Homeಅಂಕಣಗಳುರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು... ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು... ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್.

- Advertisement -
- Advertisement -

ದೆಹಲಿ ಗಡಿಗಳ ರೈತ ಪ್ರತಿಭಟನೆಯ ಬೆನ್ನುಮೂಳೆ ಪಂಜಾಬಿನ ರೈತರು. ಆರ್ಥಿಕವಾಗಿ ಬಹುತೇಕ ಬಲಾಢ್ಯರು. ಮೋದಿ-ಶಾ ಅವರಂತಹ ಪ್ರಚಂಡ ಜೋಡಿಗೆ ಸವಾಲೆಸೆದು ನೆಲಕಚ್ಚಿ ನಿಂತು ವರ್ಷಗಳ ಹೋರಾಟಕ್ಕೆ ತಯಾರೆಂದು ತೊಡೆ ತಟ್ಟಿರುವವರು. ಇವರ ಈ ಧಾರಣಾ ಶಕ್ತಿಯ ಬೆನ್ನುಮೂಳೆಯ ಹಿಂದೆ, ದಲಿತ ಕೂಲಿ ಕಾರ್ಮಿಕರ ಬೆವರಿದೆ.

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು… ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು… ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್. ’ತಾಸಿಗೆ ಮೂರು ರುಪಾಯಿ ಕೂಲಿ ಕೊಡ್ತಿದ್ರು. ಈಗ ದಿನಕ್ಕೆ 300 ರುಪಾಯಿ. ಕನಿಷ್ಠ ಪಕ್ಷ ಹನ್ನೆರಡು ತಾಸು ದುಡೀತೀವಿ’ ಎನ್ನುತ್ತಾರೆ ಅವರು. ಫಾಜಿಲ್ಕಾ ಜಿಲ್ಲೆಯ ದೇವ್ ಸಿಂಗ್ ಅವರ ವಯಸ್ಸು 65. ಇಬ್ಬರು ಮಕ್ಕಳು. ಅವರೂ ಕೂಲಿ ಆಳುಗಳು. ಮಜಹಬಿ ಸಿಖ್ ಎಂದು ಕರೆಯಲಾಗುವ ದಲಿತನೀತ. ಪಂಜಾಬಿನ ಬಹುತೇಕ ಕೃಷಿ ಕೂಲಿ ಕಾರ್ಮಿಕರು ದಲಿತರು.

ಪಂಜಾಬಿನ ಸಮೃದ್ಧ ಸುಗ್ಗಿಗಳ ಹಿಂದೆ ಈ ಶ್ರಮಜೀವಿಗಳು ಬಸಿದ ಬೆವರೇ ಬಂಗಾರ. ರೈತರ ದನಗಳನ್ನು ಮೇಯಿಸುವುದರಿಂದ ಹಿಡಿದು, ಉಳುಮೆ, ಬಿತ್ತನೆ, ಕಟಾವು, ಒಕ್ಕುವುದೇ ಮುಂತಾದ ರೈತ ಕುಟುಂಬವೊಂದರ ಎಲ್ಲ ಕೆಲಸಗಳನ್ನೂ ಮಾಡುವವರು ಇವರು.

ಹರಿಯಾಣ-ದೆಹಲಿ ಗಡಿ ಪ್ರದೇಶದ ರೋಹ್ತಕ್ ಹೆದ್ದಾರಿಯಲ್ಲಿ ಮೈಲುಗಳುದ್ದಕ್ಕೆ ಟ್ರ್ಯಾಕ್ಟರು- ಟ್ರಾಲಿಗಳಲ್ಲಿ ಬೀಡುಬಿಟ್ಟಿರುವ ತಮ್ಮ ರೈತ ಧಣಿಗಳ ಜೊತೆಗೆ ಕೃಷಿ ಕೂಲಿಕಾರರೂ ದೊಡ್ಡ ಸಂಖ್ಯೆಯಲ್ಲಿ ಕೈಜೋಡಿಸಿ ನೆರವಾಗಿದ್ದಾರೆ.

ಕೂಲಿ ಮಾಡಿ ನಾಲ್ವರು ಸದಸ್ಯರ ಕುಟುಂಬವನ್ನು ಸಲಹುವ ಹೆಣ್ಣುಮಗಳು ತಾಝಾ ಬೇಗಮ್. ಲಕ್ವಾ ಬಡಿದು 14 ವರ್ಷಗಳ ಹಿಂದೆ ಕಾಲು ಕಳೆದುಕೊಂಡ ಗಂಡ. ಜಡ್ಡು ಜಾಪತ್ತು ಮದುವೆ ಮುಂಜಿಗಳಿಗೆ ದುಡ್ಡು ಬೇಕೆಂದರೆ ಧಣಿಯ ಮುಂದೆ ಕೈ ಚಾಚಬೇಕು. ಕೊಟ್ಟರೆ ಉಂಟು, ಕೊಡದಿದ್ದರೆ ಇಲ್ಲ. ಬೇಗಮ್‌ಳ ಪತಿ ತೋತಾ ಖಾನ್ ಲಕ್ವ ಹೊಡೆವ ಮುನ್ನ ಜಮೀನುದಾರನೊಬ್ಬನ ಬಳಿ 32 ವರ್ಷಗಳ ಕಾಲ ದುಡಿದಿದ್ದ. ಮುಲಾಜಿಲ್ಲದೆ ಆತನನ್ನು ಹೊರದಬ್ಬಿದ್ದ ಧಣಿ. ಬರಬೇಕಿದ್ದ ಹಳೆಯ ಬಾಕಿಯನ್ನೂ ಕೊಡಲಿಲ್ಲ.

ಈ ಕೂಲಿ ಕಾರ್ಮಿಕರಲ್ಲಿ ಬಹುತೇಕರು ಅಂದು ದುಡಿದು ಅಂದು ಉಣ್ಣಬೇಕಿರುವ ದುರ್ಗತಿಯಲ್ಲಿ ಬದುಕುತ್ತಿರುವವರು. ಅವರ ಜೀವನೋಪಾಯಕ್ಕೆ ಸಂಚಕಾರ ಬಂದಿದೆಯೆಂದು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಭೂಮಿಗಾಗಿ ದಲಿತರು ನಡೆಸಿರುವ ಹೋರಾಟದಲ್ಲಿ ಜಮೀನುದಾರರೊಂದಿಗೆ ಮುಖಾಮುಖಿಯಾಗಿರುವುದು ಹೌದು. ಈ ಮುಖಾಮುಖಿಗಳು ಹಿಂಸೆಗೆ ತಿರುಗಿರುವುದೂ ಉಂಟು. ಸಾಮಾಜಿಕ ಬಹಿಷ್ಕಾರವನ್ನೂ ದಲಿತ ಕೂಲಿಕಾರರು ಎದುರಿಸಿರುವುದೂ ನಿಜ. ದಲಿತ ಕೂಲಿಕಾರ ಸಂಘಗಳು ಭೂಮಿಹೀನ ದಲಿತರ ಬೆನ್ನಿಗೆ ನಿಂತಿವೆ. ಆದರೆ ಹೊಸ ಕೃಷಿ ಕಾನೂನುಗಳನ್ನು ಒಗ್ಗಟ್ಟಿನಿಂದ ಎದುರಿಸುವ ಅಗತ್ಯವನ್ನು ಈ ಸಂಘಗಳು ಮನಗಂಡಿವೆ. ಹೀಗಾಗಿ ಅವರೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಿವೆ ಎನ್ನುತ್ತಾರೆ ಸಾಕ್ಷ್ಯಚಿತ್ರ ನಿರ್ಮಾಪಕ ರಣದೀಪ್ ಮದ್ದೊಕೆ. ಮದ್ದೊಕೆ ಖುದ್ದು ಭೂಮಿಹೀನ ದಲಿತ ಕುಟುಂಬದಿಂದ ಬಂದವರು.

PC : OpIndia

ಪಂಜಾಬಿನ ಭೂಮಿಹೀನ ಬಡವರ ಕಷ್ಟ ಕಣ್ಣೀರುಗಳ ಕುರಿತು ಮದ್ದೊಕೆ ನಿರ್ಮಿಸಿರುವ ಸಾಕ್ಷ್ಯಚಿತ್ರ ‘Landle’ ಧಗಧಗಿಸುವ ಸತ್ಯವನ್ನು ಅನಾವರಣಗೊಳಿಸುತ್ತದೆ.

ದೇಶದಲ್ಲಿ ಅತಿಹೆಚ್ಚು ಶೇಕಡವಾರು ದಲಿತರನ್ನು ಹೊಂದಿರುವ ರಾಜ್ಯ ಪಂಜಾಬ್ ಎಂಬ ಸಂಗತಿ ಬಹಳ ಮಂದಿಗೆ ತಿಳಿದಿರಲಾರದು. 2011ನೆಯ ಜನಗಣತಿ ಪ್ರಕಾರ ಈ ರಾಜ್ಯದ ಜನರ ಪೈಕಿ ದಲಿತರ ಪ್ರಮಾಣ ಶೇ.31.94ರಷ್ಟು. ಕಳೆದ ಒಂಭತ್ತು ವರ್ಷಗಳಲ್ಲಿ ಈ ಪ್ರಮಾಣ ಇನ್ನಷ್ಟು ಹೆಚ್ಚಿದ್ದೀತೇ ವಿನಾ ಕಮ್ಮಿಯಾಗಿರುವುದಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿದ್ದರೂ ರಾಜ್ಯಾಧಿಕಾರ ಇವರಿಗೆ ದಕ್ಕಿಲ್ಲ. ನಾನಾ ಜಾತಿಗಳು ಮತ್ತು ಒಳಪಂಗಡಗಳಲ್ಲಿ ಹಂಚಿಹೋಗಿರುವ ದಲಿತರಿಗೆ ಅಧಿಕಾರ ಹಗಲುಗನಸು. ಮುಖ್ಯಮಂತ್ರಿ ಹುದ್ದೆ ಎಂದಿದ್ದರೂ ಶೇ.20ರಷ್ಟಿರುವ ಜಾಟ್ ಸಿಖ್ಖರ ಪಾಲು.

ಮುಕ್ಕಾಲು ಪಾಲು ದಲಿತರು ಗ್ರಾಮೀಣವಾಸಿಗಳು. ಜಾಟ್ ಸಿಖ್ಖರ ಹೊಲಗದ್ದೆಗಳಲ್ಲಿ ಕೂಲಿ ಮಾಡಿ ಅನ್ನ ಸಂಪಾದಿಸುವವರು. ಕೃಷಿಗೆ ಯಂತ್ರಗಳು ಕಾಲಿಟ್ಟ ನಂತರ ಈ ಕೂಲಿ ಕೆಲಸವೂ ಕೈತಪ್ಪಿದೆ. ಜಮೀನಿನ ಒಡೆತನ ಇವರ ಪಾಲಿಗೆ ಗಗನಕುಸುಮ. ಮಲ ಬಳಿವ ದಲಿತರ ಸಂಖ್ಯೆಯಲ್ಲಿ ದೇಶದಲ್ಲೇ ಐದನೆಯ ಸ್ಥಾನ ಪಂಜಾಬಿನದು. ದಲಿತರ ಮೇಲೆ ದಮನ ದೌರ್ಜನ್ಯಗಳು ನಿರಂತರ.

ಪಂಜಾಬಿನಲ್ಲಿ ಕೂಡ ದಲಿತರ ಕೇರಿಗಳು ಊರಿನ ಅಂಚಿಗಿರುತ್ತವೆ. ಪಶ್ಚಿಮ ದಿಕ್ಕಿಗಿರುವುದು ವಾಡಿಕೆ. ಮುಂಜಾನೆಯ ಸೂರ್ಯನ ಕಿರಣಗಳು ಮೇಲ್ಜಾತಿಗಳ ಕೇರಿಗಳ ಮೇಲೆ ಬೀಳುವ ಮುನ್ನ ಅಸ್ಪೃಶ್ಯರ ಹಟ್ಟಿಗಳನ್ನು ತಾಕಿ ಮೈಲಿಗೆ ಆಗದಂತೆ ವಹಿಸಿರುವ ಎಚ್ಚರಿಕೆ. ಚರಂಡಿಯ ರೊಜ್ಜು ಕೂಡ ಪೂರ್ವದ ಎತ್ತರದಿಂದ ಪಶ್ಚಿಮದ ತಗ್ಗಿನುದ್ದಕ್ಕೆ ಚಾಚಿ ಹರಿಯಬೇಕು.

ಇಂತಹ ಅಸೀಮ ತಾರತಮ್ಯದ ಬಲಿಪಶುಗಳು ತಮ್ಮ ಶೋಷಕನನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಗೆಯನ್ನು ಏನೆಂದು ಬಣ್ಣಿಸಲು ಬಂದೀತು?


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...