Homeಮುಖಪುಟಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳ ಪಾತ್ರಕ್ಕೆ ಮಹತ್ವವಿದೆ: ಅಖಿಲೇಶ್‌

ಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳ ಪಾತ್ರಕ್ಕೆ ಮಹತ್ವವಿದೆ: ಅಖಿಲೇಶ್‌

- Advertisement -
- Advertisement -

ಕೋಲ್ಕತ್ತಾ: ಮುಂಬರುವ ದಿನಗಳಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ರೂಪುಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಮುಖ ಪಾತ್ರ ವಹಿಸಲಿವೆ” ಎಂದು ಭವಿಷ್ಯ ನುಡಿದಿದ್ದಾರೆ.

ಈಗ ಚರ್ಚೆಯಾಗುತ್ತಿರುವ ವಿರೋಧ ಪಕ್ಷಗಳ ಕೂಟದಲ್ಲಿ ಕಾಂಗ್ರೆಸ್ ಪಾತ್ರವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಯಾದವ್‌, “ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌ ತನ್ನ ಪಾತ್ರವನ್ನು ನಿರ್ಧರಿಸಬೇಕಿದೆ” ಎಂದು ತಿಳಿಸಿದ್ದಾರೆ.

“ವಿರೋಧ ಪಕ್ಷಗಳ ಒಕ್ಕೂಟವನ್ನು ರೂಪಿಸಲು ಪ್ರಯತ್ನಗಳು ನಡೆಯುತ್ತಿವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು (ಸ್ವಂತ) ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ನನಗೆ ವಿಶ್ವಾಸವಿದೆ. ಪ್ರತಿಪಕ್ಷಗಳ ಮೈತ್ರಿಯು ರೂಪುಗೊಳ್ಳುತ್ತದೆ, ಅದು ಬಿಜೆಪಿ ವಿರುದ್ಧ ಹೋರಾಡುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಸಮಾನವಾಗಿ ಪರಿಗಣಿಸಲಾಗುತ್ತಿದೆಯೇ?” ಎಂಬ ಪ್ರಶ್ನೆಗೆ, “ವಿವಿಧ ರಾಜ್ಯಗಳಲ್ಲಿನ ಪ್ರಾದೇಶಿಕ ಪಕ್ಷಗಳು ಬಿಜೆಪಿಯ ವಿರುದ್ಧ ಹೋರಾಡುತ್ತಿವೆ. ಹಲವು ರಾಜ್ಯಗಳಲ್ಲಿ, ಬಿಜೆಪಿಗೆ ಹೋಲಿಸಿದರೆ ಕಾಂಗ್ರೆಸ್‌ಗೆ ಅಸ್ತಿತ್ವವಿಲ್ಲ. ಆದರೆ ಪ್ರಾದೇಶಿಕ ಪಕ್ಷಗಳು ಕೇಸರಿ ಪಾಳೆಯದ ವಿರುದ್ಧ ತೀವ್ರವಾಗಿ ಹೋರಾಟ ನಡೆಸುತ್ತಿವೆ. ಅವರು ಯಶಸ್ವಿಯಾಗುತ್ತಾರೆ ಎಂಬ ಭರವಸೆ ನನಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಜೆಡಿ (ಯು), ಆರ್‌ಜೆಡಿ ಮತ್ತು ಡಿಎಂಕೆಯಂತಹ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ನೊಂದಿಗೆ ಇರಲು ಉತ್ಸುಕವಾಗಿವೆ ಎಂದು ಕೇಳಿದಾಗ ಯಾದವ್, “ಅವರು ಈಗಾಗಲೇ ಹಳೆಯ ಪಕ್ಷದೊಂದಿಗೆ ಮೈತ್ರಿ ಹೊಂದಿದ್ದಾರೆ. ಇದು ದೊಡ್ಡ ಹೋರಾಟದ ಪ್ರಶ್ನೆಯಾಗಿದ್ದು, ಈ ಹೋರಾಟದಲ್ಲಿ ಕಾಂಗ್ರೆಸ್ ತನ್ನ ಪಾತ್ರವೇನೆಂದು ನಿರ್ಧರಿಸುತ್ತದೆ” ಎಂದು ತಿಳಿಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪಾಳೆಯದ ಮುಖ ಯಾರಾಗಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಯಾದವ್, “ಚುನಾವಣೆಯ ನಂತರ ಅದನ್ನು ನಿರ್ಧರಿಸಲಾಗುವುದು. ಈಗ ಈ ಪ್ರಶ್ನೆಯು ಅಗತ್ಯವಿಲ್ಲ” ಎಂದು ಸ್ಪಷ್ಪಪಡಿಸಿದ್ದಾರೆ.

“ನೀವು ಮುಖದ ಬಗ್ಗೆ ಮಾತನಾಡುತ್ತಿದ್ದೀರಿ, 2014 ಮತ್ತು 2019 ರಲ್ಲಿ ಚುನಾವಣೆಯಲ್ಲಿ ಗೆಲ್ಲಲು ಸುಳ್ಳು ಭರವಸೆಗಳನ್ನು ನೀಡಿದ (ಬಿಜೆಪಿ) ಮುಖದ ಬಗ್ಗೆ ಕೇಳುತ್ತಿದ್ದೀರಾ?” ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖಿಸದೆ ಕುಟುಕಿದ್ದಾರೆ.

2014 ಮತ್ತು 2019ರಲ್ಲಿ ಬಿಜೆಪಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಟೀಕಿಸಿದ್ದಾರೆ.

ಯುಪಿಯ ರಾಯ್‌ಬರೇಲಿ ಮತ್ತು ಅಮೇಥಿ ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಪಿ ಸ್ಪರ್ಧಿಸುತ್ತದೆಯೇ ಎಂದು ಕೇಳಿದಾಗ, “ಅಮೇಥಿಯಲ್ಲಿ ಎಸ್‌ಪಿ ಕಾರ್ಯಕರ್ತರನ್ನು ಕೊಲ್ಲಲಾಗುತ್ತಿದೆ” ಎಂದು ಯಾದವ್ ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್ ಹೊರಗಿಟ್ಟು ವಿರೋಧಿ ಬಣ ಕಟ್ಟಲು ಮುಂದಾದ ಟಿಎಂಸಿ, ಎಸ್‌ಪಿ

“ಅಮೇಥಿಯಲ್ಲಿ ನಮ್ಮ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಅವರಿಗಾಗಿ ಯಾರು ಹೋರಾಡುತ್ತಾರೆ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಅಲ್ಲಿನ ಸಮಾಜವಾದಿ ಕಾರ್ಯಕರ್ತರು ಪರಸ್ಪರ ಬೆಂಬಲಿಸುತ್ತಿದ್ದಾರೆ; ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಬೆಂಬಲಕ್ಕೆ ಬರುತ್ತಿಲ್ಲ” ಎಂದು ದೂರಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಯ್ಬರೇಲಿಯ ಸಂಸದರಾಗಿದ್ದರೆ, ಪಕ್ಷದ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಲ್ಲಿ ಸ್ಪರ್ಧಿಸಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಸೋಲಿಸಿದ್ದರು.

“ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಯ ಹುನ್ನಾರವನ್ನು ತಡೆಯಲು ಸಮಾಜವಾದಿ ಪಕ್ಷ ಯಾವುದೇ ಅವಕಾಶವನ್ನು ಬಿಡುವುದಿಲ್ಲ. 2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಯುಪಿಯಲ್ಲಿ ಗೆಲ್ಲಲೇಬೇಕು, ಯುಪಿಯಲ್ಲಿ ಬಿಜೆಪಿಯನ್ನು ಸೋಲಿಸುವುದನ್ನು ನಾವು ಖಚಿತಪಡಿಸುತ್ತೇವೆ ಮತ್ತು ದೇಶದಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ, ಉತ್ತರ ಪ್ರದೇಶದಲ್ಲಿ ನಾವು ನಮ್ಮ ಅಸ್ತಿತ್ವದಲ್ಲಿರುವ ಮಿತ್ರಪಕ್ಷಗಳೊಂದಿಗೆ ಸೇರಿ ಹೋರಾಡುತ್ತೇವೆ” ಎಂದು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...