Homeಮುಖಪುಟಹೊಸ ವಿಧಿವಿಜ್ಞಾನ ವರದಿ ಬಹಿರಂಗ; ರೋನಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷ್ಯಗಳನ್ನು...

ಹೊಸ ವಿಧಿವಿಜ್ಞಾನ ವರದಿ ಬಹಿರಂಗ; ರೋನಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ: ವರದಿ

- Advertisement -
- Advertisement -

ಪ್ರಧಾನಿ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬ ಆರೋಪದಲ್ಲಿ ಕೇಂದ್ರ ಸರ್ಕಾರವು ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿತ್ತು. ಅವರಲ್ಲಿ ರೋನಾ ವಿಲ್ಸನ್ ಕೂಡ ಒಬ್ಬರು. ಈ ಪ್ರಕರಣದ ಬಗ್ಗೆ ವಾಶಿಂಗ್ಟನ್‌ ಪೋಸ್ಟ್‌‌ ಅಘಾತಕಾರಿ ತನಿಖಾ ವರದಿಯನ್ನು ಬಹಿರಂಗಪಡಿಸಿದೆ. ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತರಿಂದ ಪೊಲೀಸರು ವಶಪಡಿಸಿಕೊಂಡಿದ್ದ ಲ್ಯಾಪ್‌ಟಾಪ್‌‌ನೊಳಗೆ ಸಾಕ್ಷ್ಯಗಳನ್ನು ಹ್ಯಾಕರ್‌ಗಳು ಸೈಬರ್‌ ದಾಳಿಯ ಮೂಲಕ ಸೇರಿಸಿದ್ದರು ಎಂದು ಹೊಸ ವಿಧಿವಿಜ್ಞಾನ ವರದಿಯು ಹೇಳಿದೆ ಎಂದು ವಾಶಿಂಗ್ಟನ್ ಪೋಸ್ಟ್‌ ಹೇಳಿದೆ.

ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯ ಆರ್ಸೆನಲ್ ಕನ್ಸಲ್ಟಿಂಗ್‌ನ ವರದಿಯ ಪ್ರಕಾರ, “ಸಾಮಾಜಿಕ ಕಾರ್ಯಕರ್ತರಾದ ರೋನಾ ವಿಲ್ಸನ್ ಅವರ ಬಂಧನಕ್ಕೂ ಮೊದಲು, ಹ್ಯಾಕರ್‌ ಅವರ ಲ್ಯಾಪ್‌ಟಾಪ್‌ಗೆ ಪ್ರವೇಶ ಪಡೆದು ಮಾಲ್‌ವೇರ್‌‌ ಬಳಸಿ ಹತ್ತು ಪತ್ರಗಳನ್ನು ಸೇರಿಸಿದ್ದನು”. ಈ ಹತ್ತು ಪತ್ರಗಳನ್ನು ಉಲ್ಲೇಖಿಸಿ ಪೊಲೀಸರು ಅವರ ಮೇಲೆ ದೋಷಾರೋಪಣೆ ಮಾಡಿದ್ದರು.

ಅನೇಕ ಸಾಮಾಜಿಕ ಕಾರ್ಯಕರ್ತರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಅವರನ್ನು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ನ್ಯಾಯಲಯದ ವಿಚಾರಣೆಯಿಲ್ಲದೆ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಇಡಲಾಗಿದೆ. ಸಾಮಾಜಿಕ ಕಾರ್ಯಕರ್ತರ ಈ ಬಂಧನವನ್ನು ಮಾನವ ಹಕ್ಕುಗಳ ಗುಂಪುಗಳು ಮತ್ತು ಕಾನೂನು ತಜ್ಞರು,  ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ಕೇಂದ್ರ ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯ ಪ್ರಯತ್ನವೆಂದು ಆರೋಪಿಸುತ್ತಲೆ ಬಂದಿದ್ದರು.

ಇದನ್ನೂ ಓದಿ: ಮೋದಿ ಹತ್ಯೆಯ ಸಂಚು ಎಂಬ ಚಿಂದಿ ಕಾಗದ

ಆರ್ಸೆನಲ್ ಕನ್ಸಲ್ಟಿಂಗ್‌ ವರದಿಯು ಸೈಬರ್ ದಾಳಿ ನಡೆಸಿದ ಅಪರಾಧಿಯನ್ನು ಗುರುತಿಸಿಲ್ಲ. ರೋನಾ ವಿಲ್ಸನ್ ಅವ‌ರನ್ನು ಪ್ರತಿನಿಧಿಸುವ ವಕೀಲ ಸುದೀಪ್ ಪಾಸ್‌ಬೋಲಾ, “ಆರ್ಸೆನಲ್ ವರದಿಯು ತನ್ನ ಕಕ್ಷಿದಾರರ ನಿರಪರಾಧಿತ್ವವನ್ನು ಸಾಬೀತುಪಡಿಸಲು ನೆರವಾಗುತ್ತದೆ” ಎಂದಿದ್ದಾರೆ. ಬುಧವಾರವಷ್ಟೇ, ವಿಲ್ಸನ್ ಅವರ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಬಾಂಬೆ ಹೈಕೋರ್ಟ್‌‌ನಲ್ಲಿ ಸಲ್ಲಿಸಿದ ಅರ್ಜಿಯಲ್ಲಿ ಆರ್ಸೆನಲ್‌‌ ಕನ್ಸಲ್ಟಿಂಗ್‌ ವರದಿಯನ್ನು ಸೇರಿಸಿದ್ದಾರೆ.

ಆದರೆ ವಿಲ್ಸನ್ ಅವರ ವಿರುದ್ದದ ಪ್ರಕರಣಗಳ ಮೇಲ್ವಿಚಾರಣೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಯ ವಕ್ತಾರರಾದ ಜಯಾ ರಾಯ್, ಆರ್ಸೆನಲ್‌‌ ಕನ್ಸಲ್ಟಿಂಗ್‌ ವರದಿಯನ್ನು ನಿರಾಕರಿಸಿದ್ದು, “ಲ್ಯಾಪ್‌ಟಾಪ್‌ನ ವಿಧಿವಿಜ್ಞಾನ ವಿಶ್ಲೇಷಣೆಯು ಸಾಧನದಲ್ಲಿ ಮಾಲ್‌ವೇರ್‌ನ ಯಾವುದೇ ಪುರಾವೆಗಳನ್ನು ತೋರಿಸಲಿಲ್ಲ” ಎಂದು ಹೇಳಿದ್ದಾರೆ. ಅಲ್ಲದೆ ಪ್ರಕರಣದಲ್ಲಿ ಆರೋಪ ಹೊರಿಸಲಾದ ವ್ಯಕ್ತಿಗಳ ವಿರುದ್ಧ “ಸಾಕಷ್ಟು ದಾಖಲೆಗಳು ಮತ್ತು ಮೌಖಿಕ ಪುರಾವೆಗಳು” ಇವೆ ಎಂದು ಅವರು ಹೇಳಿದ್ದಾರೆಂದು ವಾಶಿಂಗ್ಟನ್‌ ಪೋಸ್ಟ್ ಹೇಳಿದೆ.

ಪ್ರಕರಣದಲ್ಲಿ 12 ಕ್ಕೂ ಹೆಚ್ಚು ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಲಾಗಿದೆ. ಇವರೆಲ್ಲರೂ ಮೋದಿ ಸರ್ಕಾರವನ್ನು ಬಹಿರಂಗವಾಗಿ ವಿರೋಧಿಸುವವರಾಗಿದ್ದರು. “ಅವರಿಗೆ ನಿಷೇಧಿತ ಮಾವೋವಾದಿ ಉಗ್ರಗಾಮಿ ಸಂಬಂಧವಿದ್ದು, ಭಾರತದ ವಿರುದ್ಧ ದಂಗೆ ಏಳಲು ಕೆಲಸ ಮಾಡುತ್ತಿದ್ದರು” ಎಂದು ಆರೋಪಿಸಿ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?

ರೋನಾ ವಿಲ್ಸನ್ ಮಾವೋವಾದಿ ಉಗ್ರನಿಗೆ ಪತ್ರ ಬರೆದಿದ್ದು, ಅದರಲ್ಲಿ ಅಪ್ರಧಾನಿ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬ ಆರೋಪದಲ್ಲಿ ಕೇಂದ್ರ ಸರ್ಕಾರವು ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿತ್ತು. ಅವರಲ್ಲಿ ರೋನಾ ವಿಲ್ಸನ್ ಕೂಡ ಒಬ್ಬರು. ಈ ಪ್ರಕರಣದ ಬಗ್ಗೆವರು ಬಂದೂಕುಗಳು ಮತ್ತು ಮದ್ದುಗುಂಡುಗಳ ಬಗ್ಗೆ ಚರ್ಚೆ ಸೇರಿದಂತೆ, ಮೋದಿಯನ್ನು ಹತ್ಯೆ ಮಾಡಲು ಮಾವೋವಾದಿಗಳೊಂದಿಗೆ ಅವರು ಒತ್ತಾಯಸಿದ್ದರು ಎಂದು ಪೊಲೀಸರು ಆರೋಪಿಸಿದ್ದರು. ಈ ಪತ್ರವನ್ನು ವಿಲ್ಸನ್ ಅವರ ಕಂಪ್ಯೂಟರ್‌ ಅನ್ನು ಹ್ಯಾಕ್ ಮಾಡಿ ಗುಪ್ತ ಫೋಲ್ಡರ್‌‌‌ನಲ್ಲಿ ಹಾಕಿಡಲಾಗಿತ್ತು ಎಂದು ಆರ್ಸೆನಲ್ ಕನ್ಸಲ್ಟಿಂಗ್ ಕಂಡು ಹಿಡಿದಿದೆ.

ಆರ್ಸೆನಲ್ ವರದಿಯಲ್ಲಿ, “ಇದು ಆರ್ಸೆನಲ್ ಹಿಂದೆಂದೂ ಕಂಡಿರದ ಅತ್ಯಂತ ಗಂಭೀರವಾದ ಪ್ರಕರಣಗಳಲ್ಲಿ ಒಂದಾಗಿದೆ” ಎಂದು ಹೇಳಿದೆ ಎಂದು ವಾಶಿಂಗ್ಟನ್ ಪತ್ರಿಕೆ ಉಲ್ಲೇಖಸಿದೆ. ಈ ಪತ್ರವನ್ನು ವಿಲ್ಸನ್ ಅವರ ಕಂಪ್ಯೂಟರ್‌ನಲ್ಲಿ ಅಸ್ತಿತ್ವದಲ್ಲಿರದ ಮೈಕ್ರೋಸಾಫ್ಟ್ ವರ್ಡ್‌ನ ಹೊಸ ಆವೃತ್ತಿಯನ್ನು ಬಳಸಿ ರಚಿಸಲಾಗಿದೆ ಎಂದು ಆರ್ಸೆನಲ್‌ ವರದಿಯು ಹೇಳಿದೆ.

ಆರ್ಸೆನಲ್ ಅಧ್ಯಕ್ಷರಾದ ಸ್ಪೆನ್ಸರ್ ಈ ದಾಳಿಯನ್ನು “ಬಹಳ ಸಂಘಟಿತ ಮತ್ತು ಅತ್ಯಂತ ಗಾಢ” ಎಂದು ಕರೆದಿದ್ದಾರೆ. ಹೊಸ ವಿಧಿವಿಜ್ಞಾದ ಈ ಹೊಸ ವರದಿಯನ್ನು ಪ್ರಧಾನಿ ನರೇಂದ್ರ ಮೋದಿಯ ಆಡಳಿತದ ಅಡಿಯಲ್ಲಿ, ಈ ಪ್ರಕರಣದ ವಿಚಾರಣೆಗೆ ಹೇಗೆ ಬಳಸಲಾಗುತ್ತದೆ ಎಂಬ ಅನುಮಾನಗಳು ಇವೆ ಎಂದು ವಾಶಿಂಗ್ಟನ್ ಪೋಸ್ಟ್‌‌ ಹೇಳಿದೆ.

ಇದನ್ನೂ ಓದಿ: ದಲಿತ ಚಿಂತಕರನ್ನು ಮುಗಿಸಲು ಎಲ್ಗರ್ ಪರಿಷತ್ ಪ್ರಕರಣ ವರ್ಗಾವಣೆ: ಬಾಂಬೆ ಹೈಕೋರ್ಟ್‌‌ನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...