಸ್ತಕ ಎಲ್ಲರಿಗೂ ತಲುಪಿದೆ. ಪರಿಷ್ಕರಣೆ ಆಗಿರುವುದನ್ನು ಓದಿ, ತಪ್ಪಿದ್ದರೆ ನಮಗೆ ತಿಳಿಸಿ. ಮುಂದಿ ವರ್ಷದಿಂದ ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಸೂಲಿಬೆಲೆ ಮಾತ್ರವಲ್ಲ, ಕಲ್ಲಡ್ಕ ಭಟ್ಟ, ಹೋರಿ ಸ್ವಾಮಿ, ಮಧುಗಿರಿ ಮೋದಿ, ಸೀಟಿ ರವಿ ಮುಂತಾದವರ ಭಾಷಣಗಳನ್ನೂ ಸೇರಿಸಿ. ಅದು ನಿಮ್ಮ ಯೋಗ್ಯತೆಗೆ ತಕ್ಕಂತಿದೆ. ಆದರೆ ಅದನ್ನು ನಿಮ್ಮ ಮನೆ ಮಕ್ಕಳಿಗೆ ಮಾತ್ರ ಓದಿಸಿ.

  2. ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವವರು ಹೊಣೆ ಗರಿಕೆಯಿಂದ ಮಾತನಾಡುವುದು .ಆದರೆ ಇವರ ಮಾತು ಕೇಳಿದರೆ ಟೀಕೆಗಳಿಗೆ ಅವಕಾಶ ಇಲ್ಲ
    ಇದು ಒಂದು ದೊಡ್ಡ ಸಮಸ್ಯೆಯೇ ಸರಿ.

  3. ಸ್ವಾಮೀ.. ತಾವು ಆರ್ ಎಸ್ ಎಸ್ ಭಕ್ತ ಅನ್ನುವುದು ಜಗತ್ತಿಗೆ ಗೊತ್ತಿದೆ… ಹೆಡ್ಗೆವಾರ್ ಅವರನ್ನ ನೀವು ಬೆಂಬಲಿಸದೆ ಇರ್ತೀರಾ… ಬೈಠಕ್ ನಲ್ಲಿ ಯಾವ್ ಯಾವ ತರಹ ಭೋದನೆ ಮಾಡ್ತೀರಾ ಅದನ್ನೂ ಮಕ್ಕಳಿಗೆ ಹೇಳಿಬಿಡಿ… ಶಿವಾಜಿ ಆಟದಲ್ಲಿ ಒಬ್ಬನನ್ನ ಔರಂಗಜೇಬನನ್ನ ಮಾಡಿ. ಎಲ್ಲರೂ ಕೂಡಿ ಹೊಡಿಯೋ ಆಟ ಆಡಿಸಿ… ಥೂ ನಿಮ್ಮ ….. ನೀವೂ ಒಬ್ಬ ಶಿಕ್ಷಣ ಸಚಿವರಾ…

  4. ಎಳೆಯ ವಯಸ್ಸಿನ ಮಕ್ಕಳ ಮೆದುಳನ್ನು ತೊಳೆಯಬೇಡಿ ಸ್ವಾಮಿ, ಪುನಃ ಸಮಾಜವನ್ನು ಇಬ್ಭಾಗ ಮಾಡಬೇಡಿ, ಜನರ ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಟ್ಟುಕೊಳ್ಳಲು ಕೋಮುವಾದಿ ಘರ್ಷಣೆಗೆ ಎಡೆ ಮಾಡಿಕೊಡುವಂತಹ ಹಲವಾರು ಪ್ರಸಂಗ ನಿರ್ವಹಣೆಯಲ್ಲಿ ವಿಫಲ ಆಯಿತು. ಇವರ ಯಜ್ಞ ಯಾಗಾದಿಗಳ ಬಗ್ಗೆ ಕಲಿತು ಮಕ್ಕಳು ಮಾಡುವುದಾದ್ರೂ ಏನು, ಅದರ ಬದಲಿಗೆ ಸಮಾಜಕ್ಕೆ ಒಳಿತಾಗುವ, ಧರ್ಮ ಜಾತಿಗಳನ್ನು ಮೀರಿ ಭಾವೈಕ್ಯತೆ ಬೆಳೆಸುವಂತ ಪಠ್ಯಕ್ರಮ ತರಲಿ,

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...