Homeಅಂಕಣಗಳುರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು... ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು... ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್.

- Advertisement -
- Advertisement -

ದೆಹಲಿ ಗಡಿಗಳ ರೈತ ಪ್ರತಿಭಟನೆಯ ಬೆನ್ನುಮೂಳೆ ಪಂಜಾಬಿನ ರೈತರು. ಆರ್ಥಿಕವಾಗಿ ಬಹುತೇಕ ಬಲಾಢ್ಯರು. ಮೋದಿ-ಶಾ ಅವರಂತಹ ಪ್ರಚಂಡ ಜೋಡಿಗೆ ಸವಾಲೆಸೆದು ನೆಲಕಚ್ಚಿ ನಿಂತು ವರ್ಷಗಳ ಹೋರಾಟಕ್ಕೆ ತಯಾರೆಂದು ತೊಡೆ ತಟ್ಟಿರುವವರು. ಇವರ ಈ ಧಾರಣಾ ಶಕ್ತಿಯ ಬೆನ್ನುಮೂಳೆಯ ಹಿಂದೆ, ದಲಿತ ಕೂಲಿ ಕಾರ್ಮಿಕರ ಬೆವರಿದೆ.

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು… ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು… ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್. ’ತಾಸಿಗೆ ಮೂರು ರುಪಾಯಿ ಕೂಲಿ ಕೊಡ್ತಿದ್ರು. ಈಗ ದಿನಕ್ಕೆ 300 ರುಪಾಯಿ. ಕನಿಷ್ಠ ಪಕ್ಷ ಹನ್ನೆರಡು ತಾಸು ದುಡೀತೀವಿ’ ಎನ್ನುತ್ತಾರೆ ಅವರು. ಫಾಜಿಲ್ಕಾ ಜಿಲ್ಲೆಯ ದೇವ್ ಸಿಂಗ್ ಅವರ ವಯಸ್ಸು 65. ಇಬ್ಬರು ಮಕ್ಕಳು. ಅವರೂ ಕೂಲಿ ಆಳುಗಳು. ಮಜಹಬಿ ಸಿಖ್ ಎಂದು ಕರೆಯಲಾಗುವ ದಲಿತನೀತ. ಪಂಜಾಬಿನ ಬಹುತೇಕ ಕೃಷಿ ಕೂಲಿ ಕಾರ್ಮಿಕರು ದಲಿತರು.

ಪಂಜಾಬಿನ ಸಮೃದ್ಧ ಸುಗ್ಗಿಗಳ ಹಿಂದೆ ಈ ಶ್ರಮಜೀವಿಗಳು ಬಸಿದ ಬೆವರೇ ಬಂಗಾರ. ರೈತರ ದನಗಳನ್ನು ಮೇಯಿಸುವುದರಿಂದ ಹಿಡಿದು, ಉಳುಮೆ, ಬಿತ್ತನೆ, ಕಟಾವು, ಒಕ್ಕುವುದೇ ಮುಂತಾದ ರೈತ ಕುಟುಂಬವೊಂದರ ಎಲ್ಲ ಕೆಲಸಗಳನ್ನೂ ಮಾಡುವವರು ಇವರು.

ಹರಿಯಾಣ-ದೆಹಲಿ ಗಡಿ ಪ್ರದೇಶದ ರೋಹ್ತಕ್ ಹೆದ್ದಾರಿಯಲ್ಲಿ ಮೈಲುಗಳುದ್ದಕ್ಕೆ ಟ್ರ್ಯಾಕ್ಟರು- ಟ್ರಾಲಿಗಳಲ್ಲಿ ಬೀಡುಬಿಟ್ಟಿರುವ ತಮ್ಮ ರೈತ ಧಣಿಗಳ ಜೊತೆಗೆ ಕೃಷಿ ಕೂಲಿಕಾರರೂ ದೊಡ್ಡ ಸಂಖ್ಯೆಯಲ್ಲಿ ಕೈಜೋಡಿಸಿ ನೆರವಾಗಿದ್ದಾರೆ.

ಕೂಲಿ ಮಾಡಿ ನಾಲ್ವರು ಸದಸ್ಯರ ಕುಟುಂಬವನ್ನು ಸಲಹುವ ಹೆಣ್ಣುಮಗಳು ತಾಝಾ ಬೇಗಮ್. ಲಕ್ವಾ ಬಡಿದು 14 ವರ್ಷಗಳ ಹಿಂದೆ ಕಾಲು ಕಳೆದುಕೊಂಡ ಗಂಡ. ಜಡ್ಡು ಜಾಪತ್ತು ಮದುವೆ ಮುಂಜಿಗಳಿಗೆ ದುಡ್ಡು ಬೇಕೆಂದರೆ ಧಣಿಯ ಮುಂದೆ ಕೈ ಚಾಚಬೇಕು. ಕೊಟ್ಟರೆ ಉಂಟು, ಕೊಡದಿದ್ದರೆ ಇಲ್ಲ. ಬೇಗಮ್‌ಳ ಪತಿ ತೋತಾ ಖಾನ್ ಲಕ್ವ ಹೊಡೆವ ಮುನ್ನ ಜಮೀನುದಾರನೊಬ್ಬನ ಬಳಿ 32 ವರ್ಷಗಳ ಕಾಲ ದುಡಿದಿದ್ದ. ಮುಲಾಜಿಲ್ಲದೆ ಆತನನ್ನು ಹೊರದಬ್ಬಿದ್ದ ಧಣಿ. ಬರಬೇಕಿದ್ದ ಹಳೆಯ ಬಾಕಿಯನ್ನೂ ಕೊಡಲಿಲ್ಲ.

ಈ ಕೂಲಿ ಕಾರ್ಮಿಕರಲ್ಲಿ ಬಹುತೇಕರು ಅಂದು ದುಡಿದು ಅಂದು ಉಣ್ಣಬೇಕಿರುವ ದುರ್ಗತಿಯಲ್ಲಿ ಬದುಕುತ್ತಿರುವವರು. ಅವರ ಜೀವನೋಪಾಯಕ್ಕೆ ಸಂಚಕಾರ ಬಂದಿದೆಯೆಂದು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಭೂಮಿಗಾಗಿ ದಲಿತರು ನಡೆಸಿರುವ ಹೋರಾಟದಲ್ಲಿ ಜಮೀನುದಾರರೊಂದಿಗೆ ಮುಖಾಮುಖಿಯಾಗಿರುವುದು ಹೌದು. ಈ ಮುಖಾಮುಖಿಗಳು ಹಿಂಸೆಗೆ ತಿರುಗಿರುವುದೂ ಉಂಟು. ಸಾಮಾಜಿಕ ಬಹಿಷ್ಕಾರವನ್ನೂ ದಲಿತ ಕೂಲಿಕಾರರು ಎದುರಿಸಿರುವುದೂ ನಿಜ. ದಲಿತ ಕೂಲಿಕಾರ ಸಂಘಗಳು ಭೂಮಿಹೀನ ದಲಿತರ ಬೆನ್ನಿಗೆ ನಿಂತಿವೆ. ಆದರೆ ಹೊಸ ಕೃಷಿ ಕಾನೂನುಗಳನ್ನು ಒಗ್ಗಟ್ಟಿನಿಂದ ಎದುರಿಸುವ ಅಗತ್ಯವನ್ನು ಈ ಸಂಘಗಳು ಮನಗಂಡಿವೆ. ಹೀಗಾಗಿ ಅವರೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಿವೆ ಎನ್ನುತ್ತಾರೆ ಸಾಕ್ಷ್ಯಚಿತ್ರ ನಿರ್ಮಾಪಕ ರಣದೀಪ್ ಮದ್ದೊಕೆ. ಮದ್ದೊಕೆ ಖುದ್ದು ಭೂಮಿಹೀನ ದಲಿತ ಕುಟುಂಬದಿಂದ ಬಂದವರು.

PC : OpIndia

ಪಂಜಾಬಿನ ಭೂಮಿಹೀನ ಬಡವರ ಕಷ್ಟ ಕಣ್ಣೀರುಗಳ ಕುರಿತು ಮದ್ದೊಕೆ ನಿರ್ಮಿಸಿರುವ ಸಾಕ್ಷ್ಯಚಿತ್ರ ‘Landle’ ಧಗಧಗಿಸುವ ಸತ್ಯವನ್ನು ಅನಾವರಣಗೊಳಿಸುತ್ತದೆ.

ದೇಶದಲ್ಲಿ ಅತಿಹೆಚ್ಚು ಶೇಕಡವಾರು ದಲಿತರನ್ನು ಹೊಂದಿರುವ ರಾಜ್ಯ ಪಂಜಾಬ್ ಎಂಬ ಸಂಗತಿ ಬಹಳ ಮಂದಿಗೆ ತಿಳಿದಿರಲಾರದು. 2011ನೆಯ ಜನಗಣತಿ ಪ್ರಕಾರ ಈ ರಾಜ್ಯದ ಜನರ ಪೈಕಿ ದಲಿತರ ಪ್ರಮಾಣ ಶೇ.31.94ರಷ್ಟು. ಕಳೆದ ಒಂಭತ್ತು ವರ್ಷಗಳಲ್ಲಿ ಈ ಪ್ರಮಾಣ ಇನ್ನಷ್ಟು ಹೆಚ್ಚಿದ್ದೀತೇ ವಿನಾ ಕಮ್ಮಿಯಾಗಿರುವುದಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿದ್ದರೂ ರಾಜ್ಯಾಧಿಕಾರ ಇವರಿಗೆ ದಕ್ಕಿಲ್ಲ. ನಾನಾ ಜಾತಿಗಳು ಮತ್ತು ಒಳಪಂಗಡಗಳಲ್ಲಿ ಹಂಚಿಹೋಗಿರುವ ದಲಿತರಿಗೆ ಅಧಿಕಾರ ಹಗಲುಗನಸು. ಮುಖ್ಯಮಂತ್ರಿ ಹುದ್ದೆ ಎಂದಿದ್ದರೂ ಶೇ.20ರಷ್ಟಿರುವ ಜಾಟ್ ಸಿಖ್ಖರ ಪಾಲು.

ಮುಕ್ಕಾಲು ಪಾಲು ದಲಿತರು ಗ್ರಾಮೀಣವಾಸಿಗಳು. ಜಾಟ್ ಸಿಖ್ಖರ ಹೊಲಗದ್ದೆಗಳಲ್ಲಿ ಕೂಲಿ ಮಾಡಿ ಅನ್ನ ಸಂಪಾದಿಸುವವರು. ಕೃಷಿಗೆ ಯಂತ್ರಗಳು ಕಾಲಿಟ್ಟ ನಂತರ ಈ ಕೂಲಿ ಕೆಲಸವೂ ಕೈತಪ್ಪಿದೆ. ಜಮೀನಿನ ಒಡೆತನ ಇವರ ಪಾಲಿಗೆ ಗಗನಕುಸುಮ. ಮಲ ಬಳಿವ ದಲಿತರ ಸಂಖ್ಯೆಯಲ್ಲಿ ದೇಶದಲ್ಲೇ ಐದನೆಯ ಸ್ಥಾನ ಪಂಜಾಬಿನದು. ದಲಿತರ ಮೇಲೆ ದಮನ ದೌರ್ಜನ್ಯಗಳು ನಿರಂತರ.

ಪಂಜಾಬಿನಲ್ಲಿ ಕೂಡ ದಲಿತರ ಕೇರಿಗಳು ಊರಿನ ಅಂಚಿಗಿರುತ್ತವೆ. ಪಶ್ಚಿಮ ದಿಕ್ಕಿಗಿರುವುದು ವಾಡಿಕೆ. ಮುಂಜಾನೆಯ ಸೂರ್ಯನ ಕಿರಣಗಳು ಮೇಲ್ಜಾತಿಗಳ ಕೇರಿಗಳ ಮೇಲೆ ಬೀಳುವ ಮುನ್ನ ಅಸ್ಪೃಶ್ಯರ ಹಟ್ಟಿಗಳನ್ನು ತಾಕಿ ಮೈಲಿಗೆ ಆಗದಂತೆ ವಹಿಸಿರುವ ಎಚ್ಚರಿಕೆ. ಚರಂಡಿಯ ರೊಜ್ಜು ಕೂಡ ಪೂರ್ವದ ಎತ್ತರದಿಂದ ಪಶ್ಚಿಮದ ತಗ್ಗಿನುದ್ದಕ್ಕೆ ಚಾಚಿ ಹರಿಯಬೇಕು.

ಇಂತಹ ಅಸೀಮ ತಾರತಮ್ಯದ ಬಲಿಪಶುಗಳು ತಮ್ಮ ಶೋಷಕನನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಗೆಯನ್ನು ಏನೆಂದು ಬಣ್ಣಿಸಲು ಬಂದೀತು?


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...