Homeಮುಖಪುಟಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳ ಪಾತ್ರಕ್ಕೆ ಮಹತ್ವವಿದೆ: ಅಖಿಲೇಶ್‌

ಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳ ಪಾತ್ರಕ್ಕೆ ಮಹತ್ವವಿದೆ: ಅಖಿಲೇಶ್‌

- Advertisement -
- Advertisement -

ಕೋಲ್ಕತ್ತಾ: ಮುಂಬರುವ ದಿನಗಳಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ರೂಪುಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಮುಖ ಪಾತ್ರ ವಹಿಸಲಿವೆ” ಎಂದು ಭವಿಷ್ಯ ನುಡಿದಿದ್ದಾರೆ.

ಈಗ ಚರ್ಚೆಯಾಗುತ್ತಿರುವ ವಿರೋಧ ಪಕ್ಷಗಳ ಕೂಟದಲ್ಲಿ ಕಾಂಗ್ರೆಸ್ ಪಾತ್ರವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಯಾದವ್‌, “ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌ ತನ್ನ ಪಾತ್ರವನ್ನು ನಿರ್ಧರಿಸಬೇಕಿದೆ” ಎಂದು ತಿಳಿಸಿದ್ದಾರೆ.

“ವಿರೋಧ ಪಕ್ಷಗಳ ಒಕ್ಕೂಟವನ್ನು ರೂಪಿಸಲು ಪ್ರಯತ್ನಗಳು ನಡೆಯುತ್ತಿವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು (ಸ್ವಂತ) ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ನನಗೆ ವಿಶ್ವಾಸವಿದೆ. ಪ್ರತಿಪಕ್ಷಗಳ ಮೈತ್ರಿಯು ರೂಪುಗೊಳ್ಳುತ್ತದೆ, ಅದು ಬಿಜೆಪಿ ವಿರುದ್ಧ ಹೋರಾಡುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಸಮಾನವಾಗಿ ಪರಿಗಣಿಸಲಾಗುತ್ತಿದೆಯೇ?” ಎಂಬ ಪ್ರಶ್ನೆಗೆ, “ವಿವಿಧ ರಾಜ್ಯಗಳಲ್ಲಿನ ಪ್ರಾದೇಶಿಕ ಪಕ್ಷಗಳು ಬಿಜೆಪಿಯ ವಿರುದ್ಧ ಹೋರಾಡುತ್ತಿವೆ. ಹಲವು ರಾಜ್ಯಗಳಲ್ಲಿ, ಬಿಜೆಪಿಗೆ ಹೋಲಿಸಿದರೆ ಕಾಂಗ್ರೆಸ್‌ಗೆ ಅಸ್ತಿತ್ವವಿಲ್ಲ. ಆದರೆ ಪ್ರಾದೇಶಿಕ ಪಕ್ಷಗಳು ಕೇಸರಿ ಪಾಳೆಯದ ವಿರುದ್ಧ ತೀವ್ರವಾಗಿ ಹೋರಾಟ ನಡೆಸುತ್ತಿವೆ. ಅವರು ಯಶಸ್ವಿಯಾಗುತ್ತಾರೆ ಎಂಬ ಭರವಸೆ ನನಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಜೆಡಿ (ಯು), ಆರ್‌ಜೆಡಿ ಮತ್ತು ಡಿಎಂಕೆಯಂತಹ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ನೊಂದಿಗೆ ಇರಲು ಉತ್ಸುಕವಾಗಿವೆ ಎಂದು ಕೇಳಿದಾಗ ಯಾದವ್, “ಅವರು ಈಗಾಗಲೇ ಹಳೆಯ ಪಕ್ಷದೊಂದಿಗೆ ಮೈತ್ರಿ ಹೊಂದಿದ್ದಾರೆ. ಇದು ದೊಡ್ಡ ಹೋರಾಟದ ಪ್ರಶ್ನೆಯಾಗಿದ್ದು, ಈ ಹೋರಾಟದಲ್ಲಿ ಕಾಂಗ್ರೆಸ್ ತನ್ನ ಪಾತ್ರವೇನೆಂದು ನಿರ್ಧರಿಸುತ್ತದೆ” ಎಂದು ತಿಳಿಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪಾಳೆಯದ ಮುಖ ಯಾರಾಗಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಯಾದವ್, “ಚುನಾವಣೆಯ ನಂತರ ಅದನ್ನು ನಿರ್ಧರಿಸಲಾಗುವುದು. ಈಗ ಈ ಪ್ರಶ್ನೆಯು ಅಗತ್ಯವಿಲ್ಲ” ಎಂದು ಸ್ಪಷ್ಪಪಡಿಸಿದ್ದಾರೆ.

“ನೀವು ಮುಖದ ಬಗ್ಗೆ ಮಾತನಾಡುತ್ತಿದ್ದೀರಿ, 2014 ಮತ್ತು 2019 ರಲ್ಲಿ ಚುನಾವಣೆಯಲ್ಲಿ ಗೆಲ್ಲಲು ಸುಳ್ಳು ಭರವಸೆಗಳನ್ನು ನೀಡಿದ (ಬಿಜೆಪಿ) ಮುಖದ ಬಗ್ಗೆ ಕೇಳುತ್ತಿದ್ದೀರಾ?” ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖಿಸದೆ ಕುಟುಕಿದ್ದಾರೆ.

2014 ಮತ್ತು 2019ರಲ್ಲಿ ಬಿಜೆಪಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಟೀಕಿಸಿದ್ದಾರೆ.

ಯುಪಿಯ ರಾಯ್‌ಬರೇಲಿ ಮತ್ತು ಅಮೇಥಿ ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಪಿ ಸ್ಪರ್ಧಿಸುತ್ತದೆಯೇ ಎಂದು ಕೇಳಿದಾಗ, “ಅಮೇಥಿಯಲ್ಲಿ ಎಸ್‌ಪಿ ಕಾರ್ಯಕರ್ತರನ್ನು ಕೊಲ್ಲಲಾಗುತ್ತಿದೆ” ಎಂದು ಯಾದವ್ ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್ ಹೊರಗಿಟ್ಟು ವಿರೋಧಿ ಬಣ ಕಟ್ಟಲು ಮುಂದಾದ ಟಿಎಂಸಿ, ಎಸ್‌ಪಿ

“ಅಮೇಥಿಯಲ್ಲಿ ನಮ್ಮ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಅವರಿಗಾಗಿ ಯಾರು ಹೋರಾಡುತ್ತಾರೆ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಅಲ್ಲಿನ ಸಮಾಜವಾದಿ ಕಾರ್ಯಕರ್ತರು ಪರಸ್ಪರ ಬೆಂಬಲಿಸುತ್ತಿದ್ದಾರೆ; ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಬೆಂಬಲಕ್ಕೆ ಬರುತ್ತಿಲ್ಲ” ಎಂದು ದೂರಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಯ್ಬರೇಲಿಯ ಸಂಸದರಾಗಿದ್ದರೆ, ಪಕ್ಷದ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಲ್ಲಿ ಸ್ಪರ್ಧಿಸಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಸೋಲಿಸಿದ್ದರು.

“ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಯ ಹುನ್ನಾರವನ್ನು ತಡೆಯಲು ಸಮಾಜವಾದಿ ಪಕ್ಷ ಯಾವುದೇ ಅವಕಾಶವನ್ನು ಬಿಡುವುದಿಲ್ಲ. 2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಯುಪಿಯಲ್ಲಿ ಗೆಲ್ಲಲೇಬೇಕು, ಯುಪಿಯಲ್ಲಿ ಬಿಜೆಪಿಯನ್ನು ಸೋಲಿಸುವುದನ್ನು ನಾವು ಖಚಿತಪಡಿಸುತ್ತೇವೆ ಮತ್ತು ದೇಶದಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ, ಉತ್ತರ ಪ್ರದೇಶದಲ್ಲಿ ನಾವು ನಮ್ಮ ಅಸ್ತಿತ್ವದಲ್ಲಿರುವ ಮಿತ್ರಪಕ್ಷಗಳೊಂದಿಗೆ ಸೇರಿ ಹೋರಾಡುತ್ತೇವೆ” ಎಂದು ವಿವರಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...