Homeಮುಖಪುಟಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳ ಪಾತ್ರಕ್ಕೆ ಮಹತ್ವವಿದೆ: ಅಖಿಲೇಶ್‌

ಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳ ಪಾತ್ರಕ್ಕೆ ಮಹತ್ವವಿದೆ: ಅಖಿಲೇಶ್‌

- Advertisement -
- Advertisement -

ಕೋಲ್ಕತ್ತಾ: ಮುಂಬರುವ ದಿನಗಳಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ರೂಪುಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಮುಖ ಪಾತ್ರ ವಹಿಸಲಿವೆ” ಎಂದು ಭವಿಷ್ಯ ನುಡಿದಿದ್ದಾರೆ.

ಈಗ ಚರ್ಚೆಯಾಗುತ್ತಿರುವ ವಿರೋಧ ಪಕ್ಷಗಳ ಕೂಟದಲ್ಲಿ ಕಾಂಗ್ರೆಸ್ ಪಾತ್ರವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಯಾದವ್‌, “ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌ ತನ್ನ ಪಾತ್ರವನ್ನು ನಿರ್ಧರಿಸಬೇಕಿದೆ” ಎಂದು ತಿಳಿಸಿದ್ದಾರೆ.

“ವಿರೋಧ ಪಕ್ಷಗಳ ಒಕ್ಕೂಟವನ್ನು ರೂಪಿಸಲು ಪ್ರಯತ್ನಗಳು ನಡೆಯುತ್ತಿವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು (ಸ್ವಂತ) ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ನನಗೆ ವಿಶ್ವಾಸವಿದೆ. ಪ್ರತಿಪಕ್ಷಗಳ ಮೈತ್ರಿಯು ರೂಪುಗೊಳ್ಳುತ್ತದೆ, ಅದು ಬಿಜೆಪಿ ವಿರುದ್ಧ ಹೋರಾಡುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಸಮಾನವಾಗಿ ಪರಿಗಣಿಸಲಾಗುತ್ತಿದೆಯೇ?” ಎಂಬ ಪ್ರಶ್ನೆಗೆ, “ವಿವಿಧ ರಾಜ್ಯಗಳಲ್ಲಿನ ಪ್ರಾದೇಶಿಕ ಪಕ್ಷಗಳು ಬಿಜೆಪಿಯ ವಿರುದ್ಧ ಹೋರಾಡುತ್ತಿವೆ. ಹಲವು ರಾಜ್ಯಗಳಲ್ಲಿ, ಬಿಜೆಪಿಗೆ ಹೋಲಿಸಿದರೆ ಕಾಂಗ್ರೆಸ್‌ಗೆ ಅಸ್ತಿತ್ವವಿಲ್ಲ. ಆದರೆ ಪ್ರಾದೇಶಿಕ ಪಕ್ಷಗಳು ಕೇಸರಿ ಪಾಳೆಯದ ವಿರುದ್ಧ ತೀವ್ರವಾಗಿ ಹೋರಾಟ ನಡೆಸುತ್ತಿವೆ. ಅವರು ಯಶಸ್ವಿಯಾಗುತ್ತಾರೆ ಎಂಬ ಭರವಸೆ ನನಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಜೆಡಿ (ಯು), ಆರ್‌ಜೆಡಿ ಮತ್ತು ಡಿಎಂಕೆಯಂತಹ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ನೊಂದಿಗೆ ಇರಲು ಉತ್ಸುಕವಾಗಿವೆ ಎಂದು ಕೇಳಿದಾಗ ಯಾದವ್, “ಅವರು ಈಗಾಗಲೇ ಹಳೆಯ ಪಕ್ಷದೊಂದಿಗೆ ಮೈತ್ರಿ ಹೊಂದಿದ್ದಾರೆ. ಇದು ದೊಡ್ಡ ಹೋರಾಟದ ಪ್ರಶ್ನೆಯಾಗಿದ್ದು, ಈ ಹೋರಾಟದಲ್ಲಿ ಕಾಂಗ್ರೆಸ್ ತನ್ನ ಪಾತ್ರವೇನೆಂದು ನಿರ್ಧರಿಸುತ್ತದೆ” ಎಂದು ತಿಳಿಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪಾಳೆಯದ ಮುಖ ಯಾರಾಗಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಯಾದವ್, “ಚುನಾವಣೆಯ ನಂತರ ಅದನ್ನು ನಿರ್ಧರಿಸಲಾಗುವುದು. ಈಗ ಈ ಪ್ರಶ್ನೆಯು ಅಗತ್ಯವಿಲ್ಲ” ಎಂದು ಸ್ಪಷ್ಪಪಡಿಸಿದ್ದಾರೆ.

“ನೀವು ಮುಖದ ಬಗ್ಗೆ ಮಾತನಾಡುತ್ತಿದ್ದೀರಿ, 2014 ಮತ್ತು 2019 ರಲ್ಲಿ ಚುನಾವಣೆಯಲ್ಲಿ ಗೆಲ್ಲಲು ಸುಳ್ಳು ಭರವಸೆಗಳನ್ನು ನೀಡಿದ (ಬಿಜೆಪಿ) ಮುಖದ ಬಗ್ಗೆ ಕೇಳುತ್ತಿದ್ದೀರಾ?” ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖಿಸದೆ ಕುಟುಕಿದ್ದಾರೆ.

2014 ಮತ್ತು 2019ರಲ್ಲಿ ಬಿಜೆಪಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಟೀಕಿಸಿದ್ದಾರೆ.

ಯುಪಿಯ ರಾಯ್‌ಬರೇಲಿ ಮತ್ತು ಅಮೇಥಿ ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಪಿ ಸ್ಪರ್ಧಿಸುತ್ತದೆಯೇ ಎಂದು ಕೇಳಿದಾಗ, “ಅಮೇಥಿಯಲ್ಲಿ ಎಸ್‌ಪಿ ಕಾರ್ಯಕರ್ತರನ್ನು ಕೊಲ್ಲಲಾಗುತ್ತಿದೆ” ಎಂದು ಯಾದವ್ ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್ ಹೊರಗಿಟ್ಟು ವಿರೋಧಿ ಬಣ ಕಟ್ಟಲು ಮುಂದಾದ ಟಿಎಂಸಿ, ಎಸ್‌ಪಿ

“ಅಮೇಥಿಯಲ್ಲಿ ನಮ್ಮ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಅವರಿಗಾಗಿ ಯಾರು ಹೋರಾಡುತ್ತಾರೆ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಅಲ್ಲಿನ ಸಮಾಜವಾದಿ ಕಾರ್ಯಕರ್ತರು ಪರಸ್ಪರ ಬೆಂಬಲಿಸುತ್ತಿದ್ದಾರೆ; ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಬೆಂಬಲಕ್ಕೆ ಬರುತ್ತಿಲ್ಲ” ಎಂದು ದೂರಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಯ್ಬರೇಲಿಯ ಸಂಸದರಾಗಿದ್ದರೆ, ಪಕ್ಷದ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಲ್ಲಿ ಸ್ಪರ್ಧಿಸಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಸೋಲಿಸಿದ್ದರು.

“ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಯ ಹುನ್ನಾರವನ್ನು ತಡೆಯಲು ಸಮಾಜವಾದಿ ಪಕ್ಷ ಯಾವುದೇ ಅವಕಾಶವನ್ನು ಬಿಡುವುದಿಲ್ಲ. 2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಯುಪಿಯಲ್ಲಿ ಗೆಲ್ಲಲೇಬೇಕು, ಯುಪಿಯಲ್ಲಿ ಬಿಜೆಪಿಯನ್ನು ಸೋಲಿಸುವುದನ್ನು ನಾವು ಖಚಿತಪಡಿಸುತ್ತೇವೆ ಮತ್ತು ದೇಶದಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ, ಉತ್ತರ ಪ್ರದೇಶದಲ್ಲಿ ನಾವು ನಮ್ಮ ಅಸ್ತಿತ್ವದಲ್ಲಿರುವ ಮಿತ್ರಪಕ್ಷಗಳೊಂದಿಗೆ ಸೇರಿ ಹೋರಾಡುತ್ತೇವೆ” ಎಂದು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...