Homeಮುಖಪುಟಜಾಗತಿಕ ಭೂ-ರಾಜಕೀಯದಲ್ಲಿ ಮಧ್ಯಪ್ರಾಚ್ಯ ರಾಜಮನೆತನಗಳ ಆಟಗಳು

ಜಾಗತಿಕ ಭೂ-ರಾಜಕೀಯದಲ್ಲಿ ಮಧ್ಯಪ್ರಾಚ್ಯ ರಾಜಮನೆತನಗಳ ಆಟಗಳು

- Advertisement -
- Advertisement -

ಅಮೆರಿಕದ ಖ್ಯಾತ ಸ್ಟಾಂಡ್‌ಅಪ್ ಕಮೆಡಿಯನ್ ಜಾರ್ಜ್ ಕಾರ್ಲಿನ್ ಮಾತು ಹೀಗಿದೆ: “ಕೋತಿ ನಿನ್ನ ಬೆನ್ನು ಬಿಟ್ಟಿತು ಎಂದ ಕ್ಷಣ ಸರ್ಕಸ್ ಪಟ್ಟಣ ಬಿಟ್ಟಿದೆ ಎಂದು ಅರ್ಥ ಅಲ್ಲ. ಇದು ರಾಜಕೀಯ ಆಯ್ಕೆಗಳ ಬಗ್ಗೆ ಮಾಡುವ ತಮಾಷೆ. ಈ ವ್ಯಂಗ್ಯ ಟ್ರಂಪ್ ಅಧಿಕಾರದಿಂದ ಕೆಳಗಿಳಿದ ಖುಷಿಗೆ ಅನ್ವಯಿಸಿದರು, ಆಳುವ ವರ್ಗಗಳು ಮತದಾರರಿಗೆ ಸೃಷ್ಟಿಸುವ ರಾಜಕೀಯ ಆಯ್ಕೆಯ ಹೇಗಿರುತ್ತವೆ ಎಂಬುದರ ಎಚ್ಚರಿಕೆ ಕೂಡ. ಟ್ರಂಪ್ ಬದಲಿಗೆ ಬಂದಿರುವ ಜೋ ಬೈಡೆನ್ ಕೂಡ ತನ್ನ ಯುದ್ಧಪರ ನೀತಿಗಳಲ್ಲಿ, ವಿದೇಶಿ ನೀತಿಗಳಲ್ಲಿ, ಕಾರ್ಪೊರೇಟ್ ಪರ ನೀತಿಗಳಲ್ಲಿ ಟ್ರಂಪ್ ಹಾಗೆಯೆ. ಟ್ರಂಪ್ ಮಾದರಿ ಜೋಕೆರ್ ರೀತಿ ವರ್ತಿಸುವುದಿಲ್ಲ ಎನ್ನುವ ವ್ಯತ್ಯಾಸವಷ್ಟೆ.

2014 ಅಕ್ಟೋಬರ್ ತಿಂಗಳ ಮೊದಲ ವಾರ. ಒಬಾಮ ಅಧಿಕಾರಾವಧಿಯ ಸಮಯ. ಹಾರ್ವರ್ಡ್ ವಿಶ್ವವಿದ್ಯಾನಿಲಯದಲ್ಲಿ ಅಂದು ಅಮೆರಿಕದ ಉಪಾಧ್ಯಕ್ಷರಾಗಿದ್ದ ಜೋ ಬಿಡೆನ್ ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ’ಅವರ ಮಿತ್ರ ರಾಷ್ಟ್ರಗಳಾದ ಟರ್ಕಿ, ಸೌದಿ, ಯುಏಇ ಇನ್ನಿತರೆ ಅರಬ್ ರಾಷ್ಟ್ರಗಳು ಸಿರಿಯಾದಲ್ಲಿ ಅಧ್ಯಕ್ಷ ಅಸ್ಸಾದ್‌ನನ್ನು ಶತಾಯಗತಾಯ ಕೆಳಗಿಳಿಸಲು ಕೋಟಿಗಟ್ಟಲೆ ಹೇಗೆ ಹಣ ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿ ಇಸ್ಲಾಮಿಕ್ ಸ್ಟೇಟ್ ಎಂಬ ಭಯೋತ್ಪಾದನೆ ಸೃಷ್ಟಿಸಿದವು ಮತ್ತು ಹೇಗೆ ಅಮೆರಿಕ ಈ ಎಲ್ಲದರ ಭಾಗವಾಗಿತ್ತು, ಆದ್ದರಿಂದ ಸುನ್ನಿ ನೆರೆಹೊರೆಯವರ ಒಕ್ಕೂಟವನ್ನು ಹೇಗೆ ಒಟ್ಟುಗೂಡಿಸಲು ಸಾಧ್ಯವಾಯಿತು’ ಎಂಬ ವಿಷಯಗಳನ್ನು ಬಹಿರಂಗಪಡಿಸಿದ್ದಲ್ಲದೆ ’ಇದೆಲ್ಲಾ ಆಗಿದ್ದು ಏಕೆಂದರೆ ಅಮೆರಿಕಕ್ಕೆ ಮತ್ತೊಮ್ಮೆ ಮುಸ್ಲಿಂ ರಾಷ್ಟ್ರಕ್ಕೆ ಹೋಗಿ ಆಕ್ರಮಣಕಾರರಾಗಲು ಸಾಧ್ಯವಿಲ್ಲ. ಅದರ ನೇತೃತ್ವವನ್ನು ಸುನ್ನಿಗಳು ವಹಿಸಬೇಕಾಗಿದೆ’ ಎಂದು ಹೇಳುತ್ತಾರೆ. ಅಷ್ಟರಲ್ಲೇ ಮೈಕ್ ಆಫ್ ಆಗುತ್ತದೆ ಮತ್ತು ನಂತರದ ಧ್ವನಿ ಕೆಲವಷ್ಟೇ ಮಾಧ್ಯಮಗಳಿಗೆ ಸಿಗುತ್ತವೆ. ನಂತರದಲ್ಲಿ ಈ ಸುದ್ದಿ ದೊಡ್ಡದಾಗುವಷ್ಟರಲ್ಲಿ ಬಿಡೆನ್ ತನ್ನ ಮಿತ್ರರಾಷ್ಟ್ರಗಳ ಕ್ಷಮೆ ಕೇಳುತ್ತಾರೆ.

ಟ್ರಂಪ್ ಆಡಳಿತದ ಇತ್ತೀಚಿನ ರಾಜತಾಂತ್ರಿಕ ಸಾಧನೆಯೆಂದರೆ ಕಚ್ಚಾ ತೈಲದೊರೆಗಳಾದ ಸೌದಿ, ಎಮಿರಾಟಿ, ಬ್ರಹರೈನ್, ಕುವೈಟ್, ಕತಾರ್, ಒಮನ್ ರಾಷ್ಟ್ರಗಳ ಆಳುವ ವರ್ಗಗಳನ್ನು ಇಸ್ರೇಲ್ ಜತೆಗೆ ಕೂಡಿಸಿದ್ದು. ವರ್ಷಗಳಿಂದ ಯುಎಇ, ಸೌದಿ ಮತ್ತು ಇತರ ಕೊಲ್ಲಿ ರಾಜಪ್ರಭುತ್ವಗಳು ಕದ್ದು ಮುಚ್ಚಿ ಇಸ್ರೇಲ್ ಜೊತೆ ಭದ್ರತೆ, ಗುಪ್ತಚರ ಮತ್ತು ಮಿಲಿಟರಿ ಕ್ಷೇತ್ರಗಳಲ್ಲಿ ಸಹಕರಿಸುತ್ತಿದ್ದವು. ಅರಬ್ ರಾಷ್ಟ್ರಗಳ ಸುತ್ತಲಿನಲ್ಲಿ ಬೆಳೆಯುತ್ತಿರುವ ಇರಾನಿನ ಪ್ರಭಾವ ಮತ್ತು ಕ್ಷೀಣಿಸುತ್ತಿರುವ ಅಮೆರಿಕ ಇಸ್ರೇಲ್ ಪ್ರಭಾವ ಈ ಅಸಾಮಾನ್ಯ ಒಕ್ಕೂಟಕ್ಕೆ ಕಾರಣವಾಗಿದೆ. ಇರಾನ್ ಬಹುತೇಕವಾಗಿ ಶಿಯಾ ಇಸ್ಲಾಂ ಅನುಸರಿಸಿದರೆ, ಅರಬ್ ರಾಜಮನೆತನಗಳು ಬಹುತೇಕವಾಗಿ ಸುನ್ನಿ ಇಸ್ಲಾಂ ಅನುಸರಿಸುತ್ತದೆ.

ಒಂದು ಕಡೆ ಬಹಿರಂಗಗೊಳ್ಳುತ್ತಿರುವ ಈ ಒಕ್ಕೂಟವಾದರೆ ಇನ್ನೊಂದೆಡೆ ಅರಬ್ ವಸಂತದ ಪ್ರಭಾವ ಇಳಿಮುಖವಾಗಿ ಅಲ್ಲಿನ ಬಹುತೇಕ ರಾಷ್ಟ್ರಗಳಲ್ಲಿ ಸರ್ವಾಧಿಕಾರ (ಈಜಿಪ್ಟ್), ಅರಾಜಕತೆ, ಗುಲಾಮರ ಮಾರಾಟ(ಲಿಬಿಯಾ), ಆಂತರಿಕ ಯುದ್ದ (ಸಿರಿಯಾ), ಯುದ್ಧದ ನಂತರ ಮರುನಿರ್ಮಾಣದ ಹೆಜ್ಜೆಗಳು (ಇರಾಕ್), ಅತ್ಯಂತ ದೊಡ್ಡ ಮಾನವ ನಿರ್ಮಿತ ದುರಂತದ ನರಮೇಧ (ಯೆಮೆನ್) ಮತ್ತು ಅಮೆರಿಕದ ಸಾಮ್ರಾಜ್ಯಶಾಹಿ ಕುತಂತ್ರ ತಾಂಡವವಾಡಿತ್ತಿದೆ. ಸತತ 40 ವರ್ಷಗಳಿಗಿಂತ ಹೆಚ್ಚು ಅಂತಾರಾಷ್ಟ್ರೀಯ ನಿರ್ಬಂಧಗಳಿಂದ ತತ್ತರಿಸಿಯೂ ಅಮರಿಕಗೆ ಮಣಿಯದೆ ಸೆಟೆದು ನಿಂತಿರುವ ಇರಾನ್ ಈಗ ಹೊಸ ಶತ್ರು. ಇರಾನಿನ ಪ್ರಭಾವ ಇರಾಕ್, ಸಿರಿಯಾ ಮತ್ತು ಯೆಮೆನ್ ಯುದ್ಧದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಗೋಚರಿಸುತ್ತಿದೆ. ಇಸ್ರೇಲ್, ಇರಾನ್, ಸಿರಿಯಾ, ಲೆಬನಾನ್, ಯೆಮೆನ್ ದೇಶದ ಕಲಹಗಳಲ್ಲಿ ಪರೋಕ್ಷ ಯುದ್ಧ ಸಾರಿವೆ.

ಸಿರಿಯಾ ಯುದ್ಧದ ನಂತರ ಇರಾನಿನ ಸೈನಿಕರು ಈಗ ಇಸ್ರೇಲ್ ಗಡಿಯವರೆಗೂ ವಿಸ್ತರಿಸಿದ್ದಾರೆ. ಇಸ್ಲಾಮಿಕ್ ಸ್ಟೇಟ್ ಎಂಬ ಭಯೋತ್ಪಾದಕ ಪೆಡಂಭೂತವನ್ನು ಮಣಿಸುವಲ್ಲಿ ಇರಾನಿಯ ಕ್ರಾಂತಿಕಾರಿ ಸೈನಿಕರು ಬಹುಮುಖ್ಯ ಪಾತ್ರ ವಹಿಸಿದ್ದರು. ಮುಖ್ಯವಾಗಿ ಜನವರಿ 3, 2020ರಲ್ಲಿ ಅಂತಾರಾಷ್ಟ್ರೀಯ ಕಾನೂನುಗಳ ಉಲ್ಲಂಘಿಸಿ ಕೊಲ್ಲಲ್ಪಟ್ಟ ಇರಾನಿ ಕ್ರಾಂತಿಕಾರಿ ಸೈನಿಕ ಪಡೆಯ ಮುಖ್ಯಸ್ಥ ಜನರಲ್ ಸೊಲೈಮಾನಿ ಪಾತ್ರ ಬಹು ದೊಡ್ಡದು. ಒಂದು ಕಡೆ ಇರಾನ್ ದೇಶವನ್ನು ಅಮೆರಿಕ, ಇಸ್ರೇಲ್ ಮತ್ತು ಹೊಸ ಒಕ್ಕೂಟದ ಪಡೆಗಳು ಸುತ್ತುವರೆದರೆ. ಇರಾನಿನ ಸೈನಿಕರು ಇಸ್ರೇಲ್ ಮತ್ತು ಅರಬ್ಬೀ ರಾಜಪ್ರಭುತ್ವಗಳನ್ನೂ ಸುತ್ತುವರೆದಿದ್ದಾರೆ. ಸಾಂಪ್ರದಾಯಿಕ ಯುದ್ಧದಲ್ಲಿ ಇರಾನ್, ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಗೆಲ್ಲಲಾಗುವುದಿಲ್ಲ. ಆದರೆ ಅಸಂಪ್ರದಾಯಕ ಯುದ್ಧದಲ್ಲಿ ಇರಾನ್ ಮೇಲುಗೈ ಸಾಧಿಸಿದೆ. ಇರಾನ್‌ಗೆ ಸಾಮ್ರಾಜ್ಯಶಾಹಿ ರಶಿಯಾ ಮತ್ತು ಚೀನಾ ಬೆಂಬಲವಿಲ್ಲದೆ ಯಾವುದೇ ತರಹದ ಗೆಲುವು ಅಸಾಧ್ಯ. ಆದ್ದರಿಂದ ಪ್ರತಿರೋಧದ ಶಕ್ತಿಯಾಗಿ ಇರಾನ್, ರಶಿಯಾ ಮತ್ತು ಚೀನಾ ಒಂದಾಗುತ್ತಿದ್ದಾರೆ, ತನ್ನ ದುರಹಂಕಾರಿ, ಸರ್ವಾಧಿಕಾರಿ, ದಮನಕಾರಿ ನಡೆಗಳಿಂದ ಅರಬ್ ಒಕ್ಕೊಟ ಅಮೇರಿಕ ಮತ್ತು ಇಸ್ರೇಲ್ ಜೊತೆ ಗುರುತಿಸಿಕೊಳ್ಳುತ್ತಿದೆ.

ಸಾಮ್ರಾಜ್ಯಶಾಹಿ ಶಕ್ತಿಗಳ ಪೈಪೋಟಿ ಮತ್ತು ಇಸ್ಲಾಮಿಕ್ ಪ್ರಪಂಚದ ಮೇಲೆ ಬೆಳೆಯುತ್ತಿರುವ ಚೀನಾದ ಪ್ರಭಾವ
ಸೋವಿಯೆತ್ ಯೂನಿಯನ್ ಪತನದ ನಂತರ ಏಕಪಕ್ಷೀಯವಾಗಿದ್ದ ಜಾಗತಿಕ ರಾಜಕೀಯ ಚೀನಾ ಪ್ರಗತಿಯಿಂದ ಮತ್ತೊಮ್ಮೆ ಬಹುಮುಖ ಜಾಗತಿಕ ರಾಜಕೀಯಕ್ಕೆ ನಾಂದಿಯಾಗಿದೆ. ಚೀನಾ ತನ್ನ ರಾಜತಾಂತ್ರಿಕತೆ ಮತ್ತು ಆರ್ಥಿಕ ಶಕ್ತಿಯಿಂದ ಇಸ್ಲಾಮಿಕ್ ರಾಷ್ಟ್ರಗಳತ್ತ ಒಳ್ಳೆಯ ಸ್ನೇಹ ಮತ್ತು ಬಾಂಧವ್ಯವನ್ನು ಸಾಧಿಸಿ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಗೆ ನೆರವಾಗುತ್ತಿದೆ. ಚೀನಾ ತನ್ನ ಎರಡನೆ ಸಿಲ್ಕ್ ರೋಡ್ ಯೋಜನೆಯಡಿ ಪಾಕಿಸ್ತಾನ, ಇರಾನ್, ಇರಾಕ್, ಸಿರಿಯಾ, ಈಜಿಪ್ಟ್, ಸೌದಿ, ಎಮಿರಾಟಿ, ಓಮನ್, ಕತಾರ್, ಟರ್ಕಿ, ಆಫ್ರಿಕಾದ ಉತ್ತರ ಭಾಗದ ಮುಸ್ಲಿಂ ರಾಷ್ಟ್ರಗಳು ಮತ್ತು ಆಗ್ನೇಯ ಏಷ್ಯಾದ, ಬಾಂಗ್ಲಾದೇಶ, ಮಲೇಷ್ಯಾ, ಇಂಡೋನೇಷ್ಯಾ ಬ್ರುನೈ ರಾಷ್ಟ್ರಗಳೊಂದಿಗೆ ಸ್ನೇಹ ಸಂಬಂಧಗಳನ್ನು ಹೆಚ್ಚಿಸಿಕೊಳ್ಳುತ್ತಿದೆ.

ತನ್ನ ತಂತ್ರಜ್ಞಾನ, ಮೂಲಸೌಕರ್ಯ ಯೋಜನೆಗಳು, ಬಂದರುಗಳು, ರೈಲ್ವೆ ಸಂಪರ್ಕ, ವ್ಯಾಪಾರ ವಹಿವಾಟು ಮೂಲಕ ತನ್ನ ಶಕ್ತಿಯನ್ನು ಶರವೇಗದಲ್ಲಿ ಬಲಪಡಿಸಿಕೊಳ್ಳುತ್ತಿದೆ. ಹೆಚ್ಚಾಗಿ ಮುಸ್ಲಿಂ ರಾಷ್ಟ್ರಗಳಲ್ಲಿ ಚೀನಾ ’ಪಾಲುದಾರಿಕೆ’, ’ರಾಜಕೀಯ ಸಮಾನತೆ’, ಮತ್ತು ’ಇಬ್ಬರ ಸಹಭಾಗಿತ್ವದ ಗೆಲುವು’ ಸಿದ್ಧಾಂತದ ಸಹಕಾರಿಯಂತೆ ಕಂಡರೆ, ಅದೇ ಪಾಶ್ಚಾತ್ಯ ಅಮೆರಿಕದ ಅಫ್ಘಾನಿಸ್ತಾನ, ಇರಾಕ್, ಸಿರಿಯಾ, ಲಿಬಿಯಾ, ಸುಡಾನ್, ಯೆಮೆನ್ ಯುದ್ಧಗಳ ನಂತರ ಹಸ್ತಕ್ಷೇಪವಾದಿ ವೈರಿಯಾಗಿ ಕಾಣತೊಡಗಿದೆ. ಸೋವಿಯೆತ್ ಪತನದ ನಂತರ ಸುಮ್ಮನಿದ್ದ ರಶಿಯಾ ಮತ್ತೆ ತನ್ನ ಮಿಲಿಟರಿ ಸಾಮರ್ಥ್ಯನನ್ನು ಸಿರಿಯಾದಲ್ಲಿ ನಿರೂಪಿಸಿದೆ. ಆದರೆ ರಷ್ಯಾಗೆ ತನ್ನದೇ ಆದ ಆರ್ಥಿಕ ಸವಾಲುಗಳಿವೆ. ಆದ್ದರಿಂದ ಅದು ಚೀನಾಗೆ ಹತ್ತಿರವಾಗುತ್ತಿದೆ.

ಇವೆಲ್ಲದರಲ್ಲಿ ಹೆಚ್ಚಾಗಿ ನಷ್ಟ ಅನುಭವಿಸುತ್ತಿರುವುದೇ ಭಾರತ. ಮೋದಿ ಸರ್ಕಾರ ತನ್ನೆಲ್ಲ ಸಾಂಪ್ರದಾಯಿಕ ಸ್ನೇಹಗಳನ್ನು ಬದಿಗಿಟ್ಟು ಅಮೆರಿಕ ಇಸ್ರೇಲ್ ಮತ್ತು ಅರಬ್ಬೀ ರಾಜಮನೆತನಗಳ ಸ್ನೇಹಕ್ಕೆ ಕೈ ಚಾಚುತ್ತಿದೆ. ಅಮೆರಿಕದ ಒತ್ತಡದಿಂದ ಇರಾನಿನೊಂದಿಗಿನ ಐತಿಹಾಸಿಕ ಬಾಂಧವ್ಯವನ್ನು, ಅನನ್ಯ ಸ್ನೇಹವನ್ನು ಹಾಳು ಮಾಡಿಕೊಂಡಿರುವ ಭಾರತ ಚಾಬಹಾರ್ ಬಂದರು ಮತ್ತು ಇರಾನಿನ ಬಹುದೊಡ್ಡ ಕಚ್ಚಾ ತೈಲ ಭಾವಿ ಫಾರ್ಜಾಡ್-ಬಿ ಕಳೆದುಕೊಂಡಿದೆ. ತನ್ನ ಮುಸ್ಲಿಂ ದ್ವೇಷಿ ರಾಜಕಾರಣದಿಂದ ತನ್ನ ನೆರೆಹೊರೆಯ ರಾಷ್ಟ್ರಗಳೆನ್ನಲ್ಲ ದೂರ ಮಾಡಿಕೊಂಡಿರುವ ಭಾರತ ಈಗ ತನ್ನ ಸಾಂಪ್ರದಾಯಿಕ ಮಿತ್ರರಾಷ್ಟ್ರ ರಷ್ಯಾವನ್ನು ಕೂಡ ದೂರ ಮಾಡಿಕೊಳ್ಳುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರಷ್ಯಾದ ಅಂತರರಾಷ್ಟ್ರೀಯ ವ್ಯವಹಾರಗಳ ಮಂಡಳಿಯ ಅಂದ್ರೆ ಕೋರ್ಟುನೋವ್, ಚೀನಾದ ಗ್ಲೋಬಲ್ ಟೈಮ್ಸ್‌ನಲ್ಲಿ ಬರೆದಿರುವ ’ರಶಿಯಾ ಪೂರ್ವಕ್ಕೆ ಭಾರತ ಪಶ್ಚಿಮಕ್ಕೆ, ಸಂಬಂಧಗಳ ಹದಗೆಡುವಿಕೆ’ ಬರಹವೇ ಸಾಕ್ಷಿ.

ಮಧ್ಯಪ್ರಾಚ್ಯ ಏಷ್ಯಾ ಐತಿಹಾಸಿಕವಾಗಿ ಇಡೀ ಜಗತ್ತಿಗೆ ಬಹಳಷ್ಟು ಹೊಸದನ್ನು ಕೊಟ್ಟಿದೆ. ಒಳ್ಳೆಯ ಬದಲಾವಣೆಗಳಿಗೂ, ಕೆಟ್ಟ ಬದಲಾವಣೆಗಳಿಗೂ ನಾಂದಿ ಹಾಡಿದೆ. ಆದರೆ ಪ್ಯಾಲೆಸ್ಟೀನ್‌ಅನ್ನು ನಡುನೀರಿನಲ್ಲಿ ಕೈಬಿಟ್ಟು ಬಹಿರಂಗವಾಗಿ ಅನಾವರಣಗೊಳ್ಳುತ್ತಿರುವ ಈ ಸರ್ವಾಧಿಕಾರಿ ರಾಜಮನೆತನಗಳ ಒಕ್ಕೂಟದಿಂದ ಅರಬ್ ರಾಷ್ಟ್ರಗಳಿಂದಾಚೆಇರುವ ೮೦% ಮುಸಲ್ಮಾನರ ಮೇಲೆ ಯಾವ ಪರಿಣಾಮ ಬೀರುತ್ತದೆಯೆಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...