Homeಮುಖಪುಟರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ತೆಲಂಗಾಣ ಉಪ ಮುಖ್ಯಮಂತ್ರಿ

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ತೆಲಂಗಾಣ ಉಪ ಮುಖ್ಯಮಂತ್ರಿ

"ರೋಹಿತ್ ಪ್ರಕರಣದ ಆರೋಪಿಯನ್ನು ತೆಲಂಗಾಣದ ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ಬಿಜೆಪಿ ಜನರ ಕ್ಷಮೆಯಾಚಿಸಬೇಕು"

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲ ಅವರ ಆತ್ಮಹತ್ಯೆ ಪ್ರಕರಣದ ಮರು ತನಿಖೆ ನಡೆಸುವ ಕಾನೂನು ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ ಎಂದು ತೆಲಂಗಾಣದ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.

“ಪ್ರಕರಣದ ಮರು ತನಿಖೆಗೆ ನಿರ್ದೇಶನ ನೀಡುವಂತೆ ನಾವು ಈಗಾಗಲೇ ಹೈಕೋರ್ಟ್‌ಗೆ ಟಿಪ್ಪಣಿ ಸಲ್ಲಿಸಿದ್ದೇವೆ. ಪ್ರಕರಣದ ಹಿಂದೆ ಎಷ್ಟೇ ಪ್ರಭಾವಿಗಳಿದ್ದರೂ ಬಿಡುವುದಿಲ್ಲ” ಎಂದು ವಿಕ್ರಮಾರ್ಕ ಹೇಳಿದ್ದಾರೆ.

ತೆಲಂಗಾಣದ ಬಿಜೆಪಿ ಅಧ್ಯಕ್ಷರಾಗಿ ರಾಮಚಂದರ್ ರಾವ್ ಅವರ ನೇಮಕದ ಕುರಿತು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ “ಆಗ ಎಂಎಲ್‌ಸಿ ಆಗಿದ್ದ ರಾವ್, ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರಿಸಲಾದ ಆರೋಪಿಗಳಲ್ಲಿ ಒಬ್ಬರು” ಎಂದಿದ್ದಾರೆ.

“ರಾವ್ ಅವರ ನೇಮಕಾರಿ ಆದಿವಾಸಿಗಳ, ದಲಿತರ ವಿರುದ್ಧ ಯಾರು ಇರುತ್ತಾರೋ ಅವರಿಗೆ ಬಿಜೆಪಿಯಿಂದ ಪ್ರತಿಫಲ ಸಿಗುತ್ತದೆ ಎಂಬುದನ್ನು ತೋರಿಸುತ್ತದೆ” ಎಂದ ವಿಕ್ರಮಾರ್ಕ, “ಬಿಜೆಪಿ ರಾಷ್ಟ್ರದ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ. “ರಾವ್ ಅವರನ್ನು ಅಧ್ಯಕ್ಷರಾಗಿ ನೇಮಿಸುವ ಮೂಲಕ ನೀವು ದಲಿತರನ್ನು ಗುರಿಯಾಗಿಸಿಕೊಂಡಿದ್ದೀರಾ?” ಎಂದು ಬಿಜೆಪಿ ಹೈಕಮಾಂಡ್‌ ಅನ್ನು ಪ್ರಶ್ನಿಸಿದ್ದಾರೆ.

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲ 2016ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಜಾತಿ ತಾರತಮ್ಯಕ್ಕೆ ರೋಹಿತ್ ಬಲಿಯಾಗಿದ್ದಾರೆ ಎನ್ನಲಾಗಿದೆ. ರೋಹಿತ್ ಸಾವು ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆದಿತ್ತು.

ರೋಹಿತ್ ಸಾವು ಸಂಬಂಧ, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ರೋಹಿತ್ ನಿಧನದ ಎಂಟು ವರ್ಷಗಳ ನಂತರ, ಅಂದರೆ ಮೇ 2024ರಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯ ವರದಿಯನ್ನು ಸಲ್ಲಿಸಿದ್ದಾರೆ. ನ್ಯಾಯಾಲಯ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಮುಕ್ತಾಯ ವರದಿಯಲ್ಲಿ ರೋಹಿತ್ ವೇಮುಲ ದಲಿತನಲ್ಲ, ಒಬಿಸಿ ಎಂದು ಹೇಳಲಾಗಿದೆ.

ರಾಹುಲ್ ಗಾಂಧಿಯವರ ಮನವಿ ಮೇರೆಗೆ ತೆಲಂಗಾಣ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಯಲು ರೋಹಿತ್ ವೇಮುಲ ಕಾಯ್ದೆಯನ್ನು ಜಾರಿಗೆ ತರಲಿದೆ. ನಾವು ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಭವಿಷ್ಯದಲ್ಲಿ ಯಾವುದೇ ರೀತಿಯ ಕಾನೂನು ಸವಾಲನ್ನು ಎದುರಿಸದಂತೆ ಕಾಯ್ದೆಯನ್ನು ಸರಿಯಾಗಿ ಮತ್ತು ಸಂಪೂರ್ಣವಾಗಿ ಪರಿಶೀಲಿಸಲು ಕಾನೂನು ಇಲಾಖೆಗೆ ನೀಡಿದ್ದೇವೆ” ಎಂದು ಭಟ್ಟಿ ವಿಕ್ರಮಾರ್ಕ ಹೇಳಿದ್ದಾರೆ.

ರೋಹಿತ್ ವೇಮುಲ ಆತ್ಮಹತ್ಯೆಯನ್ನು ಒಂದು ಸಾಂಸ್ಥಿಕ ಕೊಲೆ ಎಂದು ಕರೆದ ವಿಕ್ರಮಾರ್ಕ, “ಪಿಎಚ್‌ಡಿ ಮಟ್ಟಕ್ಕೆ ತಲುಪಿದ್ದ ಯುವಕ, ವರ್ಣರಂಜಿತ ಜೀವನವನ್ನು ನಡೆಸುವ ಕನಸು ಕಂಡಿದ್ದ ಯುವಕ, ತನ್ನ ಜೀವನವನ್ನು ಕೊನೆಗೊಳಿಸುವ ನಿರ್ಧಾರ ತೆಗೆದುಕೊಳ್ಳುವ ಹಂತಕ್ಕೂ ಹೋಗಿದ್ದರೆ ಯೋಚಿಸಿ, ಅವರು ಆ ತೀರ್ಮಾನಕ್ಕೆ ಬರಲು ಏನು ಪ್ರೇರೇಪಿಸರಬಹುದು ಎಂದು. ಇದು ಸಾಂಸ್ಥಿಕ ಕೊಲೆಯಲ್ಲವೇ?” ಎಂದು ವಿಕ್ರಮಾರ್ಕ ಪ್ರಶ್ನಿಸಿದ್ದಾರೆ.

ಒಡಿಶಾ: ಬುಡಕಟ್ಟು ನಿಯಮ ಮೀರಿ ಮದುವೆ ಆರೋಪ-ಜೋಡಿಗೆ ನೇಗಿಲು ಕಟ್ಟಿ ಹೊಲ ಉಳುಮೆ ಮಾಡಿದ ಗ್ರಾಮಸ್ಥರು-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...