Homeಮುಖಪುಟದ್ವೇಷ ಭಾಷಣ ತಡೆಯುವಲ್ಲಿ ಟಿ.ವಿ. ಆಂಕರ್‌ಗಳ ಪಾತ್ರ ಮುಖ್ಯವಾಗಿದೆ: ಸುಪ್ರೀಂ ಕೋರ್ಟ್

ದ್ವೇಷ ಭಾಷಣ ತಡೆಯುವಲ್ಲಿ ಟಿ.ವಿ. ಆಂಕರ್‌ಗಳ ಪಾತ್ರ ಮುಖ್ಯವಾಗಿದೆ: ಸುಪ್ರೀಂ ಕೋರ್ಟ್

- Advertisement -
- Advertisement -

“ಯಾರಾದರೂ ದ್ವೇಷ ಭಾಷಣವನ್ನು ಮಾಡುವಾಗ ಅದನ್ನು ತಡೆಯುವಲ್ಲಿ ಟೆಲಿವಿಷನ್‌ ಚಾನೆಲ್‌ ನಿರೂಪಕರ ಪಾತ್ರ ಮುಖ್ಯವಾಗಿದೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದ್ವೇಷದ ಮಾತುಗಳು ಟಿವಿ ಚಾನೆಲ್‌ಗಳಲ್ಲಿ ಬರುತ್ತಿರುವಾಗ ‘ಆಂಕರ್‌ನ ಪಾತ್ರ’ ‘ಬಹಳ ಮುಖ್ಯ’ವಾಗಿರುತ್ತದೆ ಎಂದು ತಿಳಿಸಿರುವ ಕೋರ್ಟ್, ಸರ್ಕಾರ ಏಕೆ ‘ಮೂಕ ಪ್ರೇಕ್ಷಕರಾಗಿ ಉಳಿದಿದೆ’ ಎಂದೂ ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯವಾಹಿನಿ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿನ ಈ ಭಾಷಣಗಳಿಗೆ ಯಾವುದೇ ತಡೆ ಇಲ್ಲವಾಗಿದೆ. ದ್ವೇಷ ಭಾಷಣವನ್ನು ಯಾರೇ ಮಾಡಿದರೂ ಅದು ಮುಂದುವರೆಯದಂತೆ ತಕ್ಷಣವೇ ಕ್ರಮವಹಿಸುವುದು (ಆಂಕರ್‌ಗಳ) ಕರ್ತವ್ಯವಾಗಿದೆ” ಎಂದು ಕೋರ್ಟ್ ಹೇಳಿದೆ.

ಕಳೆದ ವರ್ಷದಿಂದ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಕೆ.ಎಂ.ಜೋಸೆಫ್, “ಪತ್ರಿಕಾ ಸ್ವಾತಂತ್ರ್ಯ ಮುಖ್ಯವಾಗಿದೆ. ಆದರೆ ನಮ್ಮದು ಅಮೆರಿಕದಂತೆ ತೀರ ಸ್ವತಂತ್ರವಲ್ಲ. ನಾವು ಎಲ್ಲಿಗೆ ಗೆರೆ ಎಳೆಯಬೇಕು ಎಂಬುದು ತಿಳಿದಿರಬೇಕು’’ ಎಂದು ಅಭಿಪ್ರಾಯಪಟ್ಟರು.

“ಯಾರನ್ನಾದರೂ ಕೊಲ್ಲುವ ರೀತಿಯಲ್ಲಿ ದ್ವೇಷದ ಭಾಷಣವು ಪದರಗಳನ್ನು ಹೊಂದಿದೆ. ನೀವು ನಿಧಾನವಾಗಿ ಕೊಲ್ಲಬಹುದು ಅಥವಾ ಬೇರೆ ರೀತಿಯಲ್ಲಿ ಕೊಲ್ಲಬಹುದು” ಎಂದು ಆತಂಕ ವ್ಯಕ್ತಪಡಿಸಿರುವ ನ್ಯಾಯಾಲಯ, “ದ್ವೇಷದ ಭಾಷಣವು ವೀಕ್ಷಕರಿಗೆ ಏಕೆ ಆಸಕ್ತಿದಾಯಕವಾಗಿದೆ” ಎಂದು ಪ್ರಶ್ನಿಸಿದೆ.

“ಸರ್ಕಾರವು ಪ್ರತಿಕೂಲವಾದ ನಿಲುವನ್ನು ತೆಗೆದುಕೊಳ್ಳಬಾರದು. ಆದರೆ ನ್ಯಾಯಾಲಯಕ್ಕೆ ಸಹಾಯ ಮಾಡಬೇಕು” ಎಂದಿರುವ ಕೋರ್ಟ್, “ಇದು ಕ್ಷುಲ್ಲಕ ವಿಷಯವೇ?” ಎಂದು ಕೇಳಿದೆ.

ದ್ವೇಷದ ಭಾಷಣವನ್ನು ತಡೆಯುವ ಕುರಿತು ಕಾನೂನು ಆಯೋಗದ ಶಿಫಾರಸುಗಳ ಸಂಬಂಧ ಕ್ರಮ ಜರುಗಿಸಲು ಉದ್ದೇಶಿಸಿದ್ದರೆ ಕೇಂದ್ರ ಸರ್ಕಾರವು ಸ್ಪಷ್ಟಪಡಿಸಬೇಕೆಂದು ನ್ಯಾಯಾಲಯ ಸೂಚಿಸಿದ್ದು, ನವೆಂಬರ್ 23 ರಂದು ಮುಂದಿನ ವಿಚಾರಣೆಯನ್ನು ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ಸೂಚನೆಯಂತೆ ಕಾನೂನು ಆಯೋಗವು ನಿರ್ದಿಷ್ಟ ಕಾನೂನುಗಳನ್ನು ಶಿಫಾರಸು ಮಾಡುವ ವರದಿಯನ್ನು 2017ರಲ್ಲಿ ಸಲ್ಲಿಸಿತ್ತು. “ಭಾರತದ ಯಾವುದೇ ಕಾನೂನಿನಲ್ಲಿ ದ್ವೇಷದ ಭಾಷಣವನ್ನು ವ್ಯಾಖ್ಯಾನಿಸಲಾಗಿಲ್ಲ. ಆದರೆ ಕೆಲವು ಶಾಸನಗಳಲ್ಲಿನ ಕಾನೂನು ನಿಬಂಧನೆಗಳು ವಾಕ್ ಸ್ವಾತಂತ್ರ್ಯಕ್ಕೆ ಅವಕಾಶ ನೀಡಿದ್ದರೂ, ಕೆಲವು ಮಾದರಿಯ ಮಾತುಗಳನ್ನು ನಿಷೇಧಿಸುತ್ತವೆ” ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಕೆಲವೊಮ್ಮೆ ನಿರಾಶವಾದಿಯಾಗುತ್ತೇನೆ ಮತ್ತು ಏಕಾಂಗಿ ಕೂಡಾ: ಜೈಲಿನಿಂದ ಉಮರ್ ಖಾಲಿದ್ ಪತ್ರ

ಆಯೋಗವು ಕರಡು ಶಾಸನವನ್ನೂ ರೂಪಿಸಿದೆ. ಹೊಸ ಸೆಕ್ಷನ್‌ಗಳಾದ 153C (ದ್ವೇಷಕ್ಕೆ ಪ್ರಚೋದನೆಯನ್ನು ನಿಷೇಧಿಸುವುದು) ಮತ್ತು 505A (ಕೆಲವು ಸಂದರ್ಭಗಳಲ್ಲಿ ಭಯ, ಎಚ್ಚರಿಕೆ ಅಥವಾ ಹಿಂಸಾಚಾರದ ಪ್ರಚೋದನೆಯನ್ನು ಉಂಟುಮಾಡುವುದು) ಸೇರಿಸಲು ಸೂಚಿಸಿದೆ.

ಟಿವಿ ಕಾರ್ಯಕ್ರಮಗಳು, ಸಂಜೆಯ ಚರ್ಚೆಗಳು ವೈರಲ್‌ ಆಗುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ. ಇಂಟರ್ನೆಟ್ ಕಂಪನಿಗಳು ದ್ವೇಷದ ಭಾಷಣವನ್ನು ನಿಗ್ರಹಿಸುವಲ್ಲಿ ಕ್ರಮ ಜರುಗಿಸುತ್ತಿಲ್ಲ ಎಂಬ ಟೀಕೆಗಳೂ ವ್ಯಕ್ತವಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...