Homeಅಂಕಣಗಳುರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು... ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು... ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್.

- Advertisement -
- Advertisement -

ದೆಹಲಿ ಗಡಿಗಳ ರೈತ ಪ್ರತಿಭಟನೆಯ ಬೆನ್ನುಮೂಳೆ ಪಂಜಾಬಿನ ರೈತರು. ಆರ್ಥಿಕವಾಗಿ ಬಹುತೇಕ ಬಲಾಢ್ಯರು. ಮೋದಿ-ಶಾ ಅವರಂತಹ ಪ್ರಚಂಡ ಜೋಡಿಗೆ ಸವಾಲೆಸೆದು ನೆಲಕಚ್ಚಿ ನಿಂತು ವರ್ಷಗಳ ಹೋರಾಟಕ್ಕೆ ತಯಾರೆಂದು ತೊಡೆ ತಟ್ಟಿರುವವರು. ಇವರ ಈ ಧಾರಣಾ ಶಕ್ತಿಯ ಬೆನ್ನುಮೂಳೆಯ ಹಿಂದೆ, ದಲಿತ ಕೂಲಿ ಕಾರ್ಮಿಕರ ಬೆವರಿದೆ.

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು… ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು… ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್. ’ತಾಸಿಗೆ ಮೂರು ರುಪಾಯಿ ಕೂಲಿ ಕೊಡ್ತಿದ್ರು. ಈಗ ದಿನಕ್ಕೆ 300 ರುಪಾಯಿ. ಕನಿಷ್ಠ ಪಕ್ಷ ಹನ್ನೆರಡು ತಾಸು ದುಡೀತೀವಿ’ ಎನ್ನುತ್ತಾರೆ ಅವರು. ಫಾಜಿಲ್ಕಾ ಜಿಲ್ಲೆಯ ದೇವ್ ಸಿಂಗ್ ಅವರ ವಯಸ್ಸು 65. ಇಬ್ಬರು ಮಕ್ಕಳು. ಅವರೂ ಕೂಲಿ ಆಳುಗಳು. ಮಜಹಬಿ ಸಿಖ್ ಎಂದು ಕರೆಯಲಾಗುವ ದಲಿತನೀತ. ಪಂಜಾಬಿನ ಬಹುತೇಕ ಕೃಷಿ ಕೂಲಿ ಕಾರ್ಮಿಕರು ದಲಿತರು.

ಪಂಜಾಬಿನ ಸಮೃದ್ಧ ಸುಗ್ಗಿಗಳ ಹಿಂದೆ ಈ ಶ್ರಮಜೀವಿಗಳು ಬಸಿದ ಬೆವರೇ ಬಂಗಾರ. ರೈತರ ದನಗಳನ್ನು ಮೇಯಿಸುವುದರಿಂದ ಹಿಡಿದು, ಉಳುಮೆ, ಬಿತ್ತನೆ, ಕಟಾವು, ಒಕ್ಕುವುದೇ ಮುಂತಾದ ರೈತ ಕುಟುಂಬವೊಂದರ ಎಲ್ಲ ಕೆಲಸಗಳನ್ನೂ ಮಾಡುವವರು ಇವರು.

ಹರಿಯಾಣ-ದೆಹಲಿ ಗಡಿ ಪ್ರದೇಶದ ರೋಹ್ತಕ್ ಹೆದ್ದಾರಿಯಲ್ಲಿ ಮೈಲುಗಳುದ್ದಕ್ಕೆ ಟ್ರ್ಯಾಕ್ಟರು- ಟ್ರಾಲಿಗಳಲ್ಲಿ ಬೀಡುಬಿಟ್ಟಿರುವ ತಮ್ಮ ರೈತ ಧಣಿಗಳ ಜೊತೆಗೆ ಕೃಷಿ ಕೂಲಿಕಾರರೂ ದೊಡ್ಡ ಸಂಖ್ಯೆಯಲ್ಲಿ ಕೈಜೋಡಿಸಿ ನೆರವಾಗಿದ್ದಾರೆ.

ಕೂಲಿ ಮಾಡಿ ನಾಲ್ವರು ಸದಸ್ಯರ ಕುಟುಂಬವನ್ನು ಸಲಹುವ ಹೆಣ್ಣುಮಗಳು ತಾಝಾ ಬೇಗಮ್. ಲಕ್ವಾ ಬಡಿದು 14 ವರ್ಷಗಳ ಹಿಂದೆ ಕಾಲು ಕಳೆದುಕೊಂಡ ಗಂಡ. ಜಡ್ಡು ಜಾಪತ್ತು ಮದುವೆ ಮುಂಜಿಗಳಿಗೆ ದುಡ್ಡು ಬೇಕೆಂದರೆ ಧಣಿಯ ಮುಂದೆ ಕೈ ಚಾಚಬೇಕು. ಕೊಟ್ಟರೆ ಉಂಟು, ಕೊಡದಿದ್ದರೆ ಇಲ್ಲ. ಬೇಗಮ್‌ಳ ಪತಿ ತೋತಾ ಖಾನ್ ಲಕ್ವ ಹೊಡೆವ ಮುನ್ನ ಜಮೀನುದಾರನೊಬ್ಬನ ಬಳಿ 32 ವರ್ಷಗಳ ಕಾಲ ದುಡಿದಿದ್ದ. ಮುಲಾಜಿಲ್ಲದೆ ಆತನನ್ನು ಹೊರದಬ್ಬಿದ್ದ ಧಣಿ. ಬರಬೇಕಿದ್ದ ಹಳೆಯ ಬಾಕಿಯನ್ನೂ ಕೊಡಲಿಲ್ಲ.

ಈ ಕೂಲಿ ಕಾರ್ಮಿಕರಲ್ಲಿ ಬಹುತೇಕರು ಅಂದು ದುಡಿದು ಅಂದು ಉಣ್ಣಬೇಕಿರುವ ದುರ್ಗತಿಯಲ್ಲಿ ಬದುಕುತ್ತಿರುವವರು. ಅವರ ಜೀವನೋಪಾಯಕ್ಕೆ ಸಂಚಕಾರ ಬಂದಿದೆಯೆಂದು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಭೂಮಿಗಾಗಿ ದಲಿತರು ನಡೆಸಿರುವ ಹೋರಾಟದಲ್ಲಿ ಜಮೀನುದಾರರೊಂದಿಗೆ ಮುಖಾಮುಖಿಯಾಗಿರುವುದು ಹೌದು. ಈ ಮುಖಾಮುಖಿಗಳು ಹಿಂಸೆಗೆ ತಿರುಗಿರುವುದೂ ಉಂಟು. ಸಾಮಾಜಿಕ ಬಹಿಷ್ಕಾರವನ್ನೂ ದಲಿತ ಕೂಲಿಕಾರರು ಎದುರಿಸಿರುವುದೂ ನಿಜ. ದಲಿತ ಕೂಲಿಕಾರ ಸಂಘಗಳು ಭೂಮಿಹೀನ ದಲಿತರ ಬೆನ್ನಿಗೆ ನಿಂತಿವೆ. ಆದರೆ ಹೊಸ ಕೃಷಿ ಕಾನೂನುಗಳನ್ನು ಒಗ್ಗಟ್ಟಿನಿಂದ ಎದುರಿಸುವ ಅಗತ್ಯವನ್ನು ಈ ಸಂಘಗಳು ಮನಗಂಡಿವೆ. ಹೀಗಾಗಿ ಅವರೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಿವೆ ಎನ್ನುತ್ತಾರೆ ಸಾಕ್ಷ್ಯಚಿತ್ರ ನಿರ್ಮಾಪಕ ರಣದೀಪ್ ಮದ್ದೊಕೆ. ಮದ್ದೊಕೆ ಖುದ್ದು ಭೂಮಿಹೀನ ದಲಿತ ಕುಟುಂಬದಿಂದ ಬಂದವರು.

PC : OpIndia

ಪಂಜಾಬಿನ ಭೂಮಿಹೀನ ಬಡವರ ಕಷ್ಟ ಕಣ್ಣೀರುಗಳ ಕುರಿತು ಮದ್ದೊಕೆ ನಿರ್ಮಿಸಿರುವ ಸಾಕ್ಷ್ಯಚಿತ್ರ ‘Landle’ ಧಗಧಗಿಸುವ ಸತ್ಯವನ್ನು ಅನಾವರಣಗೊಳಿಸುತ್ತದೆ.

ದೇಶದಲ್ಲಿ ಅತಿಹೆಚ್ಚು ಶೇಕಡವಾರು ದಲಿತರನ್ನು ಹೊಂದಿರುವ ರಾಜ್ಯ ಪಂಜಾಬ್ ಎಂಬ ಸಂಗತಿ ಬಹಳ ಮಂದಿಗೆ ತಿಳಿದಿರಲಾರದು. 2011ನೆಯ ಜನಗಣತಿ ಪ್ರಕಾರ ಈ ರಾಜ್ಯದ ಜನರ ಪೈಕಿ ದಲಿತರ ಪ್ರಮಾಣ ಶೇ.31.94ರಷ್ಟು. ಕಳೆದ ಒಂಭತ್ತು ವರ್ಷಗಳಲ್ಲಿ ಈ ಪ್ರಮಾಣ ಇನ್ನಷ್ಟು ಹೆಚ್ಚಿದ್ದೀತೇ ವಿನಾ ಕಮ್ಮಿಯಾಗಿರುವುದಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿದ್ದರೂ ರಾಜ್ಯಾಧಿಕಾರ ಇವರಿಗೆ ದಕ್ಕಿಲ್ಲ. ನಾನಾ ಜಾತಿಗಳು ಮತ್ತು ಒಳಪಂಗಡಗಳಲ್ಲಿ ಹಂಚಿಹೋಗಿರುವ ದಲಿತರಿಗೆ ಅಧಿಕಾರ ಹಗಲುಗನಸು. ಮುಖ್ಯಮಂತ್ರಿ ಹುದ್ದೆ ಎಂದಿದ್ದರೂ ಶೇ.20ರಷ್ಟಿರುವ ಜಾಟ್ ಸಿಖ್ಖರ ಪಾಲು.

ಮುಕ್ಕಾಲು ಪಾಲು ದಲಿತರು ಗ್ರಾಮೀಣವಾಸಿಗಳು. ಜಾಟ್ ಸಿಖ್ಖರ ಹೊಲಗದ್ದೆಗಳಲ್ಲಿ ಕೂಲಿ ಮಾಡಿ ಅನ್ನ ಸಂಪಾದಿಸುವವರು. ಕೃಷಿಗೆ ಯಂತ್ರಗಳು ಕಾಲಿಟ್ಟ ನಂತರ ಈ ಕೂಲಿ ಕೆಲಸವೂ ಕೈತಪ್ಪಿದೆ. ಜಮೀನಿನ ಒಡೆತನ ಇವರ ಪಾಲಿಗೆ ಗಗನಕುಸುಮ. ಮಲ ಬಳಿವ ದಲಿತರ ಸಂಖ್ಯೆಯಲ್ಲಿ ದೇಶದಲ್ಲೇ ಐದನೆಯ ಸ್ಥಾನ ಪಂಜಾಬಿನದು. ದಲಿತರ ಮೇಲೆ ದಮನ ದೌರ್ಜನ್ಯಗಳು ನಿರಂತರ.

ಪಂಜಾಬಿನಲ್ಲಿ ಕೂಡ ದಲಿತರ ಕೇರಿಗಳು ಊರಿನ ಅಂಚಿಗಿರುತ್ತವೆ. ಪಶ್ಚಿಮ ದಿಕ್ಕಿಗಿರುವುದು ವಾಡಿಕೆ. ಮುಂಜಾನೆಯ ಸೂರ್ಯನ ಕಿರಣಗಳು ಮೇಲ್ಜಾತಿಗಳ ಕೇರಿಗಳ ಮೇಲೆ ಬೀಳುವ ಮುನ್ನ ಅಸ್ಪೃಶ್ಯರ ಹಟ್ಟಿಗಳನ್ನು ತಾಕಿ ಮೈಲಿಗೆ ಆಗದಂತೆ ವಹಿಸಿರುವ ಎಚ್ಚರಿಕೆ. ಚರಂಡಿಯ ರೊಜ್ಜು ಕೂಡ ಪೂರ್ವದ ಎತ್ತರದಿಂದ ಪಶ್ಚಿಮದ ತಗ್ಗಿನುದ್ದಕ್ಕೆ ಚಾಚಿ ಹರಿಯಬೇಕು.

ಇಂತಹ ಅಸೀಮ ತಾರತಮ್ಯದ ಬಲಿಪಶುಗಳು ತಮ್ಮ ಶೋಷಕನನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಗೆಯನ್ನು ಏನೆಂದು ಬಣ್ಣಿಸಲು ಬಂದೀತು?


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...