Homeಮುಖಪುಟದ್ವೇಷ ಭಾಷಣ ತಡೆಯುವಲ್ಲಿ ಟಿ.ವಿ. ಆಂಕರ್‌ಗಳ ಪಾತ್ರ ಮುಖ್ಯವಾಗಿದೆ: ಸುಪ್ರೀಂ ಕೋರ್ಟ್

ದ್ವೇಷ ಭಾಷಣ ತಡೆಯುವಲ್ಲಿ ಟಿ.ವಿ. ಆಂಕರ್‌ಗಳ ಪಾತ್ರ ಮುಖ್ಯವಾಗಿದೆ: ಸುಪ್ರೀಂ ಕೋರ್ಟ್

- Advertisement -
- Advertisement -

“ಯಾರಾದರೂ ದ್ವೇಷ ಭಾಷಣವನ್ನು ಮಾಡುವಾಗ ಅದನ್ನು ತಡೆಯುವಲ್ಲಿ ಟೆಲಿವಿಷನ್‌ ಚಾನೆಲ್‌ ನಿರೂಪಕರ ಪಾತ್ರ ಮುಖ್ಯವಾಗಿದೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದ್ವೇಷದ ಮಾತುಗಳು ಟಿವಿ ಚಾನೆಲ್‌ಗಳಲ್ಲಿ ಬರುತ್ತಿರುವಾಗ ‘ಆಂಕರ್‌ನ ಪಾತ್ರ’ ‘ಬಹಳ ಮುಖ್ಯ’ವಾಗಿರುತ್ತದೆ ಎಂದು ತಿಳಿಸಿರುವ ಕೋರ್ಟ್, ಸರ್ಕಾರ ಏಕೆ ‘ಮೂಕ ಪ್ರೇಕ್ಷಕರಾಗಿ ಉಳಿದಿದೆ’ ಎಂದೂ ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯವಾಹಿನಿ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿನ ಈ ಭಾಷಣಗಳಿಗೆ ಯಾವುದೇ ತಡೆ ಇಲ್ಲವಾಗಿದೆ. ದ್ವೇಷ ಭಾಷಣವನ್ನು ಯಾರೇ ಮಾಡಿದರೂ ಅದು ಮುಂದುವರೆಯದಂತೆ ತಕ್ಷಣವೇ ಕ್ರಮವಹಿಸುವುದು (ಆಂಕರ್‌ಗಳ) ಕರ್ತವ್ಯವಾಗಿದೆ” ಎಂದು ಕೋರ್ಟ್ ಹೇಳಿದೆ.

ಕಳೆದ ವರ್ಷದಿಂದ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಕೆ.ಎಂ.ಜೋಸೆಫ್, “ಪತ್ರಿಕಾ ಸ್ವಾತಂತ್ರ್ಯ ಮುಖ್ಯವಾಗಿದೆ. ಆದರೆ ನಮ್ಮದು ಅಮೆರಿಕದಂತೆ ತೀರ ಸ್ವತಂತ್ರವಲ್ಲ. ನಾವು ಎಲ್ಲಿಗೆ ಗೆರೆ ಎಳೆಯಬೇಕು ಎಂಬುದು ತಿಳಿದಿರಬೇಕು’’ ಎಂದು ಅಭಿಪ್ರಾಯಪಟ್ಟರು.

“ಯಾರನ್ನಾದರೂ ಕೊಲ್ಲುವ ರೀತಿಯಲ್ಲಿ ದ್ವೇಷದ ಭಾಷಣವು ಪದರಗಳನ್ನು ಹೊಂದಿದೆ. ನೀವು ನಿಧಾನವಾಗಿ ಕೊಲ್ಲಬಹುದು ಅಥವಾ ಬೇರೆ ರೀತಿಯಲ್ಲಿ ಕೊಲ್ಲಬಹುದು” ಎಂದು ಆತಂಕ ವ್ಯಕ್ತಪಡಿಸಿರುವ ನ್ಯಾಯಾಲಯ, “ದ್ವೇಷದ ಭಾಷಣವು ವೀಕ್ಷಕರಿಗೆ ಏಕೆ ಆಸಕ್ತಿದಾಯಕವಾಗಿದೆ” ಎಂದು ಪ್ರಶ್ನಿಸಿದೆ.

“ಸರ್ಕಾರವು ಪ್ರತಿಕೂಲವಾದ ನಿಲುವನ್ನು ತೆಗೆದುಕೊಳ್ಳಬಾರದು. ಆದರೆ ನ್ಯಾಯಾಲಯಕ್ಕೆ ಸಹಾಯ ಮಾಡಬೇಕು” ಎಂದಿರುವ ಕೋರ್ಟ್, “ಇದು ಕ್ಷುಲ್ಲಕ ವಿಷಯವೇ?” ಎಂದು ಕೇಳಿದೆ.

ದ್ವೇಷದ ಭಾಷಣವನ್ನು ತಡೆಯುವ ಕುರಿತು ಕಾನೂನು ಆಯೋಗದ ಶಿಫಾರಸುಗಳ ಸಂಬಂಧ ಕ್ರಮ ಜರುಗಿಸಲು ಉದ್ದೇಶಿಸಿದ್ದರೆ ಕೇಂದ್ರ ಸರ್ಕಾರವು ಸ್ಪಷ್ಟಪಡಿಸಬೇಕೆಂದು ನ್ಯಾಯಾಲಯ ಸೂಚಿಸಿದ್ದು, ನವೆಂಬರ್ 23 ರಂದು ಮುಂದಿನ ವಿಚಾರಣೆಯನ್ನು ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ಸೂಚನೆಯಂತೆ ಕಾನೂನು ಆಯೋಗವು ನಿರ್ದಿಷ್ಟ ಕಾನೂನುಗಳನ್ನು ಶಿಫಾರಸು ಮಾಡುವ ವರದಿಯನ್ನು 2017ರಲ್ಲಿ ಸಲ್ಲಿಸಿತ್ತು. “ಭಾರತದ ಯಾವುದೇ ಕಾನೂನಿನಲ್ಲಿ ದ್ವೇಷದ ಭಾಷಣವನ್ನು ವ್ಯಾಖ್ಯಾನಿಸಲಾಗಿಲ್ಲ. ಆದರೆ ಕೆಲವು ಶಾಸನಗಳಲ್ಲಿನ ಕಾನೂನು ನಿಬಂಧನೆಗಳು ವಾಕ್ ಸ್ವಾತಂತ್ರ್ಯಕ್ಕೆ ಅವಕಾಶ ನೀಡಿದ್ದರೂ, ಕೆಲವು ಮಾದರಿಯ ಮಾತುಗಳನ್ನು ನಿಷೇಧಿಸುತ್ತವೆ” ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಕೆಲವೊಮ್ಮೆ ನಿರಾಶವಾದಿಯಾಗುತ್ತೇನೆ ಮತ್ತು ಏಕಾಂಗಿ ಕೂಡಾ: ಜೈಲಿನಿಂದ ಉಮರ್ ಖಾಲಿದ್ ಪತ್ರ

ಆಯೋಗವು ಕರಡು ಶಾಸನವನ್ನೂ ರೂಪಿಸಿದೆ. ಹೊಸ ಸೆಕ್ಷನ್‌ಗಳಾದ 153C (ದ್ವೇಷಕ್ಕೆ ಪ್ರಚೋದನೆಯನ್ನು ನಿಷೇಧಿಸುವುದು) ಮತ್ತು 505A (ಕೆಲವು ಸಂದರ್ಭಗಳಲ್ಲಿ ಭಯ, ಎಚ್ಚರಿಕೆ ಅಥವಾ ಹಿಂಸಾಚಾರದ ಪ್ರಚೋದನೆಯನ್ನು ಉಂಟುಮಾಡುವುದು) ಸೇರಿಸಲು ಸೂಚಿಸಿದೆ.

ಟಿವಿ ಕಾರ್ಯಕ್ರಮಗಳು, ಸಂಜೆಯ ಚರ್ಚೆಗಳು ವೈರಲ್‌ ಆಗುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ. ಇಂಟರ್ನೆಟ್ ಕಂಪನಿಗಳು ದ್ವೇಷದ ಭಾಷಣವನ್ನು ನಿಗ್ರಹಿಸುವಲ್ಲಿ ಕ್ರಮ ಜರುಗಿಸುತ್ತಿಲ್ಲ ಎಂಬ ಟೀಕೆಗಳೂ ವ್ಯಕ್ತವಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...