Homeಅಂಕಣಗಳುರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು... ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು... ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್.

- Advertisement -
- Advertisement -

ದೆಹಲಿ ಗಡಿಗಳ ರೈತ ಪ್ರತಿಭಟನೆಯ ಬೆನ್ನುಮೂಳೆ ಪಂಜಾಬಿನ ರೈತರು. ಆರ್ಥಿಕವಾಗಿ ಬಹುತೇಕ ಬಲಾಢ್ಯರು. ಮೋದಿ-ಶಾ ಅವರಂತಹ ಪ್ರಚಂಡ ಜೋಡಿಗೆ ಸವಾಲೆಸೆದು ನೆಲಕಚ್ಚಿ ನಿಂತು ವರ್ಷಗಳ ಹೋರಾಟಕ್ಕೆ ತಯಾರೆಂದು ತೊಡೆ ತಟ್ಟಿರುವವರು. ಇವರ ಈ ಧಾರಣಾ ಶಕ್ತಿಯ ಬೆನ್ನುಮೂಳೆಯ ಹಿಂದೆ, ದಲಿತ ಕೂಲಿ ಕಾರ್ಮಿಕರ ಬೆವರಿದೆ.

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು… ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು… ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್. ’ತಾಸಿಗೆ ಮೂರು ರುಪಾಯಿ ಕೂಲಿ ಕೊಡ್ತಿದ್ರು. ಈಗ ದಿನಕ್ಕೆ 300 ರುಪಾಯಿ. ಕನಿಷ್ಠ ಪಕ್ಷ ಹನ್ನೆರಡು ತಾಸು ದುಡೀತೀವಿ’ ಎನ್ನುತ್ತಾರೆ ಅವರು. ಫಾಜಿಲ್ಕಾ ಜಿಲ್ಲೆಯ ದೇವ್ ಸಿಂಗ್ ಅವರ ವಯಸ್ಸು 65. ಇಬ್ಬರು ಮಕ್ಕಳು. ಅವರೂ ಕೂಲಿ ಆಳುಗಳು. ಮಜಹಬಿ ಸಿಖ್ ಎಂದು ಕರೆಯಲಾಗುವ ದಲಿತನೀತ. ಪಂಜಾಬಿನ ಬಹುತೇಕ ಕೃಷಿ ಕೂಲಿ ಕಾರ್ಮಿಕರು ದಲಿತರು.

ಪಂಜಾಬಿನ ಸಮೃದ್ಧ ಸುಗ್ಗಿಗಳ ಹಿಂದೆ ಈ ಶ್ರಮಜೀವಿಗಳು ಬಸಿದ ಬೆವರೇ ಬಂಗಾರ. ರೈತರ ದನಗಳನ್ನು ಮೇಯಿಸುವುದರಿಂದ ಹಿಡಿದು, ಉಳುಮೆ, ಬಿತ್ತನೆ, ಕಟಾವು, ಒಕ್ಕುವುದೇ ಮುಂತಾದ ರೈತ ಕುಟುಂಬವೊಂದರ ಎಲ್ಲ ಕೆಲಸಗಳನ್ನೂ ಮಾಡುವವರು ಇವರು.

ಹರಿಯಾಣ-ದೆಹಲಿ ಗಡಿ ಪ್ರದೇಶದ ರೋಹ್ತಕ್ ಹೆದ್ದಾರಿಯಲ್ಲಿ ಮೈಲುಗಳುದ್ದಕ್ಕೆ ಟ್ರ್ಯಾಕ್ಟರು- ಟ್ರಾಲಿಗಳಲ್ಲಿ ಬೀಡುಬಿಟ್ಟಿರುವ ತಮ್ಮ ರೈತ ಧಣಿಗಳ ಜೊತೆಗೆ ಕೃಷಿ ಕೂಲಿಕಾರರೂ ದೊಡ್ಡ ಸಂಖ್ಯೆಯಲ್ಲಿ ಕೈಜೋಡಿಸಿ ನೆರವಾಗಿದ್ದಾರೆ.

ಕೂಲಿ ಮಾಡಿ ನಾಲ್ವರು ಸದಸ್ಯರ ಕುಟುಂಬವನ್ನು ಸಲಹುವ ಹೆಣ್ಣುಮಗಳು ತಾಝಾ ಬೇಗಮ್. ಲಕ್ವಾ ಬಡಿದು 14 ವರ್ಷಗಳ ಹಿಂದೆ ಕಾಲು ಕಳೆದುಕೊಂಡ ಗಂಡ. ಜಡ್ಡು ಜಾಪತ್ತು ಮದುವೆ ಮುಂಜಿಗಳಿಗೆ ದುಡ್ಡು ಬೇಕೆಂದರೆ ಧಣಿಯ ಮುಂದೆ ಕೈ ಚಾಚಬೇಕು. ಕೊಟ್ಟರೆ ಉಂಟು, ಕೊಡದಿದ್ದರೆ ಇಲ್ಲ. ಬೇಗಮ್‌ಳ ಪತಿ ತೋತಾ ಖಾನ್ ಲಕ್ವ ಹೊಡೆವ ಮುನ್ನ ಜಮೀನುದಾರನೊಬ್ಬನ ಬಳಿ 32 ವರ್ಷಗಳ ಕಾಲ ದುಡಿದಿದ್ದ. ಮುಲಾಜಿಲ್ಲದೆ ಆತನನ್ನು ಹೊರದಬ್ಬಿದ್ದ ಧಣಿ. ಬರಬೇಕಿದ್ದ ಹಳೆಯ ಬಾಕಿಯನ್ನೂ ಕೊಡಲಿಲ್ಲ.

ಈ ಕೂಲಿ ಕಾರ್ಮಿಕರಲ್ಲಿ ಬಹುತೇಕರು ಅಂದು ದುಡಿದು ಅಂದು ಉಣ್ಣಬೇಕಿರುವ ದುರ್ಗತಿಯಲ್ಲಿ ಬದುಕುತ್ತಿರುವವರು. ಅವರ ಜೀವನೋಪಾಯಕ್ಕೆ ಸಂಚಕಾರ ಬಂದಿದೆಯೆಂದು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಭೂಮಿಗಾಗಿ ದಲಿತರು ನಡೆಸಿರುವ ಹೋರಾಟದಲ್ಲಿ ಜಮೀನುದಾರರೊಂದಿಗೆ ಮುಖಾಮುಖಿಯಾಗಿರುವುದು ಹೌದು. ಈ ಮುಖಾಮುಖಿಗಳು ಹಿಂಸೆಗೆ ತಿರುಗಿರುವುದೂ ಉಂಟು. ಸಾಮಾಜಿಕ ಬಹಿಷ್ಕಾರವನ್ನೂ ದಲಿತ ಕೂಲಿಕಾರರು ಎದುರಿಸಿರುವುದೂ ನಿಜ. ದಲಿತ ಕೂಲಿಕಾರ ಸಂಘಗಳು ಭೂಮಿಹೀನ ದಲಿತರ ಬೆನ್ನಿಗೆ ನಿಂತಿವೆ. ಆದರೆ ಹೊಸ ಕೃಷಿ ಕಾನೂನುಗಳನ್ನು ಒಗ್ಗಟ್ಟಿನಿಂದ ಎದುರಿಸುವ ಅಗತ್ಯವನ್ನು ಈ ಸಂಘಗಳು ಮನಗಂಡಿವೆ. ಹೀಗಾಗಿ ಅವರೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಿವೆ ಎನ್ನುತ್ತಾರೆ ಸಾಕ್ಷ್ಯಚಿತ್ರ ನಿರ್ಮಾಪಕ ರಣದೀಪ್ ಮದ್ದೊಕೆ. ಮದ್ದೊಕೆ ಖುದ್ದು ಭೂಮಿಹೀನ ದಲಿತ ಕುಟುಂಬದಿಂದ ಬಂದವರು.

PC : OpIndia

ಪಂಜಾಬಿನ ಭೂಮಿಹೀನ ಬಡವರ ಕಷ್ಟ ಕಣ್ಣೀರುಗಳ ಕುರಿತು ಮದ್ದೊಕೆ ನಿರ್ಮಿಸಿರುವ ಸಾಕ್ಷ್ಯಚಿತ್ರ ‘Landle’ ಧಗಧಗಿಸುವ ಸತ್ಯವನ್ನು ಅನಾವರಣಗೊಳಿಸುತ್ತದೆ.

ದೇಶದಲ್ಲಿ ಅತಿಹೆಚ್ಚು ಶೇಕಡವಾರು ದಲಿತರನ್ನು ಹೊಂದಿರುವ ರಾಜ್ಯ ಪಂಜಾಬ್ ಎಂಬ ಸಂಗತಿ ಬಹಳ ಮಂದಿಗೆ ತಿಳಿದಿರಲಾರದು. 2011ನೆಯ ಜನಗಣತಿ ಪ್ರಕಾರ ಈ ರಾಜ್ಯದ ಜನರ ಪೈಕಿ ದಲಿತರ ಪ್ರಮಾಣ ಶೇ.31.94ರಷ್ಟು. ಕಳೆದ ಒಂಭತ್ತು ವರ್ಷಗಳಲ್ಲಿ ಈ ಪ್ರಮಾಣ ಇನ್ನಷ್ಟು ಹೆಚ್ಚಿದ್ದೀತೇ ವಿನಾ ಕಮ್ಮಿಯಾಗಿರುವುದಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿದ್ದರೂ ರಾಜ್ಯಾಧಿಕಾರ ಇವರಿಗೆ ದಕ್ಕಿಲ್ಲ. ನಾನಾ ಜಾತಿಗಳು ಮತ್ತು ಒಳಪಂಗಡಗಳಲ್ಲಿ ಹಂಚಿಹೋಗಿರುವ ದಲಿತರಿಗೆ ಅಧಿಕಾರ ಹಗಲುಗನಸು. ಮುಖ್ಯಮಂತ್ರಿ ಹುದ್ದೆ ಎಂದಿದ್ದರೂ ಶೇ.20ರಷ್ಟಿರುವ ಜಾಟ್ ಸಿಖ್ಖರ ಪಾಲು.

ಮುಕ್ಕಾಲು ಪಾಲು ದಲಿತರು ಗ್ರಾಮೀಣವಾಸಿಗಳು. ಜಾಟ್ ಸಿಖ್ಖರ ಹೊಲಗದ್ದೆಗಳಲ್ಲಿ ಕೂಲಿ ಮಾಡಿ ಅನ್ನ ಸಂಪಾದಿಸುವವರು. ಕೃಷಿಗೆ ಯಂತ್ರಗಳು ಕಾಲಿಟ್ಟ ನಂತರ ಈ ಕೂಲಿ ಕೆಲಸವೂ ಕೈತಪ್ಪಿದೆ. ಜಮೀನಿನ ಒಡೆತನ ಇವರ ಪಾಲಿಗೆ ಗಗನಕುಸುಮ. ಮಲ ಬಳಿವ ದಲಿತರ ಸಂಖ್ಯೆಯಲ್ಲಿ ದೇಶದಲ್ಲೇ ಐದನೆಯ ಸ್ಥಾನ ಪಂಜಾಬಿನದು. ದಲಿತರ ಮೇಲೆ ದಮನ ದೌರ್ಜನ್ಯಗಳು ನಿರಂತರ.

ಪಂಜಾಬಿನಲ್ಲಿ ಕೂಡ ದಲಿತರ ಕೇರಿಗಳು ಊರಿನ ಅಂಚಿಗಿರುತ್ತವೆ. ಪಶ್ಚಿಮ ದಿಕ್ಕಿಗಿರುವುದು ವಾಡಿಕೆ. ಮುಂಜಾನೆಯ ಸೂರ್ಯನ ಕಿರಣಗಳು ಮೇಲ್ಜಾತಿಗಳ ಕೇರಿಗಳ ಮೇಲೆ ಬೀಳುವ ಮುನ್ನ ಅಸ್ಪೃಶ್ಯರ ಹಟ್ಟಿಗಳನ್ನು ತಾಕಿ ಮೈಲಿಗೆ ಆಗದಂತೆ ವಹಿಸಿರುವ ಎಚ್ಚರಿಕೆ. ಚರಂಡಿಯ ರೊಜ್ಜು ಕೂಡ ಪೂರ್ವದ ಎತ್ತರದಿಂದ ಪಶ್ಚಿಮದ ತಗ್ಗಿನುದ್ದಕ್ಕೆ ಚಾಚಿ ಹರಿಯಬೇಕು.

ಇಂತಹ ಅಸೀಮ ತಾರತಮ್ಯದ ಬಲಿಪಶುಗಳು ತಮ್ಮ ಶೋಷಕನನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಗೆಯನ್ನು ಏನೆಂದು ಬಣ್ಣಿಸಲು ಬಂದೀತು?


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...