Homeಚಳವಳಿಅಜೀವಪರ್ಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ಅಜೀವಪರ್ಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ಭಾರತದಲ್ಲಿ ಆಳುವ ವರ್ಗಗಳು ಹಿಂದುತ್ವದ ಶಕ್ತಿಗಳನ್ನು ಬಲಪಡಿಸುವ ಸಲುವಾಗಿ "ಇಸ್ಲಾಮೋಫೋಬಿಯಾ"ವನ್ನು ಒಂದು ಸಿದ್ಧಾಂತವಾಗಿ ಬಳಸುತ್ತಿದೆ ಎಂದು ಅವರ ಸಂಶೋಧನಾ ಪ್ರಬಂಧವು ಚರ್ಚಿಸುತ್ತದೆ.

- Advertisement -
- Advertisement -

ರೋಣ ವಿಲ್ಸನ್ ಒಬ್ಬ ಸಂಶೋಧನಾ ವಿದ್ವಾಂಸರಾಗಿದ್ದು, ರಾಜಕೀಯ ಕೈದಿಗಳ ಸ್ಥಿತಿಗತಿ ಮತ್ತು ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ) ಹಾಗೂ ಇತರ ಕರಾಳ ಕಾನೂನುಗಳ ಬಳಕೆಯ ಕುರಿತು ಕೆಲಸ ಮಾಡಿದ್ದಾರೆ. ಮಧ್ಯ ಭಾರತದ ಅಂಚಿಗೆ ಸರಿಸಲ್ಪಟ್ಟ ಶೋಷಿತ ಆದಿವಾಸಿ ಸಮುದಾಯಗಳ ಮೇಲೆ ಸರಕಾರ ಹೂಡಿದ್ದ ಅಪರೇಷನ್ ಗ್ರೀನ್ ಹಂಟ್ ಯುದ್ಧನೀತಿಯ ವಿರುದ್ಧ ಮಾತನಾಡಿದ್ದಕ್ಕಾಗಿ ಬಂಧಿತರಾದ ಪ್ರೊ. ಜಿ.ಎನ್. ಸಾಯಿಬಾಬಾ, ಹೇಮ್ ಮಿಶ್ರಾ ಅವರಂತಹ ರಾಜಕೀಯ ಕೈದಿಗಳ ಪರವಾಗಿ ಅವರು ಸಕ್ರಿಯವಾಗಿ ಆಂದೋಲನ ನಡೆಸಿದ್ದಾರೆ.

ಸಂಸತ್ ಮೇಲಿನ ದಾಳಿ ಪ್ರಕರಣದಲ್ಲಿ ಅನ್ಯಾಯವಾಗಿ ಬಂಧಿತರಾಗಿ, ಚಿತ್ರಹಿಂಸೆ ಮತ್ತು ಅಮಾನವೀಯ ವರ್ತನೆಗೆ ಗುರಿಪಡಿಸಲಾದ ಕಾಶ್ಮೀರಿ ವಿದ್ವಾಂಸ ಮತ್ತು ಪ್ರಾಧ್ಯಾಪಕ ಎಸ್.ಎ.ಆರ್. ಗಿಲಾನಿ ಅವರ ಬಿಡುಗಡೆಗಾಗಿ ನಡೆದ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲುಗೊಂಡಂದಿನಿಂದ ರೋಣ ಅವರಿಗೆ ರಾಜಕೀಯ ಕೈದಿಗಳ ಜೊತೆ ಕೆಲಸ ಮಾಡುವ ಆಸಕ್ತಿ ಹುಟ್ಟಿಕೊಂಡಿತ್ತು. ವಾಸ್ತವವಾಗಿ ಪ್ರೊ. ಗಿಲಾನಿ ಅವರು ಆರೋಪಮುಕ್ತರಾಗಿ ಬಿಡುಗಡೆಯಾದ ಬಳಿಕ ರೋಣ ಮತ್ತು ಪ್ರೊ. ಗಿಲಾನಿ ಇತರ ಸಾಮಾಜಿಕ ಕಾರ್ಯಕರ್ತರ ಜೊತೆಸೇರಿ ’ಕಮಿಟಿ ಫಾರ್ ರಿಲೀಸ್ ಆಫ್ ಪೊಲಿಟಿಕಲ್ ಪ್ರಿಸ್‌ನರ್ಸ್’ (ಸಿಆರ್‌ಪಿಪಿ – ರಾಜಕೀಯ ಕೈದಿಗಳ ಬಿಡುಗಡೆಗಾಗಿ ಸಮಿತಿ) ಎಂಬ ಸಂಘಟನೆಯನ್ನು ರೂಪಿಸಿದ್ದರು.

ರೋಣ ಅವರು ಸಿಆರ್‌ಪಿಪಿಯ ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿದ್ದಾಗ, ಸಿಆರ್‌ಪಿಪಿಯ ಮೂಲಕವೇ ಪ್ರೊ. ಗಿಲಾನಿ ಅವರೊಂದಿಗೆ, ಪ್ರೊ. ಸಾಯಿಬಾಬಾ ಪ್ರಕರಣದದಲ್ಲಿ ಆಸಕ್ತಿವಹಿಸಿ, ಅವರ ಬಿಡುಗಡೆಗಾಗಿ ಹೋರಾಟ ನಡೆಸಿದ್ದರು. ಸಿಆರ್‌ಪಿಪಿಯ ಭಾಗವಾಗಿ ಅವರು ಯುಎಪಿಎ, ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‌ಎಸ್‌ಎ), ಆರ್ಮ್‌ಡ್ ಫೋರ್ಸಸ್ ಸ್ಪೆಷಲ್ ಪವರ್ಸ್ ಆಕ್ಟ್ (ಎಎಫ್‌ಎಸ್‌ಪಿಎ – ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯ್ದೆ) ಮತ್ತು ವಿವಿಧ ರಾಜ್ಯ ಮಟ್ಟದ ಸಾರ್ವಜನಿಕ ಭದ್ರತಾ ಕಾಯಿದೆ (ಪಿಎಸ್‌ಎ)ಗಳು ಮುಂತಾದ ಕರಾಳ ಕಾಯಿದೆಗಳ ಅಸಾಂವಿಧಾನಿಕ ಸ್ವರೂಪ, ಮರಣ ದಂಡನೆಯನ್ನು ವಿವೇಚನೆಯಿಲ್ಲದೆ ಬಳಸುವುದರ ವಿರುದ್ಧ ಮತ್ತು ಈ ದೇಶದಲ್ಲಿ ದಲಿತರು ಮತ್ತು ಮುಸ್ಲಿಮರೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಅದಕ್ಕೆ ಗುರಿಯಾಗುವುದರ ಬಗ್ಗೆ ಅವರು ಹಲವಾರು ಸಮಾವೇಶಗಳನ್ನು ಆಯೋಜಿಸಿದ್ದರು. ವಿಪರ್ಯಾಸವೆಂದರೆ ಅವರು ಈಗ ಅದೇ ಕರಾಳ ಯುಎಪಿಎ ಅಡಿ ರಾಜಕೀಯ ಬಂಧಿಯಾಗಿದ್ದಾರೆ.

ಕೈದಿಗಳ ಕುರಿತ ವಿಶ್ವಸಂಸ್ಥೆಯ ಒಪ್ಪಂದವನ್ನು ಅನುಷ್ಟಾನಗೊಳಿಸಬೇಕು ಎಂದು ಒತ್ತಾಯಿಸಿರುವ ಸಿಆರ್‌ಪಿಪಿ, “ಅನಾನುಕೂಲಕರ ಪರಿಸ್ಥಿತಿಯಲ್ಲಿರುವ; ಅಥವಾ ಮಾಧ್ಯಮಗಳ ಪ್ರಚಾರ, ಪೊಲೀಸ್, ಸೇನೆ ಅಥವಾ ಪ್ರಭುತ್ವದ ನ್ಯಾಯಸಮ್ಮತವಲ್ಲದ ಅಪಪ್ರಚಾರಗಳ ಕಾರಣದಿಂದಾಗಿ ನಿಷ್ಪಕ್ಷಪಾತಿ ವಿಚಾರಣೆ ನಡೆಯದಂತೆ ತಾರತಮ್ಯಕ್ಕೆ ಒಳಗಾಗಿರುವವರಿಗೆ ಕಾನೂನು ನೆರವು ಒದಗಿಸಬೇಕು” ಎಂದು ವಾದಿಸಿದೆ.

ಕೇರಳದ ಕೊಲ್ಲಂನಲ್ಲಿ ಹುಟ್ಟಿದ ರೋಣ, ಪ್ರಾಣಿಶಾಸ್ತ್ರದಲ್ಲಿ ಪದವಿ ಪಡೆಯುವವರೆಗೆ ಅಲ್ಲಿಯೇ ವಾಸಿಸುತ್ತಿದ್ದರು. ನಂತರ ಅವರು ರಾಜಕೀಯ ವಿಜ್ಞಾನ ಮತ್ತು ಅಂತರರಾಷ್ಟ್ರೀಯ ಸಂಬಂಧಗಳು ವಿಷಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕಾಗಿ ಪುದುಚೆರಿಯ ಸೆಂಟಲ್ ಯುನಿವರ್ಸಿಟಿ (ಪಿಸಿಯು)ಗೆ ಹೋದರು. ಅಲ್ಲಿಂದ ದೆಹಲಿಯ ಜವಾಹರಲಾಲ್ ನೆಹರೂ ಯುನಿವರ್ಸಿಟಿ (ಜೆಎನ್‌ಯು)ಗೆ ತೆರಳಿ ಸ್ನಾತಕೋತ್ತರ ಎಂ.ಫಿಲ್ ಪದವಿಯನ್ನು ಗಳಿಸಿದರು. ಫುಟ್ಬಾಲ್ ಪ್ರೇಮಿಯಾದ ಅವರು, ಮುಖ್ಯವಾಗಿ ಲ್ಯಾಟಿನ್ ಅಮೇರಿಕಾ ದೇಶಗಳ ಆಟವನ್ನು ನಿಕಟವಾಗಿ ಅನುಸರಿಸುತ್ತಾರೆ.

ಇದನ್ನೂ ಓದಿ: ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…

ಇತ್ತೀಚೆಗೆ ಅವರನ್ನು ಡಾಕ್ಟರೇಟ್ ಪದವಿಗಾಗಿ ಇಂಗ್ಲೆಂಡ್‌ನ ಸರ್ರ್‍ಏ ಮತ್ತು ಲೀಸೆಸ್ಟರ್ ವಿಶ್ವವಿದ್ಯಾಲಯಗಳು ಸ್ವೀಕರಿಸಿದ್ದವು. ಅವರ ಪ್ರಸ್ತಾಪಿತ ವಿಷಯವು “ದಿ ಫಿಕ್ಷನ್ ಆಫ್ ದಿ ಮುಸ್ಲಿಂ ಅದರ್: ಸ್ಟೇಟ್, ಲಾ ಎಂಡ್ ಪಾಲಿಟಿಕ್ಸ್ ಆಫ್ ನೇಮಿಂಗ್ ಇನ್ ಕಂಟೆಂಪರರಿ ಇಂಡಿಯಾ” (ಅನ್ಯ ಮುಸ್ಲಿಂ ಎಂಬ ಕಟ್ಟುಕತೆ: ಪ್ರಭುತ್ವ, ಕಾನೂನು ಮತ್ತು ಸಮಕಾಲೀನ ಭಾರತದಲ್ಲಿ ಹೆಸರಿಸುವ ರಾಜಕೀಯ”). ಭಾರತದಲ್ಲಿ ಆಳುವ ವರ್ಗಗಳು ಹಿಂದುತ್ವದ ಶಕ್ತಿಗಳನ್ನು ಬಲಪಡಿಸುವ ಸಲುವಾಗಿ “ಇಸ್ಲಾಮೋಫೋಬಿಯಾ”ವನ್ನು ಒಂದು ಸಿದ್ಧಾಂತವಾಗಿ ಬಳಸುತ್ತಿದೆ ಎಂದು ಅವರ ಸಂಶೋಧನಾ ಪ್ರಬಂಧವು ಚರ್ಚಿಸುತ್ತದೆ.

ಮುಸ್ಲಿಂ ಪುರುಷನ್ನು “ಭಯೋತ್ಪಾದಕ”ನಾಗಿ ಪರಿಗಣಿಸುವ ಸಾಮಾಜಿಕ ಪರಿಗ್ರಹಣೆಯ ಕುರಿತು ಅಧ್ಯಯನ ಮಾಡುವ ಕಡೆಗೆ ಅವರ ಒಲವಿತ್ತು. ಕಾನೂನು ಹೇಗೆ ಒಬ್ಬ ಉಗ್ರವಾದಿ ಮುಸ್ಲಿಂ ಪುರುಷನ ಕಥಾನಕ ಕಟ್ಟಲು, ಭಯೋತ್ಪಾದಕ ಪುರುಷತ್ವವಾಗಿ ಬಿಂಬಿಸಿ ನಂತರ ಸೈದ್ಧಾಂತಿಕ ಪ್ರಭುತ್ವ ವ್ಯವಸ್ಥೆ ಅದನ್ನೇ ಬಳಸಿಕೊಂಡು ಬಹುಸಂಖ್ಯಾತ ಜನರಲ್ಲಿ ’ಅನ್ಯ ಮುಸ್ಲಿಂ’ ಎಂಬುದನ್ನು ಪುನರುಚ್ಚರಿಸಿ, ಅದೇ ಹೊತ್ತಿಗೆ, ಮುಸ್ಲಿಂ ಮಹಿಳೆಯರನ್ನು ಭಾರತ ಪ್ರಭುತ್ವದ ರಕ್ಷಣೆ ಅಗತ್ಯವಾಗಿರುವ, ವಿಧೇಯ ದೇಹಗಳಾಗಿ ಬಿಂಬಿಸುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಅವರ ಅಧ್ಯಯನದ ಉದ್ದೇಶವಾಗಿತ್ತು.

ಬಂಧನದ ನಂತರ ರೋಣ ತಮ್ಮ ಡಾಕ್ಟರೆಟ್ ಅಧ್ಯಯನವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಮಾತ್ರವಲ್ಲ ಅವರು ಇತರಿಗೆ ಒದಗಿಸುತ್ತಿದ್ದ ಕಾನೂನು ನೆರವನ್ನೂ ಕೂಡ ಕಡಿತಗೊಳಿಸಲಾಗಿದೆ.

ರೋಣ ಅಜೀವಪಯಂತ ಮಾನವಹಕ್ಕುಗಳ ಹೋರಾಟಗಾರ. ಜೈಲಿನ ಪರಿಮಿತಿಯೊಳಗಿಂದಲೇ ಅವರ ಹೋರಾಟ ಮುಂದುವರಿಯುತ್ತದೆ. ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿ, ಹಣೆಪಟ್ಟಿ ಹಚ್ಚಿ, ನ್ಯಾಯವನ್ನು ನಿರಾಕರಿಸುವುದೆಂದರೆ ಏನು ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...