Homeಮುಖಪುಟರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.

ಅಲ್ಲದೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ಬಗ್ಗೆ ಉಲ್ಲೇಖಿಸಿರುವ ಅವರು, ಇದರ ವಿರುದ್ದ ಕಠಿಣ ಕಾನೂನು ಜಾರಿಯಾಗಬೇಕೆಂದು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ದಲಿತ ಯುವಜನರು ಧ್ವನಿ ಎತ್ತುವಂತೆ ಕರೆ ನೀಡಿದ್ದಾರೆ.

“ರೋಹಿತ್ ವೇಮುಲ ನಿಧನರಾಗಿ ಇಂದಿಗೆ 10 ವರ್ಷಗಳು. ಆದರೆ, “ಈ ದೇಶದಲ್ಲಿ ಕನಸು ಕಾಣಲು ಎಲ್ಲರಿಗೂ ಸಮಾನ ಹಕ್ಕುಗಳಿವೆಯೇ? ಎಂಬ ಅವರ ಪ್ರಶ್ನೆ ಇನ್ನೂ ನಮ್ಮ ಹೃದಯದಲ್ಲಿ ಪ್ರತಿಧ್ವನಿಸುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ರೋಹಿತ್ ಓದಲು, ಬರೆಯಲು ಬಯಸಿದ್ದರು. ವಿಜ್ಞಾನ, ಸಮಾಜ ಮತ್ತು ಮಾನವೀಯತೆಯನ್ನು ಅರ್ಥಮಾಡಿಕೊಳ್ಳುವ ಮೂಲಕ ಈ ದೇಶವನ್ನು ಸುಧಾರಿಸಲು ಅವರು ಬಯಸಿದ್ದರು. ಆದರೆ ಈ ವ್ಯವಸ್ಥೆಗೆ ಒಬ್ಬ ದಲಿತ ಮುಂದೆ ಬರುವುದು ಇಷ್ಟವಿರಲಿಲ್ಲ. “ಸಾಂಸ್ಥಿಕ ಜಾತಿವಾದ, ಸಾಮಾಜಿಕ ಬಹಿಷ್ಕಾರ, ದಿನನಿತ್ಯದ ಅವಮಾನ, ‘ಯೋಗ್ಯತೆ’ಯನ್ನು ಕುರಿತು ಮಾತನಾಡುವ ಭಾಷೆ ಮತ್ತು ಅಮಾನವೀಯ ವರ್ತನೆ – ಇದೇ ಆ ವಿಷವಾಗಿದ್ದು, ಒಬ್ಬ ಪ್ರತಿಭಾವಂತ ಯುವಕನನ್ನು ಅವನ ಘನತೆಯನ್ನು ಕಸಿದುಕೊಂಡು, ಅವನನ್ನು ಏಕಾಂಗಿಯನ್ನಾಗಿ ಮಾಡುವ ಹಂತಕ್ಕೆ ತಳ್ಳಿತು” ಎಂದಿದ್ದಾರೆ.

“ಮತ್ತೆ ಇಂದು? ದಲಿತ ಯುವಜನರ ವಾಸ್ತವವೇನಾದರೂ ಬದಲಾಗಿದೆಯೇ? ಕ್ಯಾಂಪಸ್‌ಗಳಲ್ಲಿ ಅದೇ ತಿರಸ್ಕಾರ, ಹಾಸ್ಟೆಲ್‌ಗಳಲ್ಲಿ ಅದೇ ಪ್ರತ್ಯೇಕತೆ, ತರಗತಿಗಳಲ್ಲಿ ಅದೇ ಕೀಳರಿಮೆ, ಮತ್ತೆ ಅದೇ ಹಿಂಸೆ – ಮತ್ತು ಕೆಲವೊಮ್ಮೆ ಅದೇ ಸಾವು. ಏಕೆಂದರೆ ಜಾತಿ ಇಂದಿಗೂ ಈ ದೇಶದ ಅತಿದೊಡ್ಡ ಪ್ರವೇಶ ಪತ್ರವಾಗಿದೆ” ಎಂದು ಹೇಳಿದ್ದಾರೆ.

“ಅದಕ್ಕಾಗಿಯೇ ರೋಹಿತ್ ವೇಮುಲ ಕಾಯ್ದೆಯು ಕೇವಲ ಒಂದು ಘೋಷಣೆಯಲ್ಲ, ಅದೊಂದು ಅಗತ್ಯವಾಗಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯ ಅಪರಾಧವಾಗಲು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಯಾವುದೇ ವಿದ್ಯಾರ್ಥಿಯನ್ನು ಅವರ ಜಾತಿಯ ಹೆಸರಿನಲ್ಲಿ ಕುಗ್ಗಿಸುವ, ಮೌನಗೊಳಿಸುವ ಮತ್ತು ಹೊರಗಟ್ಟುವುದನ್ನು ಕೊನೆಗಾಣಿಸಲು ಇದು ಅಗತ್ಯವಾಗಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಈ ಹೋರಾಟ ಕೇವಲ ಸಂಸತ್ತಿನದ್ದಲ್ಲ. ಈ ಹೋರಾಟ ಕ್ಯಾಂಪಸ್‌ಗಳದ್ದು, ಯುವಜನತೆಯದ್ದು, ನಮ್ಮೆಲ್ಲರದ್ದು. ದಲಿತ ಯುವಕರೇ – ಧ್ವನಿ ಎತ್ತಿ, ಸಂಘಟಿತರಾಗಿ, ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲಿ. ರೋಹಿತ್ ವೇಮುಲ ಕಾಯ್ದೆಯನ್ನು ಕೂಡಲೇ ಜಾರಿಗೆ ತನ್ನಿ ಮತ್ತು ತಾರತಮ್ಯ ವಿರೋಧಿ ಕಾನೂನು ಈಗಲೇ ಬೇಕು ಎಂದು ಒತ್ತಾಯಿಸಿ” ಎಂದು ಕರೆ ನೀಡಿದ್ದಾರೆ.

“ಕರ್ನಾಟಕ ಮತ್ತು ತೆಲಂಗಾಣದ ಕಾಂಗ್ರೆಸ್ ಸರ್ಕಾರಗಳು ಈ ಕಾನೂನನ್ನು ಆದಷ್ಟು ಬೇಗ ಜಾರಿಗೆ ತರುವ ಪ್ರಕ್ರಿಯೆಯಲ್ಲಿವೆ. ನ್ಯಾಯಯುತವಾದ, ಮಾನವೀಯ ಮತ್ತು ಸಮಾನತೆಯ ಭಾರತವನ್ನು ನಾವು ಬಯಸುತ್ತೇವೆ – ಅಲ್ಲಿ ಯಾವುದೇ ದಲಿತ ವಿದ್ಯಾರ್ಥಿ ತನ್ನ ಕನಸುಗಳಿಗಾಗಿ ಪ್ರಾಣ ತೆರಬೇಕಾದ ಪರಿಸ್ಥಿತಿ ಬರಬಾರದು. ರೋಹಿತ್, ನಿನ್ನ ಹೋರಾಟ ನಮ್ಮ ಜವಾಬ್ದಾರಿ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...

ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ...

ನೋಯ್ಡಾ ಕಾರ್ಮಿಕ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ, 7 ಎಫ್‌ಐಆರ್‌: ಅಶಾಂತಿಯ ಹಿಂದೆ ‘ಸಂಘಟಿತ ಸಿಂಡಿಕೇಟ್’ ಕುರಿತು ತನಿಖೆ

ನೋಯ್ಡಾದಲ್ಲಿ ಹಿಂಸಾತ್ಮಕವಾಗಿ ತಿರುಗಿದ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಮಂಗಳವಾರ ಹೇಳಿದ್ದಾರೆ,...

“ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಅರವಿಂದ್...

ಜಮ್ಮು-ಕಾಶ್ಮೀರ| ನಕಲಿ ಗೋರಕ್ಷಕರು ಬೆನ್ನಟ್ಟಿದ್ದರಿಂದ ನದಿಗೆ ಹಾರಿದ ವ್ಯಕ್ತಿ ಕಣ್ಮರೆ; ನಾಲ್ವರ ಬಂಧನ

ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ರಾಮ್ಸೂ ಪ್ರದೇಶದ ಹೆದ್ದಾರಿಯಲ್ಲಿ ಗೋರಕ್ಷಕರು ವ್ಯಕ್ತಿಯೊಬ್ಬನನ್ನು ಬೆನ್ನಟ್ಟಿದ್ದರಿಂದ ಹೆದರಿದ ಆತ ಸುರಕ್ಷತೆಗಾಗಿ ನದಿಗೆ ಹಾರಿದ್ದಾನೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ರಾಂಬನ್ ಜಿಲ್ಲೆಯ ಉಖ್ರಾಲ್ ತಹಸಿಲ್‌ನ ಪೋಗಲ್‌ನ ಮುಂಡ್‌ಖಾಲ್...

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕಾಂಗ್ರೆಸ್ ಹಿರಿಯ ನಾಯಕ ನಸೀರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ಸೋಮವಾರ (ಏ.13) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಟಾಚಾರ)...

ಮಹಿಳಾ ಮೀಸಲಾತಿ ಮಸೂದೆ: ಏಪ್ರಿಲ್ 15 ರಂದು ಕಾಂಗ್ರೆಸ್ ಸರ್ವಪಕ್ಷ ಸಭೆ ಕರೆಯಲಿದೆ: ಮಲ್ಲಿಕಾರ್ಜುನ ಖರ್ಗೆ 

ಮಹಿಳಾ ಮೀಸಲಾತಿ ಮಸೂದೆಯನ್ನು ಚರ್ಚಿಸಲು ಏಪ್ರಿಲ್ 15 ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಕರೆಯಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ,...

ಗುಜರಾತ್‌| ಮುಸ್ಲಿಂ ವ್ಯಕ್ತಿಯ ಬೀದಿ ವ್ಯಾಪಾರಕ್ಕೆ ಅಡ್ಡಿಪಡಿಸಿದ ಹಿಂದುತ್ವ ಗೂಂಡಾಗಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಬಹುಸಂಖ್ಯಾತ ಪ್ರದೇಶವೊಂದರಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ಬೀದಿ ವ್ಯಾಪಾರಿಗೆ ಬಜರಂಗದಳ ಸದಸ್ಯರು ಬೆದರಿಕೆ ಹಾಕಿ ಅಲ್ಲಿಂದ ಅಂಗಡಿ ತೆರವುಗೊಳಿಸಿದ್ದಾರೆ. ಮುಸ್ಲಿಂ ವ್ಯಾಪಾರಿಯ ಗುರುತನ್ನು ಕೇಳಿದ ಹಿಂದುತ್ವ ಗೂಂಡಾಗಳು, ನಂತರ ಅವರನ್ನು...

“ನೀವು ಆರ್‌ಎಸ್‌ಎಸ್ ಸಂಬಂಧಿತ ಕಾರ್ಯಕ್ರಮಗಳಲ್ಲಿ 4 ಬಾರಿ ಭಾಗವಹಿಸಿದ್ದೀರಿ” : ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಗಂಭೀರ ವಾದ

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ (ಏ.13) ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಆರ್‌ಎಸ್‌ಎಸ್ ಸಂಯೋಜಿತ...