Homeಮುಖಪುಟಜಾಗತಿಕ ಭೂ-ರಾಜಕೀಯದಲ್ಲಿ ಮಧ್ಯಪ್ರಾಚ್ಯ ರಾಜಮನೆತನಗಳ ಆಟಗಳು

ಜಾಗತಿಕ ಭೂ-ರಾಜಕೀಯದಲ್ಲಿ ಮಧ್ಯಪ್ರಾಚ್ಯ ರಾಜಮನೆತನಗಳ ಆಟಗಳು

- Advertisement -
- Advertisement -

ಅಮೆರಿಕದ ಖ್ಯಾತ ಸ್ಟಾಂಡ್‌ಅಪ್ ಕಮೆಡಿಯನ್ ಜಾರ್ಜ್ ಕಾರ್ಲಿನ್ ಮಾತು ಹೀಗಿದೆ: “ಕೋತಿ ನಿನ್ನ ಬೆನ್ನು ಬಿಟ್ಟಿತು ಎಂದ ಕ್ಷಣ ಸರ್ಕಸ್ ಪಟ್ಟಣ ಬಿಟ್ಟಿದೆ ಎಂದು ಅರ್ಥ ಅಲ್ಲ. ಇದು ರಾಜಕೀಯ ಆಯ್ಕೆಗಳ ಬಗ್ಗೆ ಮಾಡುವ ತಮಾಷೆ. ಈ ವ್ಯಂಗ್ಯ ಟ್ರಂಪ್ ಅಧಿಕಾರದಿಂದ ಕೆಳಗಿಳಿದ ಖುಷಿಗೆ ಅನ್ವಯಿಸಿದರು, ಆಳುವ ವರ್ಗಗಳು ಮತದಾರರಿಗೆ ಸೃಷ್ಟಿಸುವ ರಾಜಕೀಯ ಆಯ್ಕೆಯ ಹೇಗಿರುತ್ತವೆ ಎಂಬುದರ ಎಚ್ಚರಿಕೆ ಕೂಡ. ಟ್ರಂಪ್ ಬದಲಿಗೆ ಬಂದಿರುವ ಜೋ ಬೈಡೆನ್ ಕೂಡ ತನ್ನ ಯುದ್ಧಪರ ನೀತಿಗಳಲ್ಲಿ, ವಿದೇಶಿ ನೀತಿಗಳಲ್ಲಿ, ಕಾರ್ಪೊರೇಟ್ ಪರ ನೀತಿಗಳಲ್ಲಿ ಟ್ರಂಪ್ ಹಾಗೆಯೆ. ಟ್ರಂಪ್ ಮಾದರಿ ಜೋಕೆರ್ ರೀತಿ ವರ್ತಿಸುವುದಿಲ್ಲ ಎನ್ನುವ ವ್ಯತ್ಯಾಸವಷ್ಟೆ.

2014 ಅಕ್ಟೋಬರ್ ತಿಂಗಳ ಮೊದಲ ವಾರ. ಒಬಾಮ ಅಧಿಕಾರಾವಧಿಯ ಸಮಯ. ಹಾರ್ವರ್ಡ್ ವಿಶ್ವವಿದ್ಯಾನಿಲಯದಲ್ಲಿ ಅಂದು ಅಮೆರಿಕದ ಉಪಾಧ್ಯಕ್ಷರಾಗಿದ್ದ ಜೋ ಬಿಡೆನ್ ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ’ಅವರ ಮಿತ್ರ ರಾಷ್ಟ್ರಗಳಾದ ಟರ್ಕಿ, ಸೌದಿ, ಯುಏಇ ಇನ್ನಿತರೆ ಅರಬ್ ರಾಷ್ಟ್ರಗಳು ಸಿರಿಯಾದಲ್ಲಿ ಅಧ್ಯಕ್ಷ ಅಸ್ಸಾದ್‌ನನ್ನು ಶತಾಯಗತಾಯ ಕೆಳಗಿಳಿಸಲು ಕೋಟಿಗಟ್ಟಲೆ ಹೇಗೆ ಹಣ ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿ ಇಸ್ಲಾಮಿಕ್ ಸ್ಟೇಟ್ ಎಂಬ ಭಯೋತ್ಪಾದನೆ ಸೃಷ್ಟಿಸಿದವು ಮತ್ತು ಹೇಗೆ ಅಮೆರಿಕ ಈ ಎಲ್ಲದರ ಭಾಗವಾಗಿತ್ತು, ಆದ್ದರಿಂದ ಸುನ್ನಿ ನೆರೆಹೊರೆಯವರ ಒಕ್ಕೂಟವನ್ನು ಹೇಗೆ ಒಟ್ಟುಗೂಡಿಸಲು ಸಾಧ್ಯವಾಯಿತು’ ಎಂಬ ವಿಷಯಗಳನ್ನು ಬಹಿರಂಗಪಡಿಸಿದ್ದಲ್ಲದೆ ’ಇದೆಲ್ಲಾ ಆಗಿದ್ದು ಏಕೆಂದರೆ ಅಮೆರಿಕಕ್ಕೆ ಮತ್ತೊಮ್ಮೆ ಮುಸ್ಲಿಂ ರಾಷ್ಟ್ರಕ್ಕೆ ಹೋಗಿ ಆಕ್ರಮಣಕಾರರಾಗಲು ಸಾಧ್ಯವಿಲ್ಲ. ಅದರ ನೇತೃತ್ವವನ್ನು ಸುನ್ನಿಗಳು ವಹಿಸಬೇಕಾಗಿದೆ’ ಎಂದು ಹೇಳುತ್ತಾರೆ. ಅಷ್ಟರಲ್ಲೇ ಮೈಕ್ ಆಫ್ ಆಗುತ್ತದೆ ಮತ್ತು ನಂತರದ ಧ್ವನಿ ಕೆಲವಷ್ಟೇ ಮಾಧ್ಯಮಗಳಿಗೆ ಸಿಗುತ್ತವೆ. ನಂತರದಲ್ಲಿ ಈ ಸುದ್ದಿ ದೊಡ್ಡದಾಗುವಷ್ಟರಲ್ಲಿ ಬಿಡೆನ್ ತನ್ನ ಮಿತ್ರರಾಷ್ಟ್ರಗಳ ಕ್ಷಮೆ ಕೇಳುತ್ತಾರೆ.

ಟ್ರಂಪ್ ಆಡಳಿತದ ಇತ್ತೀಚಿನ ರಾಜತಾಂತ್ರಿಕ ಸಾಧನೆಯೆಂದರೆ ಕಚ್ಚಾ ತೈಲದೊರೆಗಳಾದ ಸೌದಿ, ಎಮಿರಾಟಿ, ಬ್ರಹರೈನ್, ಕುವೈಟ್, ಕತಾರ್, ಒಮನ್ ರಾಷ್ಟ್ರಗಳ ಆಳುವ ವರ್ಗಗಳನ್ನು ಇಸ್ರೇಲ್ ಜತೆಗೆ ಕೂಡಿಸಿದ್ದು. ವರ್ಷಗಳಿಂದ ಯುಎಇ, ಸೌದಿ ಮತ್ತು ಇತರ ಕೊಲ್ಲಿ ರಾಜಪ್ರಭುತ್ವಗಳು ಕದ್ದು ಮುಚ್ಚಿ ಇಸ್ರೇಲ್ ಜೊತೆ ಭದ್ರತೆ, ಗುಪ್ತಚರ ಮತ್ತು ಮಿಲಿಟರಿ ಕ್ಷೇತ್ರಗಳಲ್ಲಿ ಸಹಕರಿಸುತ್ತಿದ್ದವು. ಅರಬ್ ರಾಷ್ಟ್ರಗಳ ಸುತ್ತಲಿನಲ್ಲಿ ಬೆಳೆಯುತ್ತಿರುವ ಇರಾನಿನ ಪ್ರಭಾವ ಮತ್ತು ಕ್ಷೀಣಿಸುತ್ತಿರುವ ಅಮೆರಿಕ ಇಸ್ರೇಲ್ ಪ್ರಭಾವ ಈ ಅಸಾಮಾನ್ಯ ಒಕ್ಕೂಟಕ್ಕೆ ಕಾರಣವಾಗಿದೆ. ಇರಾನ್ ಬಹುತೇಕವಾಗಿ ಶಿಯಾ ಇಸ್ಲಾಂ ಅನುಸರಿಸಿದರೆ, ಅರಬ್ ರಾಜಮನೆತನಗಳು ಬಹುತೇಕವಾಗಿ ಸುನ್ನಿ ಇಸ್ಲಾಂ ಅನುಸರಿಸುತ್ತದೆ.

ಒಂದು ಕಡೆ ಬಹಿರಂಗಗೊಳ್ಳುತ್ತಿರುವ ಈ ಒಕ್ಕೂಟವಾದರೆ ಇನ್ನೊಂದೆಡೆ ಅರಬ್ ವಸಂತದ ಪ್ರಭಾವ ಇಳಿಮುಖವಾಗಿ ಅಲ್ಲಿನ ಬಹುತೇಕ ರಾಷ್ಟ್ರಗಳಲ್ಲಿ ಸರ್ವಾಧಿಕಾರ (ಈಜಿಪ್ಟ್), ಅರಾಜಕತೆ, ಗುಲಾಮರ ಮಾರಾಟ(ಲಿಬಿಯಾ), ಆಂತರಿಕ ಯುದ್ದ (ಸಿರಿಯಾ), ಯುದ್ಧದ ನಂತರ ಮರುನಿರ್ಮಾಣದ ಹೆಜ್ಜೆಗಳು (ಇರಾಕ್), ಅತ್ಯಂತ ದೊಡ್ಡ ಮಾನವ ನಿರ್ಮಿತ ದುರಂತದ ನರಮೇಧ (ಯೆಮೆನ್) ಮತ್ತು ಅಮೆರಿಕದ ಸಾಮ್ರಾಜ್ಯಶಾಹಿ ಕುತಂತ್ರ ತಾಂಡವವಾಡಿತ್ತಿದೆ. ಸತತ 40 ವರ್ಷಗಳಿಗಿಂತ ಹೆಚ್ಚು ಅಂತಾರಾಷ್ಟ್ರೀಯ ನಿರ್ಬಂಧಗಳಿಂದ ತತ್ತರಿಸಿಯೂ ಅಮರಿಕಗೆ ಮಣಿಯದೆ ಸೆಟೆದು ನಿಂತಿರುವ ಇರಾನ್ ಈಗ ಹೊಸ ಶತ್ರು. ಇರಾನಿನ ಪ್ರಭಾವ ಇರಾಕ್, ಸಿರಿಯಾ ಮತ್ತು ಯೆಮೆನ್ ಯುದ್ಧದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಗೋಚರಿಸುತ್ತಿದೆ. ಇಸ್ರೇಲ್, ಇರಾನ್, ಸಿರಿಯಾ, ಲೆಬನಾನ್, ಯೆಮೆನ್ ದೇಶದ ಕಲಹಗಳಲ್ಲಿ ಪರೋಕ್ಷ ಯುದ್ಧ ಸಾರಿವೆ.

ಸಿರಿಯಾ ಯುದ್ಧದ ನಂತರ ಇರಾನಿನ ಸೈನಿಕರು ಈಗ ಇಸ್ರೇಲ್ ಗಡಿಯವರೆಗೂ ವಿಸ್ತರಿಸಿದ್ದಾರೆ. ಇಸ್ಲಾಮಿಕ್ ಸ್ಟೇಟ್ ಎಂಬ ಭಯೋತ್ಪಾದಕ ಪೆಡಂಭೂತವನ್ನು ಮಣಿಸುವಲ್ಲಿ ಇರಾನಿಯ ಕ್ರಾಂತಿಕಾರಿ ಸೈನಿಕರು ಬಹುಮುಖ್ಯ ಪಾತ್ರ ವಹಿಸಿದ್ದರು. ಮುಖ್ಯವಾಗಿ ಜನವರಿ 3, 2020ರಲ್ಲಿ ಅಂತಾರಾಷ್ಟ್ರೀಯ ಕಾನೂನುಗಳ ಉಲ್ಲಂಘಿಸಿ ಕೊಲ್ಲಲ್ಪಟ್ಟ ಇರಾನಿ ಕ್ರಾಂತಿಕಾರಿ ಸೈನಿಕ ಪಡೆಯ ಮುಖ್ಯಸ್ಥ ಜನರಲ್ ಸೊಲೈಮಾನಿ ಪಾತ್ರ ಬಹು ದೊಡ್ಡದು. ಒಂದು ಕಡೆ ಇರಾನ್ ದೇಶವನ್ನು ಅಮೆರಿಕ, ಇಸ್ರೇಲ್ ಮತ್ತು ಹೊಸ ಒಕ್ಕೂಟದ ಪಡೆಗಳು ಸುತ್ತುವರೆದರೆ. ಇರಾನಿನ ಸೈನಿಕರು ಇಸ್ರೇಲ್ ಮತ್ತು ಅರಬ್ಬೀ ರಾಜಪ್ರಭುತ್ವಗಳನ್ನೂ ಸುತ್ತುವರೆದಿದ್ದಾರೆ. ಸಾಂಪ್ರದಾಯಿಕ ಯುದ್ಧದಲ್ಲಿ ಇರಾನ್, ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಗೆಲ್ಲಲಾಗುವುದಿಲ್ಲ. ಆದರೆ ಅಸಂಪ್ರದಾಯಕ ಯುದ್ಧದಲ್ಲಿ ಇರಾನ್ ಮೇಲುಗೈ ಸಾಧಿಸಿದೆ. ಇರಾನ್‌ಗೆ ಸಾಮ್ರಾಜ್ಯಶಾಹಿ ರಶಿಯಾ ಮತ್ತು ಚೀನಾ ಬೆಂಬಲವಿಲ್ಲದೆ ಯಾವುದೇ ತರಹದ ಗೆಲುವು ಅಸಾಧ್ಯ. ಆದ್ದರಿಂದ ಪ್ರತಿರೋಧದ ಶಕ್ತಿಯಾಗಿ ಇರಾನ್, ರಶಿಯಾ ಮತ್ತು ಚೀನಾ ಒಂದಾಗುತ್ತಿದ್ದಾರೆ, ತನ್ನ ದುರಹಂಕಾರಿ, ಸರ್ವಾಧಿಕಾರಿ, ದಮನಕಾರಿ ನಡೆಗಳಿಂದ ಅರಬ್ ಒಕ್ಕೊಟ ಅಮೇರಿಕ ಮತ್ತು ಇಸ್ರೇಲ್ ಜೊತೆ ಗುರುತಿಸಿಕೊಳ್ಳುತ್ತಿದೆ.

ಸಾಮ್ರಾಜ್ಯಶಾಹಿ ಶಕ್ತಿಗಳ ಪೈಪೋಟಿ ಮತ್ತು ಇಸ್ಲಾಮಿಕ್ ಪ್ರಪಂಚದ ಮೇಲೆ ಬೆಳೆಯುತ್ತಿರುವ ಚೀನಾದ ಪ್ರಭಾವ
ಸೋವಿಯೆತ್ ಯೂನಿಯನ್ ಪತನದ ನಂತರ ಏಕಪಕ್ಷೀಯವಾಗಿದ್ದ ಜಾಗತಿಕ ರಾಜಕೀಯ ಚೀನಾ ಪ್ರಗತಿಯಿಂದ ಮತ್ತೊಮ್ಮೆ ಬಹುಮುಖ ಜಾಗತಿಕ ರಾಜಕೀಯಕ್ಕೆ ನಾಂದಿಯಾಗಿದೆ. ಚೀನಾ ತನ್ನ ರಾಜತಾಂತ್ರಿಕತೆ ಮತ್ತು ಆರ್ಥಿಕ ಶಕ್ತಿಯಿಂದ ಇಸ್ಲಾಮಿಕ್ ರಾಷ್ಟ್ರಗಳತ್ತ ಒಳ್ಳೆಯ ಸ್ನೇಹ ಮತ್ತು ಬಾಂಧವ್ಯವನ್ನು ಸಾಧಿಸಿ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಗೆ ನೆರವಾಗುತ್ತಿದೆ. ಚೀನಾ ತನ್ನ ಎರಡನೆ ಸಿಲ್ಕ್ ರೋಡ್ ಯೋಜನೆಯಡಿ ಪಾಕಿಸ್ತಾನ, ಇರಾನ್, ಇರಾಕ್, ಸಿರಿಯಾ, ಈಜಿಪ್ಟ್, ಸೌದಿ, ಎಮಿರಾಟಿ, ಓಮನ್, ಕತಾರ್, ಟರ್ಕಿ, ಆಫ್ರಿಕಾದ ಉತ್ತರ ಭಾಗದ ಮುಸ್ಲಿಂ ರಾಷ್ಟ್ರಗಳು ಮತ್ತು ಆಗ್ನೇಯ ಏಷ್ಯಾದ, ಬಾಂಗ್ಲಾದೇಶ, ಮಲೇಷ್ಯಾ, ಇಂಡೋನೇಷ್ಯಾ ಬ್ರುನೈ ರಾಷ್ಟ್ರಗಳೊಂದಿಗೆ ಸ್ನೇಹ ಸಂಬಂಧಗಳನ್ನು ಹೆಚ್ಚಿಸಿಕೊಳ್ಳುತ್ತಿದೆ.

ತನ್ನ ತಂತ್ರಜ್ಞಾನ, ಮೂಲಸೌಕರ್ಯ ಯೋಜನೆಗಳು, ಬಂದರುಗಳು, ರೈಲ್ವೆ ಸಂಪರ್ಕ, ವ್ಯಾಪಾರ ವಹಿವಾಟು ಮೂಲಕ ತನ್ನ ಶಕ್ತಿಯನ್ನು ಶರವೇಗದಲ್ಲಿ ಬಲಪಡಿಸಿಕೊಳ್ಳುತ್ತಿದೆ. ಹೆಚ್ಚಾಗಿ ಮುಸ್ಲಿಂ ರಾಷ್ಟ್ರಗಳಲ್ಲಿ ಚೀನಾ ’ಪಾಲುದಾರಿಕೆ’, ’ರಾಜಕೀಯ ಸಮಾನತೆ’, ಮತ್ತು ’ಇಬ್ಬರ ಸಹಭಾಗಿತ್ವದ ಗೆಲುವು’ ಸಿದ್ಧಾಂತದ ಸಹಕಾರಿಯಂತೆ ಕಂಡರೆ, ಅದೇ ಪಾಶ್ಚಾತ್ಯ ಅಮೆರಿಕದ ಅಫ್ಘಾನಿಸ್ತಾನ, ಇರಾಕ್, ಸಿರಿಯಾ, ಲಿಬಿಯಾ, ಸುಡಾನ್, ಯೆಮೆನ್ ಯುದ್ಧಗಳ ನಂತರ ಹಸ್ತಕ್ಷೇಪವಾದಿ ವೈರಿಯಾಗಿ ಕಾಣತೊಡಗಿದೆ. ಸೋವಿಯೆತ್ ಪತನದ ನಂತರ ಸುಮ್ಮನಿದ್ದ ರಶಿಯಾ ಮತ್ತೆ ತನ್ನ ಮಿಲಿಟರಿ ಸಾಮರ್ಥ್ಯನನ್ನು ಸಿರಿಯಾದಲ್ಲಿ ನಿರೂಪಿಸಿದೆ. ಆದರೆ ರಷ್ಯಾಗೆ ತನ್ನದೇ ಆದ ಆರ್ಥಿಕ ಸವಾಲುಗಳಿವೆ. ಆದ್ದರಿಂದ ಅದು ಚೀನಾಗೆ ಹತ್ತಿರವಾಗುತ್ತಿದೆ.

ಇವೆಲ್ಲದರಲ್ಲಿ ಹೆಚ್ಚಾಗಿ ನಷ್ಟ ಅನುಭವಿಸುತ್ತಿರುವುದೇ ಭಾರತ. ಮೋದಿ ಸರ್ಕಾರ ತನ್ನೆಲ್ಲ ಸಾಂಪ್ರದಾಯಿಕ ಸ್ನೇಹಗಳನ್ನು ಬದಿಗಿಟ್ಟು ಅಮೆರಿಕ ಇಸ್ರೇಲ್ ಮತ್ತು ಅರಬ್ಬೀ ರಾಜಮನೆತನಗಳ ಸ್ನೇಹಕ್ಕೆ ಕೈ ಚಾಚುತ್ತಿದೆ. ಅಮೆರಿಕದ ಒತ್ತಡದಿಂದ ಇರಾನಿನೊಂದಿಗಿನ ಐತಿಹಾಸಿಕ ಬಾಂಧವ್ಯವನ್ನು, ಅನನ್ಯ ಸ್ನೇಹವನ್ನು ಹಾಳು ಮಾಡಿಕೊಂಡಿರುವ ಭಾರತ ಚಾಬಹಾರ್ ಬಂದರು ಮತ್ತು ಇರಾನಿನ ಬಹುದೊಡ್ಡ ಕಚ್ಚಾ ತೈಲ ಭಾವಿ ಫಾರ್ಜಾಡ್-ಬಿ ಕಳೆದುಕೊಂಡಿದೆ. ತನ್ನ ಮುಸ್ಲಿಂ ದ್ವೇಷಿ ರಾಜಕಾರಣದಿಂದ ತನ್ನ ನೆರೆಹೊರೆಯ ರಾಷ್ಟ್ರಗಳೆನ್ನಲ್ಲ ದೂರ ಮಾಡಿಕೊಂಡಿರುವ ಭಾರತ ಈಗ ತನ್ನ ಸಾಂಪ್ರದಾಯಿಕ ಮಿತ್ರರಾಷ್ಟ್ರ ರಷ್ಯಾವನ್ನು ಕೂಡ ದೂರ ಮಾಡಿಕೊಳ್ಳುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರಷ್ಯಾದ ಅಂತರರಾಷ್ಟ್ರೀಯ ವ್ಯವಹಾರಗಳ ಮಂಡಳಿಯ ಅಂದ್ರೆ ಕೋರ್ಟುನೋವ್, ಚೀನಾದ ಗ್ಲೋಬಲ್ ಟೈಮ್ಸ್‌ನಲ್ಲಿ ಬರೆದಿರುವ ’ರಶಿಯಾ ಪೂರ್ವಕ್ಕೆ ಭಾರತ ಪಶ್ಚಿಮಕ್ಕೆ, ಸಂಬಂಧಗಳ ಹದಗೆಡುವಿಕೆ’ ಬರಹವೇ ಸಾಕ್ಷಿ.

ಮಧ್ಯಪ್ರಾಚ್ಯ ಏಷ್ಯಾ ಐತಿಹಾಸಿಕವಾಗಿ ಇಡೀ ಜಗತ್ತಿಗೆ ಬಹಳಷ್ಟು ಹೊಸದನ್ನು ಕೊಟ್ಟಿದೆ. ಒಳ್ಳೆಯ ಬದಲಾವಣೆಗಳಿಗೂ, ಕೆಟ್ಟ ಬದಲಾವಣೆಗಳಿಗೂ ನಾಂದಿ ಹಾಡಿದೆ. ಆದರೆ ಪ್ಯಾಲೆಸ್ಟೀನ್‌ಅನ್ನು ನಡುನೀರಿನಲ್ಲಿ ಕೈಬಿಟ್ಟು ಬಹಿರಂಗವಾಗಿ ಅನಾವರಣಗೊಳ್ಳುತ್ತಿರುವ ಈ ಸರ್ವಾಧಿಕಾರಿ ರಾಜಮನೆತನಗಳ ಒಕ್ಕೂಟದಿಂದ ಅರಬ್ ರಾಷ್ಟ್ರಗಳಿಂದಾಚೆಇರುವ ೮೦% ಮುಸಲ್ಮಾನರ ಮೇಲೆ ಯಾವ ಪರಿಣಾಮ ಬೀರುತ್ತದೆಯೆಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...