Homeಮುಖಪುಟರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.

ಅಲ್ಲದೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ಬಗ್ಗೆ ಉಲ್ಲೇಖಿಸಿರುವ ಅವರು, ಇದರ ವಿರುದ್ದ ಕಠಿಣ ಕಾನೂನು ಜಾರಿಯಾಗಬೇಕೆಂದು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ದಲಿತ ಯುವಜನರು ಧ್ವನಿ ಎತ್ತುವಂತೆ ಕರೆ ನೀಡಿದ್ದಾರೆ.

“ರೋಹಿತ್ ವೇಮುಲ ನಿಧನರಾಗಿ ಇಂದಿಗೆ 10 ವರ್ಷಗಳು. ಆದರೆ, “ಈ ದೇಶದಲ್ಲಿ ಕನಸು ಕಾಣಲು ಎಲ್ಲರಿಗೂ ಸಮಾನ ಹಕ್ಕುಗಳಿವೆಯೇ? ಎಂಬ ಅವರ ಪ್ರಶ್ನೆ ಇನ್ನೂ ನಮ್ಮ ಹೃದಯದಲ್ಲಿ ಪ್ರತಿಧ್ವನಿಸುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ರೋಹಿತ್ ಓದಲು, ಬರೆಯಲು ಬಯಸಿದ್ದರು. ವಿಜ್ಞಾನ, ಸಮಾಜ ಮತ್ತು ಮಾನವೀಯತೆಯನ್ನು ಅರ್ಥಮಾಡಿಕೊಳ್ಳುವ ಮೂಲಕ ಈ ದೇಶವನ್ನು ಸುಧಾರಿಸಲು ಅವರು ಬಯಸಿದ್ದರು. ಆದರೆ ಈ ವ್ಯವಸ್ಥೆಗೆ ಒಬ್ಬ ದಲಿತ ಮುಂದೆ ಬರುವುದು ಇಷ್ಟವಿರಲಿಲ್ಲ. “ಸಾಂಸ್ಥಿಕ ಜಾತಿವಾದ, ಸಾಮಾಜಿಕ ಬಹಿಷ್ಕಾರ, ದಿನನಿತ್ಯದ ಅವಮಾನ, ‘ಯೋಗ್ಯತೆ’ಯನ್ನು ಕುರಿತು ಮಾತನಾಡುವ ಭಾಷೆ ಮತ್ತು ಅಮಾನವೀಯ ವರ್ತನೆ – ಇದೇ ಆ ವಿಷವಾಗಿದ್ದು, ಒಬ್ಬ ಪ್ರತಿಭಾವಂತ ಯುವಕನನ್ನು ಅವನ ಘನತೆಯನ್ನು ಕಸಿದುಕೊಂಡು, ಅವನನ್ನು ಏಕಾಂಗಿಯನ್ನಾಗಿ ಮಾಡುವ ಹಂತಕ್ಕೆ ತಳ್ಳಿತು” ಎಂದಿದ್ದಾರೆ.

“ಮತ್ತೆ ಇಂದು? ದಲಿತ ಯುವಜನರ ವಾಸ್ತವವೇನಾದರೂ ಬದಲಾಗಿದೆಯೇ? ಕ್ಯಾಂಪಸ್‌ಗಳಲ್ಲಿ ಅದೇ ತಿರಸ್ಕಾರ, ಹಾಸ್ಟೆಲ್‌ಗಳಲ್ಲಿ ಅದೇ ಪ್ರತ್ಯೇಕತೆ, ತರಗತಿಗಳಲ್ಲಿ ಅದೇ ಕೀಳರಿಮೆ, ಮತ್ತೆ ಅದೇ ಹಿಂಸೆ – ಮತ್ತು ಕೆಲವೊಮ್ಮೆ ಅದೇ ಸಾವು. ಏಕೆಂದರೆ ಜಾತಿ ಇಂದಿಗೂ ಈ ದೇಶದ ಅತಿದೊಡ್ಡ ಪ್ರವೇಶ ಪತ್ರವಾಗಿದೆ” ಎಂದು ಹೇಳಿದ್ದಾರೆ.

“ಅದಕ್ಕಾಗಿಯೇ ರೋಹಿತ್ ವೇಮುಲ ಕಾಯ್ದೆಯು ಕೇವಲ ಒಂದು ಘೋಷಣೆಯಲ್ಲ, ಅದೊಂದು ಅಗತ್ಯವಾಗಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯ ಅಪರಾಧವಾಗಲು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಯಾವುದೇ ವಿದ್ಯಾರ್ಥಿಯನ್ನು ಅವರ ಜಾತಿಯ ಹೆಸರಿನಲ್ಲಿ ಕುಗ್ಗಿಸುವ, ಮೌನಗೊಳಿಸುವ ಮತ್ತು ಹೊರಗಟ್ಟುವುದನ್ನು ಕೊನೆಗಾಣಿಸಲು ಇದು ಅಗತ್ಯವಾಗಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಈ ಹೋರಾಟ ಕೇವಲ ಸಂಸತ್ತಿನದ್ದಲ್ಲ. ಈ ಹೋರಾಟ ಕ್ಯಾಂಪಸ್‌ಗಳದ್ದು, ಯುವಜನತೆಯದ್ದು, ನಮ್ಮೆಲ್ಲರದ್ದು. ದಲಿತ ಯುವಕರೇ – ಧ್ವನಿ ಎತ್ತಿ, ಸಂಘಟಿತರಾಗಿ, ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲಿ. ರೋಹಿತ್ ವೇಮುಲ ಕಾಯ್ದೆಯನ್ನು ಕೂಡಲೇ ಜಾರಿಗೆ ತನ್ನಿ ಮತ್ತು ತಾರತಮ್ಯ ವಿರೋಧಿ ಕಾನೂನು ಈಗಲೇ ಬೇಕು ಎಂದು ಒತ್ತಾಯಿಸಿ” ಎಂದು ಕರೆ ನೀಡಿದ್ದಾರೆ.

“ಕರ್ನಾಟಕ ಮತ್ತು ತೆಲಂಗಾಣದ ಕಾಂಗ್ರೆಸ್ ಸರ್ಕಾರಗಳು ಈ ಕಾನೂನನ್ನು ಆದಷ್ಟು ಬೇಗ ಜಾರಿಗೆ ತರುವ ಪ್ರಕ್ರಿಯೆಯಲ್ಲಿವೆ. ನ್ಯಾಯಯುತವಾದ, ಮಾನವೀಯ ಮತ್ತು ಸಮಾನತೆಯ ಭಾರತವನ್ನು ನಾವು ಬಯಸುತ್ತೇವೆ – ಅಲ್ಲಿ ಯಾವುದೇ ದಲಿತ ವಿದ್ಯಾರ್ಥಿ ತನ್ನ ಕನಸುಗಳಿಗಾಗಿ ಪ್ರಾಣ ತೆರಬೇಕಾದ ಪರಿಸ್ಥಿತಿ ಬರಬಾರದು. ರೋಹಿತ್, ನಿನ್ನ ಹೋರಾಟ ನಮ್ಮ ಜವಾಬ್ದಾರಿ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...