Homeಮುಖಪುಟದ್ವೇಷ ಭಾಷಣ ತಡೆಯುವಲ್ಲಿ ಟಿ.ವಿ. ಆಂಕರ್‌ಗಳ ಪಾತ್ರ ಮುಖ್ಯವಾಗಿದೆ: ಸುಪ್ರೀಂ ಕೋರ್ಟ್

ದ್ವೇಷ ಭಾಷಣ ತಡೆಯುವಲ್ಲಿ ಟಿ.ವಿ. ಆಂಕರ್‌ಗಳ ಪಾತ್ರ ಮುಖ್ಯವಾಗಿದೆ: ಸುಪ್ರೀಂ ಕೋರ್ಟ್

- Advertisement -
- Advertisement -

“ಯಾರಾದರೂ ದ್ವೇಷ ಭಾಷಣವನ್ನು ಮಾಡುವಾಗ ಅದನ್ನು ತಡೆಯುವಲ್ಲಿ ಟೆಲಿವಿಷನ್‌ ಚಾನೆಲ್‌ ನಿರೂಪಕರ ಪಾತ್ರ ಮುಖ್ಯವಾಗಿದೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದ್ವೇಷದ ಮಾತುಗಳು ಟಿವಿ ಚಾನೆಲ್‌ಗಳಲ್ಲಿ ಬರುತ್ತಿರುವಾಗ ‘ಆಂಕರ್‌ನ ಪಾತ್ರ’ ‘ಬಹಳ ಮುಖ್ಯ’ವಾಗಿರುತ್ತದೆ ಎಂದು ತಿಳಿಸಿರುವ ಕೋರ್ಟ್, ಸರ್ಕಾರ ಏಕೆ ‘ಮೂಕ ಪ್ರೇಕ್ಷಕರಾಗಿ ಉಳಿದಿದೆ’ ಎಂದೂ ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯವಾಹಿನಿ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿನ ಈ ಭಾಷಣಗಳಿಗೆ ಯಾವುದೇ ತಡೆ ಇಲ್ಲವಾಗಿದೆ. ದ್ವೇಷ ಭಾಷಣವನ್ನು ಯಾರೇ ಮಾಡಿದರೂ ಅದು ಮುಂದುವರೆಯದಂತೆ ತಕ್ಷಣವೇ ಕ್ರಮವಹಿಸುವುದು (ಆಂಕರ್‌ಗಳ) ಕರ್ತವ್ಯವಾಗಿದೆ” ಎಂದು ಕೋರ್ಟ್ ಹೇಳಿದೆ.

ಕಳೆದ ವರ್ಷದಿಂದ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಕೆ.ಎಂ.ಜೋಸೆಫ್, “ಪತ್ರಿಕಾ ಸ್ವಾತಂತ್ರ್ಯ ಮುಖ್ಯವಾಗಿದೆ. ಆದರೆ ನಮ್ಮದು ಅಮೆರಿಕದಂತೆ ತೀರ ಸ್ವತಂತ್ರವಲ್ಲ. ನಾವು ಎಲ್ಲಿಗೆ ಗೆರೆ ಎಳೆಯಬೇಕು ಎಂಬುದು ತಿಳಿದಿರಬೇಕು’’ ಎಂದು ಅಭಿಪ್ರಾಯಪಟ್ಟರು.

“ಯಾರನ್ನಾದರೂ ಕೊಲ್ಲುವ ರೀತಿಯಲ್ಲಿ ದ್ವೇಷದ ಭಾಷಣವು ಪದರಗಳನ್ನು ಹೊಂದಿದೆ. ನೀವು ನಿಧಾನವಾಗಿ ಕೊಲ್ಲಬಹುದು ಅಥವಾ ಬೇರೆ ರೀತಿಯಲ್ಲಿ ಕೊಲ್ಲಬಹುದು” ಎಂದು ಆತಂಕ ವ್ಯಕ್ತಪಡಿಸಿರುವ ನ್ಯಾಯಾಲಯ, “ದ್ವೇಷದ ಭಾಷಣವು ವೀಕ್ಷಕರಿಗೆ ಏಕೆ ಆಸಕ್ತಿದಾಯಕವಾಗಿದೆ” ಎಂದು ಪ್ರಶ್ನಿಸಿದೆ.

“ಸರ್ಕಾರವು ಪ್ರತಿಕೂಲವಾದ ನಿಲುವನ್ನು ತೆಗೆದುಕೊಳ್ಳಬಾರದು. ಆದರೆ ನ್ಯಾಯಾಲಯಕ್ಕೆ ಸಹಾಯ ಮಾಡಬೇಕು” ಎಂದಿರುವ ಕೋರ್ಟ್, “ಇದು ಕ್ಷುಲ್ಲಕ ವಿಷಯವೇ?” ಎಂದು ಕೇಳಿದೆ.

ದ್ವೇಷದ ಭಾಷಣವನ್ನು ತಡೆಯುವ ಕುರಿತು ಕಾನೂನು ಆಯೋಗದ ಶಿಫಾರಸುಗಳ ಸಂಬಂಧ ಕ್ರಮ ಜರುಗಿಸಲು ಉದ್ದೇಶಿಸಿದ್ದರೆ ಕೇಂದ್ರ ಸರ್ಕಾರವು ಸ್ಪಷ್ಟಪಡಿಸಬೇಕೆಂದು ನ್ಯಾಯಾಲಯ ಸೂಚಿಸಿದ್ದು, ನವೆಂಬರ್ 23 ರಂದು ಮುಂದಿನ ವಿಚಾರಣೆಯನ್ನು ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ಸೂಚನೆಯಂತೆ ಕಾನೂನು ಆಯೋಗವು ನಿರ್ದಿಷ್ಟ ಕಾನೂನುಗಳನ್ನು ಶಿಫಾರಸು ಮಾಡುವ ವರದಿಯನ್ನು 2017ರಲ್ಲಿ ಸಲ್ಲಿಸಿತ್ತು. “ಭಾರತದ ಯಾವುದೇ ಕಾನೂನಿನಲ್ಲಿ ದ್ವೇಷದ ಭಾಷಣವನ್ನು ವ್ಯಾಖ್ಯಾನಿಸಲಾಗಿಲ್ಲ. ಆದರೆ ಕೆಲವು ಶಾಸನಗಳಲ್ಲಿನ ಕಾನೂನು ನಿಬಂಧನೆಗಳು ವಾಕ್ ಸ್ವಾತಂತ್ರ್ಯಕ್ಕೆ ಅವಕಾಶ ನೀಡಿದ್ದರೂ, ಕೆಲವು ಮಾದರಿಯ ಮಾತುಗಳನ್ನು ನಿಷೇಧಿಸುತ್ತವೆ” ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಕೆಲವೊಮ್ಮೆ ನಿರಾಶವಾದಿಯಾಗುತ್ತೇನೆ ಮತ್ತು ಏಕಾಂಗಿ ಕೂಡಾ: ಜೈಲಿನಿಂದ ಉಮರ್ ಖಾಲಿದ್ ಪತ್ರ

ಆಯೋಗವು ಕರಡು ಶಾಸನವನ್ನೂ ರೂಪಿಸಿದೆ. ಹೊಸ ಸೆಕ್ಷನ್‌ಗಳಾದ 153C (ದ್ವೇಷಕ್ಕೆ ಪ್ರಚೋದನೆಯನ್ನು ನಿಷೇಧಿಸುವುದು) ಮತ್ತು 505A (ಕೆಲವು ಸಂದರ್ಭಗಳಲ್ಲಿ ಭಯ, ಎಚ್ಚರಿಕೆ ಅಥವಾ ಹಿಂಸಾಚಾರದ ಪ್ರಚೋದನೆಯನ್ನು ಉಂಟುಮಾಡುವುದು) ಸೇರಿಸಲು ಸೂಚಿಸಿದೆ.

ಟಿವಿ ಕಾರ್ಯಕ್ರಮಗಳು, ಸಂಜೆಯ ಚರ್ಚೆಗಳು ವೈರಲ್‌ ಆಗುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ. ಇಂಟರ್ನೆಟ್ ಕಂಪನಿಗಳು ದ್ವೇಷದ ಭಾಷಣವನ್ನು ನಿಗ್ರಹಿಸುವಲ್ಲಿ ಕ್ರಮ ಜರುಗಿಸುತ್ತಿಲ್ಲ ಎಂಬ ಟೀಕೆಗಳೂ ವ್ಯಕ್ತವಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...