Homeಅಂಕಣಗಳುರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು... ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು... ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್.

- Advertisement -
- Advertisement -

ದೆಹಲಿ ಗಡಿಗಳ ರೈತ ಪ್ರತಿಭಟನೆಯ ಬೆನ್ನುಮೂಳೆ ಪಂಜಾಬಿನ ರೈತರು. ಆರ್ಥಿಕವಾಗಿ ಬಹುತೇಕ ಬಲಾಢ್ಯರು. ಮೋದಿ-ಶಾ ಅವರಂತಹ ಪ್ರಚಂಡ ಜೋಡಿಗೆ ಸವಾಲೆಸೆದು ನೆಲಕಚ್ಚಿ ನಿಂತು ವರ್ಷಗಳ ಹೋರಾಟಕ್ಕೆ ತಯಾರೆಂದು ತೊಡೆ ತಟ್ಟಿರುವವರು. ಇವರ ಈ ಧಾರಣಾ ಶಕ್ತಿಯ ಬೆನ್ನುಮೂಳೆಯ ಹಿಂದೆ, ದಲಿತ ಕೂಲಿ ಕಾರ್ಮಿಕರ ಬೆವರಿದೆ.

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು… ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು… ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್. ’ತಾಸಿಗೆ ಮೂರು ರುಪಾಯಿ ಕೂಲಿ ಕೊಡ್ತಿದ್ರು. ಈಗ ದಿನಕ್ಕೆ 300 ರುಪಾಯಿ. ಕನಿಷ್ಠ ಪಕ್ಷ ಹನ್ನೆರಡು ತಾಸು ದುಡೀತೀವಿ’ ಎನ್ನುತ್ತಾರೆ ಅವರು. ಫಾಜಿಲ್ಕಾ ಜಿಲ್ಲೆಯ ದೇವ್ ಸಿಂಗ್ ಅವರ ವಯಸ್ಸು 65. ಇಬ್ಬರು ಮಕ್ಕಳು. ಅವರೂ ಕೂಲಿ ಆಳುಗಳು. ಮಜಹಬಿ ಸಿಖ್ ಎಂದು ಕರೆಯಲಾಗುವ ದಲಿತನೀತ. ಪಂಜಾಬಿನ ಬಹುತೇಕ ಕೃಷಿ ಕೂಲಿ ಕಾರ್ಮಿಕರು ದಲಿತರು.

ಪಂಜಾಬಿನ ಸಮೃದ್ಧ ಸುಗ್ಗಿಗಳ ಹಿಂದೆ ಈ ಶ್ರಮಜೀವಿಗಳು ಬಸಿದ ಬೆವರೇ ಬಂಗಾರ. ರೈತರ ದನಗಳನ್ನು ಮೇಯಿಸುವುದರಿಂದ ಹಿಡಿದು, ಉಳುಮೆ, ಬಿತ್ತನೆ, ಕಟಾವು, ಒಕ್ಕುವುದೇ ಮುಂತಾದ ರೈತ ಕುಟುಂಬವೊಂದರ ಎಲ್ಲ ಕೆಲಸಗಳನ್ನೂ ಮಾಡುವವರು ಇವರು.

ಹರಿಯಾಣ-ದೆಹಲಿ ಗಡಿ ಪ್ರದೇಶದ ರೋಹ್ತಕ್ ಹೆದ್ದಾರಿಯಲ್ಲಿ ಮೈಲುಗಳುದ್ದಕ್ಕೆ ಟ್ರ್ಯಾಕ್ಟರು- ಟ್ರಾಲಿಗಳಲ್ಲಿ ಬೀಡುಬಿಟ್ಟಿರುವ ತಮ್ಮ ರೈತ ಧಣಿಗಳ ಜೊತೆಗೆ ಕೃಷಿ ಕೂಲಿಕಾರರೂ ದೊಡ್ಡ ಸಂಖ್ಯೆಯಲ್ಲಿ ಕೈಜೋಡಿಸಿ ನೆರವಾಗಿದ್ದಾರೆ.

ಕೂಲಿ ಮಾಡಿ ನಾಲ್ವರು ಸದಸ್ಯರ ಕುಟುಂಬವನ್ನು ಸಲಹುವ ಹೆಣ್ಣುಮಗಳು ತಾಝಾ ಬೇಗಮ್. ಲಕ್ವಾ ಬಡಿದು 14 ವರ್ಷಗಳ ಹಿಂದೆ ಕಾಲು ಕಳೆದುಕೊಂಡ ಗಂಡ. ಜಡ್ಡು ಜಾಪತ್ತು ಮದುವೆ ಮುಂಜಿಗಳಿಗೆ ದುಡ್ಡು ಬೇಕೆಂದರೆ ಧಣಿಯ ಮುಂದೆ ಕೈ ಚಾಚಬೇಕು. ಕೊಟ್ಟರೆ ಉಂಟು, ಕೊಡದಿದ್ದರೆ ಇಲ್ಲ. ಬೇಗಮ್‌ಳ ಪತಿ ತೋತಾ ಖಾನ್ ಲಕ್ವ ಹೊಡೆವ ಮುನ್ನ ಜಮೀನುದಾರನೊಬ್ಬನ ಬಳಿ 32 ವರ್ಷಗಳ ಕಾಲ ದುಡಿದಿದ್ದ. ಮುಲಾಜಿಲ್ಲದೆ ಆತನನ್ನು ಹೊರದಬ್ಬಿದ್ದ ಧಣಿ. ಬರಬೇಕಿದ್ದ ಹಳೆಯ ಬಾಕಿಯನ್ನೂ ಕೊಡಲಿಲ್ಲ.

ಈ ಕೂಲಿ ಕಾರ್ಮಿಕರಲ್ಲಿ ಬಹುತೇಕರು ಅಂದು ದುಡಿದು ಅಂದು ಉಣ್ಣಬೇಕಿರುವ ದುರ್ಗತಿಯಲ್ಲಿ ಬದುಕುತ್ತಿರುವವರು. ಅವರ ಜೀವನೋಪಾಯಕ್ಕೆ ಸಂಚಕಾರ ಬಂದಿದೆಯೆಂದು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಭೂಮಿಗಾಗಿ ದಲಿತರು ನಡೆಸಿರುವ ಹೋರಾಟದಲ್ಲಿ ಜಮೀನುದಾರರೊಂದಿಗೆ ಮುಖಾಮುಖಿಯಾಗಿರುವುದು ಹೌದು. ಈ ಮುಖಾಮುಖಿಗಳು ಹಿಂಸೆಗೆ ತಿರುಗಿರುವುದೂ ಉಂಟು. ಸಾಮಾಜಿಕ ಬಹಿಷ್ಕಾರವನ್ನೂ ದಲಿತ ಕೂಲಿಕಾರರು ಎದುರಿಸಿರುವುದೂ ನಿಜ. ದಲಿತ ಕೂಲಿಕಾರ ಸಂಘಗಳು ಭೂಮಿಹೀನ ದಲಿತರ ಬೆನ್ನಿಗೆ ನಿಂತಿವೆ. ಆದರೆ ಹೊಸ ಕೃಷಿ ಕಾನೂನುಗಳನ್ನು ಒಗ್ಗಟ್ಟಿನಿಂದ ಎದುರಿಸುವ ಅಗತ್ಯವನ್ನು ಈ ಸಂಘಗಳು ಮನಗಂಡಿವೆ. ಹೀಗಾಗಿ ಅವರೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಿವೆ ಎನ್ನುತ್ತಾರೆ ಸಾಕ್ಷ್ಯಚಿತ್ರ ನಿರ್ಮಾಪಕ ರಣದೀಪ್ ಮದ್ದೊಕೆ. ಮದ್ದೊಕೆ ಖುದ್ದು ಭೂಮಿಹೀನ ದಲಿತ ಕುಟುಂಬದಿಂದ ಬಂದವರು.

PC : OpIndia

ಪಂಜಾಬಿನ ಭೂಮಿಹೀನ ಬಡವರ ಕಷ್ಟ ಕಣ್ಣೀರುಗಳ ಕುರಿತು ಮದ್ದೊಕೆ ನಿರ್ಮಿಸಿರುವ ಸಾಕ್ಷ್ಯಚಿತ್ರ ‘Landle’ ಧಗಧಗಿಸುವ ಸತ್ಯವನ್ನು ಅನಾವರಣಗೊಳಿಸುತ್ತದೆ.

ದೇಶದಲ್ಲಿ ಅತಿಹೆಚ್ಚು ಶೇಕಡವಾರು ದಲಿತರನ್ನು ಹೊಂದಿರುವ ರಾಜ್ಯ ಪಂಜಾಬ್ ಎಂಬ ಸಂಗತಿ ಬಹಳ ಮಂದಿಗೆ ತಿಳಿದಿರಲಾರದು. 2011ನೆಯ ಜನಗಣತಿ ಪ್ರಕಾರ ಈ ರಾಜ್ಯದ ಜನರ ಪೈಕಿ ದಲಿತರ ಪ್ರಮಾಣ ಶೇ.31.94ರಷ್ಟು. ಕಳೆದ ಒಂಭತ್ತು ವರ್ಷಗಳಲ್ಲಿ ಈ ಪ್ರಮಾಣ ಇನ್ನಷ್ಟು ಹೆಚ್ಚಿದ್ದೀತೇ ವಿನಾ ಕಮ್ಮಿಯಾಗಿರುವುದಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿದ್ದರೂ ರಾಜ್ಯಾಧಿಕಾರ ಇವರಿಗೆ ದಕ್ಕಿಲ್ಲ. ನಾನಾ ಜಾತಿಗಳು ಮತ್ತು ಒಳಪಂಗಡಗಳಲ್ಲಿ ಹಂಚಿಹೋಗಿರುವ ದಲಿತರಿಗೆ ಅಧಿಕಾರ ಹಗಲುಗನಸು. ಮುಖ್ಯಮಂತ್ರಿ ಹುದ್ದೆ ಎಂದಿದ್ದರೂ ಶೇ.20ರಷ್ಟಿರುವ ಜಾಟ್ ಸಿಖ್ಖರ ಪಾಲು.

ಮುಕ್ಕಾಲು ಪಾಲು ದಲಿತರು ಗ್ರಾಮೀಣವಾಸಿಗಳು. ಜಾಟ್ ಸಿಖ್ಖರ ಹೊಲಗದ್ದೆಗಳಲ್ಲಿ ಕೂಲಿ ಮಾಡಿ ಅನ್ನ ಸಂಪಾದಿಸುವವರು. ಕೃಷಿಗೆ ಯಂತ್ರಗಳು ಕಾಲಿಟ್ಟ ನಂತರ ಈ ಕೂಲಿ ಕೆಲಸವೂ ಕೈತಪ್ಪಿದೆ. ಜಮೀನಿನ ಒಡೆತನ ಇವರ ಪಾಲಿಗೆ ಗಗನಕುಸುಮ. ಮಲ ಬಳಿವ ದಲಿತರ ಸಂಖ್ಯೆಯಲ್ಲಿ ದೇಶದಲ್ಲೇ ಐದನೆಯ ಸ್ಥಾನ ಪಂಜಾಬಿನದು. ದಲಿತರ ಮೇಲೆ ದಮನ ದೌರ್ಜನ್ಯಗಳು ನಿರಂತರ.

ಪಂಜಾಬಿನಲ್ಲಿ ಕೂಡ ದಲಿತರ ಕೇರಿಗಳು ಊರಿನ ಅಂಚಿಗಿರುತ್ತವೆ. ಪಶ್ಚಿಮ ದಿಕ್ಕಿಗಿರುವುದು ವಾಡಿಕೆ. ಮುಂಜಾನೆಯ ಸೂರ್ಯನ ಕಿರಣಗಳು ಮೇಲ್ಜಾತಿಗಳ ಕೇರಿಗಳ ಮೇಲೆ ಬೀಳುವ ಮುನ್ನ ಅಸ್ಪೃಶ್ಯರ ಹಟ್ಟಿಗಳನ್ನು ತಾಕಿ ಮೈಲಿಗೆ ಆಗದಂತೆ ವಹಿಸಿರುವ ಎಚ್ಚರಿಕೆ. ಚರಂಡಿಯ ರೊಜ್ಜು ಕೂಡ ಪೂರ್ವದ ಎತ್ತರದಿಂದ ಪಶ್ಚಿಮದ ತಗ್ಗಿನುದ್ದಕ್ಕೆ ಚಾಚಿ ಹರಿಯಬೇಕು.

ಇಂತಹ ಅಸೀಮ ತಾರತಮ್ಯದ ಬಲಿಪಶುಗಳು ತಮ್ಮ ಶೋಷಕನನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಗೆಯನ್ನು ಏನೆಂದು ಬಣ್ಣಿಸಲು ಬಂದೀತು?


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...