Homeಮುಖಪುಟರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.

ಅಲ್ಲದೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ಬಗ್ಗೆ ಉಲ್ಲೇಖಿಸಿರುವ ಅವರು, ಇದರ ವಿರುದ್ದ ಕಠಿಣ ಕಾನೂನು ಜಾರಿಯಾಗಬೇಕೆಂದು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ದಲಿತ ಯುವಜನರು ಧ್ವನಿ ಎತ್ತುವಂತೆ ಕರೆ ನೀಡಿದ್ದಾರೆ.

“ರೋಹಿತ್ ವೇಮುಲ ನಿಧನರಾಗಿ ಇಂದಿಗೆ 10 ವರ್ಷಗಳು. ಆದರೆ, “ಈ ದೇಶದಲ್ಲಿ ಕನಸು ಕಾಣಲು ಎಲ್ಲರಿಗೂ ಸಮಾನ ಹಕ್ಕುಗಳಿವೆಯೇ? ಎಂಬ ಅವರ ಪ್ರಶ್ನೆ ಇನ್ನೂ ನಮ್ಮ ಹೃದಯದಲ್ಲಿ ಪ್ರತಿಧ್ವನಿಸುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ರೋಹಿತ್ ಓದಲು, ಬರೆಯಲು ಬಯಸಿದ್ದರು. ವಿಜ್ಞಾನ, ಸಮಾಜ ಮತ್ತು ಮಾನವೀಯತೆಯನ್ನು ಅರ್ಥಮಾಡಿಕೊಳ್ಳುವ ಮೂಲಕ ಈ ದೇಶವನ್ನು ಸುಧಾರಿಸಲು ಅವರು ಬಯಸಿದ್ದರು. ಆದರೆ ಈ ವ್ಯವಸ್ಥೆಗೆ ಒಬ್ಬ ದಲಿತ ಮುಂದೆ ಬರುವುದು ಇಷ್ಟವಿರಲಿಲ್ಲ. “ಸಾಂಸ್ಥಿಕ ಜಾತಿವಾದ, ಸಾಮಾಜಿಕ ಬಹಿಷ್ಕಾರ, ದಿನನಿತ್ಯದ ಅವಮಾನ, ‘ಯೋಗ್ಯತೆ’ಯನ್ನು ಕುರಿತು ಮಾತನಾಡುವ ಭಾಷೆ ಮತ್ತು ಅಮಾನವೀಯ ವರ್ತನೆ – ಇದೇ ಆ ವಿಷವಾಗಿದ್ದು, ಒಬ್ಬ ಪ್ರತಿಭಾವಂತ ಯುವಕನನ್ನು ಅವನ ಘನತೆಯನ್ನು ಕಸಿದುಕೊಂಡು, ಅವನನ್ನು ಏಕಾಂಗಿಯನ್ನಾಗಿ ಮಾಡುವ ಹಂತಕ್ಕೆ ತಳ್ಳಿತು” ಎಂದಿದ್ದಾರೆ.

“ಮತ್ತೆ ಇಂದು? ದಲಿತ ಯುವಜನರ ವಾಸ್ತವವೇನಾದರೂ ಬದಲಾಗಿದೆಯೇ? ಕ್ಯಾಂಪಸ್‌ಗಳಲ್ಲಿ ಅದೇ ತಿರಸ್ಕಾರ, ಹಾಸ್ಟೆಲ್‌ಗಳಲ್ಲಿ ಅದೇ ಪ್ರತ್ಯೇಕತೆ, ತರಗತಿಗಳಲ್ಲಿ ಅದೇ ಕೀಳರಿಮೆ, ಮತ್ತೆ ಅದೇ ಹಿಂಸೆ – ಮತ್ತು ಕೆಲವೊಮ್ಮೆ ಅದೇ ಸಾವು. ಏಕೆಂದರೆ ಜಾತಿ ಇಂದಿಗೂ ಈ ದೇಶದ ಅತಿದೊಡ್ಡ ಪ್ರವೇಶ ಪತ್ರವಾಗಿದೆ” ಎಂದು ಹೇಳಿದ್ದಾರೆ.

“ಅದಕ್ಕಾಗಿಯೇ ರೋಹಿತ್ ವೇಮುಲ ಕಾಯ್ದೆಯು ಕೇವಲ ಒಂದು ಘೋಷಣೆಯಲ್ಲ, ಅದೊಂದು ಅಗತ್ಯವಾಗಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯ ಅಪರಾಧವಾಗಲು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಯಾವುದೇ ವಿದ್ಯಾರ್ಥಿಯನ್ನು ಅವರ ಜಾತಿಯ ಹೆಸರಿನಲ್ಲಿ ಕುಗ್ಗಿಸುವ, ಮೌನಗೊಳಿಸುವ ಮತ್ತು ಹೊರಗಟ್ಟುವುದನ್ನು ಕೊನೆಗಾಣಿಸಲು ಇದು ಅಗತ್ಯವಾಗಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಈ ಹೋರಾಟ ಕೇವಲ ಸಂಸತ್ತಿನದ್ದಲ್ಲ. ಈ ಹೋರಾಟ ಕ್ಯಾಂಪಸ್‌ಗಳದ್ದು, ಯುವಜನತೆಯದ್ದು, ನಮ್ಮೆಲ್ಲರದ್ದು. ದಲಿತ ಯುವಕರೇ – ಧ್ವನಿ ಎತ್ತಿ, ಸಂಘಟಿತರಾಗಿ, ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲಿ. ರೋಹಿತ್ ವೇಮುಲ ಕಾಯ್ದೆಯನ್ನು ಕೂಡಲೇ ಜಾರಿಗೆ ತನ್ನಿ ಮತ್ತು ತಾರತಮ್ಯ ವಿರೋಧಿ ಕಾನೂನು ಈಗಲೇ ಬೇಕು ಎಂದು ಒತ್ತಾಯಿಸಿ” ಎಂದು ಕರೆ ನೀಡಿದ್ದಾರೆ.

“ಕರ್ನಾಟಕ ಮತ್ತು ತೆಲಂಗಾಣದ ಕಾಂಗ್ರೆಸ್ ಸರ್ಕಾರಗಳು ಈ ಕಾನೂನನ್ನು ಆದಷ್ಟು ಬೇಗ ಜಾರಿಗೆ ತರುವ ಪ್ರಕ್ರಿಯೆಯಲ್ಲಿವೆ. ನ್ಯಾಯಯುತವಾದ, ಮಾನವೀಯ ಮತ್ತು ಸಮಾನತೆಯ ಭಾರತವನ್ನು ನಾವು ಬಯಸುತ್ತೇವೆ – ಅಲ್ಲಿ ಯಾವುದೇ ದಲಿತ ವಿದ್ಯಾರ್ಥಿ ತನ್ನ ಕನಸುಗಳಿಗಾಗಿ ಪ್ರಾಣ ತೆರಬೇಕಾದ ಪರಿಸ್ಥಿತಿ ಬರಬಾರದು. ರೋಹಿತ್, ನಿನ್ನ ಹೋರಾಟ ನಮ್ಮ ಜವಾಬ್ದಾರಿ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....