Homeಮುಖಪುಟರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.

ಅಲ್ಲದೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ಬಗ್ಗೆ ಉಲ್ಲೇಖಿಸಿರುವ ಅವರು, ಇದರ ವಿರುದ್ದ ಕಠಿಣ ಕಾನೂನು ಜಾರಿಯಾಗಬೇಕೆಂದು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ದಲಿತ ಯುವಜನರು ಧ್ವನಿ ಎತ್ತುವಂತೆ ಕರೆ ನೀಡಿದ್ದಾರೆ.

“ರೋಹಿತ್ ವೇಮುಲ ನಿಧನರಾಗಿ ಇಂದಿಗೆ 10 ವರ್ಷಗಳು. ಆದರೆ, “ಈ ದೇಶದಲ್ಲಿ ಕನಸು ಕಾಣಲು ಎಲ್ಲರಿಗೂ ಸಮಾನ ಹಕ್ಕುಗಳಿವೆಯೇ? ಎಂಬ ಅವರ ಪ್ರಶ್ನೆ ಇನ್ನೂ ನಮ್ಮ ಹೃದಯದಲ್ಲಿ ಪ್ರತಿಧ್ವನಿಸುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ರೋಹಿತ್ ಓದಲು, ಬರೆಯಲು ಬಯಸಿದ್ದರು. ವಿಜ್ಞಾನ, ಸಮಾಜ ಮತ್ತು ಮಾನವೀಯತೆಯನ್ನು ಅರ್ಥಮಾಡಿಕೊಳ್ಳುವ ಮೂಲಕ ಈ ದೇಶವನ್ನು ಸುಧಾರಿಸಲು ಅವರು ಬಯಸಿದ್ದರು. ಆದರೆ ಈ ವ್ಯವಸ್ಥೆಗೆ ಒಬ್ಬ ದಲಿತ ಮುಂದೆ ಬರುವುದು ಇಷ್ಟವಿರಲಿಲ್ಲ. “ಸಾಂಸ್ಥಿಕ ಜಾತಿವಾದ, ಸಾಮಾಜಿಕ ಬಹಿಷ್ಕಾರ, ದಿನನಿತ್ಯದ ಅವಮಾನ, ‘ಯೋಗ್ಯತೆ’ಯನ್ನು ಕುರಿತು ಮಾತನಾಡುವ ಭಾಷೆ ಮತ್ತು ಅಮಾನವೀಯ ವರ್ತನೆ – ಇದೇ ಆ ವಿಷವಾಗಿದ್ದು, ಒಬ್ಬ ಪ್ರತಿಭಾವಂತ ಯುವಕನನ್ನು ಅವನ ಘನತೆಯನ್ನು ಕಸಿದುಕೊಂಡು, ಅವನನ್ನು ಏಕಾಂಗಿಯನ್ನಾಗಿ ಮಾಡುವ ಹಂತಕ್ಕೆ ತಳ್ಳಿತು” ಎಂದಿದ್ದಾರೆ.

“ಮತ್ತೆ ಇಂದು? ದಲಿತ ಯುವಜನರ ವಾಸ್ತವವೇನಾದರೂ ಬದಲಾಗಿದೆಯೇ? ಕ್ಯಾಂಪಸ್‌ಗಳಲ್ಲಿ ಅದೇ ತಿರಸ್ಕಾರ, ಹಾಸ್ಟೆಲ್‌ಗಳಲ್ಲಿ ಅದೇ ಪ್ರತ್ಯೇಕತೆ, ತರಗತಿಗಳಲ್ಲಿ ಅದೇ ಕೀಳರಿಮೆ, ಮತ್ತೆ ಅದೇ ಹಿಂಸೆ – ಮತ್ತು ಕೆಲವೊಮ್ಮೆ ಅದೇ ಸಾವು. ಏಕೆಂದರೆ ಜಾತಿ ಇಂದಿಗೂ ಈ ದೇಶದ ಅತಿದೊಡ್ಡ ಪ್ರವೇಶ ಪತ್ರವಾಗಿದೆ” ಎಂದು ಹೇಳಿದ್ದಾರೆ.

“ಅದಕ್ಕಾಗಿಯೇ ರೋಹಿತ್ ವೇಮುಲ ಕಾಯ್ದೆಯು ಕೇವಲ ಒಂದು ಘೋಷಣೆಯಲ್ಲ, ಅದೊಂದು ಅಗತ್ಯವಾಗಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯ ಅಪರಾಧವಾಗಲು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಯಾವುದೇ ವಿದ್ಯಾರ್ಥಿಯನ್ನು ಅವರ ಜಾತಿಯ ಹೆಸರಿನಲ್ಲಿ ಕುಗ್ಗಿಸುವ, ಮೌನಗೊಳಿಸುವ ಮತ್ತು ಹೊರಗಟ್ಟುವುದನ್ನು ಕೊನೆಗಾಣಿಸಲು ಇದು ಅಗತ್ಯವಾಗಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಈ ಹೋರಾಟ ಕೇವಲ ಸಂಸತ್ತಿನದ್ದಲ್ಲ. ಈ ಹೋರಾಟ ಕ್ಯಾಂಪಸ್‌ಗಳದ್ದು, ಯುವಜನತೆಯದ್ದು, ನಮ್ಮೆಲ್ಲರದ್ದು. ದಲಿತ ಯುವಕರೇ – ಧ್ವನಿ ಎತ್ತಿ, ಸಂಘಟಿತರಾಗಿ, ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲಿ. ರೋಹಿತ್ ವೇಮುಲ ಕಾಯ್ದೆಯನ್ನು ಕೂಡಲೇ ಜಾರಿಗೆ ತನ್ನಿ ಮತ್ತು ತಾರತಮ್ಯ ವಿರೋಧಿ ಕಾನೂನು ಈಗಲೇ ಬೇಕು ಎಂದು ಒತ್ತಾಯಿಸಿ” ಎಂದು ಕರೆ ನೀಡಿದ್ದಾರೆ.

“ಕರ್ನಾಟಕ ಮತ್ತು ತೆಲಂಗಾಣದ ಕಾಂಗ್ರೆಸ್ ಸರ್ಕಾರಗಳು ಈ ಕಾನೂನನ್ನು ಆದಷ್ಟು ಬೇಗ ಜಾರಿಗೆ ತರುವ ಪ್ರಕ್ರಿಯೆಯಲ್ಲಿವೆ. ನ್ಯಾಯಯುತವಾದ, ಮಾನವೀಯ ಮತ್ತು ಸಮಾನತೆಯ ಭಾರತವನ್ನು ನಾವು ಬಯಸುತ್ತೇವೆ – ಅಲ್ಲಿ ಯಾವುದೇ ದಲಿತ ವಿದ್ಯಾರ್ಥಿ ತನ್ನ ಕನಸುಗಳಿಗಾಗಿ ಪ್ರಾಣ ತೆರಬೇಕಾದ ಪರಿಸ್ಥಿತಿ ಬರಬಾರದು. ರೋಹಿತ್, ನಿನ್ನ ಹೋರಾಟ ನಮ್ಮ ಜವಾಬ್ದಾರಿ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...